100 acre terraforma waste unit revived..!

100 ಎಕರೆಯಲ್ಲಿ ಟೆರ್ರಾಫಾರ್ಮ ತ್ಯಾಜ್ಯ ಘಟಕಕ್ಕೆ ಮರು ಜೀವ..!: ದೊಡ್ಡಬಳ್ಳಾಪುರಕ್ಕೆ ಮತ್ತೊಂದು BBMP ಕಸದ ಕಂಟಕ..

ದೊಡ್ಡಬಳ್ಳಾಪುರ (terraforma): ಬಿಬಿಎಂಪಿ ಕಸ ವಿಲೇವಾರಿ ಘಟಕದಿಂದ ತೊಂದರೆಗೆ ಒಳಗಾಗಿರುವ ಗ್ರಾಮಗಳಲ್ಲಿ, ಹಲವರ ಪಾಪದ ಕೂಸಾಗಿ ದೊಡ್ಡಬಳ್ಳಾಪುರ ತಾಲ್ಲೂಕಿಗೆ ಒಕ್ಕರಿಸಿರುವ ಬಿಬಿಎಂಪಿ ತಾಲೂಕಿನ ಜನರ ಆಶಯದ ವಿರುದ್ಧ ಮತ್ತೊಂದು ಆತಂಕಕಾರಿ ನಿರ್ಣಯ ಕೈಗೊಂಡಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು ಒಂದು ಸಾವಿರ ಟನ್ ತ್ಯಾಜ್ಯ ಸಂಸ್ಕರಣೆಯಾಗುತ್ತಿದ್ದು, ಪ್ರತಿದಿನ ಸುಮಾರು 2,500 ಟನ್ ಮಿಶ್ರತ್ಯಾಜ್ಯ ಭೂಭರ್ತಿಯಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಈ ವಿಚಾರದಲ್ಲಿ ಆಘಾತಕಾರಿಯಾಗಿ 100 ಎಕರೆ ಜಾಗವನ್ನು ದೊಡ್ಡಬಳ್ಳಾಪುರದ ಟೆರ್ರಾಫಾರ್ಮ್ ಬಳಿ ಅಂತಿಮಗೊಳಿಸಲಾಗಿದೆ. ಈಗಾಗಲೇ ಸರ್ಕಾರದ 50 ಎಕರೆ ಭೂಮಿ ಇದ್ದು, ಖಾಸಗಿಯವರಿಂದ ಸುಮಾರು 65 ಎಕರೆ ಖರೀದಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಟೆರ್ರಾಫಾರ್ಮಗೆ ಮರು ಜೀವ..!

2006ರಲ್ಲಿ ಈ ಭಾಗದ ರಿಯಲ್‌ ಎಸ್ಟೇಟ್‌ ಏಜನ್ಸಿಗಳು ಪ್ರಥಮ ಬಾರಿಗೆ ಗುಂಡ್ಲಹಳ್ಳಿ ಸಮೀಪ ರೈತರಿಗೆ ಉತ್ತಮ ಬೆಲೆ ಕೊಡಿಸುವ ಮೂಲಕ ಭೂಮಿ ಖರೀದಿಸಿ ಟೆರ್ರಾಫಾರ್ಮ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಅವಕಾಶ ಮಾಡಿಕೊಟ್ಟರು. ಆದರೆ ಕಸವಿಲೇವಾರಿ ಘಟಕ ದಿನ ಕಳೆದಂತೆ ಈ ಭಾಗದ ಜನರ ಪಾಲಿನ ಮೃತ್ಯು ಕೂಪವಾಗಿ ಕಾಡಲಾರಂಭಿಸಿತ್ತು.

ಇದರ ವಿರುದ್ಧ ಸಿಡಿದೆದ್ದ ಸ್ಥಳೀಯ ಜನ 2014ರಲ್ಲಿ ಟೆರ್ರಾ ಫಾರ್ಮ ಬಂದ್‌ ಮಾಡಿಸುವಲ್ಲಿ ಸಫಲರಾಗಿದ್ದರು.

ಆದರೆ ಈಗ ದೊಡ್ಡಬಳ್ಳಾಪುರಕ್ಕೆ ಮತ್ತೆ ಬಿಬಿಎಂಪಿ ಕಸ ಕಂಟಕ ಎದುರಾಗಿದ್ದು, ತಾಲೂಕಿನ ಜನರ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಬಂದ್ ಮಾಡಲಾಗಿದ್ದ, ಟೆರ್ರಾಫಾರ್ಮ್ವನ್ನು ಮತ್ತೆ ಆರಂಭಿಸಲು ಬಿಬಿಎಂಪಿ ಸಿದ್ದತೆ ನಡೆಸಿದೆ ಎಂದು ವರದಿಯಾಗಿದೆ.

ಈಗಾಗಲೇ ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಚಿಗರೇನಹಳ್ಳಿಯ ಬಿಬಿಎಂಪಿ ಕಸ ವಿಲೇವಾರಿ ಘಟಕದಿಂದ ತೊಂದರೆಗೆ ಒಳಗಾಗಿರುವ ಗ್ರಾಮಗಳಲ್ಲಿ ಇಲ್ಲಿಯವರೆಗೂ ಹಲವಾರು ಸುತ್ತಿನ ಹೋರಾಟಗಳು ನಡೆದಿವೆ. ಆದರೆ ಅಧಿಕಾರಿಗಳ ಹಾಗೂ ಜನ ಪ್ರತಿನಿಧಿಗಳ ಭರವಸೆಗಳನ್ನು ನಂಬಿ ಇಲ್ಲಿನ ಜನ ತೊಂದರೆಗಳನ್ನು ಅನುಭವಿಸುವಂತಾಗಿದೆ.

ಚಿಗರೇನಹಳ್ಳಿಯಲ್ಲಿನ ಎಂಎಸ್ಜಿಪಿ ಕಸ ವಿಲೇವಾರಿ ಘಟಕದ ವಿರುದ್ಧ ಎಲ್ಲಾ ಜನರ ಅಭಿಪ್ರಾಯದಂತೆ ಹೋರಾಟ ರೂಪಿಸುವ ಮೂಲಕ ಇಲ್ಲಿಗೆ ಮತ್ತೆ ಕಸ ಬಾರದಂತೆ ತಡೆಯಲು ಹೋರಾಟ ನಡೆದಿದೆ.

ಗ್ರಾಮಸಭೆಗಳು ನಡೆದು ನಂತರ ಎಲ್ಲಾ ಸಂಘಟನೆಗಳು, ರಾಜಕೀಯ ಪಕ್ಷಗಳನ್ನು ಒಳಗೊಂಡ ಹೋರಾಟ ಸಮಿತಿ ರಚಿಸಿಕೊಂಡು ಮುಂದಿನ ಹೋರಾಟವನ್ನು ವ್ಯವಸ್ಥಿತವಾಗಿ ನಡೆಸಬೇಕೆಂಬ ಹೋರಾಟ ಏಕಾಏಕಿ ತಣ್ಣಗಾಗಿ ಹೋಯಿತು.

ಹಲವರ ಪಾಪದ ಕೂಸಾಗಿ ತಾಲ್ಲೂಕಿಗೆ ಒಕ್ಕರಿಸಿರುವ ಬಿಬಿಎಂಪಿ ಕಸದ ವಿರುದ್ಧ ಮತ್ತೆ ಜನ ಜಾಗೃತಿ ಮೂಡಿಸಿ ಎಲ್ಲರನ್ನು ಒಳಗೊಂಡಂತೆ ಹೋರಾಟ ಮಾಡುವ ತುರ್ತು ಪರಿಸ್ಥಿತಿ ಎದುರಾಗಿದೆ.

ಈಗಾಗಲೇ ಬಿಬಿಎಂಪಿ ಕಸ ವಿಲೇವಾರಿ ಘಟಕದ ಸುತ್ತ ಮುತ್ತಲಿನ ಸಕ್ಕರೆಗೊಳ್ಳಹಳ್ಳಿ, ಭಕ್ತರಹಳ್ಳಿ, ಸಾಸಲು ಹೋಬಳಿ ವ್ಯಾಪ್ತಿಯಲ್ಲಿನ ಗ್ರಾಮಗಳಿಂದ ದನ, ಕರು, ಮೇಕೆ, ಕುರಿಗಳಂತಹ ಸಾಕುಪ್ರಾಣಿ, ಹಣ್ಣು, ತರಕಾರಿಗಳನ್ನು ಖರೀದಿ ಮಾಡಲು ಜನ ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಇದಿಷ್ಟೇ ಅಲ್ಲದೆ ಈ ಗ್ರಾಮಗಳಿಗೆ ಹೆಣ್ಣುಗಳನ್ನು ಕೊಡಲು, ಹೆಣ್ಣುಗಳನ್ನು ಪಡೆಯಲು ಯೋಚಿಸುವಂತಾಗಿದೆ. ಈ ಸ್ಥಿತಿ ಕಸ ವಿಲೇವಾರಿ ಘಟಕದ ಗ್ರಾಮಗಳಿಗೆ ಮಾತ್ರ ಸೀಮಿತ ಎನ್ನುತ್ತ ಕಸ ವಿಲೇವಾರಿ ಘಟಕದಿಂದ ದೂರದ ಗ್ರಾಮಗಳ ಜನರು ಮೈ ಮರೆತು ಸುಮ್ಮನೆ ಕೂರುವಂತಿಲ್ಲ.

ಬಿಬಿಎಂಪಿ ಕಸದಿಂದ ರೋಗ ಭಾದೆಗಳಿಗೆ ತುತ್ತಾದ ಜನ, ಜಾನುವಾರುಗಳಿಂದ ಹರಡುವ ಖಾಯಿಲೆಗಳು ಊಹೆಗೂ ನಿಲುಕುವುದಿಲ್ಲ.

ಈ ಹಿಂದಿನ ಹೋರಾಟಗಳ ಏಳು ಬೀಳು, ಸ್ವಾರ್ಥಗಳನ್ನು ಬದಿಗಿಟ್ಟು ಟೆರ್ರಾಫಾರ್ಮ ಆರಂಭಿಸಲು ಸಿದ್ದತೆ ನಡೆಸಿರುವ ಬಿಬಿಎಂಪಿ ಕಸದ ವಿರುದ್ಧ ತಾಲೂಕಿನ ಜನತೆ ಹೋರಾಟ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂಬುದು ಪ್ರಜ್ಞಾವಂತರ ಒತ್ತಾಯವಾಗಿದೆ.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!