ಹರಿತಲೇಖನಿ ದಿನಕ್ಕೊಂದು ಕಥೆ: ತಂದೆಯ ಶಿರವನ್ನೇ ಛೇದಿಸಿದ ಬಬ್ರುವಾಹನ

Daily story: Babruvahana cut off father's head

Daily story; ಕುರುಕ್ಷೇತ್ರ ಯುದ್ಧವೆಲ್ಲಾ ಮುಗಿದ ಮೇಲೆ ಧರ್ಮರಾಜನು ಇನ್ನೂ ತಮ್ಮ ಸಾಮ್ರಾಜ್ಯವನ್ನು ವಿಸ್ತರಿಸಲು ಅಶ್ವಮೇಧಯಾಗವನ್ನು ಶ್ರೀಕೃಷ್ಣನ ಅಣತಿಯಂತೆ ಮಾಡಿದನು. ಯಾಗಾಶ್ವವು ಮಣೀಪುರಕ್ಕೆ ಬಂದಿತು.

ಅರ್ಜುನ ಚಿತ್ರಾಂಗದೆಯನ್ನು ವಿವಾಹವಾದ ದೇಶ. ಅರ್ಜುನನ ಮಗ ಬಬ್ರುವಾಹನ ಯಾಗಾಶ್ವವನ್ನು ಕಟ್ಟಿ ಹಾಕಿದ. ಅವನಿಗೆ ಅರ್ಜುನ ತನ್ನ ತಂದೆ ಎಂದು ತಿಳಿದಿರಲಿಲ್ಲ. ಮರುದಿನವೇ ಅರ್ಜುನನ ಜೊತೆ ಕಾದಾಡಲು ಸೈನ್ಯ ಸಿದ್ಧತೆಯನ್ನು ಮಾಡಿಕೊಂಡ. ವಿಚಾರವನ್ನು ತಿಳಿದ ಚಿತ್ರಾಂಗದೆ ಗಾಬರಿಯಿಂದ ತಾನೇ ಸ್ವತಃ ರಾಜಸಭೆಗೆ ಬಂದಳು.

ಬಬ್ರುವಾಹನ ಬೆಕ್ಕಸ ಬೆರಗಾದ. ಮಗನ ಕಡೆ ನೋಡಿ “ಕುಮಾರ, ನಿನ್ನ ದುಡುಕುತನದ ಕಾರ್ಯವನ್ನು ಕಂಡು ನನಗೆ ನಿಜಕ್ಕೂ ತುಂಬಾ ಕೋಪ ಬಂದಿದೆ. ನೀನು ಯುದ್ಧ ಮಾಡಲು ಹೊರಟಿರುವುದು.

ಅರ್ಜುನ ಮೇಲೆ ಎಂದು ತಿಳಿಯಿತು. ಆ ಪಾರ್ಥನೇ ನಿನ್ನ ತಂದೆ. ನಾನು ಮತ್ತೊಮ್ಮೆ ಅವರನ್ನು ನೋಡಲು ಕಾತುರದಿಂದ ವ್ರತಗಳನ್ನು ಮಾಡುತ್ತಾ ಕಾಯುತ್ತಿರುವೆ. ನೀನು ಹೋಗಿ, ನಿನ್ನ ಸಕಲ ಐಶ್ವರ್ಯವನ್ನು ಒಪ್ಪಿಸಿ, ನಮಸ್ಕರಿಸಿ, ಅವರನ್ನು ಕರೆದುಕೊಂಡು ಬಾ.”

ತಾಯಿಯ ಮಾತಿನಂತೆ ಬಬ್ರುವಾಹನ ತನ್ನ ತಂದೆಯನ್ನು ಕಾಣಲು ತಟ್ಟೆಯಲ್ಲಿ ವಜ್ರ, ಬೆಳ್ಳಿ, ಬಂಗಾರ, ಮುತ್ತುಗಳನ್ನು ತೆಗೆದುಕೊಂಡು ಹೊರಟ. ಎದುರು ಬಂದ ಅರ್ಜುನನಿಗೆ ಅನೇಕ ಅಪಶಕುನಗಳಾದವು. ಅವನ ಎಡಗಣ್ಣು ಅದುರತೊಡಗಿತು. ರಥದ ಮೇಲೆ ಕಾಗೆಯು ಕುಳಿತುಕೊಂಡಿತು. ಹಗಲು ಹೊತ್ತಿನಲ್ಲೇ ಗೂಬೆಗಳು ಕೂಗತೊಡಗಿತು.

ಹಂಸಧ್ವಜ-ನೀಲಧ್ವಜರು ಮುಂದೆ ಎಂತಹ ಅನಾಹುತಗಳು ಕಾದಿವೆಯೋ ಎಂದು ತಳಮಳಿಸಿದರು. ಬಬ್ರುವಾಹನ ವಿನೀತನಾಗಿ ಮುಂದೆ ಬಂದು “ಅಪ್ಪಾಜಿ, ತಾವು ನನ್ನ ತಂದೆ ಎಂಬುದನ್ನು ತಿಳಿಯದೇ ಯಾಗಾಶ್ವವನ್ನು ಕಟ್ಟಿ ಹಾಕಿದೆ. ನಾನು ಯಾಗದ ಕುದುರೆಯನ್ನು ಕಟ್ಟಿ ಹಾಕಿದ್ದಕ್ಕಾಗಿ ಕ್ಷಮೆ ಯಾಚಿಸುವೆನು” ಎಂದನು.

ಅರ್ಜುನ ಯಾವುದೋ ಜ್ಞಾನದಲ್ಲಿ ಗತ ಘಟನೆಗಳ ಕಡೆಗೆ ಅಷ್ಟಾಗಿ ಗಮನ ಕೊಡಲಿಲ್ಲ. “ಛೀ, ನೀನು ನನ್ನ ಮಗನೇ? ನೀನು ನಿಜಕ್ಕೂ ನನ್ನ ಮಗನೇ ಆಗಿದ್ದರೆ ಹೀಗೆ ಕಟ್ಟಿದ ಕುದುರೆಯನ್ನು ಬಿಚ್ಚಿ ಕೊಡುತ್ತೇನೆ ಎನ್ನುತ್ತಿರಲಿಲ್ಲ. ವೀರನಂತೆ ಯುದ್ಧವನ್ನು ಮಾಡುತ್ತಿದ್ದೆ. ನೀನೊಬ್ಬ ಹೇಡಿ ಹೆಣ್ಣಿನ ಮಗ ಇರಬೇಕು. ನಿನ್ನ ರಾಜ ಮರ್ಯಾದೆ ನನಗೇಕೆ? ಸುಡು.”

ಅಲ್ಲಿ ನೆರೆದಿದ್ದ ನೂರಾರು ಜನರ ಮುಂದೆ ತಾಯಿಗಾದ ಅವಮಾನವನ್ನು ಕಂಡು ಬಬ್ರುವಾಹನ ಕನಲಿದನು. ಸಿಟ್ಟಿನಿಂದ ಸಿಡಿಮಿಡಿಗೊಂಡ. “ಎಲವೋ ಅರ್ಜುನ, ನನ್ನ ತಾಯಿಯ ಶೀಲದ ಬಗ್ಗೆ ಮಾತನಾಡಿದ ನಿನ್ನನ್ನು ಸುಮ್ಮನೆ ಬಿಡಲಾರೆ. ಇಂದಿನ ಯುದ್ಧದಲ್ಲಿ ನಾನು ನಿನ್ನ ತಲೆಯನ್ನು ಹಾರಿಸದಿದ್ದರೆ ನಾನು ವೀರ ಮಾತೆಯ ಮಗನೇ ಅಲ್ಲ.”

ಬಬ್ರುವಾಹನ ಯುದ್ಧಕ್ಕೆ ಸನ್ನದ್ಧನಾದ. ಇಬ್ಬರೂ ಮಾತಿನ ವೈಖರಿಯೊಂದಿಗೆ ಬಾಣ ಪ್ರಯೋಗದ ವೈಖರಿಯೂ ವೈಭವಿಸತೊಡಗಿದರು. ಪರಸ್ಪರ ಬಾಣಗಳನ್ನು ಪ್ರಯೋಗಿಸಿ, ಆಘಾತವನ್ನುಂಟು ಮಾಡತೊಡಗಿದರು.

ಬಾಣದ ಕಿಡಿಗಳು ಮುಗಿಲೆತ್ತರಕ್ಕೆ ಹಾರಿ, ವೀಕ್ಷಿಸುತ್ತಿದ್ದ ದೇವತೆಗಳು ಸಹ ಭಯದಿಂದ ಕಂಗಾಲಾದರು. ಎರಡೂ ಕಡೆ ಲಕ್ಷಾಂತರ ಸೈನಿಕರು ಹತರಾದರು. ಅರ್ಜುನನ ರಥದ ಮೇಲೆ ಹಗಲ ವೇಳೆಯಲ್ಲಿಯೇ ಗೂಬೆ ಕುಳಿತು ಕೂಗತೊಡಗಿತು.

ರಣಹದ್ದುಗಳು ಸಮರಾಂಗಣದ ಉದ್ದಗಲಕ್ಕೂ ಹಾರಾಡ ತೊಡಗಿದವು. ಕಿರೀಟಿಯಂತಹ ಕಡುಗಲಿಯೂ ಸಹ ಇಂತಹ ಅಪಶಕುನಗಳಿಂದ ಕೂಡಿದ ಭೀಕರ ಕಾಳಗವನ್ನು ಎಂದೂ ಇದುವರೆಗೂ ಕಂಡಿರಲಿಲ್ಲ.

ಅಣ್ಣನು ಕೈಗೊಂಡಿರುವ ಅಶ್ವಮೇಧ ಯಾಗವು ಎಷ್ಟೊಂದು ನರಮೇಧ ಯಾಗದಂತೆ ಪೂರ್ವಭಾವಿಯಾಗಿಯೇ ಕಂಡು ಬರುತ್ತಿದೆ ಎಂದು ಸಣ್ಣಗೆ ನಡುಗತೊಡಗಿದ.

‘ಕೃಷ್ಣ ಪರಮಾತ್ಮ ಎಲ್ಲವೂ ನಿನಗೆ ಅರ್ಪಿತವಾಗಲಿ’ ಎಂದು ಮನದಲ್ಲೇ ದೃಢಭಕ್ತಿಯಿಂದ ಸ್ಮರಿಸುತ್ತಾ, ಬಬ್ರುವಾಹನನ ಮೇಲೆ ಯಥೇಚ್ಛ ಬಾಣಗಳ ಸುರಿಮಳೆಗರೆಯತೊಡಗಿದ. ಬಬ್ರುವಾಹನನೂ ಶೌರ್ಯದಲ್ಲಿ ತಂದೆಗಿಂತಲೂ ಕಡಿಮೆ ಎನಿಸಿರಲಿಲ್ಲ.

ಅರ್ಜುನನು ಪ್ರಯೋಗಿಸಿದ ಸರ್ಪಾಸ್ತ್ರಗಳನ್ನು ಅಭಿಮುಖಾಸ್ತ್ರಗಳಿಂದ ಉರುಳಿಸತೊಡಗಿದ. ಕೊನೆಯ ಘಳಿಗೆಯಲ್ಲಿ ರೋಷದಿಂದ ಕಡುವೈರಿಯಾದ ಸರ್ಪಾಸ್ತ್ರ ಈಗ ಕರ್ಣನು ಪ್ರಯೋಗಿಸಿದಾಗ ಮೋಸ ಹೋದಂತೆ ಹೋಗದೆ, ಎಚ್ಚರಿಕೆಯಿಂದ ಅವನ ತಲೆಯನ್ನು ಹಾರಿಸಿತು.

ಅರ್ಜುನನ ಮರಣದ ಸುದ್ದಿ ಕಾಳ್ಗಿಚ್ಚಿನಂತೆ ಹರಡಿತು. ಉಲೂಪಿ, ಚಿತ್ರಾಂಗದೆಯರಂತೂ ದುಃಖದ ಕಡಲಿನ ತಳ ಸೇರಿದರು. ವೈರಿಯನ್ನು ಗೆದ್ದು, ಗೆಲುವಿನ ಮುಖದೊಂದಿಗೆ ಅರಮನೆಗೆ ಬಂದ ಬಬ್ರುವಾಹನ ತಾಯಂದಿರ ದಾರುಣ ದುಃಖವನ್ನು ಕಂಡು ಸಹಿಸಲಾರದೆ ಒದ್ದಾಡತೊಡಗಿದ.

ಚಿತ್ರಾಂಗದೆ ಮಗನನ್ನು ಕುರಿತು ಅಯ್ಯೋ ಬಬ್ರೂ, ನಿನಗೇಕೆ ಇಂತಹ ಕೇಡು ಬುದ್ಧಿ ಬಂದಿತು? ನನ್ನ ಪತಿಯನ್ನು ಗೌರವದಿಂದ ಅರಮನೆಗೆ ಕರೆ ತಾ ಎಂದು ಹೇಳಿ ಕಳುಹಿಸಿದರೆ ಕಟುಕನ ರೀತಿ ಅವರನ್ನು ಕೊಂದು ಬಂದಿರುವೆ.

ನೀನು ಇಂತಹ ಪುತ್ರ ಎಂದು ತಿಳಿದಿದ್ದರೆ ನಾನು ಬಂಜೆಯಾಗಿಯೇ ಉಳಿಯುತ್ತಿದ್ದೆ. ತಂದೆಯನ್ನು ಕೊಂದ ಧೀರ ಮಗ ಎಂಬ ಬಿರುದನ್ನು ಪಡೆದು ಸಂತೋಷಪಡು. ನನಗೆ ಮುಖ ತೋರಿಸಬೇಡ” ಎಂದಳು.

ಬಬ್ರುವಾಹನ ತಾಯಿಯ ಪಾದಗಳನ್ನು ಭದ್ರವಾಗಿ ಹಿಡಿದು, ಕಣ್ಣೀರಿನಿಂದ ಆಕೆಯ ಪಾದಗಳನ್ನು ತೊಳೆದನು. “ಅಮ್ಮ, ನಾನು ಅಂತಹ ಅವಿವೇಕಿ ಮಗನಲ್ಲ. ನಿನ್ನಂತಹ ಪತಿವ್ರತಾ ಶಿರೋಮಣಿಯನ್ನು ಹೇಡಿ ಎಂದು ಜರೆದ ಕಾರಣ ನಾನು ರೋಷಾವೇಶದಿಂದ ಕಾದಾಟ ನಡೆಸಬೇಕಾಗಿ ಬಂದಿತು.

ಈಗಲೂ ಹೇಳು, ನನ್ನ ತಂದೆಯನ್ನು ಬದುಕಿಸುವ ದಾರಿ ಯಾವುದಾದರೂ ಇದೆಯಾ?” ಮಗನ ದುಃಖವನ್ನು ಕಂಡು ಚಿತ್ರಾಂಗದೆಯೂ ದುಃಖಿತಳಾಗಿ ಅಳುತ್ತಾ, ನಂತರ ಕಡುಕಷ್ಟದಿಂದ ತನ್ನ ಸಂಕಟವನ್ನು ಹತೋಟಿಗೆ ತಂದುಕೊಂಡಳು.

“ಬಬ್ರುವಾಹನ, ವಿಧಿ ನಿಯಮವನ್ನು ಯಾರೂ ತಾನೇ ಉಲ್ಲಂಘಿಸಲು ಸಾಧ್ಯ? ಕೊನೆಯದಾಗಿ ನನ್ನ ಮುತ್ತೈದೆತನವನ್ನು ಉಳಿಸಿಕೊಳ್ಳಲು ನೀನು ಪಾತಾಳ ಲೋಕಕ್ಕೆ ತೆರಳಿ, ನಿನ್ನ ತಾತನಾದ ಶೇಷರಾಜನ ಬಳಿ ಸಂಜೀವ ಮಣಿ ಇದೆ. ಅದನ್ನು ತಂದರೆ ನಿನ್ನ ತಂದೆಯನ್ನು ಬದುಕಿಸಬಹುದು.”

ಬಬ್ರುವಾಹನನು ತನ್ನ ತಂದೆಯನ್ನು ಬದುಕಿಸಲು ವೀರಾವೇಶದಿಂದ ಪಾತಾಳ ಲೋಕವನ್ನು ಪ್ರವೇಶಿಸಿದ. ತನ್ನ ಮೊಮ್ಮಗನ ದುಃಖವನ್ನು ನೋಡಲಾರದೆ ಶೇಷರಾಜ ಸಂಜೀವ ಮಣಿಯನ್ನು ಮೊಮ್ಮಗನಿಗೆ ಕೊಡಲು ಹೋದ.

ಆದರೆ ಧೃತರಾಷ್ಟ್ರನೆಂಬ ಪ್ರಧಾನಿಯು ಅಡ್ಡ ಬಂದನು. ಇಬ್ಬರ ನಡುವೆ ಘನಘೋರ ಯುದ್ಧ ನಡೆಯಿತು. ಅಷ್ಟರಲ್ಲಿ ಧೃತರಾಷ್ಟ್ರನ ಕುಮಾರಿಯರಾದ ದುರ್ಬುದ್ಧಿ, ದುಃಸ್ವಭಾವಿ ಎಂಬುವವರು ಅರ್ಜುನನ ಶಿರಸ್ಸನ್ನು ಬಕದಾಲ್ಭ್ಯ ಮುನಿಯ ಆಶ್ರಮದಲ್ಲಿ ಬಚ್ಚಿಟ್ಟರು.

ಇತ್ತ ಬಬ್ರುವಾಹನ ತಾತನಿಂದ ಅಮೂಲ್ಯವಾದ ಮಣಿಯನ್ನು ಪಡೆದುಕೊಂಡು ತಾಯಿಯ ಬಳಿಗೆ ಬಂದು ಕೈಮುಗಿದ. ಚಿತ್ರಾಂಗದೆಗೆ ತುಂಬಾ ಸಂತೋಷವಾಯಿತು. ಅವಳು ಮಣಿಯನ್ನು ಅರ್ಜುನನ ತಲೆಗೆ ಮುಟ್ಟಿಸಬೇಕಿತ್ತು. ಆದರೆ ಶಿರಸ್ಸೇ ನಾಪತ್ತೆಯಾಗಿತ್ತು. ಎಲ್ಲರೂ ಪುನಃ ಗಾಬರಿಗೊಂಡರು.

ಕೃಷ್ಣ ಸೂಕ್ಷ್ಮ ಜ್ಞಾನದಿಂದ ನಡೆದಿರುವುದನ್ನು ಗ್ರಹಿಸಿದನು. ತನ್ನ ಸುದರ್ಶನ ಚಕ್ರವನ್ನು ರೋಷದಿಂದ ಎಸೆದ. ಅದು ದುಃಸ್ವಭಾವಿ ಹಾಗೂ ದುರ್ಬುದ್ಧಿಯನ್ನು ಕೊಂದು ಅರ್ಜುನನ ಶಿರಸ್ಸುಗಳನ್ನು ತಂದು ಕೃಷ್ಣನ ಪಾದದ ಬಳಿ ಕೆಡವಿತು.

ಸಂಜೀವ ಮಣಿಯನ್ನು ಸ್ಪರ್ಶಿಸಿದ ಕೂಡಲೇ ಅರ್ಜುನ ಬದುಕಿದನು.

ಬಬ್ರುವಾಹನನನ್ನು ಅರ್ಜುನನು ಸಂತೋಷದಿಂದ ಆಲಂಗಿಸಿಕೊಂಡನು. ಚಿತ್ರಾಂಗದೆಯನ್ನು ಕಂಡು ಅತ್ಯಾನಂದಪಟ್ಟನು. ಅಲ್ಲಿಯೇ ಕೆಲಕಾಲ ಇದ್ದು ನಂತರ ಪ್ರಯಾಣವನ್ನು ಮಾಡಿದರು.

ಕೃಪೆ: ಶಂಕರಾನಂದ ಆಶ್ರಮ. (ಡಾ.ರಾಜ್‌ಕುಮಾರ್ ನಟನೆಯ ಸಿನಿಮಾದ ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ನಾವು NDA ಜೊತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ನಮ್ಮ ಸಿದ್ದಾಂತವನ್ನ ಮರ್ಜ್ ಮಾಡಿಲ್ಲ: ನಿಖಿಲ್ ಕುಮಾರಸ್ವಾಮಿ

ನಾವು NDA ಜೊತೆ ಮಿತ್ರ ಪಕ್ಷವಾಗಿ ಕೈ ಜೋಡಿಸಿದ್ದೇವೆ. ನಮ್ಮ ಸಿದ್ದಾಂತವನ್ನ ಮರ್ಜ್

ಜಾತ್ಯತೀತ ಜನತಾದಳ ಅನ್ನುವುದು ಅದರ ಘೋಷ ವಾಕ್ಯದಲ್ಲೇ ಇದೆ. ನಮ್ಮ ಸಿದ್ದಾಂತದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಯಾವತ್ತಿದ್ರೂ ಜಾತ್ಯತೀತಾನೇ ಜಾತ್ಯಾತೀತವಾಗಿ ಉಳಿಯುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿದರು.

[ccc_my_favorite_select_button post_id="121129"]
ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾಗಬೇಕಿದೆ: ಸಿಎಂ ಸಿದ್ದರಾಮಯ್ಯ

ದಕ್ಷಿಣ ಭಾರತದಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠ ಸ್ಥಾಪನೆಯಾದರೆ ನ್ಯಾಯವನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಬಹು ದೊಡ್ಡ ಹೆಜ್ಜೆಯನ್ನು ಇರಿಸಿದಂತಾಗುತ್ತದೆ: ಸಿಎಂ ಸಿದ್ದರಾಮಯ್ಯ (Cm Siddaramaiah)

[ccc_my_favorite_select_button post_id="121121"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!