While the world is running behind AI, we are running behind FI: KV Prabhakar Bored

ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ: ಕೆ.ವಿ.ಪ್ರಭಾಕರ್ ಬೇಸರ

ಕೋಲಾರ: ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ. ಫೇಕ್ ನ್ಯೂಸ್ ಗಳ ಕಾರಣಕ್ಕೆ ಈಗ ಫ್ಯಾಕ್ಟ್ ಚೆಕ್ ಆರಂಭಿಸುವ ಸ್ಥಿತಿ ಬಂದಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.

ಮಾಧ್ಯಮ‌ ಅಕಾಡೆಮಿ ಆಯೋಜಿಸಿದ್ದ “ಪತ್ರಿಕೋದ್ಯಮ ಇಂದು-ಮುಂದು” ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಪತ್ರಕರ್ತರಲ್ಲಿ ಅಧ್ಯಯನಶೀಲತೆ ಕಡಿಮೆ ಆಗುತ್ತಿದೆ. ಕೈಯಲ್ಲಿ ಲೋಗೋ ಹಿಡಿದು ಪ್ರಶ್ನೆ ಕೇಳುವ ಪತ್ರಕರ್ತರಿಗೆ ವಾಪಾಸ್ ಅದೇ ವಿಚಾರದ ಬಗ್ಗೆ ನಾವೇ ಒಂದು ಪ್ರಶ್ನೆ ಕೇಳಿದರೆ ಅವರಲ್ಲಿ ಉತ್ತರ ಇರುವುದಿಲ್ಲ. ಇದಕ್ಕೆ ಅಧ್ಯಯನಶೀಲತೆಯ ಕೊರತೆಯೇ ಕಾರಣ ಎಂದರು.

ಮತ್ತೊಂದು ಊಹಾ ಪತ್ರಿಕೋದ್ಯಮ‌ ಅತಿಯಾಗುತ್ತಿದೆ. ನಡೆಯದ ಸಂಗತಿಗಳನ್ನು ಅವರಿಗೆ ಅವರೇ ಊಹೆ ಮಾಡಿಕೊಂಡು ಬ್ರೇಕಿಂಗ್ ಸುದ್ದಿ ಕೊಡುವ ಹಾವಳಿ ಹೆಚ್ಚಾಗಿದೆ ಎಂದರು.

ಮಾಧ್ಯಮ ಅಕಾಡೆಮಿ ಇಂದು ಆಯೋಜಿಸಿರುವ ಪತ್ರಿಕೋದ್ಯಮ: ಇಂದು-ಮುಂದು” ವಿಷಯ ಕುರಿತ ಒಂದು ದಿನದ ಕಾರ್ಯಾಗಾರ ಅತ್ಯಂತ ಅರ್ಥಪೂರ್ಣ ಮತ್ತು ಅಗತ್ಯವಾದದ್ದು

ಪತ್ರಿಕಾ ವೃತ್ತಿಗೆ, ಮಾಧ್ಯಮ ಕ್ಷೇತ್ರಕ್ಕೆ ಬಂದೊದಗಬಹುದಾದ ಸವಾಲುಗಳನ್ನು ಮೊದಲೇ ಗ್ರಹಿಸಿ ಆ ಸವಾಲುಗಳನ್ನು ಗೆಲ್ಲಲು ಅಗತ್ಯವಾದ ಬೌದ್ಧಿಕ ಕಸರತ್ತು ನಡೆಸುವುದು ಅತ್ಯಗತ್ಯ ಎಂದರು.

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಪತ್ರಿಕೋದ್ಯಮವನ್ನು ಸಮಾಜದ ಪ್ರಾಣವಾಯು ಅಂತ ಕರೆದಿದ್ದಾರೆ. ಆದರೆ ಈ ಮಾತು ಈಗ ಪತ್ರಿಕೋದ್ಯಮದಲ್ಲಿ ಉಳಿದಿದೆಯಾ ಎಂದು ನಾವೇ ಪ್ರಶ್ನಿಸಿಕೊಳ್ಳಬೇಕು ಎಂದರು.

ಇವತ್ತಿನ ಈ ಕಾರ್ಯಾಗಾರಕ್ಕೆ ಎರಡು ಕಾರಣಗಳು ಇರಬಹುದು ಎಂದು ನಾನು ಭಾವಿಸುತ್ತೇನೆ…

1) AI (ಕೃತಕ‌ ಬುದ್ದಿ ಮತ್ತೆ) ಹಾಗೂ ಇತರೆ ತಂತ್ರಜ್ಞಾನ‌ ತಂದೊಡ್ಡುವ ಸವಾಲು.

2) ತಂತ್ರಜ್ಞಾನದ ಜೊತೆಗೆ Fake News ವೇಗವೂ ಹೆಚ್ಚಾಗುತ್ತಿರುವ ಸವಾಲು.

ಇವೆರಡೂ ಸವಾಲುಗಳಿಂದ ಮಾದ್ಯಮ ಕ್ಷೇತ್ರ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಏನಿದ್ದರೂ ಇವೆರಡನ್ನೂ ಮುಖಾಮುಖಿಯಾಗಿ ನಾವು ಎದುರಿಸಲೇಬೇಕು ಮತ್ತು ಜೀರ್ಣಿಸಿಕೊಳ್ಳಲೇಬೇಕಿದೆ ಎಂದರು.

ನಮ್ಮ ಮಾಧ್ಯಮ ಕ್ಷೇತ್ರಕ್ಕೆ ಜೀರ್ಣಿಸಿಕೊಳ್ಳುವ ಶಕ್ತಿ ಇದೆ. ಇಂತಹ ಹಲವಾರು ಸವಾಲುಗಳನ್ನು ಜೀರ್ಣಿಸಿಕೊಂಡಿರುವ ಉದಾಹರಣೆ ಕೂಡ ನಮ್ಮ‌ ಮುಂದಿದೆ. ಇದಕ್ಕೆ ಉತ್ತಮ‌ ಉದಾಹರಣೆ ಎಂದರೆ ಕೋವಿಡ್.

ಕೋವಿಡ್ ಬಂದಾಗ ಮಾಧ್ಯಮಗಳು ಅದರಲ್ಲೂ ಮುದ್ರಣ ಮಾಧ್ಯಮದ ಭವಿಷ್ಯವೇ ಮುಗಿದುಹೋಯ್ತು ಎನ್ನುವ ಆತಂಕ ಮನೆ ಮಾಡಿತ್ತು.‌

ಆದರೆ, FICCI (Federation of Indian Chambers of Commerce and Industry) ಸಂಸ್ಥೆ 2023 ರಲ್ಲಿ ಮುದ್ರಣ ಮಾಧ್ಯಮಗಳ ಸ್ಥಿತಿ ಗತಿಯ ವರದಿ ಬಿಡುಗಡೆ ಮಾಡಿದೆ. ಈ ವರದಿ ಬಹಳ ಭರವಸೆ ಮೂಡಿಸುವಂತಿದೆ.

ಕೋವಿಡ್ ಸಂದರ್ಭದಲ್ಲಿ ಅಪಾರವಾಗಿ ನೆಲಕಚ್ಚಿದ್ದ ಮುದ್ರಣ ಮಾಧ್ಯಮ 2023 ರಲ್ಲಿ ಬಹಳ ಚೇತರಿಸಿಕೊಂಡಿದೆ.

ದೇಶದ ಮುದ್ರಣ ಮಾಧ್ಯಮದ ಆದಾಯ 4% ಹೆಚ್ಚಾಗಿ ವಾರ್ಷಿಕ 260 ಬಿಲಿಯನ್ ರೂಪಾಯಿಗೆ ತಲುಪಿದೆ. 2027ಕ್ಕೆ ಈ ಬೆಳವಣಿಗೆ ದರ ಇನ್ನೂ ಹೆಚ್ಚಾಗಿ 295.7 ಬಿಲಿಯನ್ ಗೆ ಏರಿಕೆ ಆಗಲಿದೆ ಎನ್ನುವ ಆಶಾ ಭಾವನೆ ವ್ಯಕ್ತವಾಗಿದೆ.

ಸರ್ಕಾರಗಳ ಜಾಹಿರಾತು ಪ್ರಮಾಣ ಕೂಡ ಹೆಚ್ಚಾಗಿದೆ.

ಎಲ್ಲಕ್ಕಿಂತ ಮುಖ್ಯವಾಗಿ, ಜಾಹಿರಾತುದಾರರ ವಿಶ್ವಾಸಾರ್ಹತೆಯನ್ನು ಮುದ್ರಣ ಮಾಧ್ಯಮಗಳು ಉಳಿಸಿಕೊಂಡಿವೆ ಎಂದು FICCI ಹೇಳಿದೆ.

1,50000 ಜಾಹಿರಾತುದಾರರು, 185000 ಬ್ರಾಂಡ್ ಗಳು ಮುದ್ರಣ ಮಾಧ್ಯಮಗಳ ಮೇಲೆ ಅಪಾರ ಭರವಸೆ ವ್ಯಕ್ತಪಡಿಸಿವೆ

ಹೀಗಾಗಿ ಆದಾಯ, ಗಳಿಕೆಯ ಸವಾಲನ್ನು ಮುದ್ರಣ ಮಾಧ್ಯಮ ನಿರಂತರವಾಗಿ ಗೆಲ್ಲುತ್ತಲೇ ಇದೆ ಎಂದು ವಿಶ್ಲೇಷಿಸಿದರು.

ಅಚ್ಚುಮೊಳೆ ಕಾಲದಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಹಲವಾರು ತಂತ್ರಜ್ಞಾನದ ಸವಾಲುಗಳನ್ನು ಮಾಧ್ಯಮ ಲೋಕ ಜೀರ್ಣಿಸಿಕೊಳ್ಳುತ್ತಲೇ ಬೆಳೆದಿದೆ ಎಂದರು.

ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ. ಪತ್ರಿಕೋದ್ಯಮ ತಂತ್ರಜ್ಞಾನದಲ್ಲಿ ಎಷ್ಟೇ ಉನ್ನತ ಮಟ್ಟಕ್ಕೇರಿದರೂ, ಅದರ ನೈತಿಕ ಗುಣಮಟ್ಟ ಪಾತಾಳ ಸೇರದಂತೆ ಕಾಪಾಡಿಕೊಳ್ಳುವ ನೈತಿಕ ಮತ್ತು ಸಾಮಾಜಿಕ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು.

ಸುಳ್ಳುಸುದ್ದಿಗಳನ್ನು ತಡೆಯುವ ಸವಾಲು ಮತ್ತು ನಿಖರತೆ ಹಾಗೂ ವಾಸ್ತವಾಂಶಗಳ ಪರಿಶೀಲನೆಯ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಇದಕ್ಕಾಗಿ fact check ಆರಂಭಿಸಲಾಗಿದೆ ಎಂದರು.

ರಾಜಕೀಯ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಷಡ್ಯಂತ್ರ ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

"ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ನಿರಂತರ ಅಪಪ್ರಚಾರದ ಹಿಂದೆ ಯಾರಿದ್ದಾರೆ? ಯಾರ ಷಡ್ಯಂತ್ರ ಇದರ ಹಿಂದಿದೆ ಎಂಬುದು ಬಹಳ ದಿನ ಗುಟ್ಟಾಗಿ ಉಳಿಯಲು ಸಾಧ್ಯವಿಲ್ಲ"; B.Y. Vijayendra

[ccc_my_favorite_select_button post_id="112839"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!