Daily story A pandit named Sujnani

Daily story| ಹರಿತಲೇಖನಿ ದಿನಕ್ಕೊಂದು ಕಥೆ: ಸುಜ್ಞಾನಿ ಎಂಬ ಪಂಡಿತ

Daily story: ಒಂದೂರಿನಲ್ಲಿ ಒಬ್ಬ ರಾಜನಿದ್ದ. ಅವನ ಆಸ್ಥಾನಕ್ಕೆ ಒಮ್ಮೆ ಸುಜ್ಞಾನಿ ಎಂಬ ಪಂಡಿತ ಬಂದ. ಅವನು ರಾಜನನ್ನು ಕುರಿತು, “ಮಹಾರಾಜರೇ, ನಿಮ್ಮ ಆಸ್ಥಾನದ ಪಂಡಿತರು ಕೇಳಿದ ಯಾವುದೇ ಪ್ರಶ್ನೆಗೆ ತೃಪ್ತಿಕರ ಉತ್ತರ ನೀಡುವೆ. ನಿಮಗೆ ಸರಿ ಎನಿಸಿದರೆ ತಕ್ಕ ಕಾಣಿಕೆ ನೀಡಿರಿ” ಎಂದು ಬೇಡಿಕೊಂಡನು.

ರಾಜನ ಒಪ್ಪಿಗೆಯ ಮೇರೆಗೆ ಸಭೆ ಕರೆಯಲಾಯಿತು. ಒಬ್ಬ ಆಸ್ಥಾನದ ಪಂಡಿತನು ಸುಜ್ಞಾನಿಯನ್ನು ಕುರಿತು. “ಸಕಲ ಮಾನವ, ಪಕ್ಷಿ, ಪ್ರಾಣಿ, ಕ್ರಿಮಿ ಕೀಟಗಳು ಹಾಗೂ ಗಿಡ ಮರಗಳನ್ನು ಕಾಪಾಡುವ ಕರುಣಾಮ ತಾಯಿ ಯಾರು? ಎಂದು ಕೇಳಿದನು. ಸುಜ್ಞಾನಿ ಪಂಡಿತನು.

“ಭೂಮಿ ತಾಯಿ. ಮಾನವನಿಗೆ ಮನೆ ಕಟ್ಟಲು ಕಲ್ಲು – ಮಣ್ಣು, ಕಟ್ಟಿಗೆ ಕೊಡುವವಳು ಭೂಮಿತಾಯಿ. ಜೋಳ – ಗೋಧಿ ಮುಂತಾದ ಆಹಾರ ಧಾನ್ಯ ಬೆಳೆಯುವವಳು ಅವಳು. ಗಿಡಗಳ ಮೂಲಕ ಹಣ್ಣು, ಕಾಯಿ ನೀಡುವಳು. ಹೊಳೆ, ಕೆರೆ, ಸರೋವರ ಮೂಲಕ ನೀರು ಕೊಡುವವಳು ಭೂಮಿ ತಾಯಿಯೇ” ಎಂದು ಉತ್ತರಿಸಿದನು.

ಎರಡನೇಯ ಪಂಡಿತನು, “ಸಕಲ ಜೀವಿಗಳನ್ನು ರಕ್ಷಣೆ ಮಾಡುವ ನಿಜವಾದ ರಾಜನು ಯಾರು” ಎಂದು ಪ್ರಶ್ನಿಸಿದನು. ಸುಜ್ಞಾನಿ ಪಂಡಿತನು “ನಿಜವಾದ ರಾಜನೆಂದರೆ ಮಳೆರಾಜನೆ. ಮಳೆರಾಜನು ಸುರಿಸುವ ಮಳೆ ನೀರಿನಿಂದಲೇ ರೈತ ಆಹಾರ ಧಾನ್ಯ ಬೆಳೆಯುತ್ತಾನೆ.

ಲತೆಗಳು ಹೂ ಕೊಡುವವು. ಗಿಡಗಳು ಹಣ್ಣು ಕೊಡುವವು. ಹೊಳೆ ಕೆರೆಗಳು ನೀರು ಕೊಡುವುದು ಮಳೆ ರಾಜನ ಕೃಪೆಯಿಂದಲೇ. ಈ ರೀತಿಯಲ್ಲಿ ಸಕಲ ಜೀವಿಗಳನ್ನು ರಕ್ಷಿಸುವ ರಾಜನೆಂದರೆ ಮಳೆರಾಜನೆ” ಎಂದು ಉತ್ತರಿಸಿದನು.

ಬೆಳವಣಿಗೆ ಮಾಡುವ ಎರಡು ಮುಖ್ಯ ವಸ್ತುಗಳು ಯಾವುವು?

ಮೂರನೇಯ ಪಂಡಿತನು. “ಮಾನವ ಶರೀರವನ್ನು ಆರೋಗ್ಯಪೂರ್ಣವಾಗಿ ಬೆಳವಣಿಗೆ ಮಾಡುವ ಎರಡು ಮುಖ್ಯ ವಸ್ತುಗಳು ಯಾವುವು?” ಎಂದು ಪ್ರಶ್ನಿಸಿದನು. ಸುಜ್ಞಾನಿ ಪಂಡಿತನು.

“ನಮ್ಮ ಶಾರೀರಿಕ ಆರೋಗ್ಯ ಚೆನ್ನಾಗಿರಲು ಒಳ್ಳೆಯ ಶುಚಿಯಾದ ಆಹಾರ ಹಾಗೂ ಸ್ವಚ್ಛ ನೀರೆ ಬೇಕು. ಅನುಭವಿಗಳು ಇದನ್ನೇ “ಕೂಳು ಕುತ್ತು, ನೀರು ಪಿತ್ತು” ಅಂದಿದ್ದಾರೆ. ಅಂದರೆ ಅಶುದ್ಧ ಆಹಾರ ಹಾಗೂ ಹೊಲಸು ನೀರು ನಮ್ಮ ಶರೀರವನ್ನು ರೋಗಮಾಯ ಮಾಡುತ್ತವೆ.

ಸತ್ವಯುತ ಬಿಸಿ ಬಿಸಿ ಹಿತಮಿತವಾದ ಆಹಾರ ಹಾಗೂ ಪರಿಶುದ್ಧವಾದ ನೀರು ಆರೋಗ್ಯಪೂರ್ಣ ಬೆಳವಣಿಗೆಯ ಎರಡು ಮುಖ್ಯ ವಸ್ತುಗಳಾಗಿವೆ” ಎಂದು ಉತ್ತರಿಸಿದನು.

ನಾಲ್ಕನೇಯ ಆಸ್ಥಾನ ಪಂಡಿತನು, “ನಿಸರ್ಗದಲ್ಲಿ ಜೀವಿಸುವ ಪಕ್ಷಿ, ಪ್ರಾಣಿ, ಮನುಷ್ಯ, ಸಸ್ಯ, ಕ್ರಿಮಿ ಕಿಟಾದಿಗಳು ನಿಜವಾದ ದೇವರು ಯಾರು? ಎಂದು ಕೇಳಿದನು. ಸುಜ್ಞಾನಿಯು, “ಆಹಾರವಿಲ್ಲದೆ – ನೀರಿಲ್ಲದೆ ಯಾವು ಜೀವಿಯು ಬದುಕಲಾರದು. ಆಹಾರ ಧಾನ್ಯಗಳು ಹುಲುಸಾಗಿ ಬೆಳೆಯಲು ಸೂರ್ಯನ ಬಿಸಿಲು, ಬೆಳಕು ಅವಶ್ಯಕ.

ಸೂರ್ಯನ ಪ್ರಖರ ಕಿರಣಗಳಿಂದ ಸಮುದ್ರದ ನೀರು ಕಾಯ್ದು ಉಗಿಯಾಗಿ, ಅದ್ರವಾಗಿ ಮೇಲೆ ಹೋಗುತ್ತದೆ. ಆ ಉಗಿಗೆ ತಂಪು ತಗುಲಿದಾಗ, ಮೋಡಗಳಿಂದ ಮಳೆ ಸುರಿಯುತ್ತದೆ.

ಈ ರೀತಿ ಸುರಿದ ಮಳೆಯಿಂದ ಬೆಳೆಗಳು ಬೆಳೆದು ನಮ್ಮ ಆಹಾರವಾಗಿ ಜೀವಿಸಲು ನೆರವಾಗುತ್ತವೆ. ಮಳೆಯಿಂದ ಪಡೆದ ನೀರು ಕುಡಿಯಲು ಉಪಯೋಗವಾಗುತ್ತದೆ. ಹೀಗೆ ನಮ್ಮನ್ನು ಕಾಪಾಡುವ ನಿಜವಾದ ದೇವರೆಂದರೆ ಸೂರ್ಯದೇವೆನೆ” ಎಂದು ವಿವರಿಸಿದನು.

ಐದನೇ ಪಂಡಿತನು, “ಮನುಷ್ಯ ನಿಜವಾದ ಪ್ರಾಣ ಯಾವುದು? ಎಂದು ಕೇಳಿದನು. ಸುಜ್ಞಾನಿಯು, “ಪ್ರಾಣವೆಂದರೆ ಉಸಿರು. ಉಸಿರಾಟ ನಿಂತರೆ ಮನುಷ್ಯ ಸತ್ತಂತೆಯೇ.

ಆದ್ದರಿಂದ ಮನುಷ್ಯ ನಿಜವಾದ ಪ್ರಾಣ ಎಂದರೆ ಉಸಿರಾಟವೇ ಆಗಿದೆ. ಅನುಲೋಮ – ವಿಲೋಮ ಕ್ರಿಯೆ ಹಾಗೂ ಕಪಾಲಭಾತಿ ಮೊದಲಾದ ಪ್ರಾಣಾಯಾಮ, ಯೋಗ ಕ್ರಿಯೆಗಳು ಆರೋಗ್ಯಪೂರ್ಣ ಜೀವನಕ್ಕೆ ಪಂಚ ಪ್ರಾಣವೆಂದು ತಿಳಿಯಬೇಕು” ಎಂದು ಹೇಳಿದನು.

ರಾಜನೂ, ಆಸ್ಥಾನ ಪಂಡಿತರು ಸುಜ್ಞಾನಿ ಪಂಡಿತನ ವಾಕ್ ಚಾತುರ್ಯವನ್ನು ತುಂಬಾ ಮೆಚ್ಚಿಕೊಂಡರು. ಅವನಿಗೆ ಯೋಗ್ಯ ಕಾಣಿಕೆ ನೀಡಿ ಗೌರವಿಸಿದರು.

ಕೃಪೆ: ಸಾಮಾಜಿಕತಾಣ. (ಲೇಖಕರ ಮಾಹಿತಿ ಲಭ್ಯವಿಲ್ಲ)

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!