Sri Subrahmanyeshwar Brahma Rathotsava

ವಿಜೃಂಭಣೆಯಿಂದ ನಡೆದ ಚಿತ್ರಾವತಿ ಶ್ರೀ ಸುಬ್ರಹ್ಮಣ್ಯೇಶ್ವರ ಬ್ರಹ್ಮ ರಥೋತ್ಸವ

ಚಿಕ್ಕಬಳ್ಳಾಪುರ: ನಗರ ಹೊರವಲಯದ ಚಿತ್ರಾವತಿ ಶ್ರೀ ಸುಬ್ರಹ್ಮಣ್ಯೇಶ್ವರ (Sri Subrahmanyeshwar) ಬ್ರಹ್ಮ ರಥೋತ್ಸವ ಮತ್ತು ಜಾತ್ರೆ ವಿಜೃಂಭಣೆಯಿಂದ ಸೋಮವಾರ ನೆರವೇರಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ದೇವರ ದರ್ಶನವನ್ನು ಪಡೆದು ಹರಕೆಗಳನ್ನು ಸಮರ್ಪಿಸಿದರು.

ಚಿಕ್ಕಬಳ್ಳಾಪುರ ಹೊರ ವಲಯದ ಇತಿಹಾಸ ಪ್ರಸಿದ್ಧ ಚಿತ್ರಾವತಿಯ ಶ್ರೀ ಸುಬ್ರಹ್ಮಣ್ಯೇಶ್ವರನಿಗೆ ಪ್ರತಿ ಮಾಘ ಮಾಸದ ಕುಮಾರಷಷ್ಟಿಯಂದು ಬ್ರಹ್ಮ ರಥೋತ್ಸವ ಮತ್ತು ಜಾತ್ರೆ ಅದ್ಧೂರಿಯಾಗಿ ನಡೆಯುತ್ತದೆ.

ಸುಮಾರು 20 ಸಾವಿರಕ್ಕೂ ಹೆಚ್ಚಿನ ಭಕ್ತಾದಿಗಳು ಜಾತ್ರೆಗೆ ಆಗಮಿಸಿ ಹರಕೆ ಸಮರ್ಪಿಸಿ ಅಲ್ಲಿನ ಹುತ್ತಕ್ಕೆ ಹಾಲೆರೆಯುತ್ತಾರೆ.

ಮದ್ಯಾಹ್ನ ನಡೆದ ಬ್ರಹ್ಮ ರಥೋತ್ಸವಕ್ಕೆ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್ ಚಾಲನೆ ನೀಡಿದರು. ಸಹಸ್ರಾರು ಭಕ್ತರು ರಥ ಎಳೆದರು.

ಮುಂಜಾನೆಯಿಂದ ದೇವಸ್ಥಾನಕ್ಕೆ ಆಗಮಿಸುತ್ತಿದ್ದ ಭಕ್ತರು, ಚಿತ್ರಾವತಿ ಶ್ರೀ ಸುಬ್ರಹ್ಮಣ್ಯೇಶ್ವರ ದರ್ಶನ ಪಡೆದು ಹರಕೆ ತೀರಿಸಿಕೊಂಡು ಹುತ್ತಕ್ಕೆ ಹಾಲೆರೆದರು.

ಬ್ರಹ್ಮ ರಥೋತ್ಸವದಲ್ಲಿ ಪಾಲ್ಗೊಂಡು ರಥಕ್ಕೆ ಪನ್ನೀರು ಪತ್ರೆ, ಬಾಳೆಹಣ್ಣು ಎಸೆದು ದೇವರ ಕೃಪೆಗೆ ಪಾತ್ರರಾದರು.

ಜಾತ್ರೆಗೆ ಬಂದ ಭಕ್ತಾದಿಗಳಿಗೆ ಉಪಹಾರ, ಪಾನಕ, ಮಜ್ಜಿಗೆ ಮತ್ತು ಕೋಸಂಬರಿಯನ್ನು ಹೊನ್ನೇನಹಳ್ಳಿ ಸುತ್ತಮುತ್ತಲ ಗ್ರಾಮಸ್ಥರು ಏರ್ಪಡಿಸಿದ್ದರು.

ಯಾವುದೇ ಕಳ್ಳತನ ಪ್ರಕರಣಗಳು ನಡೆಯದಂತೆ ಗ್ರಾಮಾಂತರ ಪೊಲೀಸರು ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡು ಕ್ಷಣಕ್ಷಣಕ್ಕೆ ಧ್ವನಿವರ್ಧಕಗಳ ಮುಖಾಂತರ ಮಾಹಿತಿ ಕೊಡುತ್ತಿದ್ದರು.

ಕುಕ್ಕೆ ಸುಬ್ರಮಣ್ಯ, ಘಾಟಿ ಸುಬ್ರಮಣ್ಯ ದೇವಾಲಯಗಳಲ್ಲಿ ಬ್ರಹ್ಮ ರಥೋತ್ಸವ ಕಾರ್ಯಕ್ರಮಗಳು ನಡೆದ ನಂತರ ಪ್ರತಿ ವರ್ಷ ಮಾಘ ಮಾಸದಲ್ಲಿ ಷಷ್ಟಿ ಪ್ರಯುಕ್ತ ನಡೆಯುವ ಚಿತ್ರಾವತಿ ಜಾತ್ರೆಯು ವಿಶೇಷತೆಯನ್ನು ಪಡೆದುಕೊಂಡಿದೆ.

ಜಾತ್ರೆ ಇನ್ನೂ ಒಂದು ವಾರ ಇದೆ ಎನ್ನುವಾಗ ದನಗಳ ಸಂತೆಯೂ ನಡೆಯುತ್ತದೆ. ಇದರಲ್ಲಿ ರಾಜ್ಯ ಮಾತ್ರವಲ್ಲದೇ ತಮಿಳುನಾಡು, ಆಂಧ್ರ ಸೇರಿದಂತೆ ವಿವಿಧೆಡೆಯಿಂದ ರೈತರು ಭಾಗವಹಿಸುತ್ತಿದ್ದರು.

ಸಂತೆಯಲ್ಲಿ ತಾವು ಚೆನ್ನಾಗಿ ಸಾಕಿದ ದನಗಳನ್ನು ಮಾರಾಟ ಮಾಡಿ ಆರ್ಥಿಕ ಲಾಭವನ್ನು ಪಡೆಯುತ್ತಿದ್ದರು. ಆದರೆ ಈ ಬಾರಿ ದನಗಳ ಜಾತ್ರೆಗೆ ಬಾರದಿರುವುದು ಸ್ವಲ್ಪ ಮಟ್ಟಿಗೆ ಜಾತ್ರೆಯ ಮೇಲೆ ಪ್ರಭಾವ ಬೀರಿದೆ.

ನೂರಾರು ವರ್ಷಗಳಿಂದ ಅದ್ಧೂರಿಯಾಗಿ ನಡೆಯುತ್ತಾ ಬಂದಿರುವ ಚಿತ್ರಾವತಿ ಜಾತ್ರಾ ಮಹೋತ್ಸವಕ್ಕೆ ಜಾನುವಾರುಗಳೇ ಪ್ರಮುಖ ಆಕರ್ಷಣೆ.

ವ್ಯತಿರಿಕ್ತ ಪ್ರಭಾವ

ಚಿತ್ರಾವತಿ ಜಾತ್ರೆ ಜಾನುವಾರುಗಳ (ದನಗಳ) ಜಾತ್ರೆಯಂದೇ ಹೆಸರುವಾಸಿಯಾಗಿತ್ತು. ರಾಜ್ಯ, ಹೊರರಾಜ್ಯಗಳಿಂದ ಲಕ್ಷಾಂತರ ಬೆಲೆಬಾಳುವ ಜಾನುವಾರುಗಳು ಜಾತ್ರೆಯಲ್ಲಿ ಸೇರುತ್ತಿದ್ದರಿಂದ ವ್ಯಾಪಾರ ಭರದಿಂದ ಸಾಗುತ್ತಿತ್ತು.

ಜಾನುವಾರುಗಳನ್ನು ಮಾರುವವರು, ಕೊಳ್ಳುವವರು ಸ್ಥಳೀಯ ಸಾರ್ವಜನಿಕರಿಂದ ಜಾತ್ರೆ ತುಂಬಿ ತುಳುಕುತ್ತಿತ್ತು. ಆದರೆ ಈ ಬಾರಿ ದನಗಳ ಜಾತ್ರೆಗೆ ಜಾನುವಾರುಗಳು ಭಾರದಿರುವುದು ಜಾತ್ರಾ ಮಹೋತ್ಸವದ ಮೇಲೆ ವ್ಯತಿರಿಕ್ತ ಪ್ರಭಾವ ಬೀರಿದೆ.

ಪ್ರತೀ ವರ್ಷ ಜಾತ್ರೆಯಲ್ಲಿ ಸೇರುವ ಜಾನುವಾರುಗಳಿಗೆ ತಾಲೂಕು ಆಡಳಿತದಿಂದಲೇ ಮೇವು, ನೀರಿನ ವ್ಯಸವ್ಥೆ ಕಲ್ಪಿಸಲಾಗುತ್ತಿತ್ತು. ಈ ಬಾರಿಯ ಚಿತ್ರಾವತಿ ಜಾತ್ರೆಗೆ ಜಾನುವಾರುಗಳನ್ನು ರೈತರು ತರಲೇ ಇಲ್ಲಾ.

ರಾಸುಗಳ ವ್ಯಾಪಾರ ಸೇರಿದಂತೆ ಜಾತ್ರೆಯಲ್ಲಿ ತಲೆ ಎತ್ತುತ್ತಿದ್ದ ಸಾಲು ಸಾಲು ಸಿಹಿ ತಿನಿಸುಗಳ, ತಂಪುಪಾನೀಯಗಳು, ಮಕ್ಕಳ ಆಟಿಕೆ, ಮನರಂಜನಾ ಆಟಗಳು ಸೇರಿದಂತೆ ಲಕ್ಷಾಂತರ ರೂಪಾಯಿಗಳ ವ್ಯಾಪಾರ ವಹಿವಾಟಾಗುತಿತ್ತು. ಜಾತ್ರೆಗೆ ಒಂದು ವಾರದ ಮುಂಚೆಯಿಂದಲೇ ನೂರಾರು ಅಂಗಡಿಗಳು ಬಂದು ಸೇರುತ್ತಿದ್ದವು.

ಈ ಬಾರಿ ದನಗಳ ಜಾತ್ರಗೆ ಜಾನುವಾರುಗಳು ಬಾರದಿರುವುದರಿಂದ ವ್ಯಾಪಾರ ವಹಿವಾಟುಗೂ ತೀವ್ರ ಪೆಟ್ಟಾಗಿದ್ದು, ವ್ಯಾಪಾರಸ್ಥರಿಗೆ ಬಂದ ದಾರಿಗೆ ಸುಂಕವಿಲ್ಲದಂತಾಗಿದೆ.

ತಾಲೂಕು ಆಡಳಿತ ರಥೋತ್ಸವಕ್ಕೆ ಭರದ ಸಿದ್ಧತೆ ನಡೆಸಿ ಕೊಂಡಿದ್ದು, ಕಲ್ಯಾಣಿ ಹಾಗೂ ಜಾತ್ರಾ ಸ್ಥಳದ ಸ್ವಚ್ಛತೆ, ದೇವಾಲಯಗಳಿಗೆ ಸುಣ್ಣ, ಬಣ್ಣ, ಪೂಜೆ ಪುನಸ್ಕಾರಗಳು, ರಥ ನಿರ್ವಹಣೆ, ಭಾಗವಹಿಸುವ ಜನರಿಗೆ ಭದ್ರತೆ, ಕುಡಿವ ನೀರಿನ ವ್ಯವಸ್ಥೆ ಸೇರಿದಂತೆ ನಾನಾ ರೀತಿಯಲ್ಲಿ ಸಿದ್ಧತೆಗಳು ಮಾಡಿ ಕೊಂಡಿತ್ತು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!