Doddaballapura: ರೈತರ ವ್ಯಾಪಾರಕ್ಕೆ ಅಡ್ಡಿಮಾಡಬೇಡಿ.. ವರ್ತಕರಿಗೆ ಪೊಲೀಸರ ಸೂಚನೆ

Doddaballapura: Don't disturb farmers' business.. Police notice to traders

ದೊಡ್ಡಬಳ್ಳಾಪುರ (Doddaballapura): ನಗರದ ಸರ್ಕಾರಿ ಪಿಯು ಕಾಲೇಜಿನ ಪಾದಚಾರಿ ಮಾರ್ಗದಲ್ಲಿ ಆಟೋದಲ್ಲಿ ಹಣ್ಣು ಮಾರಾಟ ಮಾಡುತ್ತಿದ್ದವರನ್ನು ಖಾಲಿ ಮಾಡಿಸಲು ಬೀದಿ ಬದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ಮುಂದಾದಾಗ ಬಡೆದಿದ್ದ ಮಾತಿನ ಚಕಮಕಿ ಕುರಿತು ಇಂದು ಪೊಲೀಸರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಅನ್ನದಾತ ರೈತರು ಬೆಳೆದ ಬೆಳೆಯನ್ನು ಮಾರಾಟ ಮಾಡಲು ವರ್ತಕರ ಆಕ್ಷೇಪ ಎಂಬ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ‌. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಮರೇಶ್ ಗೌಡ ಅವರು ವರ್ತಕರ ಸಭೆ ನಡೆಸಿದ್ದಾರೆ.

ನಗರದ ಪೊಲೀಸ್ ಠಾಣೆ ಆವರಣದಲ್ಲಿ ವರ್ತಕ ಸಂಘದ ಪ್ರತಿನಿಧಿಗೊಂದಿಗೆ ಮಾತನಾಡಿ, ರೈತರ ವ್ಯಾಪಾರಕ್ಕೆ ಅಡ್ಡಿ ಮಾಡದಂತೆ ಸೂಚನೆ ನೀಡಿದ್ದು, ತೊಂದರೆಯಾದರೆ ಯಾವುದೇ ಕಾನೂನು‌ ಉಲ್ಲಂಘನೆ ಮಾಡದೇ, ನಗರಸಭೆ ಆಯ್ತುಕ್ತರಿಗೆ ದೂರು ನೀಡುವಂತೆ ಸಲಹೆ ನೀಡಿದ್ದಾರೆಂದು ತಿಳಿದು ಬಂದಿದೆ.

ಮಾತಿನ ಚಕಮಕಿ

ನಿನ್ನೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯ ಸರ್ಕಾರಿ ಪಿಯು ಕಾಲೇಜಿನ ಪಾದಚಾರಿ ಮಾರ್ಗದಲ್ಲಿ ಆಟೋದಲ್ಲಿ ಹಣ್ಣು ಮಾರಾಟ ಮಾಡುತ್ತಿದ್ದವರನ್ನು ಖಾಲಿ ಮಾಡಿಸಲು ಬೀದಿ ಬದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ಮುಂದಾದಾಗ ಮಾತಿನ ಚಕಮಕಿ ನಡೆದಿತ್ತು.

ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರ ಮಧ್ಯ ಪ್ರವೇಶ ಮಾಡಿ ಎಲ್ಲರನ್ನು ಚದುರಿಸಿದರು.

‘ನಗರದಲ್ಲಿ ಎಲ್ಲೆಂದರಲ್ಲಿ ಹೊರಗಿನವರು ಬಂದು ಟೆಂಪೋ, ಆಟೋಗಳಲ್ಲಿ ಹಣ್ಣುಗಳ ವ್ಯಾಪಾರ ಮಾಡುತ್ತಿದ್ದಾರೆ. ಇದರಿಂದ ತಳ್ಳುವ ಗಾಡಿಗಳಲ್ಲಿ ಬಸ್ ನಿಲ್ದಾಣದಲ್ಲಿ ಹಣ್ಣುಗಳ ವ್ಯಾಪಾರ ಮಾಡುತ್ತ ಜೀವನ ನಡೆಸುತ್ತಿರುವವರಿಗೆ ವ್ಯಾಪಾರವೇ ಇಲ್ಲದಾಗಿದೆ.

ನಗರಸಭೆ ವತಿಯಿಂದ ಬೀದಿ ಬದಿ ವ್ಯಾಪಾರಿಗಳ ಗುರುತಿನ ಚೀಟಿ ಪಡೆದು ನಿಗದಿತ ಬೆಲೆಗೆ ಹಣ್ಣುಗಳನ್ನು ಮಾರಾಟ ಮಾಡುತ್ತಿರುವ ವ್ಯಾಪಾರಿಗಳಿಗೆ ತೊಂದರೆಯಾಗುತ್ತಿದೆ.

ವಾಹನಗಳು ಸಂಚರಿಸುವ ರಸ್ತೆ ಬದಿಗಳಲ್ಲಿ ಆಟೋ, ಟೆಂಪೋಗಳನ್ನು ನಿಲ್ಲಿಸಿಕೊಂಡು ವ್ಯಾಪಾರ ಮಾಡುವುದರಿಂದ ಅಪಘಾತಗಳು ನಡೆಯುತ್ತಿವೆ. ಹಾಗಾಗಿ ನಿಗದಿತ ಸ್ಥಳದಲ್ಲೇ ತಳ್ಳುವ ಗಾಡಿಯಲ್ಲೇ ವ್ಯಾಪಾರ ನಡೆಸಬೇಕು’ ಎಂದು ಬೀದಿ ಬದಿ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಬಿ.ನರೇಶ್ ಕುಮಾರ್ ಹಾಗೂ ಮುಖಂಡರು ಆಗ್ರಹಿಸಿದ್ದರು.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಕರವೇ ಕನ್ನಡಿಗರ ಬಣದ ಮುಖಂಡ ನರೇಂದ್ರ, ಜೆಡಿಎಸ್ ಮುಖಂಡ ನಾಗರಾಜ್, ರೈತ ಸಂಘದ ಮುಖಂಡ ಬ್ಯಾಡರಹಳ್ಳಿ ನಟರಾಜ್, ‘ಇಲ್ಲಿನ ರಸ್ತೆ ಬದಿಯಲ್ಲಿ ಹಣ್ಣುಗಳನ್ನು ವ್ಯಾಪಾರ ಮಾಡುತ್ತಿರುವುದು ನಮ್ಮದೇ ತಾಲ್ಲೂಕಿನ ಸಾಸಲು ಗ್ರಾಮದ ನಿವಾಸಿ.

ತಾಲ್ಲೂಕಿನ ರೈತರ ತೋಟಗಳಿಂದ ಸೀಬೆ, ದಾಳಿಂಬೆ, ದ್ರಾಕ್ಷಿ ಜೊತೆಗೆ ಹೊರಗಿನಿಂದ ಕಿತ್ತಳೆ, ಸೇಬು ಸಹ ತಂದು ಮಾರಾಟ ಮಾಡುತ್ತಿದಾನೆ. ಆದರೆ ನಗರದಲ್ಲಿನ ಹಣ್ಣಿನ ವ್ಯಾಪಾರಿಗಳು ಹಳ್ಳಿ ಕಡೆಯವರು ನಗರದಲ್ಲಿ ಬಂದು ಹಣ್ಣು ಮಾರಾಟ ಮಾಡಬಾರದು ಎಂದು ಬೇದರಿಕೆ ಹಾಕುವುದು ಎಷ್ಟರ ಮಟ್ಟಿಗೆ ಸರಿ.

ಕಡಿಮೆ ಬೆಲೆಗೆ ಮಾರಾಟ ಮಾಡುವುದನ್ನು ಪ್ರಶ್ನಿಸುವ ಅಧಿಕಾರ ಇವರಿಗೆ ನೀಡಿದವರು’ ಎಂದು ಪ್ರಶ್ನಿಸಿದ್ದರು.

ಇಡೀ ದೇಶದಲ್ಲಿ ಯಾರು ಎಲ್ಲಿಬೇಕಾದರು ವ್ಯಾಪಾರ ಮಾಡುವ, ಜೀವಿಸುವ ಹಕ್ಕು ಸಂವಿಧಾನ ನೀಡಿದೆ. ಇಂತಹ ನೈತಿ ಪೊಲೀಸ್ಗಿರಿ ಪ್ರಕರಣ ಮರುಕಳಿಸದಂತೆ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]