ರೈತರ ಬದುಕನ್ನು ಕಟ್ಟಿಕೊಡುವ ಕೆಲಸ ಮಾಡುತ್ತಿರುವ ಬಿಸಿ ಆನಂದ್ ಅಂತವರನ್ನು ಬಮೂಲ್‌ನಲ್ಲಿ ಉಳಿಸಿಕೊಳ್ಳಿ: ಸಂಸದ Dr K Sudhakar

Keep people like B.S. Anand who are working to improve the lives of farmers in Bamul: MP Dr K Sudhakar

ದೊಡ್ಡಬಳ್ಳಾಪುರ: ವಿದ್ಯೆಯ ಜೊತೆ ಕೌಶಲ್ಯ ಕೂಡ ಅಗತ್ಯವಾಗಿದ್ದು, ಕೌಶಲ್ಯವಿಲ್ಲದ ಶಿಕ್ಷಣದಿಂದ ಯಾವುದೇ ಪ್ರಯೋಜನವಿಲ್ಲವೆಂದು ಸಂಸದ ಡಾ.ಕೆ.ಸುಧಾಕರ್‌ (Dr K Sudhakar) ಅಭಿಪ್ರಾಯಪಟ್ಟರು.

ಬೆಂಗಳೂರು ಸಹಕಾರ ಹಾಲು ಒಕ್ಕೂಟ, ಬಮುಲ್ ಟ್ರಸ್ಟ್, ದೊಡ್ಡಬಳ್ಳಾಪುರ ಶಿಬಿರ ಕಚೇರಿಯ ಆವರಣದಲ್ಲಿ ಆಯೋಜಿಸಿದ್ದ ದೊಡ್ಡಬಳ್ಳಾಪುರ ಕ್ಷೇತ್ರದ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರು ಮತ್ತು ಸಿಬ್ಬಂದಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ, ಸಂಘದ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆಯಾ ಹುದ್ದೆಗೆ ಅನುಗುಣವಾಗಿ ಕೌಶಲ್ಯವನ್ನು ವಿದ್ಯಾರ್ಥಿಗಳು ಕಲಿಯಬೇಕಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ವಿಶೇಷವಾದ ತರಬೇತಿಯನ್ನು ನೀಡಬೇಕಿದೆ.. ಈ ಕುರಿತು ಸಂಬಂಧಿಸಿದ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಲಾಗಿದೆ.

ಮುಂದಿನ ದಿನಗಳಲ್ಲಿ ಈ ಜಿಲ್ಲೆಯಲ್ಲಿ ಉದ್ಯೋಗ ನಿರೀಕ್ಷೆಯಲ್ಲಿರುವ ನಿರುದ್ಯೋಗಿಗಳಿಗೆ ಕೈಗಾರಿಕೆಗಳ ಉದ್ದಿಮೆದಾರರಿಂದ ವಿಶೇಷ ತರಬೇತಿ ನೀಡಲು ಕ್ರಮವಹಿಸಲಾಗುವುದು. ಬಮೂಲ್ ಸಂಸ್ಥೆ ಕೂಡ ಉದ್ದಿಮೆಯೊಂದಿಗೆ ಕೈಜೋಡಿಸಿದರೆ ಉಪಯೊಗವಾಗಲಿದೆ ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಸಣ್ಣಪುಟ್ಟ ಗುರಿಗಳನ್ನು ಕಾಣದೆ, ದೊಡ್ಡಮಟ್ಟದ ಗುರಿಯನ್ನು ಇಟ್ಟುಕೊಂಡು ಅದಕ್ಕೆ ಸಿದ್ದತೆ ನಡೆಸಬೇಕಿದೆ. ನಾವು ರೈತರ ಮಕ್ಕಳಾಗಿ ಇಲ್ಲಿವರೆಗೂ ಬಂದಿದ್ದೇವೆ ಎಂದರೆ ನಿಮಗೂ ಸಾಧ್ಯವಿದೆ ಎಂಬುದನ್ನು ಮನಗಾಣಬೇಕಿದೆ.

ಬಮೂಲ್ ಸಂಸ್ಥೆಯಲ್ಲಿ ಇಂತಹ ಕಾರ್ಯಕ್ರಮವನ್ನು ಪ್ರತಿವರ್ಷ ನಡೆಸುತ್ತಿರುವುದು ಪ್ರಶಂಸನೀಯ ಕಾರ್ಯ. ಬಿಸಿ ಆನಂದ್ ಕುಮಾರ್ ಅವರಂತಹ ಒಳ್ಳೆಯ ಪ್ರತಿನಿಧಿಗಳು, ಗ್ರಾಮೀಣ ಪ್ರದೇಶದ ರೈತರ ಜೊತೆಯಲ್ಲಿಯೇ ಇದ್ದು, ಅವರ ಬದುಕನ್ನು ಕಟ್ಟಿಕೊಡುವಂತಹ ಕೆಲಸ ಮಾಡುವ ಇಂತಹ ಪ್ರತಿನಿಧಿಗಳನ್ನು ಉಳಿಸಿ, ಸಹಕಾರ ನೀಡಬೇಕಾಗುತ್ತದೆ.

ಯಾರು‌ ನಿಮ್ಮ ಜೊತೆಯಲ್ಲಿ ಹಗಲಿರುಳು ಶ್ರೇಯೋಭಿಲಾಷಿಯಾಗಿ ಕೆಲಸ ಮಾಡ್ತಾರೆ ಇಂತಹ ಪ್ರತಿನಿಧಿಗಳು ಉಳಿಸಬೇಕಾಗುತ್ತದೆ. ಬಹುಶಃ ಮುಂದಿನ ದಿನಗಳಲ್ಲಿ ಬಮೂಲ್ ಚುನಾವಣೆ ನಡೆಯಲಿದೆ.

ರಾಜ್ಯ ಸರ್ಕಾರದ ವಿರುದ್ಧ ಬೇಸರ

ರಾಜ್ಯಾದ್ಯಂತ ಸಹಕಾರ ಕ್ಷೇತ್ರಕ್ಕೆ, ಅದರಲ್ಲಿಯೂ ಕೆಎಂಎಫ್ಗೆ ಚುನಾವಣೆ ನಡೆಯಬೇಕಿತ್ತು. ಆದರೆ ಪ್ರಜಾಪ್ರಭುತ್ವದ ಬಗ್ಗೆ ಪದೇ ಪದೇ ಮಾತಾಡುವವರು, ಸಂವಿಧಾನಕ್ಕೆ ಗೌರವ ಕೊಡಬೇಕು ಎಂದು ಪದೇ ಪದೇ ಹೇಳುವವರು ಅಂತಹ ಸರ್ಕಾರದಲ್ಲಿ ಒಂದು ವರ್ಷ ಮೀರಿದರು, ಇನ್ನೂ ಇರ್ತಕ್ಕಂತವರೇ ಅಧಿಕಾರದಲ್ಲಿ ಮುಂದುವರಿಸುವುದು ಸರಿಯಲ್ಲ ಪ್ರಜಾತಂತ್ರ ವ್ಯವಸ್ಥೆಗೆ ಮಾರಕ ಎಂದರು.

ಬಮೂಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ಮಾತನಾಡಿ, ಯುವ ಸಮುದಾಯ ತಂದೆತಾಯಂದಿರ ವೃದ್ಯಾಪ್ಯದಲ್ಲಿ ನಾನಿದ್ದೀನಿ ಎಂದು‌ ಹೆಗಲಾಗಬೇಕಿದೆ. ತಂದೆತಾಯಂದಿರುವ ಮಕ್ಕಳ ಸಂತೀಷಕ್ಕಾಗಿ, ಅವರ ಜೀವನ ರೂಪಿಸಲು ಅವರ ಸಂತೋಷವನ್ನು ಬದಿಗಿಟ್ಟು ಶ್ರಮಿಸುತ್ತಾರೆ. ಆದರೆ ಕಾಲೇಜು ಮೆಟ್ಟಿಲೇರುವ ಯುವ ಸಮುದಾಯ ಪ್ರೀತಿ ಪ್ರೇಮದ ಹೆಸರಲ್ಲಿ ಹೆತ್ತವರ ಕಣ್ಣೀರು ಹಾಕಿಸುತ್ತಿದ್ದಾರೆ.

ಯುವಕರಾಗಲಿ, ಯುವತಿಯರಾಗಲಿ ನಾ ಕೇಳಿಕೊಳ್ಳುವುದು ಒಂದೇ, ನೀವು 100ಕ್ಕೆ 100 ಮಾರ್ಕ್ಸ್ ತಗಿಯದಿದ್ದರು ಪರ್ವಾಗಿಲ್ಲ.. ಆದರೆ ಹೆತ್ತವರ ಕಣ್ಣೀರು ಹಾಕಿಸಬೇಡಿ.

ಎಸ್‌ಎಲ್‌ಸಿ, ಪಿಯುಸಿ ವ್ಯಾಸಂಗ ಮಾಡ್ತಾ ಇರುವ ಮಕ್ಕಳು, 10 ವರ್ಷಗಳ ಕಾಲ ಕಷ್ಟಪಟ್ಟು ಓದಿದರೆ ಮುಂದಿನ 70 ವರ್ಷ ಕಾಲ್ ಮೇಲೆ ಕಾಲು ಹಾಕಿಕೊಂಡು ನೆಮ್ಮದಿಯಿಂದ ಇರ್ತಿರ ಎಂಬುದನ್ನು ಅರಿತುಕೊಳ್ಳಬೇಕಿದೆ. ಇಲ್ಲವಾದರೆ ಗಾರ್ಮೆಂಟ್ಸಲ್ ಕೆಲಸ ಮಾಡಬೇಕಾಗುತ್ತದೆ ಎಂಬ ಅರಿವಿರಲಿ.

ಹೆತ್ತವರಾದ ನಾವುಗಳು ಮಕ್ಕಳನ್ನು ಕಾಲೇಜು ಮೆಟ್ಟಿಲು ಹತ್ತಿಸಿದರೆ, ಮಕ್ಕಳು ಹೆತ್ತವರನ್ನು ಪೊಲೀಸ್ ಸ್ಟೇಷನ್ ಮೆಟ್ಟಿಲು ಹತ್ತಿಸುತ್ತಿದ್ದಾರೆ.. ದಯವಿಟ್ಟು ರೈತರ ಮಕ್ಕಳು ತಪ್ಪುದಾರಿಗೆ ಸಾಗದೆ ದೇಶವನ್ನು ಕಟ್ಟುವ ಕಾರ್ಯ ಮಾಡಬೇಕಿದೆ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಹಾಲು ಒಕ್ಕೂಟದ ಅಧ್ಯಕ್ಷ ರಾಜ್ ಕುಮಾರ್, ಉಪಾಧ್ಯಕ್ಷ ಮಂಜುನಾಥ್, ಶಾಸಕ ಧೀರಜ್ ಮುನಿರಾಜು, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ, ಮುಖಂಡರಾದ ಕುರುಬಗೆರೆ ನರಸಿಂಹಯ್ಯ, ಬಿಸಿ ನಾರಾಯಣಸ್ವಾಮಿ,
ನ್ಯಾಯವಾದಿ ಅಂಜನಗೌಡ, ರಂಗಪ್ಪ, ನರಸಿಂಹಮೂರ್ತಿ, ಟಿ.ವಿ.ಲಕ್ಷ್ಮೀನಾರಾಯಣ್ ಸೇರಿದಂತೆ ಅನೇಕ ಮುಖಂಡರಿದ್ದರು‌.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]