ಹರಿತಲೇಖನಿ ದಿನಕ್ಕೊಂದು ಕಥೆ: ಮೊಸಳೆಗೆ ನರಿಯ ಪಾಠ

Daily story: A lesson from the fox to the crocodile

Daily story: ಗವಿಯಲ್ಲಿ ವಾಸವಾಗಿದ್ದ ಒಂದು ನರಿಗೆ ಏನೂ ಆಹಾರ ಸಿಕ್ಕಿರಲಿಲ್ಲ. ಅದೊಂದು ನದಿಯ ದಡಕ್ಕೆ ಬಂತು.

ನದಿಯ ಇನ್ನೊಂದು ದಡದಲ್ಲಿ ಕೆಂಪು ಕೆಂಪಾದ ಹಣ್ಣುಗಳ ಮರವೊಂದು ಗೋಚರಿಸಿತು. ಅಲ್ಲಿಗೆ ಹೋದರೆ ಬೇಕಾದಷ್ಟು ಹಣ್ಣು ತಿನ್ನಬಹುದೆನಿಸಿತು. ಆದರೆ ನದಿಯಲ್ಲಿ ತುಂಬಾ ನೀರಿದ್ದ ಕಾರಣ ನದಿಗಿಳಿಯಲು ಸಾಧ್ಯವಿರಲಿಲ್ಲ.

ಆ ನರಿಯನ್ನೇ ನೋಡುತ್ತಿದ್ದ ಒಂದು ಮೊಸಳೆಗೆ ಇದು ತನಗೆ ಹೊಟ್ಟೆ ತುಂಬಾ ಆಹಾರವಾಗಬಹುದು ಎಂಬ ಯೋಚಿಸಿ ಉಪಾಯವಾಗಿ ಅದನ್ನು ಹಿಡಿಯಲು ನಿರ್ಧರಿಸಿತು.

ಅದು ನರಿ ಬಳಿಗೆ ಹೋಗಿ ‘ಏನು ಯೋಚನೆ ಮಾಡುತ್ತಿದ್ದೀಯಾ, ಏನಾಗಬೇಕು?’ ಎಂದು ಕೇಳಿತು. ಅದಕ್ಕೆ ನರಿ ‘ನದಿಯ ಆಚೆ ದಡದಲ್ಲಿರುವ ಪ್ರಾಣಿಗಳಿಂದ ಇನ್ನೂ ಸುಂಕ ಬಂದಿಲ್ಲವಂತೆ. ಹುಲಿರಾಯರು ವಸೂಲಿ ಮಾಡಿಕೊಂಡು ಬಾ ಎಂದಿದ್ದಾರೆ. ಆದರೆ ನದಿ ದಾಟಲು ಆಗುವುದಿಲ್ಲ’ ಎಂದಿತು.

‘ಅದಕ್ಕೇನಂತೆ ನಾನು ದಾಟಿಸುತ್ತೇನೆ. ಆದರೆ ನನಗೆ ಅದರ ಸಂಬಳ ಕೊಡಬೇಕು’ ಎಂದು ಮೊಸಳೆ ಹೇಳಿ ನರಿಯನ್ನು ಬೆನ್ನಿನ ಮೇಲೆ ಕೂಡಿಸಿಕೊಂಡು ಆಚೆ ದಡಕ್ಕೆ ಹೋಯಿತು.

ದಡದಲ್ಲಿ ಕೆಳಗಿಳಿದ ಕೂಡಲೇ ನರಿಯನ್ನು ನುಂಗಬೇಕೆಂದು ಅದು ಎಣಿಸಿಕೊಂಡಿತ್ತು. ಆದರೆ ದಡ ತಲಪುವ ಮೊದಲೇ ನರಿ ಚಂಗನೆ ದಡಕ್ಕೆ ಹಾರಿತು. ‘ಸಂಬಳ ಎಲ್ಲಿ?’ ಎಂದು ಮೊಸಳೆ ಕೇಳಿದಾಗ ‘ಮರಳಿ ಬರುವಾಗ ಎರಡನ್ನೂ ಸೇರಿಸಿ ಕೊಡ್ತೇನೆ’ ಎಂದು ಓಡುತ್ತಲೇ ಹೇಳಿದ ನರಿ ಹಣ್ಣಿನ ಮರಗಳ ಬಳಿಗೆ ಹೋಗಿ ಉದುರಿದ್ದ ಹಣ್ಣುಗಳನ್ನು ಹೊಟ್ಟೆ ತುಂಬ ತಿಂದಿತು.

ಸಂಜೆಯವರೆಗೆ ಕಾದ ಮೊಸಳೆ ಮತ್ತೆ ನರಿಯನ್ನು ಬೆನ್ನ ಮೇಲೆ ಹೊತ್ತುಕೊಂಡು ಹಿಂತಿರುಗಿತು. ಅದರ ಬುದ್ಧಿವಂತಿಕೆ ಗೊತ್ತಿದ್ದ ಕಾರಣ ಅದು ದಡಕ್ಕೆ ಹಾರುವ ಮೊದಲೇ ಅದರ ಒಂದು ಕಾಲನ್ನು ಹಲ್ಲುಗಳಿಂದ ಗಟ್ಟಿಯಾಗಿ ಹಿಡಿದುಕೊಂಡಿತು.

ಚಾಲಾಕಿ ನರಿ ಜೋರಾಗಿ ನಗುತ್ತ ‘ಅಯ್ಯೋ ಮೊಸಳೆಯಣ್ಣ, ಇದೆಂಥ ನಿನ್ನ ಅವಸ್ಥೆ? ನನ್ನ ಕಾಲು ಹಿಡಿದು ನಮಸ್ಕರಿಸಬೇಕು ಅನ್ನುವ ಆಸೆಯಲ್ಲಿ ಕಾಲಿನ ಬದಲು ತೇಲುತ್ತಿರುವ ಒಂದು ಬೇರನ್ನು ಯಾಕೆ ಕಚ್ಚಿಕೊಂಡಿದ್ದೀ? ನನ್ನ ಕಾಲು ಇಲ್ಲಿದೆ ನೋಡು’ ಎಂದಿತು.

ಆ ಮಾತನ್ನು ನಂಬಿ ಮೊಸಳೆ ಕಾಲನ್ನು ಬಿಟ್ಟ ಕೂಡಲೇ ದಡಕ್ಕೆ ನೆಗೆದು ನರಿ ತಪ್ಪಿಸಿಕೊಂಡಿತು. ಹೇಗಾದರೂ ಮಾಡಿ ನರಿಯನ್ನು ತಿನ್ನದೆ ಬಿಡುವುದಿಲ್ಲ ಎಂದು ಶಪಥ ಮಾಡಿದ ಮೊಸಳೆ ನದಿಯ ದಡದಲ್ಲಿ ಒಂದು ಮರದಿಂದ ತುಂಬ ಹಣ್ಣುಗಳು ಬಿದ್ದಿರುವುದನ್ನು ನೋಡಿತು. ಅದನ್ನು ತಿನ್ನಲು ನರಿ ಬರುವುದು ಅದಕ್ಕೆ ಗೊತ್ತಿತ್ತು. ಆ ಸಮಯದಲ್ಲಿ ಮರದ ಕೆಳಗೆ ಹಣ್ಣುಗಳನ್ನು ರಾಶಿ ಹಾಕಿ ಅದರೊಳಗೆ ಹುದುಗಿಕೊಂಡಿತು.

ನರಿಗೆ ಹಣ್ಣುಗಳ ರಾಶಿ ಕಂಡು ಅನುಮಾನವಾಯಿತು. ‘ಹಣ್ಣುಗಳೇ, ಯಾವಾಗಲೂ ನಾನು ಬರುವಾಗ ಮೇಲಕ್ಕೆ ಹಾರುತ್ತಿದ್ದಿರಿ. ಆದರೆ ಇಂದೇನಾಗಿದೆ ನಿಮಗೆ? ಸುಮ್ಮನೆ ಯಾಕೆ ಮಲಗಿದ್ದೀರಿ?’ ಎಂದು ಕೇಳಿತು.

ಇದನ್ನು ಸತ್ಯವೆಂದೇ ನಂಬಿದ ಮೊಸಳೆ ಬಾಲದಲ್ಲಿ ಹಣ್ಣುಗಳನ್ನು ರಪರಪನೆ ಮೇಲಕ್ಕೆ ಚಿಮ್ಮಿಸಿತು. ಅಲ್ಲಿ ಮೊಸಳೆಯಿರುವುದು ಅರ್ಥವಾದ ಕೂಡಲೇ ನರಿ, ‘ಏನು ಮೊಸಳೆಯಣ್ಣ, ಹಣ್ಣುಗಳು ಹಾರುವುದಿಲ್ಲವೆಂದು ನಿನಗೆ ಗೊತ್ತಿಲ್ಲವೆ?’ ಎನ್ನುತ್ತ ಓಡಿಹೋಯಿತು.

ಮೊಸಳೆ ಹೊಸ ಉಪಾಯ ಹುಡುಕಿತು. ನರಿಯ ಗವಿಯನ್ನು ಪತ್ತೆ ಮಾಡಿ ಅದರೊಳಗೆ ಹೋಗಿ ಮಲಗಿತು.

ಬೇಟೆಗೆ ಹೋದ ನರಿ ಮರಳಿದಾಗ ಗವಿಯೊಳಗೆ ಹೋಗಿರುವ ಮೊಸಳೆಯ ಹೆಜ್ಜೆ ಗುರುತುಗಳನ್ನು ಕಂಡು ನಿಜ ವಿಷಯ ತಿಳಿದುಕೊಂಡು ಗಟ್ಟಿ ದನಿಯಲ್ಲಿ ‘ಗುಹೆಯಣ್ಣ, ಯಾವಾಗಲೂ ನಾನು ಬರುವಾಗ ಶಂಖ ಊದಿ ಸ್ವಾಗತಿಸುತ್ತಿದ್ದ ನೀನು ಇಂದೇಕೆ ಮೌನವಾಗಿರುವೆ? ಏನಾಗಿದೆ ನಿನಗೆ?’ ಎಂದು ಕೇಳಿತು.

ಇದನ್ನು ನಿಜವೆಂದು ಭಾವಿಸಿದ ಮೊಸಳೆ ಶಂಖದಂತೆ ಕೂಗಿತು. ಮೊಸಳೆಯ ಮೋಸ ತಿಳಿದ ಕೂಡಲೇ ನರಿ ‘ಅಯ್ಯೋ ಬೆಪ್ಪು ಮೊಸಳೆಯಣ್ಣ, ಗವಿ ಎಂದಿಗಾದರೂ ಕೂಗುವುದುಂಟೆ? ನಿನಗಷ್ಟೂ ಗೊತ್ತಿಲ್ಲವೆ?’ ಎಂದು ನಗುತ್ತ ಅಲ್ಲಿಂದ ದೂರ ಓಡಿಹೋಯಿತು.

ಮೊಸಳೆ ಇನ್ನೂ ಒಂದು ಉಪಾಯ ಹುಡುಕಿತು. ತನ್ನ ಹೆಂಡತಿಯನ್ನು ನರಿಯ ಬಳಿಗೆ ಕಳುಹಿಸಿತು. ಹೆಣ್ಣು ಮೊಸಳೆ ಕಣ್ಣೀರಿಳಿಸುತ್ತ ‘ನಿನ್ನ ಅಣ್ಣ ಅಂದರೆ ನನ್ನ ಗಂಡ ಮೊಸಳೆ ಸತ್ತು ಹೋಗಿದೆ.

ನನಗೆ ಕೊಡಬೇಕಾದ ಸಂಬಳವನ್ನಂತೂ ನರಿ ಕೊಡಲಿಲ್ಲ. ಅಂತ್ಯ ಸಂಸ್ಕಾರವನ್ನಾದರೂ ಮಾಡಿ ಸದ್ಗತಿ ಸಿಗುವಂತೆ ಮಾಡಲಿ ಎಂದು ಕೊನೆಯಾಸೆ ಹೇಳಿಕೊಂಡಿತ್ತು. ಆದ್ದರಿಂದ ನೀನು ಬಂದು ಅದರ ಬಯಕೆ ನೆರವೇರಿಸಬೇಕು’ ಎಂದು ಕೇಳಿಕೊಂಡಿತು.

ನರಿ ಅದರ ಜೊತೆಗೆ ಹೋಯಿತು. ಮರದ ಕೆಳಗೆ ನಿಶ್ಚಲವಾಗಿ ಮಲಗಿದ್ದ ಮೊಸಳೆಯನ್ನು ನೋಡಿ ‘ಇದು ಸತ್ತ ಹಾಗೆ ಕಾಣಿಸುವುದಿಲ್ಲವಲ್ಲ. ಸತ್ತವರು ಕಣ್ಣಿನ ರೆಪ್ಪೆ ಪಟಪಟ ಬಡಿಯುತ್ತಾರೆ. ನಾಲಿಗೆ ಹೊರಗೆ ಚಾಚುತ್ತಾರೆ. ಇದಕ್ಕೆ ಅಂತಹ ಯಾವ ಲಕ್ಷ ಣಗಳೂ ಕಾಣಿಸುತ್ತಿಲ್ಲ’ ಎಂದಿತು.

ಆಗ ತಾನು ಸತ್ತಿದ್ದೇನೆಂದು ತೋರಿಸಿಕೊಳ್ಳಲು ಮೊಸಳೆ ಕಣ್ಣರೆಪ್ಪೆಗಳನ್ನು ಪಟಪಟ ಬಡಿಯುತ್ತ ನಾಲಿಗೆ ಹೊರಗೆ ಹಾಕಿತು. ನರಿ ಜೋರಾಗಿ ನಕ್ಕು ‘ಹೆಡ್ಡ, ಸತ್ತವರು ರೆಪ್ಪೆ ಬಡಿಯುವುದು ಎಲ್ಲಾದರೂ ಉಂಟೆ? ನಿನ್ನ ಮೋಸದ ಬಲೆಗೆ ನಾನು ಎಂದಿಗೂ ಸಿಲುಕುವುದಿಲ್ಲ’ ಎಂದು ಹೇಳಿ ದೂರ ಓಡಿತು. ಮೊಸಳೆಗೆ ನಾಚಿಕೆಯಾಗಿ ಆ ಪ್ರದೇಶದಿಂದಲೇ ಹೋಗಿಬಿಟ್ಟಿತು.

ಕೃಪೆ: ಪ.ರಾಮಕೃಷ್ಣ ಶಾಸ್ತ್ರಿ (ಸಾಮಾಜಿಕ ಜಾಲತಾಣ)

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]