ಇಂದು ಮಹಾಶಿವರಾತ್ರಿ.. ಅಚರಣೆಗೆ ಸಿದ್ದವಾಗಿರುವ ದೇವಾಲಯಗಳು

Today Mahashivaratri.. Temples ready for celebration

ದೊಡ್ಡಬಳ್ಳಾಪುರ: ಇಂದು ನಡೆಯಲಿರುವ ಮಹಾಶಿವರಾತ್ರಿ (Mahashivaratri) ಆಚರಣೆಗೆ ತಾಲೂಕಿನಲ್ಲಿ ಸಿದ್ದತೆಗಳು ನಡೆದಿವೆ.

ತಾಲೂಕಿನ ಹಲವಾರು ಶಿವನ ದೇವಾಲಯಗಳು ತನ್ನದೇ ಆದ ಐತಿಹಾಸಿಕ ಹಾಗು ಧಾರ್ಮಿಕ ಮಹತ್ವ ಹೊಂದಿದ್ದು, ಶಿವರಾತ್ರಿ ಹಬ್ಬಕ್ಕೆ ದೇವಾಲಯಗಳಲ್ಲಿ ವಿಶೇಷ ಸಿದ್ದತೆಗಳು ನಡೆದಿವೆ.

ನಗರದ ಬಸವ ಭವನ ಸಮೀಪದ ಸೋಮೇಶ್ವರ (ಸ್ವಯಂಭುಕೇಶ್ವರರ) ದೇವಸ್ಥಾನದಿಂದ ಪ್ರಯಾಣ ಪ್ರಾರಂಭಿಸಿದರೆ ರಾಜಘಟ್ಟ ಈಶ್ವರ ದೇವಸ್ಥಾನ, ಗಂಡರಾಜಪುರದ ಉಮಾಮಹೇಶ್ವರ, ನಂದಿಬೆಟ್ಟದ ತಪ್ಪಲಿನ ಕಣಿವೆ ಬಸವಣ್ಣ, ತೂಬಗೆರೆ ಸಮೀಪದ ಕಾಶಿ ವಿಶ್ವೇಶ್ವರ, ಆರೂಢಿ ಕೋಡಿ ಮಲ್ಲೇಶ್ವರ ಸೇರಿದಂತೆ ತಾಲೂಕಿನ ವಿವಿಧ ಶಿವ ದೇವಾಲಯಗಳನ್ನು ಸ್ಮರಿಸಬಹುದಾಗಿದೆ.

ಶಿವರಾತ್ರಿ ಹಬ್ಬದ ಜಾಗರಣೆ ಅಂಗವಾಗಿ ಭಜನೆ, ಸಂಗೀತ ಕಛೇರಿ, ಪೌರಾಣಿಕ ನಾಟಕ, ಹಾಸ್ಯೋತ್ಸವ ಕಾರ್‍ಯಕ್ರಮಗಳು ವಿವಿದೆಡೆಗಳಲ್ಲಿ ಆಯೋಜನೆ ಮಾಡಲಾಗಿದೆ.

ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ರಾಂಪುರ ಸಮೀಪದ ತೋಪನಯ್ಯಸ್ವಾಮಿ (ಶಿವ) ದೇವಸ್ಥಾನದ ಬಳಿ ಬಿಲ್ವಪತ್ರೆಯ ವನವಿದೆ. ಶಿವರಾತ್ರಿಯಂದು ಇಲ್ಲಿ ಪ್ರತಿ ವರ್ಷ ವಿಶೇಷ ಪೂಜಾ ಕಾರ್‍ಯಗಳು ನಡೆಯುತ್ತದೆ.

ಹುಲುಕುಡಿ ಬೆಟ್ಟದ ಮೇಲೆ ಚೋಳರ ಕಾಲದಲ್ಲಿ ಸ್ಥಾಪನೆಯಾಗಿದ್ದು ಎನ್ನಲಾಗುವ ವೀರಭದ್ರಸ್ವಾಮಿ ದೇವಾಲಯವಿದೆ.

ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಗುಹೆಯಲ್ಲಿ ಮುಕ್ಕಣ್ಣೇಶ್ವರಸ್ವಾಮಿಯ ಶಿವಲಿಂಗ ಮೂರ್ತಿ ಇದೆ. ಕಾರ್ತಿಕ ಮಾಸ ಹಾಗೂ ಶಿವರಾತ್ರಿ ಹಬ್ಬದಂದು ಮಾಕಳಿ ಬೆಟ್ಟಕ್ಕೆ ಹತ್ತಿ ಕಾಡು ಮಲ್ಲೇಶ್ವರಸ್ವಾಮಿ ರ‍್ಶನ ಪಡೆಯುವುದರೆಂದರೆ ಕೈಲಾಸ ರ‍್ವತ ಹತ್ತಿದಷ್ಟೇ ಪುಣ್ಯ ಎನ್ನುವುದು ಜನರ ಭಾವನೆ.

ತಾಲೂಕಿನಲ್ಲಿರುವ ಶ್ರವಣೂರು ಗ್ರಾಮದ ನೀಲಕಂಠೇಶ್ವರ ದೇವಾಲಯ ಶತಮಾನದಷ್ಟೇ ಹಿಂದಿನದಾಗಿದೆ. ಹೊಸಹಳ್ಳಿಯ ಚಂದ್ರಮೌಳೇಶ್ವರ ಸ್ವಾಮಿ ದೇವಾಲಯ ಇತ್ತೀಚೆಗಷ್ಟೆ ನವೀಕೃತಗೊಂಡು ಶಿವರಾತ್ರಿ ಪೂಜೆಗೆ ಸಜ್ಜಾಗಿದೆ.

ತಾಲೂಕಿನ ಹುಲುಕುಡಿ ಬೆಟ್ಟದ ತಪ್ಪಲಿನ ಗ್ರಾಮಗಳಾದ ಮಾಡೇಶ್ವರ, ಬೈರಾಪುರ, ಮಾಕಳಿ ಬೆಟ್ಟ, ರಾಜಘಟ್ಟ, ತೂಬಗೆರೆ, ಶ್ರವಣೂರು, ಅಂಬಲಗೆರೆ, ಯಲಾದಹಳ್ಳಿ, ರ‍್ಗಾಜೋಗಹಳ್ಳಿ, ಇಸ್ತೂರು, ಹಣಬೆ ಹಾಗೂ ನಗರದಲ್ಲಿನ ನಗರೇಶ್ವರ, ಬಸವಣ್ಣ, ಬೈರಾಪುರ ಗ್ರಾಮದಲ್ಲಿನ ಶ್ರೀಕಂಠೇಶ್ವರ ದೇವಾಲಯ, ಸೋಮೇಶ್ವರ, ಆರೂಢಿ ಕೋಡಿ ಮಲ್ಲೇಶ್ವರ ದೇವಾಲಯಗಳಲ್ಲಿ ಶಿವಲಿಂಗ ಮೂರ್ತಿಗಳು ಶಿವಭಕ್ತರ ಆರಾಧ್ಯ ದೈವಗಳಾಗಿದ್ದು, ಶಿವರಾತ್ರಿ ವಿಶೇಷ ಪೂಜಾ ಕಾರ್‍ಯಕ್ರಮಗಳು ನಡೆಯಲಿವೆ.

ಮಾಡೇಶ್ವರ ಮುಕ್ಕಣ್ಣೇಶ್ವರ ದೇವಾಲಯದಲ್ಲಿ ವಿಶೇಷ :
ತಾಲೂಕಿನ ದೊಡ್ಡಬೆಳವಂಗಲ ಹೋಬಳಿ ಮಾಡೇಶ್ವರ ಗ್ರಾಮದ ಮುಕ್ಕಣ್ಣೇಶ್ವರ ದೇವಾಲಯದಲ್ಲಿ ಶ್ರೀ ಮುಕ್ಕಣ್ಣೇಶ್ವರ ಜರ‍್ಣೋದ್ಧಾರ ಮತ್ತು ಸೇವಾ ಸಮಿತಿ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ ವಿಶೇಷ ಪೂಜಾ ಕಾರ್‍ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಈ ದೇವಾಲಯಕ್ಕೆ 1500 ವರ್ಷಗಳ ಇತಿಹಾಸವಿದೆ. ದೇವಾಲಯದ ಹಿಂದಿನ ಗುಹೆಯಲ್ಲಿ 1156ರಲ್ಲಿ ಕೆತ್ತಿರುವ ಶಿಲಾಶಾಸನವಿದೆ. ದೇವಾಲಯದಲ್ಲಿ ಶಿವರಾತ್ರಿ ಹಾಗೂ ಕಾರ್ತಿಕ ಮಾಸಗಳಲ್ಲಿ ವಿಶೇಷ ಅಲಂಕಾರ ಪೂಜಾ ಕಾರ್‍ಯಗಳು ನಡೆಯಲಿದ್ದು, ಇಂದು ಬೆಳಿಗ್ಗೆ 8ಗಂಟೆಗೆ ರುದ್ರಾಭಿಷೇಕ, ಮಹಾಮಂಗಳಾರತಿ, ಅನ್ನ ಸಂರ‍್ಪಣೆ, ರಾತ್ರಿ 8.30ರಿಂದ ಅಖಂಡ ಭಜನಾ ಕಾರ್‍ಯಕ್ರಮಗಳಿವೆ.

ರಾಜಕೀಯ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ

ನನ್ನ ಮತ್ತು ಸಿದ್ದರಾಮಯ್ಯ ಗುಂಪು ಅಂಥ ಎಲ್ಲಿದೆ?; ನ್ಯೂಸ್ ಚಾನಲ್‌ಗಳ ವಿರುದ್ಧ ಡಿಸಿಎಂ

"ಸಿದ್ದರಾಮಯ್ಯ (Siddaramaiah) ಮತ್ತು ನಾನು ಒಟ್ಟಿಗೇ ಇದ್ದೇವೆ. ಪ್ರತಿದಿನ ಜತೆಯಲ್ಲೇ ಕೂರುತ್ತೇವೆ, ಚರ್ಚಿಸುತ್ತೇವೆ. ಎಲ್ಲಿದೆ ನಮ್ಮಲ್ಲಿ ಗುಂಪು ಎಂಬುದು? ಎಲ್ಲರೂ ನಮ್ಮ ಶಾಸಕರೇ. ನೀವುಗಳೇ (ನ್ಯೂಸ್ ಚಾನಲ್) ನಮ್ಮನ್ನು ಇಬ್ಭಾಗ ಮಾಡುತ್ತಿವೆ" ಎಂದು ಡಿಸಿಎಂ

[ccc_my_favorite_select_button post_id="121064"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!