Karna broke the beautiful couch..!

ಹರಿತಲೇಖನಿ ದಿನಕ್ಕೊಂದು ಕಥೆ: ಕರ್ಣನ ಮಹಾದಾನಿ ಎನ್ನುವುದೇಕೆ ಗೊತ್ತಾ..?

Daily story: ಒಂದು ಸಾರಿ ಕೃಷ್ಣ ಮತ್ತು ಅರ್ಜುನ ನಗರ ಸಂಚಾರ ಮಾಡುತ್ತಿದ್ದರು. ಅದು-ಇದು ಮಾತನಾಡುತ್ತಾ ಹೋಗುತ್ತಿದ್ದರು.

ಒಂದು ದಿನ ಇದ್ದಕ್ಕಿದ್ದಂತೆ ಕೃಷ್ಣ ಏನೋ ನೆನಪಾದವನಂತೆ , “ಅರ್ಜುನ ನೀ ಏನೇ ಹೇಳು ಕರ್ಣನಂತಹ ದಾನಿಗಳು ಯಾರು ಇಲ್ಲ ಅಲ್ವಾ ?” ಎಂದು ಕೇಳಿದ.

ಈ ಮಾತುಗಳನ್ನು ಕೇಳಿ ಅರ್ಜುನನಿಗೆ ಅವನ ಮೈಯನ್ನು ಯಾರೋ ಪರಚಿದಂತಾಯ್ತು. ಕೃಷ್ಣನೂ, ಬೇಕೆಂದೇ ಕೆಣಕಿ ಹೇಳಿದ್ದು.

ಅರ್ಜುನನಿಗೆ ಕರ್ಣನ ಹೆಸರು ಕೇಳಿದರೆ ಆಗದು. ಈ ವಾಸುದೇವ ಯಾವಾಗಲೂ ಕರ್ಣನನ್ನು ವಹಿಸಿಕೊಂಡು ಏಕೆ ಮಾತನಾಡುತ್ತಾನೆ ? ಎಂದು ಮನಸ್ಸಿನಲ್ಲಿ ಅಂದುಕೊಂಡು, “ಅಲ್ಲ ಕೃಷ್ಣ , ನಾನು ಬೇಕಾದಷ್ಟು ದಾನ ಮಾಡುತ್ತೇನೆ.

ಅದರಲ್ಲಿ ಕರ್ಣನದ್ದೇನು ಹೆಚ್ಚುಗಾರಿಕೆ ನನಗಂತೂ ಅರ್ಥ ಆಗ್ಲಿಲ್ಲ “ಎಂದು ಸ್ವಲ್ಪ ಅಸಮಧಾನದಿಂದಲೇ ಹೇಳಿದ.

ಕೃಷ್ಣ ಕಿರುನಗೆ ಬೀರೀ, ಅರ್ಜುನನ್ನು ಓರೆಗಣ್ಣಿನಿಂದ ನೋಡುತ್ತಾ, ಆಯ್ತಪ್ಪ ಹಾಗಾದ್ರೆ ನೀನು ಒಂದು ಕೆಲಸ ಮಾಡು. ಆಗೋ ಅಲ್ಲಿ ನೋಡು ಎದುರುಗಡೆ ಎರಡು ದೊಡ್ಡ ಬೆಟ್ಟಗಳಿವೆ. ಅದನ್ನು ಬಂಗಾರದ ಬೆಟ್ಟವನ್ನಾಗಿ ಮಾಡುತ್ತೇನೆ.

ನೀನು, ನಿಮ್ಮ ಊರಿನವರನ್ನೆಲ್ಲ ಕರೆದು ಬಂಗಾರವನ್ನು ದಾನ ಮಾಡು, ಆದರೆ ಅದರಲ್ಲಿ ಒಂದು ಚೂರು ನೀನು ತೆಗೆದುಕೊಳ್ಳುವಂತಿಲ್ಲ ಎಂದನು.

ಅರ್ಜುನನು ಆಯ್ತು ಕೃಷ್ಣ, ನೀನು ಹೇಳಿದ ಹಾಗೆ ಮಾಡುತ್ತೇನೆ ಎಂದು ತನ್ನ ಗ್ರಾಮಕ್ಕೆ ಹೋಗಿ, “ಎಲ್ಲರೂ ಬನ್ನಿ ನಾನು ಬಂಗಾರ ದಾನ ಮಾಡುತ್ತೇನೆ” ಎಂದ.

ಊರವರೆಲ್ಲ ಬಂಗಾರ ಎಂದು ಕೂಡಲೇ ಗುಂಪುಗುಂಪಾಗಿ ಬಂದರು.ಅರ್ಜುನನು ಬೆಟ್ಟವನ್ನು ಮೊಗೆದು, ಮೊಗೆದು ಬಂಗಾರ ಕೊಡುತ್ತಿದ್ದನು.

ಬಂಗಾರ ತಗೊಂಡು ನಿನಗೆ ಒಳ್ಳೆಯದಾಗಲಿ ಎಂದು ಆಶೀರ್ವದಿಸಿ ಹೋಗುತ್ತಿದ್ದರು. ಮತ್ತು ಕೆಲವರು “ಅರ್ಜುನಾ, ನಿನ್ನಂತಹ ದಾನಿಗಳು ಜಗತ್ತಿನಲ್ಲಿ ಯಾರೂ ಇಲ್ಲ” ಎಂದು ಹಾಡಿ ಹೊಗಳುತ್ತಿದ್ದರು.

ಇದನ್ನೆಲ್ಲಾ ಕಂಡು, ಕೇಳಿ, ಅರ್ಜುನನಿಗೆ ತನ್ನ ಬಗ್ಗೆ ತನಗೆ ಹೆಮ್ಮೆ ಅನಿಸಿತು. ಎರಡು ಮೂರು ದಿನಗಳಿಂದ ಬಿಡುವಿಲ್ಲದೆ ದಾನ ಕೊಡುತ್ತಲೇ ಇದ್ದಾನೆ.

ಊರಿನವರು, ಅಕ್ಕ- ಪಕ್ಕದೂರಿನವರು ಬಂಗಾರವನ್ನು ಮನೆಯ ಪೆಟ್ಟಿಗೆ, ಬೀರು, ಪೆಟಾರಿ, ಕೊನೆಗೆ ಬಟ್ಟೆಗಳಲ್ಲಿ ಗಂಟು ಕಟ್ಟಿಟ್ಟು, ಬಂದು ಬಂದು ತೆಗೆದುಕೊಂಡು ಹೋಗುತ್ತಿದ್ದರು.

ತೆಗೆದುಕೊಂಡು ಹೋದವರು ಬಂಗಾರದ ಆಸೆಗಾಗಿ ಮತ್ತೆ ಮತ್ತೆ ಬರುತ್ತಿದ್ದರು. ಅರ್ಜುನನು ಕೊಡುತ್ತಲೇ ಇದ್ದನು. ಇಷ್ಟೆಲ್ಲಾ ಕೊಟ್ಟರೂ ಬೆಟ್ಟದ ಬಂಗಾರ ಒಂದು ಗುಲಗಂಜಿ ತೂಕದಷ್ಟು ಕಡಿಮೆಯಾಗಲಿಲ್ಲ. ಎಷ್ಟು ಬಂಗಾರ ಅಗೆದು ಮೊಗೆದು ಕೊಟ್ಟರೂ, ಮತ್ತೆ ಅಷ್ಟೇ ಆಗುತ್ತಿತ್ತು.

ಅರ್ಜುನನು ಕೊಟ್ಟು ಕೊಟ್ಟು ಸೋತು ಹೈರಾಣಾದ. ಮೂರ್ನಾಲ್ಕು ದಿನಗಳಿಂದ ನಿದ್ದೆ ಇಲ್ಲ, ಆಹಾರ ಸರಿಯಾಗಿ ತಿಂದಿಲ್ಲ, ವಿಶ್ರಾಂತಿಯ ಮಾತಂತೂ ಇಲ್ಲವೇ ಇಲ್ಲ. ಸುಸ್ತಾದ ಅರ್ಜುನನು ಕೃಷ್ಣಾ, ನನ್ನ ಕೈಲಿ ಇನ್ನು ಬಂಗಾರ ಕೊಡಲು ಆಗುವುದಿಲ್ಲ. ನನಗೆ ವಿಶ್ರಾಂತಿಯ ಅಗತ್ಯವಿದೆ ಎಂದನು.

ಕೃಷ್ಣನು ಹೌದೌದು, ಅರ್ಜುನ ನೀನು ಬಹಳ ದಣಿದಿದ್ದಿ ವಿಶ್ರಾಂತಿ ತೊಗೋ ಎಂದು ಹೇಳಿದ.

ಅದರ ಮರುದಿನವೇ, ಕೃಷ್ಣನು, ಕರ್ಣನು ಬರುವುದನ್ನು ನೋಡಿ ಅವನನ್ನು ಕರೆದು, “ನೋಡು ಕರ್ಣ, ಅಲ್ಲಿ ಎರಡು ಬಂಗಾರದ ಬೆಟ್ಟಗಳಿವೆ. ಅವುಗಳನ್ನು ಯಾರಿಗೆ ಬೇಕು ಅವರಿಗೆ ದಾನ ಮಾಡು. ಆದರೆ ನೀನು ಮಾತ್ರ ಒಂದು ಚೂರು ತೆಗೆದುಕೊಳ್ಳುವಂತಿಲ್ಲ”, ಎಂದು ಹೇಳಿ ಹೊರಟನು.

ಕರ್ಣನು ಆಯ್ತು ಕೃಷ್ಣ ಎಂದವನೇ, ತನ್ನ ಗ್ರಾಮಕ್ಕೆ ಬಂದು, ಗ್ರಾಮದ ಜನಗಳನ್ನೆಲ್ಲಾ ಕರೆದು “ನೋಡಿ ಅಲ್ಲಿ ಎರಡು ಬಂಗಾರದ ಬೆಟ್ಟ ಇದೆ. ನಿಮಗೆ ಎಷ್ಟು ಬೇಕಾದರೂ ಅಷ್ಟು ಬಂಗಾರ ತೆಗೆದುಕೊಂಡು ಹೋಗಿ” ಎಂದು ಹೇಳಿ ಒಂದು ಕ್ಷಣವೂ ನಿಲ್ಲದೆ, ತಿರುಗಿಯೂ ನೋಡದೆ, ಹೊರಟುಬಿಟ್ಟ.

ಮರೆಯಲ್ಲಿ ನಿಂತು ನೋಡುತ್ತಿದ್ದ ಕೃಷ್ಣನು, ಅರ್ಜುನನಿಗೆ ತೋರಿಸಿ “ನೋಡಿದೆಯಾ? ಅವನಿಗೆ ಯಾರ ಹೊಗಳಿಕೆ ಆಗಲಿ, ಕೊಟ್ಟಿದ್ದೇನೆ ಎಂಬ ಅಹಂ ಆಗಲಿ, ನನ್ನದು ಎಂಬ ಸ್ವಾರ್ಥವಾಗಲಿ, ಯಾವುದೂ ಇಲ್ಲ. ಇದಕ್ಕಾಗಿಯೇ ಕರ್ಣನನ್ನು ಮಹಾದಾನಿ ಎಂದು ಎಲ್ಲರೂ ಹೇಳುವುದು” ಎಂದು ಹೇಳಿದಾಗ ಅರ್ಜುನನು ನಾಚಿಕೆಯಿಂದ ತಲೆ ತಗ್ಗಿಸಿದನು.

ಕೃಪೆ: ಆಶಾ ನಾಗಭೂಷಣ. (ಸಾಮಾಜಿಕ ಜಾಲತಾಣ)

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!