Ambedkar Labor Helping Hand Scheme to help unorganized workers: Santosh Lad

ಅಸಂಘಟಿತ ಕಾರ್ಮಿಕರ ನೆರವಿಗೆ ಅಂಬೇಡ್ಕರ್ ಕಾರ್ಮಿಕರ ಸಹಾಯ ಹಸ್ತ ಯೋಜನೆ: ಸಂತೋಷ್ ಲಾಡ್

ಬೆಂಗಳೂರು: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯು, ಅಸಂಘಟಿತ ಕಾರ್ಮಿಕರಾದ ಹಮಾಲರು, ಚಿಂದಿ ಆಯುವವರು, ಮನೆಗೆಲಸದವರು, ಟೈಲರ್, ಮೆಕ್ಯಾನಿಕ್, ಅಗಸರು, ಕ್ಷೌರಿಕರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಹಾಗೂ ಭಟ್ಟಿ ಕಾರ್ಮಿಕರು ಸೇರಿದಂತೆ ಒಟ್ಟು 11 ವರ್ಗಗಳನ್ನು ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೋಂದಾಯಿಸಿ ಸ್ಮಾರ್ಟ್ ಕಾರ್ಡ್ ವಿತರಿಸಲು ಆದೇಶಿಸಿದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್ (Santosh lad) ತಿಳಿಸಿದ್ದಾರೆ.

ಸಿನಿ ಕಾರ್ಮಿಕರು, ನೇಕಾರರು, ಬೀದಿಬದಿ ವ್ಯಾಪಾರಿಗಳು, ಹೋಟೆಲ್ ಕಾರ್ಮಿಕರು, ಫೆÇೀಟೋಗ್ರಾಫರ್‍ಗಳು, ಸ್ವತಂತ್ರ ಲೇಖನ ಬರಹಗಾರರು, ಕಲ್ಯಾಣ ಮಂಟಪ, ಸಭಾ ಭವನ, ಟೆಂಟ್, ಪೆಂಡಾಲ್‍ಗಳ ಕೆಲಸ ನಿರ್ವಹಿಸುವ ಎಲ್ಲಾ ಕಾರ್ಮಿಕರು, ಬೀಡಿ ಕಾರ್ಮಿಕರು, ಗಿಗ್ ವೃತ್ತಿ ನಿರ್ವಹಿಸುತ್ತಿರುವ ಡೆಲಿವರಿ ಕಾರ್ಮಿಕರು.

ದಿನಪತ್ರಿಕೆ ವಿತರಿಸುವ ಕಾರ್ಮಿಕರು, ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರು, ಅಸಂಘಟಿತ ವಿಕಲಚೇತನ ಕಾರ್ಮಿಕ ಅಲೆಮಾರಿ ಪಂಗಡ ಒಳಗೊಂಡಂತೆ ಒಟ್ಟು 23 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ನೋಂದಾಯಿಸಿ, ಸ್ಮಾರ್ಟ್ ಕಾರ್ಡ್ ವಿತರಿಸಲು ಅನುಮತಿಸಿದೆ.

ಅರ್ಹತೆಗಳು: ಅಂಬೇಡ್ಕರ್ ಕಾರ್ಮಿಕರ ಸಹಾಯ ಹಸ್ತ ಯೋಜನೆಯಡಿ ಫಲಾನುಭವಿಗಳಾಗಲು, ಕಾರ್ಮಿಕರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು ಮತ್ತು ಅರ್ಜಿದಾರರು 18 ರಿಂದ 60 ವರ್ಷದೊಳಗಿರಬೇಕು.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಡಿ ನೋಂದಾಯಿತರಾಗಿ ಸಂಬಂಧಿಸಿದ ವೃತ್ತಿಯಲ್ಲಿ ಸಕ್ರಿಯನಾಗಿರಬೇಕು. ಆದರೆ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಇ.ಎಸ್.ಐ ಮತ್ತು ಇ.ಪಿ.ಎಫ್ ಸೌಲಭ್ಯ ಹೊಂದಿರಬಾರದು.

ಅಪಘಾತ ಪರಿಹಾರ ಸೌಲಭ್ಯ:

ಅಂಬೇಡ್ಕರ ಸಹಾಯ ಹಸ್ತ ಯೋಜನೆಯಡಿ ನೋಂದಾಯಿತರಾದ ಕಾರ್ಮಿಕರ ಮರಣ ಪ್ರಕರಣದಲ್ಲಿ ತಲಾ ರೂ.1 ಲಕ್ಷ ರೂ.ಗಳು ಮತ್ತು ಅಪಘಾತ ಗಂಭೀರತೆ ಆಧಾರದಲ್ಲಿ (ಶೇಕಡವಾರು ದುರ್ಬಲತೆ ಆಧಾರದ ಮೇಲೆ) ರೂ. 1 ಲಕ್ಷದವರೆಗೆ, ಆಸ್ಪತ್ರೆ ವೆಚ್ಚ ಮರುಪಾವತಿ ರೂ.50,000, ಸಹಜ ಮರಣ ಪರಿಹಾರ (ಅಂತ್ಯ ಕ್ರಿಯೆ ಧನಸಹಾಯ) ವೆಚ್ಚ ರೂ. 10,000 ಪರಿಹಾರ ನೀಡಲಾಗುತ್ತದೆ.

ಪರಿಹಾರ ಪಡೆಯುವ (ಕ್ಷೇಮ್) ವಿಧಾನ: ಅರ್ಜಿದಾರ ಅಥವಾ ಫಲಾನುಭವಿಯು ಅಪಘಾತ ಪರಿಹಾರಕ್ಕಾಗಿ ಅಪಘಾತ ಸಂಭವಿಸಿದ 1 ವರ್ಷದೊಳಗೆ ಹಾಗೂ ಸಹಜ ಮರಣ ಪ್ರಕರಣಗಳಲ್ಲಿ ಮರಣ ದಿನಾಂಕದಿಂದ 6 ತಿಂಗಳ ಅವಧಿಯೊಳಗೆ ನಿಗದಿತ ನಮೂನೆಯಲ್ಲಿ ಸೇವಾ ಸಿಂಧು ಪೆÇೀರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.

ಅಗತ್ಯ ದಾಖಲೆಗಳು: ಅರ್ಜಿದಾರನು ತನ್ನ ನೋಂದಾಯಿತ ಗುರುತಿನ ಚೀಟಿ, ನಿಗದಿತ ನಮೂನೆಯಲ್ಲಿ ಉದ್ಯೋಗ ಪ್ರಮಾಣ ಪತ್ರ, ಪ್ರಥಮ ವರ್ತಮಾನ ವರದಿ ಪ್ರತಿ, ಮರಣ ಪ್ರಮಾಣ ಪತ್ರ, ಮರಣೋತ್ತರ ಪರೀಕ್ಷಾ ವರದಿ, ಆಸ್ಪತ್ರೆಯ ಮೂಲ ಬಿಲ್‍ಗಳು, ಆಸ್ಪತ್ರೆ ವೆಚ್ಚ ಮರುಪಾವತಿ ಪ್ರಕರಣಗಳಲ್ಲಿ, ಮೂಲ ಡಿಸ್ಮಾರ್ಜ್ ಸಾರಾಂಶ, ಸರ್ಕಾರಿ ವೈದ್ಯಕೀಯ ದುರ್ಬಲತೆ ಪ್ರಮಾಣ ಪತ್ರ, ಕಂದಾಯ ಇಲಾಖೆಯ ವಂಶ ವೃಕ್ಷ ಪ್ರಮಾಣ ಪತ್ರ, ಪಡಿತರ ಚೀಟಿ, ಫಲಾನುಭವಿಯ ಆಧಾರ ಕಾರ್ಡ್ ಪ್ರತಿ, ನಾಮನಿರ್ದೇಶಿತರ, ಫಲಾನುಭವಿಯ ಆಧಾರ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಮತ್ತು ಇತರೆ ದಾಖಲಾಲೆಗಳನ್ನು ಸಲ್ಲಿಸಬೇಕು.

ಸಹಜ ಮರಣ ಪರಿಹಾರ ಪಡೆಯಲು ಸಲ್ಲಿಸಬೇಕಾದ ದಾಖಲೆಗಳು

ನೋಂದಾಯಿತ ಗುರುತಿನ ಚೀಟಿ, ಮರಣ ಪ್ರಮಾಣ ಪತ್ರ, ಪಡಿತರ ಚೀಟಿ, ಫಲಾನುಭವಿ ಮತ್ತು ನಾಮನಿರ್ದೇಶಿತರ ಆಧಾರ ಕಾರ್ಡ್ ಪ್ರತಿ, ನಾಮನಿರ್ದೇಶಿತರ ಬ್ಯಾಂಕ್ ಪಾಸ್‍ಬುಕ್ ಪ್ರತಿ ಹಾಗೂ ಅವಶ್ಯಕವಿರುವ ಇತರೆ ದಾಖಲಾತಿಗಳು.

ಎಲ್ಲಾ ಪರಿಹಾರ ಮೊತ್ತವನ್ನು ಫಲಾನುಭವಿ, ನಾಮನಿರ್ದೇಶಿತರ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗುತ್ತದೆ.

ಫಲಾನುಭವಿಯು ಮರಣದ ಸಮಯದಲ್ಲಿ ಅವಿವಾಹಿತನಾಗಿದ್ದಲ್ಲಿ ತಾಯಿ ತಂದೆ ಹಾಗೂ ವಿವಾಹಿತನಾಗಿದ್ದಲ್ಲಿ ಹೆಂಡತಿ ಮತ್ತು ಮಕ್ಕಳು ಕಾನೂನುಬದ್ಧ ವಾರಸುದಾರರಾಗಿರುತ್ತಾರೆ.

ಕ್ಷೇಮ್ ಅರ್ಜಿ ತಿರಸ್ಕರಿಸಲು ಕಾರಣಗಳು

ಫಲಾನುಭವಿಯು ಆತ್ಮಹತ್ಯೆ, ಅಪಘಾತದ ವೇಳೆ ಮದ್ಯ ಅಥವಾ ಮಾದಕ ದ್ರವ್ಯ ಸೇವಿಸಿದಲ್ಲಿ, ಬುದ್ಧಿಭ್ರಮಣೆಯ ಕಾರಣ ಅಪಘಾತ ಸಂಭವಿಸಿದಲ್ಲಿ, ಫಲಾನುಭವಿಯು ಅಪರಾಧದ ಉದ್ದೇಶದ ಕಾನೂನು ಉಲ್ಲಂಘನೆಯ ಕಾರಣ ಅಪಘಾತ ಸಂಭವಿಸಿದಲ್ಲಿ, ಯುದ್ಧ, ಆಕ್ರಮಣ, ವಿದೇಶಿ ವೈರಿಯ ಕೃತಿ, ದಂಗೆ, ಕ್ರಾಂತಿ, ಮಿಲಿಟರಿ ಅಥವಾ ಅಧಿಕಾರ ಕಿತ್ತುಕೊಳ್ಳುವುದು, ಹಿಡಿತ ಸೆರೆಹಿಡಿ, ಬಂಧನ ಕಾರಣದಿಂದಾಗಿ ಸಂಭವಿಸಿದ ಅಪಘಾತದಂತಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.

ಫಲಾನುಭವಿಗಳಾದ ಅಸಂಘಟಿತ ವಲಯದ ಕಾರ್ಮಿಕರು ಈ ಅಂಬೇಡ್ಕರ ಸಹಾಯ ಹಸ್ತ ಯೋಜನೆಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳುವ ಮೂಲಕ ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!