Keep people like B.S. Anand who are working to improve the lives of farmers in Bamul: MP Dr K Sudhakar

ರೈತರ ಬದುಕನ್ನು ಕಟ್ಟಿಕೊಡುವ ಕೆಲಸ ಮಾಡುತ್ತಿರುವ ಬಿಸಿ ಆನಂದ್ ಅಂತವರನ್ನು ಬಮೂಲ್‌ನಲ್ಲಿ ಉಳಿಸಿಕೊಳ್ಳಿ: ಸಂಸದ Dr K Sudhakar

ದೊಡ್ಡಬಳ್ಳಾಪುರ: ವಿದ್ಯೆಯ ಜೊತೆ ಕೌಶಲ್ಯ ಕೂಡ ಅಗತ್ಯವಾಗಿದ್ದು, ಕೌಶಲ್ಯವಿಲ್ಲದ ಶಿಕ್ಷಣದಿಂದ ಯಾವುದೇ ಪ್ರಯೋಜನವಿಲ್ಲವೆಂದು ಸಂಸದ ಡಾ.ಕೆ.ಸುಧಾಕರ್‌ (Dr K Sudhakar) ಅಭಿಪ್ರಾಯಪಟ್ಟರು.

ಬೆಂಗಳೂರು ಸಹಕಾರ ಹಾಲು ಒಕ್ಕೂಟ, ಬಮುಲ್ ಟ್ರಸ್ಟ್, ದೊಡ್ಡಬಳ್ಳಾಪುರ ಶಿಬಿರ ಕಚೇರಿಯ ಆವರಣದಲ್ಲಿ ಆಯೋಜಿಸಿದ್ದ ದೊಡ್ಡಬಳ್ಳಾಪುರ ಕ್ಷೇತ್ರದ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು ಮತ್ತು ಸಿಬ್ಬಂದಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ, ಸಂಘದ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಯಾ ಹುದ್ದೆಗೆ ಅನುಗುಣವಾಗಿ ಕೌಶಲ್ಯವನ್ನು ವಿದ್ಯಾರ್ಥಿಗಳು ಕಲಿಯಬೇಕಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ವಿಶೇಷವಾದ ತರಬೇತಿಯನ್ನು ನೀಡಬೇಕಿದೆ.. ಈ ಕುರಿತು ಸಂಬಂಧಿಸಿದ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಲಾಗಿದೆ.

ಮುಂದಿನ ದಿನಗಳಲ್ಲಿ ಈ ಜಿಲ್ಲೆಯಲ್ಲಿ ಉದ್ಯೋಗ ನಿರೀಕ್ಷೆಯಲ್ಲಿರುವ ನಿರುದ್ಯೋಗಿಗಳಿಗೆ ಕೈಗಾರಿಕೆಗಳ ಉದ್ದಿಮೆದಾರರಿಂದ ವಿಶೇಷ ತರಬೇತಿ ನೀಡಲು ಕ್ರಮವಹಿಸಲಾಗುವುದು. ಬಮೂಲ್ ಸಂಸ್ಥೆ ಕೂಡ ಉದ್ದಿಮೆಯೊಂದಿಗೆ ಕೈಜೋಡಿಸಿದರೆ ಉಪಯೊಗವಾಗಲಿದೆ ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಸಣ್ಣಪುಟ್ಟ ಗುರಿಗಳನ್ನು ಕಾಣದೆ, ದೊಡ್ಡಮಟ್ಟದ ಗುರಿಯನ್ನು ಇಟ್ಟುಕೊಂಡು ಅದಕ್ಕೆ ಸಿದ್ದತೆ ನಡೆಸಬೇಕಿದೆ. ನಾವು ರೈತರ ಮಕ್ಕಳಾಗಿ ಇಲ್ಲಿವರೆಗೂ ಬಂದಿದ್ದೇವೆ ಎಂದರೆ ನಿಮಗೂ ಸಾಧ್ಯವಿದೆ ಎಂಬುದನ್ನು ಮನಗಾಣಬೇಕಿದೆ.

ಬಮೂಲ್ ಸಂಸ್ಥೆಯಲ್ಲಿ ಇಂತಹ ಕಾರ್ಯಕ್ರಮವನ್ನು ಪ್ರತಿವರ್ಷ ನಡೆಸುತ್ತಿರುವುದು ಪ್ರಶಂಸನೀಯ ಕಾರ್ಯ. ಬಿಸಿ ಆನಂದ್ ಕುಮಾರ್ ಅವರಂತಹ ಒಳ್ಳೆಯ ಪ್ರತಿನಿಧಿಗಳು, ಗ್ರಾಮೀಣ ಪ್ರದೇಶದ ರೈತರ ಜೊತೆಯಲ್ಲಿಯೇ ಇದ್ದು, ಅವರ ಬದುಕನ್ನು ಕಟ್ಟಿಕೊಡುವಂತಹ ಕೆಲಸ ಮಾಡುವ ಇಂತಹ ಪ್ರತಿನಿಧಿಗಳನ್ನು ಉಳಿಸಿ, ಸಹಕಾರ ನೀಡಬೇಕಾಗುತ್ತದೆ.

ಯಾರು‌ ನಿಮ್ಮ ಜೊತೆಯಲ್ಲಿ ಹಗಲಿರುಳು ಶ್ರೇಯೋಭಿಲಾಷಿಯಾಗಿ ಕೆಲಸ ಮಾಡ್ತಾರೆ ಇಂತಹ ಪ್ರತಿನಿಧಿಗಳು ಉಳಿಸಬೇಕಾಗುತ್ತದೆ. ಬಹುಶಃ ಮುಂದಿನ ದಿನಗಳಲ್ಲಿ ಬಮೂಲ್ ಚುನಾವಣೆ ನಡೆಯಲಿದೆ.

ರಾಜ್ಯ ಸರ್ಕಾರದ ವಿರುದ್ಧ ಬೇಸರ

ರಾಜ್ಯಾದ್ಯಂತ ಸಹಕಾರ ಕ್ಷೇತ್ರಕ್ಕೆ, ಅದರಲ್ಲಿಯೂ ಕೆಎಂಎಫ್ಗೆ ಚುನಾವಣೆ ನಡೆಯಬೇಕಿತ್ತು. ಆದರೆ ಪ್ರಜಾಪ್ರಭುತ್ವದ ಬಗ್ಗೆ ಪದೇ ಪದೇ ಮಾತಾಡುವವರು, ಸಂವಿಧಾನಕ್ಕೆ ಗೌರವ ಕೊಡಬೇಕು ಎಂದು ಪದೇ ಪದೇ ಹೇಳುವವರು ಅಂತಹ ಸರ್ಕಾರದಲ್ಲಿ ಒಂದು ವರ್ಷ ಮೀರಿದರು, ಇನ್ನೂ ಇರ್ತಕ್ಕಂತವರೇ ಅಧಿಕಾರದಲ್ಲಿ ಮುಂದುವರಿಸುವುದು ಸರಿಯಲ್ಲ ಪ್ರಜಾತಂತ್ರ ವ್ಯವಸ್ಥೆಗೆ ಮಾರಕ ಎಂದರು.

ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಮಾತನಾಡಿ, ಯುವ ಸಮುದಾಯ ತಂದೆತಾಯಂದಿರ ವೃದ್ಯಾಪ್ಯದಲ್ಲಿ ನಾನಿದ್ದೀನಿ ಎಂದು‌ ಹೆಗಲಾಗಬೇಕಿದೆ. ತಂದೆತಾಯಂದಿರುವ ಮಕ್ಕಳ ಸಂತೀಷಕ್ಕಾಗಿ, ಅವರ ಜೀವನ ರೂಪಿಸಲು ಅವರ ಸಂತೋಷವನ್ನು ಬದಿಗಿಟ್ಟು ಶ್ರಮಿಸುತ್ತಾರೆ. ಆದರೆ ಕಾಲೇಜು ಮೆಟ್ಟಿಲೇರುವ ಯುವ ಸಮುದಾಯ ಪ್ರೀತಿ ಪ್ರೇಮದ ಹೆಸರಲ್ಲಿ ಹೆತ್ತವರ ಕಣ್ಣೀರು ಹಾಕಿಸುತ್ತಿದ್ದಾರೆ.

ಯುವಕರಾಗಲಿ, ಯುವತಿಯರಾಗಲಿ ನಾ ಕೇಳಿಕೊಳ್ಳುವುದು ಒಂದೇ, ನೀವು 100ಕ್ಕೆ 100 ಮಾರ್ಕ್ಸ್ ತಗಿಯದಿದ್ದರು ಪರ್ವಾಗಿಲ್ಲ.. ಆದರೆ ಹೆತ್ತವರ ಕಣ್ಣೀರು ಹಾಕಿಸಬೇಡಿ.

ಎಸ್‌ಎಲ್‌ಸಿ, ಪಿಯುಸಿ ವ್ಯಾಸಂಗ ಮಾಡ್ತಾ ಇರುವ ಮಕ್ಕಳು, 10 ವರ್ಷಗಳ ಕಾಲ ಕಷ್ಟಪಟ್ಟು ಓದಿದರೆ ಮುಂದಿನ 70 ವರ್ಷ ಕಾಲ್ ಮೇಲೆ ಕಾಲು ಹಾಕಿಕೊಂಡು ನೆಮ್ಮದಿಯಿಂದ ಇರ್ತಿರ ಎಂಬುದನ್ನು ಅರಿತುಕೊಳ್ಳಬೇಕಿದೆ. ಇಲ್ಲವಾದರೆ ಗಾರ್ಮೆಂಟ್ಸಲ್ ಕೆಲಸ ಮಾಡಬೇಕಾಗುತ್ತದೆ ಎಂಬ ಅರಿವಿರಲಿ.

ಹೆತ್ತವರಾದ ನಾವುಗಳು ಮಕ್ಕಳನ್ನು ಕಾಲೇಜು ಮೆಟ್ಟಿಲು ಹತ್ತಿಸಿದರೆ, ಮಕ್ಕಳು ಹೆತ್ತವರನ್ನು ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತಿಸುತ್ತಿದ್ದಾರೆ.. ದಯವಿಟ್ಟು ರೈತರ ಮಕ್ಕಳು ತಪ್ಪುದಾರಿಗೆ ಸಾಗದೆ ದೇಶವನ್ನು ಕಟ್ಟುವ ಕಾರ್ಯ ಮಾಡಬೇಕಿದೆ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಹಾಲು ಒಕ್ಕೂಟದ ಅಧ್ಯಕ್ಷ ರಾಜ್ ಕುಮಾರ್, ಉಪಾಧ್ಯಕ್ಷ ಮಂಜುನಾಥ್, ಶಾಸಕ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಮುಖಂಡರಾದ ಕುರುಬಗೆರೆ ನರಸಿಂಹಯ್ಯ, ಬಿಸಿ ನಾರಾಯಣಸ್ವಾಮಿ,
ನ್ಯಾಯವಾದಿ ಅಂಜನಗೌಡ, ರಂಗಪ್ಪ, ನರಸಿಂಹಮೂರ್ತಿ, ಟಿ.ವಿ.ಲಕ್ಷ್ಮೀನಾರಾಯಣ್ ಸೇರಿದಂತೆ ಅನೇಕ ಮುಖಂಡರಿದ್ದರು‌.

ರಾಜಕೀಯ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು (JDS) ಏನೇ ಹೇಳಿದರೂ ಮಾತಾಡಬೇಡಿ ಎಂದು ನಮ್ಮವರಿಗೆ ಹೇಳಿದ್ದೇನೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D. Kumaraswamy) ಮಾತನಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ತಿಳಿಸಿದರು.

[ccc_my_favorite_select_button post_id="119469"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಗೀತಂ ವಿಶ್ವವಿದ್ಯಾಲಯದಲ್ಲಿ (Geetham University) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ (Suicide) ಪ್ರಕರಣಗಳಿಗೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದ್ದು, ವಿದ್ಯಾರ್ಥಿಗಳ ಆಕಸ್ಮಿಕ ಸಾವು, ಆತ್ಮಹತ್ಯೆ ಕುರಿತಂತೆ ಪದೇ ಪದೇ ದೂರು ದಾಖಲಾಗುತ್ತಿದೆ.

[ccc_my_favorite_select_button post_id="119472"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!