ದೊಡ್ಡಬಳ್ಳಾಪುರ (Doddaballapura): ತಾಲ್ಲೂಕು ನ್ಯಾಯಾಲಯದಲ್ಲಿ ಮಾರ್ಚ್ 8 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ.
ಅದಾಲತ್ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಪಂಡಿತ್ ಇರುವ ಹಾಗೂ ವ್ಯಾಜ್ಯ ಪೂರ್ವ ವಿವಿಧ ರೀತಿಯ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.
ಕಕ್ಷಿದಾರರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಭೋಲಾ ಪಂಡಿತ್ ತಿಳಿಸಿದರು.
ರಾಜೀ ಸಂಧಾನದ ಮೂಲಕ ತಮ್ಮ ಪ್ರಕರಣಗಳನ್ನು ಸುಲಭಮತ್ತು ಶೀಘ್ರವಾಗಿ ಶುಲ್ಕ, ಖರ್ಚು ವೆಚ್ಚವಿಲ್ಲದೇ ತೀರ್ಮಾನ ಮಾಡಿಕೊಳ್ಳಬಹುದು.
ಜನತಾ ನ್ಯಾಯಾಲಯದಲ್ಲಿ ಒಬ್ಬರು ಹಾಲಿ ನ್ಯಾಯಾಧೀಶರು ಹಾಗೂ ನುರಿತ ವಕೀಲರು ಸಂಧಾನಕಾರರಾಗಿ ಇರುತ್ತಾರೆ.
ನ್ಯಾಯಾಲಯದಲ್ಲಿ ಚಾಲ್ತಿಯಲ್ಲಿ ಇರುವ ಪ್ರಕರಣಗಳು ಹಾಗೂ ಇನ್ನೂ ನ್ಯಾಯಾಲಯವನ್ನು ಪ್ರವೇಶಿಸದೇ ಇರುವ ಪ್ರಕರಣಗಳನ್ನು ಸಹ ನಾವು ಜನತಾ ನ್ಯಾಯಾಲಯದಲ್ಲಿ ಪರಿಹರಿಸಿಕೊಳ್ಳಬಹುದು ಎಂದು ತಿಳಿಸಿದರು.
ಈ ಲೋಕ್ ಅದಾಲತ್ಗೆ ಸಂಬಂಧಿಸಿದಂತೆ ತಮಗೆ ಯಾವುದಾದರೂ ಪ್ರಶ್ನೆಗಳಿದ್ದರೆ ಇಮೇಲ್ ಐಡಿ disabirrural@ gmail.com ಅಥವಾ ಕಾರ್ಯದರ್ಶಿ ಕಚೇರಿ ದೂರವಾಣಿ ಸಂಖ್ಯೆ 080-2222919 18 ಸಂಪರ್ಕಿಸಬಹುದು.