SSLC Students, Parents read these words of Gururaj Karjagi

SSLC ವಿದ್ಯಾರ್ಥಿಗಳು, ಪೋಷಕರು ದೊಡ್ಡಬಳ್ಳಾಪುರದಲ್ಲಿ ಗುರುರಾಜ ಕರ್ಜಗಿಯವರ ಈ ಉತ್ತೇಜನ ನುಡಿಗಳನ್ನೊಮ್ಮೆ ಓದಿ

ದೊಡ್ಡಬಳ್ಳಾಪುರ (SSLC): ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಯಶಸ್ಸು ಖಂಡಿತ ಲಭಿಸುತ್ತದೆ ಎಂದು ಖ್ಯಾತ ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಗರದ ದೇವರಾಜ ಅರಸು ವಿದ್ಯಾಸಂಸ್ಥೆಯ ಆರ್.ಎಲ್.ಜಾಲಪ್ಪ ಕಲಾಮಂದಿರದಲ್ಲಿ ನಡೆದ ಎಸ್.ಎಸ್.ಎಲ್‌ಸಿ ವಿದ್ಯಾರ್ಥಿಗಳಿಗೆ ಉತ್ತೇಜನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪರೀಕ್ಷೆಗೆ ಸರಿಯಾಗಿ ತಯಾರಿ ಮಾಡಿಕೊಳ್ಳದಿದ್ದಾಗ ಭಯ ಬೀಳುವುದು ಸಾಮಾನ್ಯ. ಪರೀಕ್ಷೆಗಳ ಭಯದಿಂದಾಗಿ ಎಷ್ಟೋ ವಿದ್ಯಾರ್ಥಿಗಳು, ಓದಿದ್ದನ್ನು ಮರೆತು ಅನುತ್ತೀರ್ಣರಾಗುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆಗಾಗಿ ನಿಯಮಿತವಾಗಿ ಓದುವ ಅಭ್ಯಾಸ ಕ್ರಮವನ್ನು ರೂಢಿಸಿಕೊಳ್ಳಬೇಕು.

ಬೆಳಗಿನ ಜಾವ ಓದುವುದು ಉತ್ತಮ ಅಭ್ಯಾಸವಾಗಿದ್ದು, 45 ನಿಮಿಷ ಓದಿ, ಓದಿದ್ದನ್ನು ಮನನ ಮಾಡಿಕೊಳ್ಳಬೇಕು. ಓದಿದ್ದನ್ನು ಒಂದು ಬಾರಿ ಬರೆಯಬೇಕು. ಇನ್ನೂ ಮನನವಾಗದಿದ್ದರೆ ಮತ್ತೊಬ್ಬರಿಗೆ ಹೇಳಬೇಕು. ಅಧ್ಯಾಯವಾರುಪಟ್ಟಿ ಮಾಡಿಕೊಂಡು ಓದಬೇಕು ಎಂದರು.

ಪರೀಕ್ಷೆಗಾಗಿ ಓದುವುದಕ್ಕಿಂತ ನಿಯಮಿತವಾಗಿ ಓದುವ ಅಭ್ಯಾಸ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಿದ್ದು, ಇದಕ್ಕೆ ನಮ್ಮ ದೇಹ ಮತ್ತು ಮನಸ್ಸಿಗೆ ವ್ಯಾಯಾಮ ಅಗತ್ಯವಾಗಿದೆ.

ಮೆದುಳಿಗೆ ಆಮ್ಲಜನಕದ ಸರಬರಾಜು ಇಲ್ಲದಿದ್ದರೆ, ಮೆದುಳು ಗ್ರಹಿಸುವ ಶಕ್ತಿ ಕಳೆದುಕೊಳ್ಳುತ್ತದೆ. ಇದಕ್ಕಾಗಿ ಎರಡೂ ಕೈಗಳನ್ನು ಜೋಡಿಸುವ ಸಣ್ಣ ಆಕ್ಯೂಪ್ರೆಷರ್ ವ್ಯಾಯಾಮ ಮಾಡಬೇಕು. ನಿತ್ಯ 10 ನಿಮಿಷ ವ್ಯಾಯಾಮ ಮಾಡಬೇಕು ಎಂದರು.

ಪರೀಕ್ಷೆ ವೇಳೆಯಲ್ಲಿ ನಿದ್ದೆಗೆಟ್ಟು ಓದಿ ಹೆಚ್ಚು ಒತ್ತಡಕ್ಕೊಳಗಾಗಬಾರದು. ಲವಲವಿಕೆಯಿಂದ ಪರೀಕ್ಷ ಕೆಂದ್ರಕ್ಕೆ ಹೋಗಬೇಕು. ಓಗುವ ಮುಂದೆ ತಾಯಿ ತಂದೆಗಳ ಆಶೀರ್ವಾದ ಪಡೆದರೆ ಮತ್ತಷ್ಟು ಆತ್ಮ ವಿಶ್ವಾಸ ಹೆಚ್ಚುತ್ತದೆ.

ಇನ್ನು ಪರೀಕ್ಷಾ ಕೇಂದ್ರದಲ್ಲಿ ಓದಿನ ಬಗ್ಗೆ ಅನವಶ್ಯಕವಾಗಿ ಗೆಳೆಯರ ಜೊತೆ ಚರ್ಚೆ ಮಾಡುವುದು ಬೇಡ. ಪರೀಕ್ಷಾ ನಂತರವೂ ಬರೆದ ವಿಷಯದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ದೇ ಮುಂದಿನ ವಿಷಯಕ್ಕೆ ತಯಾರಿ ಮಾಡಿಕೊಳ್ಳುವುದು ಒಳ್ಳೆಯದು ಎಂದು ಪರೀಕ್ಷೆ ಹಾಗೂ ಓದುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಅಂಕದ ಓದಿಗಿಂತ ಜ್ಞಾನದ ಓದು ಮುಖ್ಯ

ಪರೀಕ್ಷೆಗಾಗಿ ಓದುವುದು, ಅಂಕ ಗಳಿಸುವುದಷ್ಟೇ ಶಿಕ್ಷಣದ ಉದ್ದೇಶವಲ್ಲ. ನಾವು ಪರೀಕ್ಷೆಗಾಗಿ ಕಲಿತ ವಿದ್ಯೆ ಬಹಳಷ್ಟು ಕಾಲ ನಿಲ್ಲುವುದಿಲ್ಲ. ಹೃದಯಕ್ಕೆ ನಾಟಿದ ವಿಚಾರಗಳು ಬಹುಕಾಲ ನಿಲ್ಲುತ್ತವ

ಬಾಯಿಪಾಠ ಮಾಡಿಕೊಂಡು ಅರ್ಥ ಮಾಡಿಕೊಳ್ಳದೇ ಯಾವುದೇ ವಿಚಾರ ಕಲಿತರೂ ಅದು ಅಂಕಕ್ಕೆ ಸೀಮಿತವೇ ಹೊರತು ನಮಗೆ ಯಾವುದೇ ಪ್ರಯೋಜನಕ್ಕೆ ಬರುವುದಿಲ್ಲ. ಕಳೆದು ಹೋದ ಸಮಯ ಬದುಕಲ್ಲಿ ಮತ್ತೆ ಬರುವುದಿಲ್ಲ.

ಮಾಜಿ ರಾಷ್ಟ್ರಪತಿಗಳಾದ ಕೆ.ಆರ್.ನಾರಾಯಣನ್, ಅಬ್ದುಲ್ ಕಲಾಂ ಮೊದಲಾದ ಮಹನೀಯರ ಸಾಧನೆಗಳು ಸ್ಪೂರ್ತಿಯಾಗಬೇಕು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೈಯೀದಾ ಅನೀಸ್ ಮಾತನಾಡಿ, ಮಾ.21ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆಗೆ ಯಾವುದೇ ಅಂಜಿಕೆಯಿಲ್ಲದೇ ಸಜ್ಜಾಗಬೇಕಾಗಿದೆ.

ಈ ದಿಸೆಯಲ್ಲಿ ಶಿಕ್ಷಣ ತಜ್ಞ ಗುರುರಾಜ ಕರ್ಜಗಿ ಅವರ ಮಾತುಗಳು ಮಕ್ಕಳಿಗೆ ಸ್ಪೂರ್ತಿಯಾಗಲಿ ಎಂದು ಈ ಕಾರ್ಯಕ್ರಮ ಅಯೋಜಿಸಲಾಗಿದ್ದು, ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಭವಿಷ್ಯಕ್ಕೆ ಕರ್ಜಗಿಯವರ ಮಾತುಗಳು ಸದಾ ಸ್ಪೂರ್ತಿಯಾಗಲಿವೆ ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮುನಿರಾಜು, ದೇವರಾಜ ಅರಸು ವಿದ್ಯಾಸಂಸ್ಥೆಯ ಎಇಇ ರಮೇಶ್ ಕುಮಾರ್, ಆರ್.ಎಲ್‍ಜೈಟಿ ಲಯನ್ಸ್ ಕ್ಲಬ್ ಅಧ್ಯಕ್ಷ ಜೆ.ಆರ್.ರಾಕೇಶ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ತಾಲೂಕು ಅಧ್ಯಕ್ಷ ಶಿವಕುಮಾರ್, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಂ.ಎಸ್.ರಾಜಶೇಖರ್, ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಕಾರ್ಯದರ್ಶಿ ಆಂಜಿನಪ್ಪ, ಶಿಕ್ಷಣ ಸಂಯೋಜಕರಾದ ಜಯಶ್ರೀ, ಮೈಲಾರಪ್ಪ, ಅಶ್ವಿನಿ, ಭೀಮರಾಜ್ ಮತ್ತಿತರರು ಭಾಗವಹಿಸಿದ್ದರು.

ರಾಜಕೀಯ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ನನ್ನ ಆಯಸ್ಸನ್ನು ಭಗವಂತ ನನ್ನ ತಂದೆಗೆ ಧಾರೆ ಎರಿಬೇಕು; ನಿಖಿಲ್‌ ಕುಮಾರಸ್ವಾಮಿ

ಕುಮಾರಣ್ಣ ಆರೋಗ್ಯ ಸರಿ ಇಲ್ಲ ಅಂತ ರಾಜ್ಯದಲ್ಲೆಡೆ ಚರ್ಚೆಗಳು ಶುರುವಾಗಿದೆ, ಅವರ ತಂದೆ ತಾಯಿ ಆಶೀರ್ವಾದ, ಭಗವಂತನ ಕೃಪೆ, ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಕುಮಾರಣ್ಣ ಆರೋಗ್ಯವಾಗಿದ್ದಾರೆ: ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="113069"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಅಪಘಾತ.. ಯುವಕನ ಬಲಿ ಪಡೆದ ಸಿಮೆಂಟ್ ಲಾರಿ..!

ಮತ್ತೊಂದು ರಸ್ತೆಯಲ್ಲಿ ತನ್ನ ಪಾಡಿಗೆ ತಾನು ಸಾಗುತ್ತಿದ್ದ ಯುವಕನ ಮೇಲೆರಗಿದ (Accident) ಲಾರಿ, ಸ್ಥಳದಲ್ಲಿಯೇ ಬಲಿ ಪಡೆದಿರುವ ಘಟನೆ

[ccc_my_favorite_select_button post_id="113040"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!