Daily story Work without happiness

ಹರಿತಲೇಖನಿ ದಿನಕ್ಕೊಂದು ಕಥೆ: ಅನಿಶ್ಚಿತತೆ.. ಹತಾಶೆಯ ನಡುವೆ

Daily story: ಗೋಪಾಲಣ್ಣ ವೃತ್ತಿಯಲ್ಲಿ ಮೇಷ್ಟ್ರು. ಅವರು ಹೇಳುತ್ತಿದ್ದರು, ‘ನಮ್ಮದೂ ಒಂದು ಕೆಲಸ ಏನ್ರೀ? ಹಾಡಿದ್ದೇ ಹಾಡು ಕಿಸಿಬಾಯಿದಾಸ ಎಂದ ಹಾಗೆ ಹೇಳಿದ್ದನ್ನೇ ಹೇಳುವುದು. ನನಗೆ ತಲೆ ಕೆಟ್ಟು­ಹೋಗಿದೆ’.

ರಾಜಪ್ಪ ವೃತ್ತಿಯಲ್ಲಿ ವೈದ್ಯರು. ಅವರಿಗೂ ತಮ್ಮ ಕೆಲಸದ ಬಗ್ಗೆ ಬೇಜಾರು. ‘ನಾವೆಲ್ಲ ಜೀತದಾಳುಗಳು ಸರ್. ನಮ್ಮದು ಎನ್ನುವ ಸಮಯ­ವೇನಾದರೂ ಇದೆಯೇ? ಭಾನುವಾರ, ರಜಾದಿನ ಯಾವುದೂ ನಮಗಿಲ್ಲ. ದಿನ ಬೆಳಗಾದರೆ ರೋಗಿಗಳ, ಅಳುಮು­ಖದವರ ಜೊತೆಗೆ ಏಗಿ, ಮಾತು ನನಗೆ ನಗೋದೇ ಮರೆತು ಹೋಗಿದೆ’.

ಮಾಜಿ ಮಂತ್ರಿ ಹಾಗೂ ಸದಾ ಚಟುವಟಿಕೆ­ಯಲ್ಲಿ ಇರುವ ರಾಜಕಾರಣಿ ಗುಂಡಣ್ಣ ಹೇಳುತ್ತಾರೆ, ‘ನಮ್ಮ ವೃತ್ತಿಯಲ್ಲಿ ಯಾವುದೂ ಗ್ಯಾರಂಟಿ ಇಲ್ಲ.

ನಮ್ಮದೇ­ನಿದ್ದರೂ ಸೀಜನಲ್ ಕೆಲಸ. ಐದು ವರ್ಷ ಅಧಿಕಾರದ ಪಲ್ಲಕ್ಕಿ ದೊರೆತರೆ ಮುಂದೆ ಅದೆಷ್ಟು ವರ್ಷ ಅಧಿಕಾರಕ್ಕೆ ಕಾಯ­ಬೇಕೋ? ಅದು ಮುಂದೆ ದೊರೆಯ­ದೆಯೇ ಹೋಗಬಹುದು. ಆದರೆ ನಮ್ಮ ಹಿಂಬಾಲಕರು ಒಂದೇ ಸಮನೆ ಪ್ರಾಣ ತೆಗೆ­ಯುತ್ತಾರೆ.

ನನಗೆ ಇದು ಸಾಕಾಗಿ ಹೋಗಿದೆ. ಎಲ್ಲವನ್ನೂ ಬಿಟ್ಟು ಸುಮ್ಮನೆ ಮನೆ­ಯಲ್ಲಿ ಕೂಡ್ರುವುದು ವಾಸಿ’. ಅದರೆ, ಮನೆಯಲ್ಲಿಯೇ ಕುಳಿತು ಮಕ್ಕಳನ್ನು ಬೆಳೆ­ಸುವ ಸೌಭಾಗ್ಯಮ್ಮನವರ ಅಭಿಪ್ರಾಯವೇ ಬೇರೆ.

‘ಛೇ, ಇದೊಂದು ಜೈಲು. ಹೊರ­ಗಿನ ಪ್ರಪಂಚದಲ್ಲಿ ಏನಾ­ಗುತ್ತದೆ ಎಂಬುದೇ ತಿಳಿಯದೆ ಮನೆ ಆಯ್ತು, ಕೆಲಸ ಆಯ್ತು ಎಂದುಕೊಂಡು ಜೀವನವಿಡೀ ಬಾವಿಯಲ್ಲಿಯ ಕಪ್ಪೆ­ಯಂತೆ ಕಳೆಯುವುದು ಯಾವ ಸುಖ?‘ ಎನ್ನುತ್ತಾರೆ ಅವರು.

ಹಾಗಾದರೆ ನಮ್ಮಲ್ಲಿ ಬಹಳಷ್ಟು ಜನ ತಮಗೆ ಇಷ್ಟ­ವಿಲ್ಲದ ಕೆಲಸವನ್ನೇ ಮಾಡುತ್ತ ಜನ್ಮ ಸವೆಸುತ್ತಾ­ರೆಯೇ? ಹೀಗೆ ಮನಸ್ಸಿಲ್ಲದೇ ಮಾಡಿದ ಕೆಲಸ ಪ್ರಯೋಜನವಾದೀತೇ? ಇದೇ ತರಹದ ಚಿಂತನೆ ಇಂಗ್ಲೆಂಡಿನ ಒಬ್ಬ ತರುಣನನ್ನು ಬಹುವಾಗಿ ಕಾಡಿತ್ತು.

ಆತ ಒಂದು ದಿನ ಮನೆಯಲ್ಲಿ ಏಕಾಂಗಿಯಾಗಿ ಕುಳಿತು ಚಿಂತಿಸಿದ. ಮನೆ ಶಾಂತ­ವಾಗಿತ್ತು. ಗಡಿಯಾರದ ಮುಳ್ಳಿನ ಸದ್ದು ಕೇಳುವಷ್ಟು ಶಾಂತ. ಆತನ ತಲೆಯಲ್ಲಿ ಒಂದೇ ಕೊರೆತ. ನನ್ನ ಕೆಲಸ ನನಗೆ ತೃಪ್ತಿ, ಸಂತೋಷ ತರದಿದ್ದರೆ ಅದನ್ನು ಮಾಡು­ವುದು ಏಕೆ?.

ಅನಿಶ್ಚಿತತೆ ಹಾಗೂ ಹತಾಶೆಗಳ ನಡುವೆ

ಆತ ಕಣ್ಣು ಮುಚ್ಚಿ ಕುರ್ಚಿಗೆ ತಲೆಯಾನಿಸಿ ತನ್ನ ಆಗಿ ಹೋದ ಬದುಕನ್ನೇ ಗಮನಿಸಿದ. ಇದುವರೆಗೆ ಏನು ಮಾಡಿದೆ ನಾನು? ನನ್ನ ಇಡೀ ಬದುಕೇ ಬಡತನ, ಅನಾರೋಗ್ಯ, ಅನಿಶ್ಚಿತತೆ ಹಾಗೂ ಹತಾಶೆಗಳ ನಡುವೆ ಹರಿದು ಹಂಚಿ ಹೋಗಿದೆ.

ತಾನು ಮೊದಲು ಪಾದ್ರಿಯಾಗಬೇಕೆಂದು ತರ­ಬೇತಿ ಪಡೆದು ಸೇರಿದ­ವನು. ಆದರೆ, ಅಲ್ಲಿ ಕಲಿಸಿದ ಧರ್ಮದ ಅತಿರೇಕದ ಹಾಗೂ ಅತ್ಯಂತ ಸಂಕುಚಿತ ಅರ್ಥವನ್ನು ಕಂಡು ರೋಸಿ ಅದನ್ನು ಬಿಟ್ಟು ಬಂದೆ. ನಂತರ ಶಿಕ್ಷಕ ವೃತ್ತಿಯನ್ನು ಸೇರಿದೆ.

ಆ ವೃತ್ತಿಗೆ ಬೇಕಾದ ತಾಳ್ಮೆ, ಪ್ರೀತಿಗಳ ಕೊರತೆ ನನ್ನಲ್ಲಿ ಇದ್ದಿದ್ದರಿಂದ ಅದನ್ನು ತೊರೆದು ನಿಂತೆ. ಆದಾದ ನಂತರ ಹತ್ತಾರು ಸಣ್ಣ ಪುಟ್ಟ ಕೆಲಸಗಳನ್ನು ಮಾಡಿದರೂ ಯಾವುದರಲ್ಲಿಯೂ ಸಂತೋಷ ದಕ್ಕಲಿಲ್ಲ.

ಕೊನೆಗೆ ನಾನು ಬಯಸಿ ಕೈ ಹಿಡಿದದ್ದು ಈ ಬರಹ. ತನ್ನ ಬರವಣಿಗೆ ಸಂತೋಷ ಕೊಡುವುದ­ರೊಂದಿಗೆ ಅದನ್ನು ಓದಿದ ಸಹಸ್ರಾರು ಜನರಿಗೆ ನೀಡುತ್ತಿದ್ದ ಸಂತೋಷ, ತನ್ನಲ್ಲಿ ತೃಪ್ತಿಯನ್ನು ಹೆಚ್ಚಿಸಿತ್ತು.

ಆ ತರುಣನ ಹೆಸರು ಥಾಮಸ್ ಕಾರ್ಲೈಲ್. ಇಂಗ್ಲೆಂಡಿನಲ್ಲಿ ಹತ್ತೊಂಬ­ತ್ತನೇ ಶತಮಾನದಲ್ಲಿ ಮಿಂಚಿಹೋದ ಅಸಾಮಾನ್ಯ ಪ್ರತಿಭೆ ಕಾರ್ಲೈಲ್. ಆತನ ಬರವಣಿಗೆ ಅದೆಷ್ಟು ಜನರನ್ನು ಲೇಖಕ­ರಾಗಲು ಪ್ರಚೋದಿಸಿತ್ತೋ? ರಾಬರ್ಟ್‌ ಬ್ರೌನಿಂಗ್, ಡಿಕೆನ್ಸ್, ಟೆನಿಸನ್, ಥ್ಯಾಕರೆ ಇವರೆಲ್ಲ ಕಾರ್ಲೈಲ್‌ನಿಂದ ಪ್ರಭಾವಿತ­ರಾದವರು.

ರಸ್ಕಿನ್ ಮತ್ತು ಡಾರ್ವಿನ್‌ ಅವರಂತೂ ಈತನ ಶಿಷ್ಯರೇ ಆಗಿದ್ದರು. ಎಮರ್ಸನ್ ಮತ್ತು ಸರ್ ವಿಲಿಯಂ ಆಸ್ಲರ್ ಕೂಡ ಕಾರ್ಲೈಲ್ ತಮ್ಮ ಸಾಹಿತ್ಯ ನಿರ್ಮಾಣದ ಶಿಲ್ಪಿ ಎಂದು ಭಾವಿಸುತ್ತಿದ್ದರು.

ಕಾರ್ಲೈಲ್ ಬಹಳಷ್ಟು ಬರೆದಿ­ದ್ದರೂ ಪ್ರತಿಯೊಬ್ಬರೂ ಮೆಚ್ಚು­ವುದು ಅವನ ಎಂಟು ಪದಗಳ ಒಂದು ಸಾಲನ್ನು. ಆ ಸಾಲು ತುಂಬ ಸುಲಭ ಹಾಗೂ ಅತ್ಯಂತ ಮಾರ್ಮಿಕ. ‘ಬ್ಲೆಸೆಡ್ ಈಸ್ ಹೀ ಹೂ ಹ್ಯಾಸ್ ಪೌಂಡ್ ಹಿಸ್ ವರ್ಕ’. ಅಂದರೆ, ‘ತನಗೊಪ್ಪಿದ ಕೆಲಸವನ್ನು ಪಡೆದವನೇ ಧನ್ಯ’. ಇದರ ಅರ್ಥ ಬಹು ಆಳಕ್ಕೆ ಹೋಗುವಂಥದ್ದು.

ನಮ್ಮ ಬದುಕಿ­ನಲ್ಲಿ ನನಗೊಪ್ಪಿತವಾದ, ಮನಸ್ಸಿಗೆ ಹಿಡಿಸುವ ಕೆಲಸವನ್ನು ಹುಡುಕಿ­ಕೊಂಡು ಹೋಗಬೇಕು ಇಲ್ಲವೇ ದೊರೆತ ಕೆಲಸದಲ್ಲಿ ಸಂತೋಷವನ್ನು ಹುಡುಕ­ಬೇಕು.

ಸಂತೋಷವಿಲ್ಲದೆ ಮಾಡಿದ ಕೆಲಸದಿಂದ ಮಾಡಿದವನ ಸಮಯ ವ್ಯರ್ಥ ಹಾಗೂ ಉಳಿದವರಿಗೆ ಅಪ್ರಯೋಜಕ. ನಮ್ಮ ಕೆಲಸ ಸಣ್ಣದು, ಪ್ರಯೋಜನ­ವಿಲ್ಲದ್ದು ಎಂದು ಗೊಣ­ಗುವುದು ಬೇಡ. ಗೊಣಗಾಟ ಅಳು­ಬರು­ಕರ ಬದುಕು. ಮಾಡುವುದನ್ನೇ ಸೊಗಸಾಗಿ, ಉತ್ಸಾಹದಿಂದ, ಸಂತೋಷ­ದಿಂದ ಮಾಡೋಣ.

ಆ ಕೆಲಸ ಇನ್ನೊಂದು ಹತ್ತು ಜನರಿಗೆ ಸಂತೋಷ ಕೊಡಲಿ. ಅವರಿಗೆ ದೊರೆತ ಸಂತೋಷ ನಮ್ಮ ಹೃದಯದಲ್ಲಿ ತೃಪ್ತಿಯನ್ನು ಹತ್ತು ಪಟ್ಟು ಹೆಚ್ಚಿಸುತ್ತದೆ, ಬದುಕು ಧನ್ಯವಾ­ಗುತ್ತದೆ, ಎಲ್ಲರಿಗೂ ಪ್ರಿಯವಾಗುತ್ತದೆ ಆಲ್ಲವೇ? ಯೋಚಿಸಿ, ಚಿಂತಿಸಿ, ಆಲೋಚಿಸಿ.

ಕೃಪೆ: ಸಾಮಾಜಿಕ ಜಾಲತಾಣ (ಲೇಖಕರ ಮಾಹಿತಿ ಲಭ್ಯವಿಲ್ಲ)

AI ಚಿತ್ರ ಬಳಸಲಾಗಿದೆ..

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!