ಹರಿತಲೇಖನಿ ದಿನಕ್ಕೊಂದು: ವಿನಮ್ರ ಹಣತೆ

Daily story: Humble lamp

Daily story: ಬೆಳಕಿನ ವಿಚಾರದಲ್ಲಿನಾನೇ ಶ್ರೇಷ್ಠ, ನಾನೇ ಶ್ರೇಷ್ಠ’ ಅನ್ನುವ ತರ್ಕಗಳು ದಿನೇ ದಿನೇ ದೇವಲೋಕಕ್ಕೆ ಬರತೊಡಗಿದವು. ಸೂರ್ಯ, ಚಂದ್ರ, ನಕ್ಷತ್ರಗಳು ಪ್ರತಿನಿತ್ಯ ಇದೇ ವಿಷಯದ ಬಗ್ಗೆ ಸಂಬಂಧಿಸಿದವರ ಮೂಲಕ ತಮ್ಮನ್ನೇ ಶ್ರೇಷ್ಠರೆಂದು ಗುರುತಿಸಬೇಕು’ ಅನ್ನುವ ಬಲವಂತ ಹೇರತೊಡಗಿದವು.

ಯಾರನ್ನು ತಾನು ಶ್ರೇಷ್ಠನೆಂದು ಗುರುತಿಸಬೇಕೆಂದು ಬ್ರಹ್ಮನಿಗೆ ಗಲಿಬಿಲಿಯುಂಟಾಯಿತು. ಈ ವಿಚಾರದಲ್ಲಿಎಲ್ಲರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಿ ತುರ್ತು ಸಭೆ ಕರೆದನು.

ಸಭೆಗೆ ಇಂದ್ರಾದಿಗಳು ಸೇರಿದಂತೆ ಎಲ್ಲಾದೇವತೆಗಳು ಹಾಜರಿದ್ದರು. ಸೂರ್ಯ, ಚಂದ್ರ ಹೀಗೆ ಯಾರಾರ‍ಯರು ಸ್ಪರ್ಧೆಯಲ್ಲಿಇದ್ದರೋ ಅವರಿಗೆಲ್ಲಾಕರೆ ಹೊಯಿತು. ಎಲ್ಲರೂ ಬಂದು ಸೇರಿದಾಗ ಸಭೆ ಆರಂಭವಾಯಿತು.

ಭೂಮಿ ಕಡೆಯಿಂದ ಮಿಂಚುಹುಳ ಸ್ಪರ್ಧೆಗೆ ಹೋಗಿತ್ತು. ಭೂಮಿಯಲ್ಲಿಬೆಳಕಿಗೆ ಪ್ರತಿನಿಧಿ ನೀನು ಒಬ್ಬನೇನಾ, ಮತ್ಯಾರು ಇಲ್ಲವೇ ಹಣತೆ ಯಾಕೆ ಬಂದಿಲ್ಲಅಂತ ಸಭೆಯಲ್ಲಿಕೇಳಲಾಯಿತು. ಆಗ ಮಿಂಚುಹುಳವು ಹಣತೆಯನ್ನು ನಾನು ಕರೆದೆ. ಆದರೆ ಹಣತೆ ನಾನು ಸ್ಪರ್ಧಿಸಲು ಸೂಕ್ತವಾದವನೊ, ಇಲ್ಲವೊ ಗೊತ್ತಿಲ್ಲ. ನೀವು ಹೋಗಿ ಬನ್ನಿ’ ಅಂತ ಹೇಳಿ ಕಳಿಸಿತು ಎಂದಿತು.

ಬ್ರಹ್ಮನಿಗೆ ಈ ಸಭೆಯಲ್ಲಿ ಹಣತೆ ಇರುವುದು ಸೂಕ್ತವೆನ್ನಿಸಿ ತುರ್ತಾಗಿ ಅದನ್ನು ಕರೆಯಿಸಿತು. ಸಭೆಯಲ್ಲಿಮೊದಲು ವಾದಿಸುವ ಮತ್ತು ಹಕ್ಕು ಮಂಡಿಸುವ ಅಧಿಕಾರವನ್ನು ಸೂರ್ಯನಿಗೆ ನೀಡಲಾಯಿತು.

ಸೂರ್ಯ, ನನಗೆ ಪ್ರತಿಸ್ಪರ್ಧಿಯೇ ಇಲ್ಲ. ಈ ಸಭೆಯ ಅವಶ್ಯಕತೆಯೂ ಇರಲಿಲ್ಲ. ನಾನು ಇಲ್ಲದ ಜಗತ್ತೇ ಇಲ್ಲ. ಜೀವನ ನಡೆಯುವುದು ನನ್ನ ಬೆಳಕಿನಿಂದನೇ’ ಎಂದು ಹೇಳಿ ಅಹಂನಿಂದ ಎಲ್ಲರ ಕಡೆ ನೋಡಿತು.

ಆನಂತರ ಚಂದ್ರ, ಈ ಸೂರ್ಯ ಎಲ್ಲಾಕಾಲದಲ್ಲೂಇರವವನಲ್ಲ. ಹಗಲು ಮಾತ್ರ ಅವನ ಕೆಲಸ. ರಾತ್ರಿ ನಾನು ಇಲ್ಲದೆ ಬದುಕಿಲ್ಲ. ಕವಿಗಳಿಗೆ, ಪ್ರೇಮಿಗಳಿಗೆ ನನ್ನಷ್ಟು ಸಹಾಯ ಮಾಡಿದವರು ಯಾರೂ ಇಲ್ಲ. ನಾನು ಸೂರ್ಯನಷ್ಟು ಪ್ರಖರವಾದ ಬಿಸಿಲು ನೀಡಿ ಜನರಿಗೆ ತೊಂದರೆ ಕೊಡುವುದಿಲ್ಲ’ ಎಂದು ವಾದಿಸಿತು.

ನಕ್ಷತ್ರಗಳು ಸೂರ್ಯನ ಬೆಳಕು ಹಗಲು ಮಾತ್ರ ಮತ್ತು ಚಂದ್ರ ತಿಂಗಳಲ್ಲಿಕೆಲವು ದಿನ ಮಾತ್ರ. ಆದರೆ ನಾವು ರಾತ್ರಿಯಲ್ಲಿಯಾವತ್ತೂ ಇರ್ತೀವಿ. ನಮ್ಮ ಬೆಳಕು ಅವರಿಗೆ ಚಿಕ್ಕದಿರಬಹುದು. ಆದರೆ ಅಷ್ಟರಲ್ಲೇ ಅವರಿಗೆ ಹಾದಿ ತೋರಿಸುತ್ತೀವಿ. ಮಕ್ಕಳಿಗೂ ನಮ್ಮನ್ನು ಕಂಡರೆ ಅಕ್ಕರೆ’ ಅಂತ ಹೇಳಿದವು.

ಮಿಂಚುಹುಳ ಕೂಡ ನಾನು ಸಣ್ಣವನಾದರೂ ಯಾರ ಸಹಾಯವಿಲ್ಲದೆ ಇಡೀ ಕತ್ತಲೆಯಲ್ಲಿಒಂದು ಬೆಳಕಿನ ಸೊಬಗು ಮೂಡಿಸುವೆ ಎಂದು ಹೇಳಿತು.

ತನ್ನ ವಾದ ಮಂಡಿಸಲು ಮುಂದಾದ ಹಣತೆ ನನಗೆ ವಾದ ಮಂಡಿಸಲು ಆಸೆಯೇನೂ ಇಲ್ಲ. ನಾನು ಶ್ರೇಷ್ಠನೆಂದೂ ಭಾವಿಸಿಲ್ಲ. ಕನಿಷ್ಠನೆಂದೂ ಭಾವಿಸಿಲ್ಲ. ನಾನು ನನ್ನ ಕೆಲಸ ಮಾಡುತ್ತಿದ್ದೇನೆ. ತನ್ನನ್ನು ತಾನು ಸುಟ್ಟುಕೊಂಡು ಬೆಳಕು ನೀಡುವುದರಲ್ಲಿನನಗೆ ಖುಷಿ ಇದೆ.

ಅದು ಕೇವಲ ಸ್ವಲ್ಪವೇ ಬೆಳಕಾಗಲಿ, ನನ್ನನ್ನು ನಂಬಿ ಹಚ್ಚಿದವರಿಗೆ ನಾನು ಮೋಸ ಮಾಡಲ್ಲ. ಅವರು ಬಯಸುವವರೆಗೂ ಬೆಳಕು ಕೊಡುತ್ತೇನೆ. ಅವರು ಬೇಡವೆಂದರೆ ನನ್ನ ಬೆಳಗುವಿಕೆ ನಿಲ್ಲಿಸುತ್ತೇನೆ. ಸೂರ್ಯನಾಗಲಿ, ಚಂದ್ರನಾಗಲಿ, ನಕ್ಷತ್ರಗಳಾಗಲಿ ಬೇಡವೆಂದರೆ ನಿಲ್ಲಿಸಿಯಾರೆ? ಜನರಿಗೆ ಬೇಕೋ ಬೇಡ್ವೊ ಗೊತ್ತಿಲ್ಲದೆ ತಮ್ಮ ಪಾಡಿಗೆ ತಾವು ಉರಿಯುತ್ತಲೇ ಇರುತ್ತಾರೆ.

ನಾನು ಇಲ್ಲದೆ ಹೋಗಿದ್ದರೆ ಮನುಷ್ಯರ ಜಗತ್ತು ಹೇಗಿರುತ್ತಿತ್ತು ಎಂದು ಊಹಿಸಿ. ಆದರೆ ನನಗೆ ಅದರಲ್ಲಿಹೆಗ್ಗಳಿಕೆ ಇಲ್ಲ. ಅದು ನನ್ನ ಕೆಲಸ, ನನ್ನ ಪಾಡಿಗೆ ನಾನು ಉರಿದು ಬೆಳಕು ಕೊಡುವುದು ಕರ್ತವ್ಯ. ಕರ್ತವ್ಯದಲ್ಲಿಶ್ರೇಷ್ಠತೆಯ ಲೆಕ್ಕ ಹಾಕುವುದು ನನಗೆ ಸರಿ ಬರುವುದಿಲ್ಲ. ಅದಕ್ಕಾಗಿ ನಾನು ಮೊದಲೇ ಸಭೆಗೆ ಬಂದಿರಲಿಲ್ಲ. ಕ್ಷಮಿಸಿ’ ಎಂದು ಕೈ ಮುಗಿಯಿತು.

ಹಣತೆಯ ಮಾತು ಮುಗಿಯುತ್ತಲೇ ಎಲ್ಲರೂ ಎದ್ದು ನಿಂತು ಚಪ್ಪಾಳೆ ತಟ್ಟಿದರು. ಆಗ ಬ್ರಹ್ಮ, ಯಾರು ಶ್ರೇಷ್ಠರು ಎಂಬುದನ್ನು ನಾನು ತೀರ್ಮಾನಿಸುವ ಅಗತ್ಯ ಇಲ್ಲ. ಇಡೀ ಸಭೆಯೇ ಅದನ್ನು ಗುರುತಿಸಿದೆ.

ಶ್ರೇಷ್ಠತೆ ಬರುವುದು ಬರೀ ಬಲದಿಂದಲ್ಲ, ತನ್ನ ಶಕ್ತಿಯಿಂದಲ್ಲ, ಅದರ ಜೊತೆಗೆ ನಡವಳಿಕೆಯಿಂದಲೂ. ಸಣ್ಣ ಬೆಳಕು ಕೊಟ್ಟರೂ ಹಣತೆಯ ವ್ಯಕ್ತಿತ್ವ ಗುರುತರವಾದದ್ದು’ ಎಂದ. ಎಲ್ಲರೂ ಹಣತೆಗೆ ಜಯಕಾರ ಹಾಕಿದರು. ಸೂರ್ಯ, ಚಂದ್ರ, ನಕ್ಷತ್ರಗಳಿಗೆ ತಮ್ಮ ತಪ್ಪಿನ ಅರಿವಾಯಿತು.

ಕೃಪೆ: ಸದಾಶಿವ್‌ ಸೊರಟೂರು

ರಾಜಕೀಯ

ನಾವು NDA ಜೊತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ನಮ್ಮ ಸಿದ್ದಾಂತವನ್ನ ಮರ್ಜ್ ಮಾಡಿಲ್ಲ: ನಿಖಿಲ್ ಕುಮಾರಸ್ವಾಮಿ

ನಾವು NDA ಜೊತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ನಮ್ಮ ಸಿದ್ದಾಂತವನ್ನ ಮರ್ಜ್

ಜಾತ್ಯತೀತ ಜನತಾದಳ ಅನ್ನುವುದು ಅದರ ಘೋಷ ವಾಕ್ಯದಲ್ಲೇ ಇದೆ. ನಮ್ಮ ಸಿದ್ದಾಂತದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಯಾವತ್ತಿದ್ರೂ ಜಾತ್ಯತೀತಾನೇ ಜಾತ್ಯಾತೀತವಾಗಿ ಉಳಿಯುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="121129"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!