ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ: ಕೆ.ವಿ.ಪ್ರಭಾಕರ್ ಬೇಸರ

While the world is running behind AI, we are running behind FI: KV Prabhakar Bored

ಕೋಲಾರ: ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ. ಫೇಕ್ ನ್ಯೂಸ್ ಗಳ ಕಾರಣಕ್ಕೆ ಈಗ ಫ್ಯಾಕ್ಟ್ ಚೆಕ್ ಆರಂಭಿಸುವ ಸ್ಥಿತಿ ಬಂದಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.

ಮಾಧ್ಯಮ‌ ಅಕಾಡೆಮಿ ಆಯೋಜಿಸಿದ್ದ “ಪತ್ರಿಕೋದ್ಯಮ ಇಂದು-ಮುಂದು” ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಪತ್ರಕರ್ತರಲ್ಲಿ ಅಧ್ಯಯನಶೀಲತೆ ಕಡಿಮೆ ಆಗುತ್ತಿದೆ. ಕೈಯಲ್ಲಿ ಲೋಗೋ ಹಿಡಿದು ಪ್ರಶ್ನೆ ಕೇಳುವ ಪತ್ರಕರ್ತರಿಗೆ ವಾಪಾಸ್ ಅದೇ ವಿಚಾರದ ಬಗ್ಗೆ ನಾವೇ ಒಂದು ಪ್ರಶ್ನೆ ಕೇಳಿದರೆ ಅವರಲ್ಲಿ ಉತ್ತರ ಇರುವುದಿಲ್ಲ. ಇದಕ್ಕೆ ಅಧ್ಯಯನಶೀಲತೆಯ ಕೊರತೆಯೇ ಕಾರಣ ಎಂದರು.

ಮತ್ತೊಂದು ಊಹಾ ಪತ್ರಿಕೋದ್ಯಮ‌ ಅತಿಯಾಗುತ್ತಿದೆ. ನಡೆಯದ ಸಂಗತಿಗಳನ್ನು ಅವರಿಗೆ ಅವರೇ ಊಹೆ ಮಾಡಿಕೊಂಡು ಬ್ರೇಕಿಂಗ್ ಸುದ್ದಿ ಕೊಡುವ ಹಾವಳಿ ಹೆಚ್ಚಾಗಿದೆ ಎಂದರು.

ಮಾಧ್ಯಮ ಅಕಾಡೆಮಿ ಇಂದು ಆಯೋಜಿಸಿರುವ ಪತ್ರಿಕೋದ್ಯಮ: ಇಂದು-ಮುಂದು” ವಿಷಯ ಕುರಿತ ಒಂದು ದಿನದ ಕಾರ್ಯಾಗಾರ ಅತ್ಯಂತ ಅರ್ಥಪೂರ್ಣ ಮತ್ತು ಅಗತ್ಯವಾದದ್ದು

ಪತ್ರಿಕಾ ವೃತ್ತಿಗೆ, ಮಾಧ್ಯಮ ಕ್ಷೇತ್ರಕ್ಕೆ ಬಂದೊದಗಬಹುದಾದ ಸವಾಲುಗಳನ್ನು ಮೊದಲೇ ಗ್ರಹಿಸಿ ಆ ಸವಾಲುಗಳನ್ನು ಗೆಲ್ಲಲು ಅಗತ್ಯವಾದ ಬೌದ್ಧಿಕ ಕಸರತ್ತು ನಡೆಸುವುದು ಅತ್ಯಗತ್ಯ ಎಂದರು.

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಪತ್ರಿಕೋದ್ಯಮವನ್ನು ಸಮಾಜದ ಪ್ರಾಣವಾಯು ಅಂತ ಕರೆದಿದ್ದಾರೆ. ಆದರೆ ಈ ಮಾತು ಈಗ ಪತ್ರಿಕೋದ್ಯಮದಲ್ಲಿ ಉಳಿದಿದೆಯಾ ಎಂದು ನಾವೇ ಪ್ರಶ್ನಿಸಿಕೊಳ್ಳಬೇಕು ಎಂದರು.

ಇವತ್ತಿನ ಈ ಕಾರ್ಯಾಗಾರಕ್ಕೆ ಎರಡು ಕಾರಣಗಳು ಇರಬಹುದು ಎಂದು ನಾನು ಭಾವಿಸುತ್ತೇನೆ…

1) AI (ಕೃತಕ‌ ಬುದ್ದಿ ಮತ್ತೆ) ಹಾಗೂ ಇತರೆ ತಂತ್ರಜ್ಞಾನ‌ ತಂದೊಡ್ಡುವ ಸವಾಲು.

2) ತಂತ್ರಜ್ಞಾನದ ಜೊತೆಗೆ Fake News ವೇಗವೂ ಹೆಚ್ಚಾಗುತ್ತಿರುವ ಸವಾಲು.

ಇವೆರಡೂ ಸವಾಲುಗಳಿಂದ ಮಾದ್ಯಮ ಕ್ಷೇತ್ರ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಏನಿದ್ದರೂ ಇವೆರಡನ್ನೂ ಮುಖಾಮುಖಿಯಾಗಿ ನಾವು ಎದುರಿಸಲೇಬೇಕು ಮತ್ತು ಜೀರ್ಣಿಸಿಕೊಳ್ಳಲೇಬೇಕಿದೆ ಎಂದರು.

ನಮ್ಮ ಮಾಧ್ಯಮ ಕ್ಷೇತ್ರಕ್ಕೆ ಜೀರ್ಣಿಸಿಕೊಳ್ಳುವ ಶಕ್ತಿ ಇದೆ. ಇಂತಹ ಹಲವಾರು ಸವಾಲುಗಳನ್ನು ಜೀರ್ಣಿಸಿಕೊಂಡಿರುವ ಉದಾಹರಣೆ ಕೂಡ ನಮ್ಮ‌ ಮುಂದಿದೆ. ಇದಕ್ಕೆ ಉತ್ತಮ‌ ಉದಾಹರಣೆ ಎಂದರೆ ಕೋವಿಡ್.

ಕೋವಿಡ್ ಬಂದಾಗ ಮಾಧ್ಯಮಗಳು ಅದರಲ್ಲೂ ಮುದ್ರಣ ಮಾಧ್ಯಮದ ಭವಿಷ್ಯವೇ ಮುಗಿದುಹೋಯ್ತು ಎನ್ನುವ ಆತಂಕ ಮನೆ ಮಾಡಿತ್ತು.‌

ಆದರೆ, FICCI (Federation of Indian Chambers of Commerce and Industry) ಸಂಸ್ಥೆ 2023 ರಲ್ಲಿ ಮುದ್ರಣ ಮಾಧ್ಯಮಗಳ ಸ್ಥಿತಿ ಗತಿಯ ವರದಿ ಬಿಡುಗಡೆ ಮಾಡಿದೆ. ಈ ವರದಿ ಬಹಳ ಭರವಸೆ ಮೂಡಿಸುವಂತಿದೆ.

ಕೋವಿಡ್ ಸಂದರ್ಭದಲ್ಲಿ ಅಪಾರವಾಗಿ ನೆಲಕಚ್ಚಿದ್ದ ಮುದ್ರಣ ಮಾಧ್ಯಮ 2023 ರಲ್ಲಿ ಬಹಳ ಚೇತರಿಸಿಕೊಂಡಿದೆ.

ದೇಶದ ಮುದ್ರಣ ಮಾಧ್ಯಮದ ಆದಾಯ 4% ಹೆಚ್ಚಾಗಿ ವಾರ್ಷಿಕ 260 ಬಿಲಿಯನ್ ರೂಪಾಯಿಗೆ ತಲುಪಿದೆ. 2027ಕ್ಕೆ ಈ ಬೆಳವಣಿಗೆ ದರ ಇನ್ನೂ ಹೆಚ್ಚಾಗಿ 295.7 ಬಿಲಿಯನ್ ಗೆ ಏರಿಕೆ ಆಗಲಿದೆ ಎನ್ನುವ ಆಶಾ ಭಾವನೆ ವ್ಯಕ್ತವಾಗಿದೆ.

ಸರ್ಕಾರಗಳ ಜಾಹಿರಾತು ಪ್ರಮಾಣ ಕೂಡ ಹೆಚ್ಚಾಗಿದೆ.

ಎಲ್ಲಕ್ಕಿಂತ ಮುಖ್ಯವಾಗಿ, ಜಾಹಿರಾತುದಾರರ ವಿಶ್ವಾಸಾರ್ಹತೆಯನ್ನು ಮುದ್ರಣ ಮಾಧ್ಯಮಗಳು ಉಳಿಸಿಕೊಂಡಿವೆ ಎಂದು FICCI ಹೇಳಿದೆ.

1,50000 ಜಾಹಿರಾತುದಾರರು, 185000 ಬ್ರಾಂಡ್ ಗಳು ಮುದ್ರಣ ಮಾಧ್ಯಮಗಳ ಮೇಲೆ ಅಪಾರ ಭರವಸೆ ವ್ಯಕ್ತಪಡಿಸಿವೆ

ಹೀಗಾಗಿ ಆದಾಯ, ಗಳಿಕೆಯ ಸವಾಲನ್ನು ಮುದ್ರಣ ಮಾಧ್ಯಮ ನಿರಂತರವಾಗಿ ಗೆಲ್ಲುತ್ತಲೇ ಇದೆ ಎಂದು ವಿಶ್ಲೇಷಿಸಿದರು.

ಅಚ್ಚುಮೊಳೆ ಕಾಲದಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಹಲವಾರು ತಂತ್ರಜ್ಞಾನದ ಸವಾಲುಗಳನ್ನು ಮಾಧ್ಯಮ ಲೋಕ ಜೀರ್ಣಿಸಿಕೊಳ್ಳುತ್ತಲೇ ಬೆಳೆದಿದೆ ಎಂದರು.

ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ. ಪತ್ರಿಕೋದ್ಯಮ ತಂತ್ರಜ್ಞಾನದಲ್ಲಿ ಎಷ್ಟೇ ಉನ್ನತ ಮಟ್ಟಕ್ಕೇರಿದರೂ, ಅದರ ನೈತಿಕ ಗುಣಮಟ್ಟ ಪಾತಾಳ ಸೇರದಂತೆ ಕಾಪಾಡಿಕೊಳ್ಳುವ ನೈತಿಕ ಮತ್ತು ಸಾಮಾಜಿಕ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು.

ಸುಳ್ಳುಸುದ್ದಿಗಳನ್ನು ತಡೆಯುವ ಸವಾಲು ಮತ್ತು ನಿಖರತೆ ಹಾಗೂ ವಾಸ್ತವಾಂಶಗಳ ಪರಿಶೀಲನೆಯ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಇದಕ್ಕಾಗಿ fact check ಆರಂಭಿಸಲಾಗಿದೆ ಎಂದರು.

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]