Bigg boss winner Hanumantu .. Karunadu celebrated

Bigg boos ಗೆದ್ದ ಹನುಮಂತು.. ಸಂಭ್ರಮಿಸಿದ ಕರುನಾಡು

ಬೆಂಗಳೂರು: ಕನ್ನಡದ ಸುಪ್ರಸಿದ್ದ ರಿಯಾಲಿಟಿ ಶೋ ಬಿಗ್‌ಬಾಸ್ (Bigg boos) ಸೀಸನ್ 11ಕ್ಕೆ ಭಾನುವಾರ ತೆರೆಬಿದ್ದಿದೆ. ಹನುಮಂತು ಬಿಗ್‌ಬಾಸ್ ವಿನ್ನರ್ ಪಟ್ಟ ಅಲಂಕರಿಸಿದರೆ, ತ್ರಿವಿಕ್ರಮ್ ರನ್ನ‌ರ್ ಆಪ್ ಆಗಿ ಹೊರಹೊಮ್ಮಿದ್ದಾರೆ.

ಉಗ್ರಂ ಮಂಜು, ತ್ರಿವಿಕ್ರಮ್, ರಜತ್, ಮೋಕ್ಷಿತಾ ಪೈ ನಡುವೆ ತೀವ್ರ ಪೈಪೋಟಿಯಿತ್ತು. ಈ ಬಾರಿ ಮಹಿಳಾ ಸ್ಪರ್ಧಿಗೆ ಬಿಗ್‌ಬಾಸ್‌ ಕಿರೀಟ ಒಲಿಯಲಿದೆ ಎನ್ನಲಾಗಿತ್ತು. ಅದರಲ್ಲಿ ಭವ್ಯಾ ಗೌಡ ಹಾಗೂ ಮೋಕ್ಷಿತಾ ಪೈ ಮುಂಚೂಣಿಯಲ್ಲಿದ್ದರು.

ಈ ಇಬ್ಬರ ನಡುವೆ ಪೈಪೋಟಿ ಜೋರಾಗಿಯೇ ಇತ್ತು. ಆದರೆ ಭವ್ಯಾ ಎಲಿಮಿನೇಟ್ ಆದರು. ಮೋಕ್ಷಿತಾ ಮನೆಯಲ್ಲಿಯೇ ಉಳಿದರು. ಇತ್ತ ರಜತ್‌ಗೆ ವೀಕ್ಷಕರು ಅಷ್ಟಾಗಿ ಒಲವು ತೋರಲಿಲ್ಲ. ಹಾಗಾಗಿ ಅವರು ಮನೆಯಿಂದ ಹೊರಬಂದಿದ್ದು, ಕುತೂಹಲಕ್ಕೆ ಕಾರಣವಾಗಲಿಲ್ಲ.

ಈ ಬಾರಿ ಗೆಲ್ಲುವ ಸ್ಪರ್ಧಿ ಎಂದೇ ಗುರುತಿಸಿಕೊಂಡಿದ್ದ ಮಂಜಣ್ಣ ಅಚ್ಚರಿಯ ರೀತಿಯಲ್ಲಿ ಮನೆಯಿಂದ ಹೊರಬಂದರು. ಹಿಂದೆಯೇ ಮೋಕ್ಷಿತಾ ಹೊರಬಂದರು.

ತ್ರಿವಿಕ್ರಮ್-ಹನುಮಂತು ನಡುವೆ ತೀವ್ರ ಪೈಪೋಟಿ

ಉಳಿದವರಲ್ಲಿ ತ್ರಿವಿಕ್ರಮ್ ಹಾಗೂ ಹನುಮಂತು ಇಬ್ಬರ ನಡುವೆ ತೀವ್ರ ಪೈಪೋಟಿ ಇತ್ತು. ಈ ಇಬ್ಬರಲ್ಲಿ ಹನುಮಂತುಗೆ ದಾಖಲೆಯ ಮತಗಳು ಬಿದ್ದಿದ್ದವು. ಹಾಗಾಗಿ 11ರ ಆವೃತ್ತಿಯ ಬಿಗ್ ಬಾಸ್‌ನ ವಿಜೇತರಾಗಿ ಹನುಮಂತು ಗೆದ್ದು ಬೀಗಿದರು.

ತಮ್ಮ ಮುಗ್ಧತೆ ಯಲ್ಲಿಯೇ ಬಿಗ್‌ಬಾಸ್ ಪ್ರೇಕ್ಷಕರ ಮನಗೆದ್ದಿದ್ದ ಹನುಮಂತು, ಈಗ ಕರುನಾಡಿನ ಜನರ ಮನಸನ್ನು ಗೆದ್ದಿದ್ದಾರೆ.

ರಾತ್ರಿ ಬಿಗ್‌ಬಾಸ್ ವಿನ್ನರ್ ಘೋಷಣೆವರೆಗೂ ಕಾದು ಕುಳಿತಿದ್ದ ಅನೇಕರು ಹನುಮಂತು ಗೆಲವಿನ ಕೈ ಮೇಲೆತ್ತುತ್ತಿದ್ದಂತೆ ಸಂಭ್ರಮಿಸಿದರು. ರಾತ್ರಿ ಮಲಗಿದ್ದವರು, ಬೆಳಗ್ಗೆ ಎದ್ದು ಯಾರು ಗೆದ್ದರೆಂದು ಮಾಹಿತಿ ತಿಳಿದು ಸಂಭ್ರಮಿಸಿದರು.

ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ ಎಂಬಂತೆ ಬಡ ಕುಟುಂಬ, ಹಳ್ಳಿಗಾಡಿನಿಂದ ಬಂದ ಮುಗ್ಧ ಮನಸ್ಸಿನ ಹನುಮಂತು ಗೆಲುವಿಗಾಗಿ ಓಟ್ ಮಾಡಿದ್ದ ಕರುನಾಡಿನ ಜನರ ಆಶಯದಂತೆ ಹನುಮಂತು ಬಿಗ್ ಬಾಸ್ ಗೆದ್ದಿದ್ದು, ಮಕ್ಕಳು, ಮಹಿಳೆಯರು ಸೇರಿ ಎಲ್ಲರಲ್ಲಿ ಸಂಭ್ರಮ ಮನೆಮಾಡಿದೆ.

ಮಹಿಳೆಯರಾದಿಯಾಗಿ ಮೊಬೈಲ್ಗಳ ವಾಟ್ಸಪ್ ಸ್ಟೇಟಸ್, ಫೇಸ್‌ಬುಕ್‌ ಪುಟಗಳಲ್ಲಿ ಹನುಮಂತು ಗೆಲುವಿಗೆ ಶುಭಾಶಯ ಹರಿದುಬರುತ್ತಿದೆ.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!