ಹರಿತಲೇಖನಿ ದಿನಕ್ಕೊಂದು ಕಥೆ: ಗೆಲುವು

Daily story: Victory

Daily story: ಸಣ್ಣ ದೇಶಕ್ಕೆ ಒಬ್ಬ ಒಳ್ಳೆಯ ದೊರೆಯಿದ್ದ. ಅವನೆಂದಿಗೂ ಸಿಂಹಾಸನದ ಮೇಲೆ ಕುಳಿತು ರಾಜ್ಯಭಾರ ಮಾಡಲಿಲ್ಲ. ಬದಲಾಗಿ ನೊಂದವರ ಬಳಿಗೆ ಹೋಗಿ ಕಣ್ಣೀರೊರೆಸಿದ.

ಸೋತವರಿಗೆ ನೆರವು ನೀಡಿದ. ಅಸಹಾಯಕರ ಸೇವೆ ಮಾಡಿದ. ಎಲ್ಲರೂ ತನ್ನ ಸಮಾನರೆಂದು ತಿಳಿದ. ಪ್ರಜೆಗಳು ತಮ್ಮ ಪ್ರಾಣಕ್ಕಿಂತ ಹೆಚ್ಚಾಗಿ ಅವನ ಮೇಲೆ ಪ್ರೀತಿಯಿಟ್ಟರು.

ಒಂದು ಸಲ ಚಕ್ರವರ್ತಿ ಆ ದೇಶದ ಬಳಿಗೆ ಕಾರ್ಯ ನಿಮಿತ್ತ ಬಂದ. ತನ್ನನ್ನು ಭೇಟಿಯಾಗುವಂತೆ ದೊರೆಗೆ ಭಟರ ಮೂಲಕ ಕರೆ ಕಳುಹಿಸಿದ.

ಆಗ ದೊರೆ ಒಬ್ಬ ರೋಗಿಷ್ಠನ ಮನೆಗೆ ಬಂದು ಅವನ ಶುಶ್ರೂಷೆ ಮಾಡುವುದರಲ್ಲಿ ನಿರತನಾಗಿದ್ದ. ಭಟರು ‘ಕೂಡಲೇ ಬಂದು ಭೇಟಿಯಾಗಬೇಕೆಂದು ಚಕ್ರವರ್ತಿಗಳು ಕರೆ ಕಳುಹಿಸಿದ್ದಾರೆ ಬನ್ನಿ’ ಎಂದರು.

ದೊರೆ ವಿನೀತನಾಗಿ ‘ಕಷ್ಟದಲ್ಲಿರುವ ಪ್ರಜೆಯೊಬ್ಬನಿಗೆ ನೆರವಾಗುವ ಕೆಲಸದಲ್ಲಿದ್ದೇನೆ. ಇದು ಮುಗಿದ ಕೂಡಲೇ ಬರುವುದಾಗಿ ಹೇಳಿ’ ಎಂದು ತಿಳಿಸಿದ.

ಈ ಮಾತಿನಿಂದ ಚಕ್ರವರ್ತಿಗೆ ಅಸಾಧ್ಯ ಕೋಪ ಬಂತು. ‘ಏನಿದು? ಒಬ್ಬ ಸಣ್ಣ ರಾಜನಿಗೆ ಚಕ್ರವರ್ತಿಯ ಆಜ್ಞೆಯನ್ನು ಧಿಕ್ಕರಿಸುವಂಥ ಪೊಗರೇ? ತಕ್ಷ ಣ ಈ ರಾಜ್ಯದ ಮೇಲೆ ಯುದ್ಧ ಸಾರಿ. ಅವನನ್ನು ಸದೆ ಬಡಿಯಿರಿ’ ಎಂದು ಮಂತ್ರಿಗಳಿಗೆ ಆಜ್ಞಾಪಿಸಿದ.

ದೊರೆಗೆ ಯುದ್ಧದ ವರ್ತಮಾನ ತಲುಪಿತು. ಮಂತ್ರಿಗಳು ಯುದ್ಧದ ಸಿದ್ಧತೆಗೆ ಮುಂದಾದರು. ಆದರೆ ದೊರೆ ಒಪ್ಪಲಿಲ್ಲ. ‘ಯುದ್ಧ ಮಾಡಿದರೆ ನೂರಾರು ಮಂದಿಯ ಸಾವು ನಿಶ್ಚಿತ. ಅದರ ಬದಲು ರಾಜ್ಯವನ್ನು ಚಕ್ರವರ್ತಿಗೆ ಒಪ್ಪಿಸಿದರೆ ಎಲ್ಲರೂ ಬದುಕುತ್ತಾರೆ’ ಎಂದು ನಿರ್ಧರಿಸಿ ಚಕ್ರವರ್ತಿಯ ಭೇಟಿಗೆ ಸಿದ್ಧನಾದ.

ದೊರೆ ಒಬ್ಬ ಸೇವಕನ ಜೊತೆಗೆ ಕುದುರೆಯ ಮೇಲೆ ಕುಳಿತುಕೊಂಡು ಚಕ್ರವರ್ತಿಯ ಬಳಿಗೆ ಹೊರಟ. ಕಡು ಬಿಸಿಲಿಗೆ ಕಾಲು ಸುಡುತ್ತಿತ್ತು.

ತಾನು ಕುದುರೆಯ ಮೇಲೆ ಸಾಗುವಾಗ ಸೇವಕ ಕುದುರೆಯ ಹಗ್ಗ ಹಿಡಿದುಕೊಂಡು ನಡೆದು ಬರುತ್ತಿದ್ದ. ಅವನು ನಡೆಯಲಾಗದೆ ಕಷ್ಟಪಡುತ್ತಿದ್ದ. ಅವನಿಗೆ ಆಯಾಸವಾಗುತ್ತಿದೆಯೆಂದು ದೊರೆಗೆ ಅರ್ಥವಾಯಿತು.

ಕುದುರೆಯ ಮೇಲಿಂದ ಕೆಳಗಿಳಿದ. ಸೇವಕನನ್ನು ಕರೆದು ‘ನೀನು ತುಂಬ ಬಳಲಿದ್ದಿ. ನೀನೀಗ ಕುದುರೆ ಮೇಲೆ ಕುಳಿತುಕೋ. ನಾನು ಸ್ವಲ್ಪ ದೂರ ಹಗ್ಗ ಹಿಡಿದುಕೊಂಡು ನಡೆದು ಬರುತ್ತೇನೆ.

ನಿನ್ನ ಬಳಲಿಕೆ ತೀರಿದ ಮೇಲೆ ನಾನು ಕುಳಿತುಕೊಳ್ಳುತ್ತೇನೆ. ನಾವಿಬ್ಬರೂ ಹೀಗೆ ಸರದಿ ಬದಲಾಯಿಸಿಕೊಂಡು ಮುಂದೆ ಸಾಗೋಣ’ ಎಂದ.

ಸೇವಕ ಗಾಬರಿಯಿಂದ ‘ಎಲ್ಲಾದರೂ ಉಂಟೇ? ನೀವು ನಡೆದು ನಾನು ಕುದುರೆಯ ಮೇಲೇರುವುದೆ!’ ಎಂದು ದೂರ ನಿಂತ. ಆದರೆ ದೊರೆ ಒತ್ತಾಯದಿಂದ ಅವನನ್ನೂ ಕುದುರೆಯಲ್ಲಿ ಕೂಡಿಸಿ ಮುಂದೆ ಸಾಗಿದ.

ಒಮ್ಮೆ ಸೇವಕ, ಒಮ್ಮೆ ತಾನು ಕುದುರೆಯ ಮೇಲೇರುತ್ತ ಕಡೆಗೂ ಚಕ್ರವರ್ತಿಯ ಶಿಬಿರ ತಲಪಿದ. ಆಗ ಸೇವಕ ಕುದುರೆಯ ಮೇಲಿದ್ದ. ಅವನನ್ನೇ ದೊರೆಯೆಂದು ಭಾವಿಸಿ ಮಾತನಾಡಿಸಲು ಬಂದ ಚಕ್ರವರ್ತಿಯ ಬಳಿ ಸೇವಕ ಕುದುರೆಯಿಂದ ಕೆಳಗಿಳಿದು ಕೈ ಜೋಡಿಸಿ ‘ದೊರೆಗಳು ಅವರು! ನಾನು ಸೇವಕ’ ಎಂದು ವಿನಯದಿಂದ ಹೇಳಿದ.

ಚಕ್ರವರ್ತಿ ನಡೆದ ವಿಷಯ ತಿಳಿದುಕೊಂಡ. ಮರುಕ್ಷ ಣವೇ ಪಶ್ಚಾತ್ತಾಪದಿಂದ ತಲೆ ತಗ್ಗಿಸಿದ. ‘ಛೇ! ಸೇವಕನನ್ನೂ ತನ್ನ ಸಮಾನನೆಂದು ಭಾವಿಸಿ ಕುದುರೆಯ ಮೇಲೆ ಕರೆ ತರುವ ದೊರೆ ಈ ಭರತಖಂಡದಲ್ಲೇ ಇರಲಿಕ್ಕಿಲ್ಲ.

ಇಂತಹವನೊಂದಿಗೆ ಯುದ್ಧವೆಸಗಿದರೆ ಪ್ರಜೆಗಳು ದಂಗೆಯೆದ್ದು ನನ್ನನ್ನೇ ಕೊಂದಾರು. ಋುಷಿ ಸದೃಶನಾದ ದೊರೆಯ ರಾಜ್ಯವನ್ನು ಸ್ವತಂತ್ರಗೊಳಿಸುತ್ತೇನೆ’ ಎಂದ ಹೇಳಿದ.

ಕೃಪೆ: ಸಾಮಾಜಿಕ ಜಾಲತಾಣ. (ಲೇಖಕರ ಮಾಹಿತಿ ಲಭ್ಯವಿಲ್ಲ)

ರಾಜಕೀಯ

ನಾವು NDA ಜೊತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ನಮ್ಮ ಸಿದ್ದಾಂತವನ್ನ ಮರ್ಜ್ ಮಾಡಿಲ್ಲ: ನಿಖಿಲ್ ಕುಮಾರಸ್ವಾಮಿ

ನಾವು NDA ಜೊತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ನಮ್ಮ ಸಿದ್ದಾಂತವನ್ನ ಮರ್ಜ್

ಜಾತ್ಯತೀತ ಜನತಾದಳ ಅನ್ನುವುದು ಅದರ ಘೋಷ ವಾಕ್ಯದಲ್ಲೇ ಇದೆ. ನಮ್ಮ ಸಿದ್ದಾಂತದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಯಾವತ್ತಿದ್ರೂ ಜಾತ್ಯತೀತಾನೇ ಜಾತ್ಯಾತೀತವಾಗಿ ಉಳಿಯುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="121129"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!