Congress government's guarantee of price rise: B.Y. Vijayendra

ಕಾಂಗ್ರೆಸ್ ಸರಕಾರದ ಬೆಲೆಏರಿಕೆಯ ಗ್ಯಾರಂಟಿ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬೆಲೆ ಏರಿಕೆಯ ಗ್ಯಾರಂಟಿಯನ್ನು ಬಹಳ ಯಶಸ್ವಿಯಾಗಿ ಜಾರಿಗೊಳಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ.

ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಈ ಸರಕಾರ ಬೆಲೆ ಏರಿಕೆಯನ್ನು ನಿರಂತರವಾಗಿ ನೀಡುತ್ತಿದೆ. ವಿದ್ಯುತ್ ದರ, ಸ್ಟಾಂಪ್ ಡ್ಯೂಟಿ ಹೆಚ್ಚಿಸಿದ್ದಾರೆ. ನೀರಿನ ದರ ಎರಡನೇ ಬಾರಿಗೆ ಹೆಚ್ಚಿಸಲು ಹೊರಟಿದ್ದಾರೆ ಎಂದು ಆರೋಪಿಸಿದರು. ಬಜೆಟ್ ಮೇಲೆ ಈ ವಿಷಯಗಳ ಕುರಿತು ಚರ್ಚಿಸಲಿದ್ದೇವೆ ಎಂದರು.

ರಾಜ್ಯದ ಬಜೆಟ್ ಕುರಿತು ಅಧಿವೇಶನದಲ್ಲಿ ಚರ್ಚೆ ಆರಂಭವಾಗಿದೆ. ನಾನು ಕೂಡ ಬಜೆಟ್ ಬಗ್ಗೆ ಚರ್ಚೆ ಆರಂಭಿಸಿದಾಗ ಆಡಳಿತ ಪಕ್ಷದ ಸದಸ್ಯರು, ಅಧಿಕಾರಿಗಳು ಇರಲಿಲ್ಲ; ಹಾಗಾಗಿ ಮಾತು ಮೊಟಕುಗೊಳಿಸಿದೆ. ಸೋಮವಾರ ಅಥವಾ ಮಂಗಳವಾರ ಮಾತನಾಡಲಿದ್ದೇನೆ ಎಂದರು.

ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಒಂದೆಡೆ ರಾಜ್ಯ ಅಭಿವೃದ್ಧಿ ಶೂನ್ಯವಾಗಿದೆ. ಇನ್ನೊಂದೆಡೆ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ನಾಡಿನ ಜನರ, ಕೃಷಿಕರ, ಬಡವರ ಕಣ್ಣೀರನ್ನು ಒರೆಸಬೇಕಿದ್ದ ಬಜೆಟ್, ಆ ನಿರೀಕ್ಷೆಗಳನ್ನು ಸಾಕಾರಗೊಳಿಸಿಲ್ಲ ಎಂದು ಅವರು ಟೀಕಿಸಿದರು.

ತಮಿಳುನಾಡಿನ ರಾಜಕಾರಣವು ಕೇಂದ್ರ ವಿರೋಧಿ ನೀತಿ ಅನುಸರಿಸುತ್ತ ಬಂದಿದೆ. ಅವರು ಕೇಂದ್ರ ವಿರೋಧಿ ನೀತಿಗಳಿಂದ ಬೇಳೆ ಬೇಯಿಸಿಕೊಳ್ಳುತ್ತಾರೆ. ಹಲವಾರು ದಶಕಗಳಿಂದ ಇದನ್ನು ನೋಡುತ್ತ ಬರುತ್ತಿದ್ದೇವೆ. ರೂಪಾಯಿಯನ್ನು ತಮಿಳು ಭಾಷೆಯಲ್ಲಿ ಬರೆಯುವ ಮೂಲಕ ಇದೊಂದು ಹೊಸ ಅಧ್ಯಾಯ ಪ್ರಾರಂಭಿಸಿದ್ದಾರೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.

ಈ ಬೆಳವಣಿಗೆ ದೇಶಕ್ಕೆ ಮಾರಕ. ರಾಷ್ಟ್ರೀಯ ಶಿಕ್ಷಣ ನೀತಿ ವಿಷಯದಲ್ಲೂ ಇದೇ ಧೋರಣೆಯನ್ನು ರಾಜ್ಯದ ಸರಕಾರ, ತಮಿಳುನಾಡಿನ ಸರಕಾರಗಳು ಅನುಸರಿಸುತ್ತಿವೆ. ಡಿ ಲಿಮಿಟೇಶನ್ ವಿಚಾರದಲ್ಲೂ ಕೇಂದ್ರದ ಗೃಹ ಸಚಿವರು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ. ದೇಶದ ಒಳಿತಿಗಾಗಿ ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಒನ್ ನೇಶನ್ ಒನ್ ಇಲೆಕ್ಷನ್ ಬಗ್ಗೆ ಆಲೋಚಿಸಿದ್ದಾರೆ.

ಡಿ ಲಿಮಿಟೇಶನ್ ವಿಚಾರ ಮುಂದಿಟ್ಟು ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರು ದಕ್ಷಿಣದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದು, ನಮ್ಮ ರಾಜ್ಯದ ಮುಖ್ಯಮಂತ್ರಿಗಳೂ ಅದಕ್ಕೆ ಧ್ವನಿಗೂಡಿಸುವುದು ವಿಪರ್ಯಾಸ ಎಂದು ತಿಳಿಸಿದರು.

ರಾಜ್ಯದ ಮುಖ್ಯಮಂತ್ರಿಗಳಿಗೆ ನೈಜ ಕಳಕಳಿ ಇದ್ದರೆ ತಮಿಳುನಾಡಿಗೆ ನೀರು ಬಿಡುವ ವಿಚಾರದಲ್ಲಿ ಅಲ್ಲಿನ ಮುಖ್ಯಮಂತ್ರಿಗಳ ಮನ ಒಲಿಸುವ ಪ್ರಯತ್ನವನ್ನು ಮಾಡಬೇಕಿತ್ತು. ಆದರೆ, ಹಾಗೆ ಮಾಡಿಲ್ಲ. ತಮಿಳುನಾಡಿನ ಸಚಿವರು ಬಂದಾಗ ಅವರಿಗೆ ರಾಜಾತಿಥ್ಯ ನೀಡಿದ್ದಾರೆ. ಆದರೆ, ನಮ್ಮ ಮುಖ್ಯಮಂತ್ರಿಗಳು ಮತ್ತು ಸರಕಾರವು ಕಾವೇರಿ ಕೊಳ್ಳದಿಂದ ತಮಿಳುನಾಡಿಗೆ ನೀರು ಹರಿಸುವ ಕುರಿತು ಮಾತನಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಡಿ ಲಿಮಿಟೇಶನ್ ವಿಚಾರದಲ್ಲಿ ತಮಿಳುನಾಡಿನ ಸರಕಾರ ದೇಶವಿರೋಧಿ ನಡೆ ಅನುಸರಿಸುತ್ತಿದೆ. ಅದಕ್ಕೆ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಧ್ವನಿಗೂಡಿಸುವುದು ನಿಜಕ್ಕೂ ದುರ್ದೈವ ಎಂದರು.

ಸಿದ್ದರಾಮಯ್ಯನವರು ಕೇಂದ್ರದ ಜೊತೆ ರಾಜಕೀಯ ಸಂಘರ್ಷಕ್ಕೆ ಇಳಿದಿದ್ದಾರೆ. ಇದರಿಂದ ಅವರ ರಾಜಕೀಯ ಬೇಳೆ ಬೇಯಿಸಿಕೊಳ್ಳಬಹುದು. ಆದರೆ, ಇದು ರಾಜ್ಯದ ಜನತೆಗೆ ಮಾರಕ ಎಂದರಲ್ಲದೆ, ಈಚೆಗೆ ಜಮ್ಮು- ಕಾಶ್ಮೀರದ ಮುಖ್ಯಮಂತ್ರಿಗಳು ಬಜೆಟ್ ಮಂಡಿಸುವ ಸಂದರ್ಭದಲ್ಲಿ ಕೇಂದ್ರ ಸರಕಾರ, ಪ್ರಧಾನಿ ನರೇಂದ್ರ ಮೋದಿಜೀ ಅವರನ್ನು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಶ್ಲಾಘನೆ ಮಾಡಿದ್ದಾರೆ.

ಇವತ್ತು ಪ್ರಧಾನಿ ಮತ್ತು ಹಣಕಾಸು ಸಚಿವೆ ಮಧ್ಯಸ್ಥಿಕೆಯಿಂದಾಗಿ ಜಮ್ಮು- ಕಾಶ್ಮೀರಕ್ಕೆ ಹಣಕಾಸಿನ ವಿಚಾರದಲ್ಲಿ ಒಳ್ಳೆಯದಾಗುತ್ತಿದೆ ಎಂದಿದ್ದಾರೆ. ಆದರೆ, ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಯಾಕೆ ಈ ರೀತಿ ಕೇಂದ್ರ ಸರಕಾರದ ಜೊತೆಗೆ ಸಂಘರ್ಷಕ್ಕೆ ನಾಂದಿ ಹಾಡಿದ್ದಾರೆ? ಅದರಿಂದ ರಾಜ್ಯಕ್ಕೆ ಯಾವ ರೀತಿ ಒಳಿತಾಗಲು ಸಾಧ್ಯ ಎಂದು ಕೇಳಿದರು. ಇದನ್ನೂ ಸದನದಲ್ಲಿ ಮಾತನಾಡುವುದಾಗಿ ತಿಳಿಸಿದರು.

ರಾಜಕೀಯ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ 1.3-3ಕೋಟಿ: ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ಕಸ ಗುಡಿಸುವ ಮಷಿನ್‌ ಬಾಡಿಗೆ 613 ಕೋಟಿ ಖರ್ಚು, ಬಾಡಿಗೆ ಬದಲು ಖರೀದಿಗೆ

ರಾಜ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷದವರೆಗೂ ಬಾಡಿಗೆ ಆಧಾರದ ಮೇಲೆ ಪಡೆಯಲು ಒಪ್ಪಿಗೆ ನೀಡಿದೆ.ಬಾಡಿಗೆ ನೆಪದಲ್ಲಿ ಕಮೀಷನ್ ಗೋಲ್ ಮಾಲ್ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="116356"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ: ದೊಡ್ಡಬಳ್ಳಾಪುರ ಬಾಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ..!

ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

[ccc_my_favorite_select_button post_id="116353"]
ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಪತ್ನಿಗೆ ವಿಡಿಯೊ ಕಾಲ್ ಮಾಡಿ ಪತಿ ಆತ್ಮಹತ್ಯೆ

ಜೈಲು ಪಾಲಾಗಿದ್ದ ಯುವಕ ಜಾಮೀನಿನಲ್ಲಿ ಹೊರಗೆ ಬಂದ ಎರಡು ವಾರಗಳ ನಂತರ ಪತ್ನಿಗೆ ಲೈವ್ ವಿಡಿಯೊ ಮಾಡಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ (Suicide) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

[ccc_my_favorite_select_button post_id="116294"]
ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ದೊಡ್ಡಬಳ್ಳಾಪುರ; ಭೀಕರ ಅಪಘಾತ.. ಎಂಬಿಎ ವಿದ್ಯಾರ್ಥಿ ದುರ್ಮರಣ

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಫಘಾತಕ್ಕೆ (Accident) ಒಳಗಾಗಿ ದೊಡ್ಡಬಳ್ಳಾಪುರ ನಗರದ ನಿವಾಸಿ, ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ ಘಟನೆ ನಾರನಹಳ್ಳಿ ಬಳಿ ಸಂಭವಿಸಿದೆ.

[ccc_my_favorite_select_button post_id="116301"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!