Doddaballapura: India has the largest constitution in the world

ಪ್ರಪಂಚದಲ್ಲೆ ಅತಿ ದೊಡ್ಡ ಸಂವಿಧಾನ ಹೊಂದಿರುವ ದೇಶ ಭಾರತ

ದೊಡ್ಡಬಳ್ಳಾಪುರ (Doddaballapura): ಪ್ರಪಂಚದಲ್ಲೆ ಅತಿ ದೊಡ್ಡ ಸಂವಿಧಾನ ಹೊಂದಿರುವ ದೇಶ ಭಾರತವಾದರೆ, ಚಿಕ್ಕ ಸಂವಿಧಾನವನ್ನು ಅಮೇರಿಕ  ಹೊಂದಿದೆ ಎಂದು ಬೆಂಗಳೂರಿನ ಆದರ್ಶ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಬಿ.ಎನ್.ನರಸಿಂಹಮೂರ್ತಿ ತಿಳಿಸಿದರು.

ಅವರು ದೊಡ್ಡಬಳ್ಳಾಪುರ ತಾಲ್ಲೂಕಿನ ಹಣಬೆ ಗ್ರಾಮದಲ್ಲಿರುವ  ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು  ವತಿಯಿಂದ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಭಾರತದ ಸಂವಿಧಾನ ರೂಪಿಸುವ ಜವಾಬ್ಧಾರಿಯನ್ನು ಹೊತ್ತು ಅಪಾರವಾದ ಶ್ರಮವಹಿಸಿದ ಡಾ.ಬಿ.ಆರ್. ಅಂಬೇಡ್ಕರ್, ಭಾರತದ  ಸಾಮಾಜಿಕ ಸುಧಾರಣೆಗಾಗಿ ನಿರಂತರ ಹೋರಾಟ ನಡೆಸಿದರು.   ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ ಮಾಡುತ್ತಿದ್ದ ಅಂಬೇಡ್ಕರ್  ಅವರಿಗೆ ಸಮಸಮಾಜ ನಿರ್ಮಾಣ ವುದು ಅವರ ಮುಖ್ಯ ಗುರಿಯಾಗಿತ್ತು ಎಂದರು.

ತೂಬಗೆರೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಶಿವಶಂಕರ್ ಮಾತನಾಡಿ, ವಿದ್ಯೆಯ ಮಹತ್ವವನ್ನು ಅರಿತಿದ್ದ ಡಾ.ಬಿ.ಅರ್.ಅಂಬೇಡ್ಕರ್ ಅವರು, ಅನಕ್ಷರತೆ ಮತ್ತು ಅಜ್ಞಾನವನ್ನು  ಮುಕ್ತಗೊಳಿಸಲು ಶಿಕ್ಷಣ ಅತಿ ಅಗತ್ಯವೆಂದರು.

ಶಿಕ್ಷಣದಿಂದ ಮಾತ್ರ ಶೋಷಣೆಗೆ ಒಳಗಾದವರನ್ನು ಸಾಮಾಜಿಕ ಅನ್ಯಾಯದಿಂದ ಮುಕ್ತಗೊಳಿಸಲು ಸಾಧ್ಯವಾಗುತ್ತದೆ. ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯವನ್ನು ಪಡೆಯಲು ಜನರಿಗೆ ಶಿಕ್ಷಣ ಸಹಕಾರಿ ಆಗುತ್ತದೆ ಎಂದು ಅಂಬೇಡ್ಕರ್ ಪ್ರತಿಪಾದಿಸಿದ್ದಾರೆ ಎಂದರು.

ಕನಸವಾಡಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಮಂಜುನಾಥ್ ಮಾತನಾಡಿ, ಬುದ್ಧ,  ಬಸವಣ್ಣ ಅವರ ಆಶಯದಂತೆ  ತಾರತಮ್ಯಗಳಿಂದ ಮುಕ್ತವಾದ ಸಮಾಜವನ್ನು ಸ್ಥಾಪಿಸುವುದು  ಡಾ. ಅಂಬೇಡ್ಕರ್ ಅವರ ಗುರಿಯಾಗಿತ್ತು.

ಸಮಾಜದಲ್ಲಿರುವ ಶೋಷಣೆ, ದಬ್ಬಾಳಿಕೆ ಮತ್ತು ತಾರತಮ್ಯದ ವಿರುದ್ಧ ಅವರ  ಹೋರಾಟ  ನಿರಂತರವಾಗಿತ್ತು.  ಅಂಬೇಡ್ಕರ್ ಅವರು  ಸಂವಿಧಾನದಲ್ಲಿ ಪ್ರಜಾಪ್ರಭುತ್ವ, ಸಮಾನತೆ ಮತ್ತು ನ್ಯಾಯದ ಪರವಾದ ವಿಚಾರಗಳನ್ನು ಸೇರಿಸಿದರು. ಇದ್ದರಿಂದಾಗಿ
ವಿಶ್ವದಲ್ಲಿ ನಮ್ಮ ಭಾರತ ಸಂವಿಧಾನಕ್ಕೆ  ವಿಶೇಷ ಗೌರವ, ಘನತೆ, ಕೀರ್ತಿ ದೊರಕಿದೆ ಎಂದರು.

ಕಾರ್ಯಕ್ರಮದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು,  ದೊಡ್ಡಬಳ್ಳಾಪುರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಎನ್.ಮಹೇಶ್.

ಹಣಬೆ  ಡಾ.ಬಿ.ಆರ್.ಅಂಬೇಡ್ಕರ್  ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಸಿ.ಅಣ್ಣಯ್ಯ,  ಕಲಾವಿದ ದರ್ಗಾಜೋಗಿಹಳ್ಳಿ ಮಲ್ಲೇಶ್ ಮುಂತಾದವರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ವಿಶೇಷ ಘಟಕ ಯೋಜನೆಯಡಿ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ಪ್ರಯುಕ್ತ ನಡೆದ ವಿಶೇಷ ಉಪನ್ಯಾಸ,   ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ, ಪ್ರಬಂಧ, ಅಶು ಭಾಷಣ ಹಾಗೂ ಕವನ ವಾಚನ  ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ  ಬಹುಮಾನ ಮತ್ತು ಪ್ರಶಸ್ತಿ ಪತ್ರಗಳ ವಿತರಣೆ ನಡೆಯಿತು.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!