HD Deve Gowda urged the Center to speed up the railway projects in Karnataka

ಕರ್ನಾಟಕದ ರೇಲ್ವೆ ಯೋಜನೆಗಳಿಗೆ ವೇಗ ನೀಡಲು ಕೇಂದ್ರವನ್ನು ಒತ್ತಾಯಿಸಿದ ಹೆಚ್.ಡಿ.ದೇವೇಗೌಡ

ನವದೆಹಲಿ: ಕರ್ನಾಟಕದಲ್ಲಿ ಚಾಲ್ತಿಯಲ್ಲಿರುವ ಹಾಗೂ ನೆನೆಗುದಿಗೆ ಬಿದ್ದಿರುವ ರೇಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ (HD Deve Gowda) ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ರಾಜ್ಯಸಭೆಯಲ್ಲಿ ರೇಲ್ವೆ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು; ಕರ್ನಾಟಕದ ರೈಲ್ವೆ ಯೋಜನೆಗಳ ಅಗತ್ಯವನ್ನು ಒತ್ತಿ ಹೇಳಿದರು.

ಹಿಂದಿನ ಸರ್ಕಾರಗಳು ಕರ್ನಾಟಕದ ಹಲವಾರು ನಿರ್ಣಾಯಕ ರೇಲ್ವೆ ಯೋಜನೆಗಳನ್ನು ನಿರ್ಲಕ್ಷಿಸಿವೆ. ಆದಾಗ್ಯೂ, ಪ್ರಸ್ತುತ ಸರ್ಕಾರದ ಅಡಿಯಲ್ಲಿ ರಾಜ್ಯಕ್ಕೆ ರೇಲ್ವೆ ಅನುದಾನ ಹಂಚಿಕೆಯಲ್ಲಿ ಭಾರೀ ಏರಿಕೆ ಕಂಡಿದೆ. ಈ ಹಂಚಿಕೆಯು ₹800 ಕೋಟಿಯಿಂದ ₹7,000 ಕೋಟಿಗೂ ಮೀರಿ ಹೆಚ್ಚಾಗಿದೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ನರೇಂದ್ರ ಮೋದಿ ಅವರ ಆಡಳಿತದ ಅಡಿಯಲ್ಲಿ ರಾಜ್ಯದ ಅನೇಕ ರೇಲ್ವೆ ಯೋಜೆಗಳಿಗೆ ಮರು ಚಾಲನೆ ಸಿಕ್ಕಿದೆ. ಆದಾಗ್ಯೂ ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಮತ್ತು ಶೃಂಗೇರಿಗೆ ರೇಲ್ವೆ ಮಾರ್ಗ ಮತ್ತು ಬೆಂಗಳೂರಿನಿಂದ ಭಾರತದ ಇತರೆ ಭಾಗಗಳಿಗೆ ಸಂಪರ್ಕ ಸೇರಿದಂತೆ ಹಲವಾರು ಯೋಜನೆಗಳು ಕಾರ್ಯರೂಪಕ್ಕೆ ಬಾರದೆ ಇನ್ನೂ ಬಾಕಿ ಉಳಿದಿವೆ. ಇವುಗಳ ಕಡೆ ರೇಲ್ವೆ ಸಚಿವರು ತಕ್ಷಣ ಗಮನ ಹರಿಸಬೇಕಾಗಿದೆ ಎಂದು ಅವರು ಒತ್ತಿ ಹೇಳಿದರು.

ದಕ್ಷಿಣ ಭಾರತದಲ್ಲಿ, ವಿಶೇಷವಾಗಿ ಕರ್ನಾಟಕದಲ್ಲಿ ರೇಲ್ವೆ ಯೋಜನೆಗಳನ್ನು ಮತ್ತಷ್ಟು ವೇಗಗೊಳಿಸುವಂತೆ ಸರ್ಕಾರವನ್ನು ಪದೇ ಪದೆ ಮನವಿ ಮಾಡಿದ ಅವರು; ರೈಲ್ವೆ ಸಂಪರ್ಕವು ಸಾಮಾನ್ಯ ನಾಗರಿಕರಿಗೆ ಕೈಗೆಟುಕುವ ಪ್ರಯಾಣಕ್ಕೆ ಕಾರಣವಾದ ಕೆಲ ಮಹತ್ವದ ಅಂಶಗಳನ್ನು ಉದಾಹರಣೆ ಸಮೇತವಾಗಿ ಉಲ್ಲೇಖಿಸಿದರು.

ಹಾಸನದಿಂದ ಮೈಸೂರಿಗೆ ರೇಲಿನಲ್ಲಿ ಪ್ರಯಾಣ ಮಾಡಿದರೆ ಟಿಕೆಟ್ ವೆಚ್ಚ ₹30 ಆಗುತ್ತದೆ. ಆದರೆ ಬಸ್ ದರಗಳು ಬಹುತೇಕ ಎರಡು ಪಟ್ಟು ಮೂರು ಪಟ್ಟು ಹೆಚ್ಚಾಗಿರುತ್ತವೆ. ಇದಕ್ಕಾಗಿಯೇ ರೇಲ್ವೆ ಯೋಜನೆಗಳ ವಿಸ್ತರಣೆ ಪೂರ್ಣ ವೇಗದಲ್ಲಿ ಮುಂದುವರಿಯಬೇಕು ಎಂದು ಅವರು ಪ್ರತಿಪಾದಿಸಿದರು.

ಕಳೆದ ಹತ್ತು ವರ್ಷಗಳಲ್ಲಿ ರೇಲ್ವೆ ಕ್ಷೇತ್ರದಲ್ಲಿ ಆಗಿರುವ ಗಮನಾರ್ಹ ಪ್ರಗತಿಯನ್ನು ಮಾಜಿ ಪ್ರಧಾನಿಗಳು ಮುಕ್ತಕಂಠದಿಂದ ಶ್ಲಾಘಿಸಿದರು.

ತಮ್ಮ ಅನುಭವದಿಂದ ಹೇಳುತ್ತಿದ್ದೇನೆ, ಕಳೆದ ಎಪ್ಪತ್ತೈದು ವರ್ಷಗಳ ಅಭಿವೃದ್ಧಿಯನ್ನು ಪರಿಶೀಲನೆ ಮಾಡಿ ನೋಡಿದಾಗ ಹತ್ತು ವರ್ಷಗಳ ಅಭಿವೃದ್ಧಿ ಕಣ್ಣಿಗೆ ಕಟ್ಟುವಂತೆ ಕಾಣುತ್ತದೆ ಎಂದು ಅವರು ಹೇಳಿದರು.

ಹಿಂದೆ ಅನುಮೋದನೆ ಪಡೆಯಲು ವರ್ಷಗಳೇ ಹಿಡಿಯುತ್ತಿದ್ದ ರೈಲ್ವೆ ಯೋಜನೆಗಳು ಈಗ ಅಭೂತಪೂರ್ವ ವೇಗದಲ್ಲಿ ಕಾರ್ಯಗತಗೊಳ್ಳುತ್ತಿವೆ ಎಂದ ಅವರು, ತಮ್ಮ ಅಧಿಕಾರಾವಧಿಯಲ್ಲಿ ರೈಲ್ವೆ ಅನುದಾನ ಹಂಚಿಕೆ, ಯೋಜನೆಗಳ ಜಾರಿ ಇತ್ಯಾದಿ ಅಂಶಗಳನ್ನು ನೆನಪು ಮಾಡಿಕೊಂಡರು, ಅಲ್ಲದೆ; ಆಗ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಳಂಬ ಮತ್ತು ನಿಧಾನಗತಿಯ ಯೋಜನಾ ಅನುಷ್ಠಾನ ಪರಿಸ್ಥಿತಿಯನ್ನು ನೆನಪಿಸಿಕೊಂಡರು.

ಇದಕ್ಕೆ ವ್ಯತಿರಿಕ್ತವಾಗಿ, ದೇಶಾದ್ಯಂತ ರೈಲ್ವೆ ಅಭಿವೃದ್ಧಿಯನ್ನು ಪರಿವರ್ತಿಸಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಸ್ಪಷ್ಟ ದೃಷ್ಟಿಕೋನದೊಂದಿಗೆ ಮುನ್ನಡೆಯುತ್ತಿದೆ ಎಂದು ಹೇಳಿದರು.

ರೈಲ್ವೆ ವಿಸ್ತರಣೆ ಮತ್ತು ಸುರಕ್ಷತೆಯಲ್ಲಿ ಗಮನಾರ್ಹ ಸುಧಾರಣೆಗಳು ಕಂಡುಬಂದಿವೆ ಎಂದು ದೇವೇಗೌಡರು; ಕೆಲ ಅಂಶಗಳನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿದರು.

ಹಿಂದೆ, ಆಧುನಿಕ ಮೂಲಸೌಕರ್ಯಗಳ ಕೊರತೆಯಿಂದಾಗಿ ರೇಲ್ವೆ ಅಪಘಾತಗಳು ಆಗಾಗ್ಗೆ ಸಂಭವಿಸುತ್ತಿದ್ದವು. ಆದರೆ ಇಂದು ಸುರಕ್ಷತಾ ಮಾನದಂಡಗಳು ಗಮನಾರ್ಹವಾಗಿ ಸುಧಾರಿಸಿವೆ ಎಂದು ಅವರು ಹೇಳಿದರು.

ಇದಕ್ಕೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರ ಪ್ರಯತ್ನಗಳು ಕಾರಣ ಎಂದ ಅವರು, ಸಚಿವರನ್ನು ಅವರನ್ನು “ರಾಷ್ಟ್ರದ ಪ್ರಗತಿಗೆ ಬದ್ಧರಾಗಿರುವ ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮಿ ನಾಯಕ” ಎಂದು ಬಣ್ಣಿಸಿದರು.

ಅಲ್ಲದೆ, ಭಾರತದ ರೇಲ್ವೆ ಬೆಳವಣಿಗೆಯನ್ನು ಚೀನಾ, ರಷ್ಯಾ, ಕೆನಡಾ ಮತ್ತು ಆಸ್ಟ್ರೇಲಿಯಾದೊಂದಿಗೆ ಹೋಲಿಸಿ ವಿವರಿಸಿದರು.

ಭಾರತದ ಪ್ರಗತಿ ಈಗ ಜಾಗತಿಕ ಮಾನದಂಡಗಳಿಗೆ ಸಮನಾಗಿದೆ ಎಂದರಲ್ಲದೆ, ರೇಲ್ವೆ ಮಾರ್ಗಗಳ ವಿಸ್ತರಣೆ, ವಿದ್ಯುದೀಕರಣ ಮತ್ತು ಸರಕು ಸಾಗಣೆ ಕಾರಿಡಾರ್‌ಗಳ ಅಭಿವೃದ್ಧಿ ಗಮನಾರ್ಹವಾಗಿ ಆಗಿದೆ ಎಂದರು ಮೆಚ್ಚುಗೆ ವ್ಯಕ್ತಪಡಿಸಿದರು.

ದೇವೇಗೌಡರು ರೈಲ್ವೆ ಆಧುನೀಕರಣಕ್ಕೆ ಮೋದಿ ಅವರ ಸರ್ಕಾರವು ತೋರಿದ ಬದ್ಧತೆಗೆ ಅಭಿನಂದನೆ ಸಲ್ಲಿಸಿದ ಅವರು; ಕರ್ನಾಟಕದಲ್ಲಿ ಬಾಕಿ ಇರುವ ಯೋಜನೆಗಳನ್ನು ತ್ವರಿತಗೊಳಿಸಬೇಕು ಎಂದು ಒತ್ತಿ ಹೇಳಿದರು.

ತಮ್ಮ ಸಲಹೆಗಳು ಟೀಕಿಸುವ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ಎಲ್ಲಾ ಪ್ರದೇಶಗಳಲ್ಲಿ ಸಮತೋಲಿತ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳುವ ಆಶಯವನ್ನು ಹೊಂದಿವೆ ಎಂದು ಅವರು ಪುನರುಚ್ಚರಿಸಿದರು.

ರಾಜಕೀಯ

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣ: ಡಿಸಿಎಂ ಡಿ.ಕೆ.

“ಕಾಂಗ್ರೆಸ್ ಸರ್ಕಾರಗಳ ವಿವಿಧ ಜನಪರ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಣವನ್ನು ಹಾಕುತ್ತಿದ್ದೇವೆ”: ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar)

[ccc_my_favorite_select_button post_id="112873"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!