Please Kannadigas don't come to Kumbh Mela.. Viral Video of Kannadigas

ಅವ್ಯವಸ್ಥೆ, ಕೊಳಕು..!: ದಯವಿಟ್ಟು ಕನ್ನಡಿಗರು ಕುಂಭಮೇಳಕ್ಕೆ ಬರಬೇಡಿ.. ಕನ್ನಡಿಗನ Video ವೈರಲ್

ಬೆಂಗಳೂರು: ಉತ್ತರ ಪ್ರದೇಶದ ಪ್ರಯೋಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳ (Maha Kumbhamela) ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದು, ಕೋಟ್ಯಾಂತರ ಜನ ಭೇಟಿ ನೀಡಿ, ಪುಣ್ಯ ಸ್ನಾನ ಮಾಡುತ್ತಿದ್ದಾರೆ.

144 ವರ್ಷಗಳ ನಂತರ ನಡೆಯುತ್ತಿರುವ ಅತ್ಯಂತ ಅಪರೂಪದ ಮಹಾ ಕುಂಭಮೇಳಕ್ಕೆ ಸಮರೋಪಾದಿಯಲ್ಲಿ ದೇಶ, ವಿದೇಶಗಳಿಂದ ಭಕ್ತರು ತೆರಳುತ್ತಿರುವುದರಿಂದ ಅನೇಕ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗುತ್ತಿರುವ ಕಾರಣ, ಪೊಲೀಸರು ಕುಂಭಮೇಳಕ್ಕೆ ಬರಬೇಡಿ ಎಂದು ಮನವಿ ಮಾಡುತ್ತಿದ್ದಾರೆ.

ಮತ್ತೊಂದೆಡೆ ಮಹಾಕುಂಭಮೇಳದಲ್ಲಿನ ಅವ್ಯವಸ್ಥೆ ಪದೇ ಪದೇ ಸುದ್ದಿಯಾಗುತ್ತಿದ್ದು, ಇತ್ತೀಚೆಗೆ ಸಂಭವಿಸಿದ ಕಾಲ್ತುಳಿತದಲ್ಲಿ ಅನೇಕರು ಸಾವನಪ್ಪಿದ್ದಾರೆ.

ಇದರ ಬೆನ್ನಲ್ಲೇ ಕುಂಭಮೇಳಕ್ಕೆ ಬರುವ ಭಕ್ತರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ, ಸಿಎಂ ಯೋಗಿ ಸರ್ಕಾರ ಹೇಳಿಕೆ ಸುಳ್ಳು, ಸ್ವಚ್ಚತೆ ಇಲ್ಲವಾಗಿದೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ಪುಷ್ಟಿ ನೀಡುವಂತೆ, ಕನ್ನಡಿಗನ ವಿಡಿಯೋ ವೈರಲ್ ಆಗಿದೆ.

ಕನ್ನಡದ ಹರ್ಷವರ್ಧನ್.ಕನ್ನಡಿಗ ಎನ್ನುವವರು ಮಹಾ ಕುಂಭ ಮೇಳಕ್ಕೆ ಹೋಗಿ ಅಲ್ಲಿನ ಬಗ್ಗೆ ಮಾಹಿತಿಯನ್ನು ಬಿಚ್ಚಿಟ್ಟಿದ್ದು, ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆಯಿಲ್ಲ, ಪವಿತ್ರ ಸ್ನಾನ ಮಾಡಲು ಕೂಡ ನೀರಿನ ವ್ಯವಸ್ಥೆ ಇಲ್ಲ ಎಂದು ಆರೋಪಿಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರ ಮಹಾ ಕುಂಭ ಮೇಳಕ್ಕೆ ಸರಿಯಾದ ವ್ಯವಸ್ಥೆ ಮಾಡಿಲ್ಲ. ಸಿಎಂ ಯೋಗಿ ಆದಿತ್ಯ ನಾಥ್ ಅವರು, 40 ಕೋಟಿ ಭಕ್ತರು ಬರಬಹುದೆಂದು ಊಹಿಸಲಾಗಿದೆ. ಆದರೆ ನಾವು 100ಕೋಟಿಗೆ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದರು. ಆದರೆ ಎಲ್ಲಾ ಸುಳ್ಳು ಈ ರೀತಿ ಏನೂ ಇಲ್ಲ.

ಹೌದು ನೂರಲ್ಲದಿದ್ದರೆ 200ಕೋಟಿ ಬರುಬಹುದು ಯಾರೆಂದರೆ ಉತ್ತರ ಭಾರತೀಯರು, ಅವರಿಗೆ ಸ್ವಚ್ಚತೆ ಬಗ್ಗೆ ಅಗತ್ಯ ಇಲ್ಲ.. ಆದರೆ ದಕ್ಷಿಣ ಭಾರತೀಯರಿಗೆ ಸ್ವಚ್ಚತೆ ಎಷ್ಟು ಪ್ರಮುಖ ವಾದದ್ದು ಎಂಬುದು ನಿಮಗೆ ತಿಳಿದಿದೆ.

ಇಲ್ಲಿನ ಶೌಚಾಲಯ ಬಳಸು ಸಾಧ್ಯವಾಗುತ್ತಿಲ್ಲ. ವೃದ್ಧರಿಗೆ ಯಾವುದೇ ವಾಹನ ವ್ಯವಸ್ಥೆ ಇಲ್ಲ, ಹಲವು ಕಿಲೋಮೀಟರ್ ದೂರದಿಂದ ನಡೆದು ಬರಬೇಕಿದೆ. ಇಲ್ಲಿಗೆ ಬಂದರೆ ನದಿಯಲ್ಲಿ ಮಕ್ಕಳ ಮೊಣಕಾಲು ಕೂಡ ಮುಳುಗುವುದಿಲ್ಲ. ಇದರಲ್ಲಿ ಹೇಗೆ. ಚೆಂಬಲ್ಲಿ ನೀರು ಸುರಿದುಕೊಳ್ಳಬೇಕು.

ಅಷ್ಟೇ ಅಲ್ಲದೆ ಕನ್ನಡ ಸೇರಿ ಬೇರೆ ಭಾಷೆ ಬೇಡ ಇಂಗ್ಲೀಷ್ ಅಲ್ಲಿಕೂಡ ಸರಿಯಾದ ಸೂಚನಾ ಫಲಕದ ವ್ಯವಸ್ಥೆ ಕೂಡ ಮಾಡಿಲ್ಲ. ಕೊಳಚೆ ನೀರು ನದಿಗೆ ಸೇರುತ್ತದೆ ಅದೇ ನೀರಿನಲ್ಲಿ ಪವಿತ್ರ ಸ್ನಾನ ಮಾಡಲಾಗುತ್ತದೆ. ಎಂದು ವಿಡಿಯೋದ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.

ಮಹಾ ಕುಂಭ ಮೇಳಕ್ಕೆ ಕುಟುಂಬ ಸಮೇತರಾಗಿ ಬಂದರೆ ಬಹಳ ಕಷ್ಟವಾಗುತ್ತದೆ. ದಯವಿಟ್ಟು ಕನ್ನಡಿಗರು ಯಾರು ಬರಬೇಡಿ ಕರ್ನಾಟಕದಲ್ಲೇ ಕುಂಭ ಮೇಳ ಆರಂಭವಾಗಿದೆ ಅಲ್ಲೇ ಪವಿತ್ರ ಸ್ನಾನ ಮಾಡಿ, ಅಲ್ಲಿನ ದೇವಸ್ಥಾನಕ್ಕೆ ತೆರಳಿ, ಯುವಕರು ಬರುವುದಾದರೆ, ಚಿಕ್ಕ ಲಗೇಜ್ ಬ್ಯಾಗ್ ಮಾತ್ರ ತನ್ನಿ ಎಂದು ಹೇಳಿದ್ದಾರೆ.

ಇನ್ನೂ ಇದೇ ವ್ಯಕ್ತಿ ಕುಂಭಮೇಳಕ್ಕೆ ತೆರಳಿದ ಆರಂಭದಲ್ಲಿ ಮೆಚ್ಚಿಗೆಯ ಮಾತುಗಳನ್ನು ಆಡಿದ್ದು, ವದಂತಿ ನಂಬಬೇಡಿ ಎಂದೂ ಕೂಡ ವಿಡಿಯೋ ಮಾಡಿದ್ದಾರೆ.

ರಾಜಕೀಯ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

LPG ವ್ಯತ್ಯಯ; ಬಾಯಿಬಿಡದ ಕೇಂದ್ರ ಸರ್ಕಾರ: ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ

"ಅನಿಲ ಸಿಲಿಂಡರ್ ಗಳು (LPG) ಸರಿಯಾಗಿ ದೊರೆಯದೆ ಹೋಟೆಲ್ ಉದ್ದಿಮೆ ಮುಚ್ಚುವ ಹಂತಕ್ಕೆ ಬಂದಿದೆ. ದೇಶದಲ್ಲಿ ಸಮಸ್ಯೆ ತಲೆದೋರಿದೆ. ಆದರೂ ಕೇಂದ್ರ ಸರ್ಕಾರ ಬಾಯಿಬಿಡುತ್ತಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು

[ccc_my_favorite_select_button post_id="120126"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!