Bengaluru Rural district is the first for the state in Podi Abhiyan

ಪೋಡಿ ಅಭಿಯಾನದಲ್ಲಿ ರಾಜ್ಯಕ್ಕೆ ಬೆಂ.ಗ್ರಾ ಜಿಲ್ಲೆ ಪ್ರಥಮ: ಸಚಿವ ಕೃಷ್ಣ ಭೈರೇಗೌಡ

ಬೆಂ.ಗ್ರಾ.ಜಿಲ್ಲೆ; ಕಳೆದ ಡಿಸೆಂಬರ್ ನಲ್ಲಿ ದರಖಾಸ್ತು ಪೋಡಿ ಅಭಿಯಾನ ಆರಂಭವಾಗಿ ರಾಜ್ಯದ್ಯಾಂತ ಇದುವರೆಗೂ ಅಂದಾಜು 5000 ಪೋಡಿ ದುರಸ್ತಿ ಆಗಿದೆ. ಅದರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೂ 1236 ಪೋಡಿ ದುರಸ್ತಿ ಆಗಿದ್ದು ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ (krishna byregowda) ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆ ಸಮೀಪ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ್ದ ಕಂದಾಯ ಇಲಾಖೆ ಮತ್ತು ಭೂ ಮಾಪನ ಇಲಾಖೆಯಡಿ ಸರಳೀಕರಣವಾದ ದರಖಾಸ್ತು ಪೋಡಿ ಅಭಿಯಾನದ ವಿದ್ಯುಕ್ತ ಚಾಲನೆ ಮತ್ತು ಪೋಡಿ ದುರಸ್ತಿ/ ಹೊಸ ದಾಖಲೆ ವಿತರಣಾ ಸಮಾರಂಭವನ್ನು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಉದ್ಘಾಟಿಸಿ ಮಾತನಾಡಿದರು.

ಪೋಡಿ ದುರಸ್ತಿ ರೈತರ ಬಹುದೊಡ್ಡ ಸಮಸ್ಯೆ ಆಗಿತ್ತು. ಸರಳೀಕರಣ ಪೋಡಿ ಅಭಿಯಾನ ಕೈಗೊಳ್ಳಲು ಒಂದು ವರ್ಷಗಳ ಪೂರ್ವ ಸಿದ್ಧತೆ ನಡೆಸಿ ಕಳೆದ ಡಿಸೆಂಬರ್ ನಲ್ಲಿ ಚಾಲನೆ ನೀಡಲಾಯಿತು. ಕಳೆದ 50-60 ವರ್ಷಗಳ ಹಿಂದೆ ಮಂಜೂರಾದ ಜಮೀನುಗಳಿಗೆ ಈಗ ಪೋಡಿ ಮಾಡಲಾಗುತ್ತಿದೆ.

ಜಿಲ್ಲೆಯಲ್ಲಿ ಅಂದಾಜು 50000 ರೈತರಿಗೆ ಜಮೀನು ಮಂಜೂರು ಆಗಿದ್ದು, 18000 ರೈತರ ಬಳಿ ಪೋಡಿ ದುರಸ್ತಿಗೆ ಪೂರಕ ದಾಖಲೆಗಳಿವೆ. ಜಿಲ್ಲೆಯಲ್ಲಿ ಈಗ ನಡೆಯುತ್ತಿರುವ ಪೋಡಿ ಅಭಿಯಾನದ ವೇಗ ನೋಡಿದರೆ ಕನಿಷ್ಟ 6 ತಿಂಗಳಲ್ಲಿ 18000 ರೈತರಿಗೆ ಪ್ರತ್ಯೇಕ ಪೋಡಿ ದುರಸ್ತಿ ಮಾಡಿಸಬಹುದು. ಪೂರಕ ದಾಖಲೆಗಳು ಇಲ್ಲದಿರುವ ಜಮೀನುಗಳಿಗೆ ಮಿಸ್ಸಿಂಗ್ ಕಮಿಟಿ ಮುಂದೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.

ಭೂ ದಾಖಲೆಗಳ ಡಿಜಟಲೀಕರಣ

ಭೂ ದಾಖಲೆಗಳ ನಾಪತ್ತೆ, ಅಕ್ರಮ ವರ್ಗಾವಣೆ, ಅಕ್ರಮ ತಿದ್ದುಪಡಿ ಇಂತಹ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಲು ದಾಖಲೆಗಳ ಡಿಜಿಟಲೀಕರಣ ಮಾಡಲಾಗುತ್ತಿದೆ. ಭೂ ಸುರಕ್ಷಾ ಯೋಜನೆಯಡಿ ರಾಜ್ಯದಲ್ಲಿರುವ ಎಲ್ಲಾ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಆನ್ಲೈನ್ ಲ್ಲಿ ಅಪ್ಲೋಡ್ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರು ಮನೆಯಲ್ಲಿ ಕೂತು ನಿಮ್ಮ ಜಮೀನುಗಳ ದಾಖಲೆಗಳನ್ನು ನೋಡಬಹುದಾಗಿದೆ. ಇದರಿಂದ ಪೋಡಿ ದುರಸ್ತಿಗೂ ಸಹಾಯವಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಪೋಡಿ ದುರಸ್ತಿ ಆಂದೋಲನಕ್ಕೆ ಹೆಚ್ಚು ಒತ್ತು ನೀಡಿ ರಾಜ್ಯದಲ್ಲಿ ಪ್ರಥಮ ಸ್ಥಾನ ಬರಲು ಕಾಣಿಭೂತರಾದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿ, ಕಂದಾಯ ಇಲಾಖೆ ಅಧಿಕಾರಿಗಳ, ಸರ್ವೆ ಅಧಿಕಾರಿಗಳಿಗೆ ಪ್ರಶಂಸೆ ವ್ಯಕ್ತಪಡಿಸಿ ಮುಂದಿನ ದಿನಗಳಲ್ಲಿ ಇದೇ ವೇಗ ಕಾಪಾಡಿಕೊಂಡು ಆದಷ್ಟು ಬೇಗ 18000 ಪೋಡಿ ಗಳನ್ನು ಶೀಘ್ರ ದುರಸ್ತಿಗೊಳಿಸಿ ಎಂದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಸರ್ಕಾರಿ ಜಮೀನುಗಳನ್ನು ಮಂಜೂರು ಮಾಡಿ ಸಾಕಷ್ಟು ವರ್ಷಗಳು ಕಳೆದರೂ ಇದುವರೆಗೂ ಪೋಡಿ ಆಗಿರಲಿಲ್ಲ. ಈಗ ನಮ್ಮ ಸರ್ಕಾರ ಕೈಗೆತ್ತಿಕೊಂಡು ವಿಶೇಷ ಅಭಿಯಾನದ ಮೂಲಕ ದರಖಾಸ್ತು ಪೋಡಿ ದುರಸ್ತಿ ಮಾಡಲಾಗುತ್ತಿದೆ ಇದಕ್ಕಾಗಿ ಕಂದಾಯ ಸಚಿವರಿಗೆ ಧನ್ಯವಾದಗಳು.

ಬಯಲು ಸೀಮೆ ಪ್ರದೇಶಗಳಲ್ಲಿ ಸಾಕಷ್ಟು ಜೀವಂತ ಕೆರೆಗಳಿದಾವೆ ಕೆರೆಗಳಲ್ಲಿ ಮಣ್ಣು ಹೂಳೆತ್ತುವ ಕೆಲಸ ಆಗಬೇಕು. ಕೆರೆಗಳಲ್ಲಿ ಹೂಳೆತ್ತುವುದರಿಂದ ಬಾವಿ, ಕೊಳವೆ ಬಾವಿಗಳಲ್ಲಿ ನೀರು ಬಂದು ರೈತರ ಬದುಕು ಹಸನಾಗುತ್ತದೆ ಎಂದರು.

ರೈತರ ಜಮೀನುಗಳಿಗೆ, ಸ್ಮಶಾನಕ್ಕೆ ರಸ್ತೆ ಸಂಪರ್ಕ ಕಲ್ಪಿಸಿ

ರೈತರು ಕಚೇರಿಗೆ ಬರುವುದನ್ನು ತಪ್ಪಿಸಿ, ಸರ್ಕರ ರೈತರ ಮನೆ ಬಾಗಿಲಿಗೆ ತಲುಪಬೇಕು ಎಂಬುದು ನನ್ನ ಅಭಿಪ್ರಾಯ. ಜಿಲ್ಲಾಡಳಿತ ಬಹಳ ಉತ್ತಮ ಕೆಲಸ ಮಾಡುತ್ತಿದೆ. ಬಡವರಿಗೆ ಮನೆ, ನಿವೇಶನ ಕೊಡುವಂತಹ ಕೆಲಸ ಆಗಬೇಕು. ಸಾಕಷ್ಟು ರೈತರು ಜಮೀನುಗಳಿಗೆ ತೆರಳಲು ರಸ್ತೆ ಇಲ್ಲ, ಕನಿಷ್ಟ 10 ಗುಂಟೆ ಜಮೀನು ಇದ್ದರು ರಸ್ತೆ ಕಲ್ಪಿಸಬೇಕು. ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಒದಗಿಸಬೇಕು. ಇವೆಲ್ಲವನ್ನೂ ಈಡೇರಿಸಿದಾಗ ಮಾತ್ರ ಪೋಡಿ ಮುಕ್ತ ಗ್ರಾಮಗಳು ಸಾಧ್ಯ. ಈ ಸಮಸ್ಯೆಗಳನ್ನು ಸಹ ಆದ್ಯತೆ ಆಗಿ ತೆಗೆದುಕೊಂಡು ಪೋಡಿ ಅಭಿಯಾನದಲ್ಲಿ ಕ್ರಮ ಕೈಗೊಳ್ಳಬೇಕು ಎಂದರು.

1236 ಪೋಡಿ ದುರಸ್ತಿ ಪೂರ್ಣ: ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಮಾತನಾಡಿ, ಪೋಡಿ ಮಾಡಿಸಿಕೊಳ್ಳದೇ ಹಲವು ರೈತರು ವ್ಯಾಪಾರ, ವ್ಯವಹಾರ, ಸೌಲಭ್ಯ ವಂಚಿತರಾಗುತ್ತಿದ್ದರು. ಸರ್ಕಾರವು ದರಖಾಸ್ತು ಪೋಡಿ ವಿಶೇಷ ಆಂದೋಲನ ಕೈಗೆತ್ತಿಕೊಂಡು ಹಲವು ವರ್ಷಗಳ ರೈತರ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿದೆ.

ಹಿಂದೆ ಪೋಡಿ ಮಾಡಲಿಕ್ಕೆ ಹಲವಾರು ಸಮಸ್ಯೆ ಬರುತ್ತಿತ್ತು ಈಗ ಅದನ್ನು ಸುಲಭ ರೀತಿಯಲ್ಲಿ ಪೋಡಿ ಮಾಡಿಸಿಕೊಳ್ಳಬಹುದಾಗಿದೆ. ಕಳೆದ ಒಂದುವರೆ ತಿಂಗಳಲ್ಲಿ ನಮ್ಮ ಜಿಲ್ಲೆಯಲ್ಲಿ 1236 ಪೋಡಿಗಳನ್ನು ಮಾಡಲಾಗಿದೆ, ಜಿಲ್ಲೆಯ 70 ಗ್ರಾಮಗಳ 90 ಸರ್ವೆ ನಂಬರ್ ಗಳಲ್ಲಿ ಸರ್ವೆ ನಡೆಸಿ ದೊಡ್ಡಬಳ್ಳಾಪುರ 304,ಹೊಸಕೋಟೆ 301, ನೆಲಮಂಗಲ 302, ದೇವನಹಳ್ಳಿ 329 ಪೋಡಿ ದುರಸ್ತಿ ಮಾಡಲಾಗಿದೆ. ಸಮರೋಪಾದಿಯಲ್ಲಿ ಕೆಲಸ ಕಾರ್ಯ ನಿರ್ವಹಿಸಿದ್ದ ಎಲ್ಲಾ ಅಧಿಕಾರಿಗಳಿಗೂ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಕಿಯೋನಿಕ್ಸ್ ಅಧ್ಯಕ್ಷರು ಹಾಗೂ ಹೊಸಕೋಟೆ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ತಿನ ಶಾಸಕರಾದ ರವಿ, ಶಾಸಕರಾದ ಶ್ರೀನಿವಾಸ, ಧೀರಜ್ ಮುನಿರಾಜು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಭೂ ಮಾಪನ ಇಲಾಖೆಯ ಆಯುಕ್ತರಾದ ಮಂಜುನಾಥ್, ಕಂದಾಯ ಇಲಾಖೆ ಆಯುಕ್ತರಾದ ಪೆಮ್ಮಲ ಸುನೀಲ್ ಕುಮಾರ್, ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ, ಬಯಪ ಅಧ್ಯಕ್ಷರಾದ ಶಾಂತಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ರಾಜಣ್ಣ, ಜಿಲ್ಲೆಯ ಜನಪ್ರತಿನಿಧಿಗಳು, ಸ್ಥಳಿಯ ಮುಖಂಡರು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ರಾಜಕೀಯ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ 1.3-3ಕೋಟಿ: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ

ರಾಜ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷದವರೆಗೂ ಬಾಡಿಗೆ ಆಧಾರದ ಮೇಲೆ ಪಡೆಯಲು ಒಪ್ಪಿಗೆ ನೀಡಿದೆ.ಬಾಡಿಗೆ ನೆಪದಲ್ಲಿ ಕಮೀಷನ್ ಗೋಲ್ ಮಾಲ್ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="116356"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!