Suspension of 18 MLAs.. B.Y. Vijayendra told BJP's next move

ಮುಖ್ಯಮಂತ್ರಿಗಳೇ ನಿಮ್ಮ ತುಘಲಕ್ ದರ್ಬಾರಿಗೆ ಇತಿಮಿತಿ ಇದೆ: ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಮುಸಲ್ಮಾನರಿಗೆ ಮೀಸಲಾತಿ ನೀಡುವ ಮಸೂದೆಯನ್ನು ನಿನ್ನೆ ಸದನದಲ್ಲಿ ಕದ್ದು ಮುಚ್ಚಿ ಮಂಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ (B.Y.Vijayendra) ಅವರು ಆಕ್ಷೇಪಿಸಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ವಿಪಕ್ಷದವರ ಕಣ್ತಪ್ಪಿಸಿ ಸದನದಲ್ಲಿ ಮಸೂದೆಯನ್ನು ಮಂಡಿಸಿದ್ದಾರೆ.

ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ಬಿಜೆಪಿ, ಸಿದ್ದರಾಮಯ್ಯರ ನೇತೃತ್ವದ ಸರಕಾರದ ತುಘಲಕ್ ದರ್ಬಾರನ್ನು ಸ್ಪಷ್ಟವಾಗಿ ವಿರೋಧಿಸುತ್ತದೆ ಎಂದು ಪ್ರಕಟಿಸಿದರು.

ಸದನದ ಒಳಗೆ ಮತ್ತು ಹೊರಗಡೆ ಬಿಜೆಪಿ ಇದನ್ನು ವಿರೋಧಿಸುತ್ತದೆ. ಅಗತ್ಯವಿದ್ದಲ್ಲಿ ರಾಜ್ಯ ಹೈಕೋರ್ಟಿನಲ್ಲೂ ಇದನ್ನು ಪ್ರಶ್ನಿಸುತ್ತೇವೆ ಎಂದು ತಿಳಿಸಿದರು.
ಇವರ ದುರಾಡಳಿತಕ್ಕೆ ಇತಿಮಿತಿ ಇದೆ. ಕಾಂಗ್ರೆಸ್ಸಿನವರು ಅಲ್ಪಸಂಖ್ಯಾತರ ಓಲೈಕೆ ರಾಜಕೀಯಕ್ಕೆ ಹೊರಟಿದ್ದಾರೆ.

ಸಿದ್ದರಾಮಯ್ಯ, ಸರಕಾರಕ್ಕೆ ನಿಜವಾಗಿ ಅಲ್ಪಸಂಖ್ಯಾತರ ಬಗ್ಗೆ ಕಳಕಳಿ ಇದೆಯೇ ಎಂದು ಕೇಳಿದರು. ಸ್ವಾತಂತ್ರ್ಯ ಬಂದ ಬಳಿಕ ಸುಮಾರು 50-55 ವರ್ಷ ಸುದೀರ್ಘವಾಗಿ ಈ ದೇಶದಲ್ಲಿ, ರಾಜ್ಯದಲ್ಲಿ ಆಡಳಿತ ನಡೆಸಿದ್ದೀರಿz ಅಲ್ಪಸಂಖ್ಯಾತರಿಗೆ ಶಿಕ್ಷಣಕ್ಕೆ ಒತ್ತು ಕೊಟ್ಟು ಅವರನ್ನು ಮುಂಚೂಣಿಯಲ್ಲಿ ತರುವ ಕೆಲಸವನ್ನು ಕಾಂಗ್ರೆಸ್ಸಿನವರು ಯಾಕೆ ಮಾಡಿಲ್ಲ ಎಂದು ಕೇಳಿದರು.

ಅಲ್ಪಸಂಖ್ಯಾತರಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಮುಂದಕ್ಕೆ ತರುವ ಇಚ್ಛಾಶಕ್ತಿ ಕಾಂಗ್ರೆಸ್ಸಿನವರಿಗೆ ಇರಲಿಲ್ಲ ಎಂದು ಟೀಕಿಸಿದರು.

ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎಂದು ಸಿದ್ದರಾಮಯ್ಯನವರು ಬಿಂಬಿಸಲು ಹೊರಟಿದ್ದಾರೆ. ಬಿಜೆಪಿ ಮುಸಲ್ಮಾನರ ವಿರೋಧಿಗಳಲ್ಲ. ಇಡೀ ದೇಶದಲ್ಲಿ ಅಲ್ಪಸಂಖ್ಯಾತ ಮಹಿಳೆಯರಿಗೆ ನ್ಯಾಯ ನೀಡಲು ತ್ರಿವಳಿ ತಲಾಖ್ ಅನ್ನು ಕಿತ್ತು ಹಾಕಿದ್ದು, ಬಿಜೆಪಿಯ ನರೇಂದ್ರ ಮೋದಿಜೀ ಅವರ ಸರಕಾರ ಎಂದು ವಿವರಿಸಿದರು.

ಕೇಂದ್ರ ಸರಕಾರದ ನರೇಂದ್ರ ಮೋದಿಜೀ ಅವರ ಸರಕಾರ ನೀಡಿದ ಕಾರ್ಯಕ್ರಮಗಳು, ಜನ್‍ಧನ್ ಖಾತೆ, ಉಜ್ವಲ ಸೇರಿ ಅನೇಕ ಯೋಜನೆಗಳನ್ನು ಕೊಟ್ಟಿದ್ದು, ಅವನ್ನು ಕೇವಲ ಹಿಂದೂಗಳಿಗೆ ಕೊಟ್ಟಿಲ್ಲ. ಯಡಿಯೂರಪ್ಪ ಅವರ ಭಾಗ್ಯಲಕ್ಷ್ಮೀ ಯೋಜನೆ ಕೇವಲ ಹಿಂದೂಗಳಿಗೆ ಕೊಟ್ಟಿಲ್ಲ ಎಂದು ಗಮನ ಸೆಳೆದರು.

ಈ ದೇಶದ ಪ್ರತಿಯೊಬ್ಬರಿಗೂ ಕೇಂದ್ರದ ಮೋದಿಜೀ ಅವರ ಸರಕಾರ ಕಾರ್ಯಕ್ರಮಗಳನ್ನು ನೀಡಿದೆ. ಬಿಜೆಪಿ, ಕಾಂಗ್ರೆಸ್ಸಿನವರ ಮಾದರಿಯಲ್ಲಿ ಮುಸಲ್ಮಾನರನ್ನು ಮತಬ್ಯಾಂಕಿಗೆ ಸೀಮಿತ ಮಾಡಿಲ್ಲ, ಮುಖ್ಯಮಂತ್ರಿಗಳೇ ನಿಮ್ಮ ತುಘಲಕ್ ದರ್ಬಾರಿಗೆ ಇತಿಮಿತಿ ಇದೆ.

ಮುಸಲ್ಮಾನರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4 ಮೀಸಲಾತಿಯನ್ನು ನಾವು ಸ್ಪಷ್ಟವಾಗಿ ವಿರೋಧ ಮಾಡುತ್ತೇವೆ ಎಂದು ಎಚ್ಚರಿಸಿದರು.

ಸದನದ ಒಳಗೆ ಮತ್ತು ಹೊರಗಡೆ ಹೋರಾಟದ ರೂಪುರೇಷೆ ಸಂಬಂಧ ಮುಖಂಡರು ಕುಳಿತು ಚರ್ಚೆ ಮಾಡುತ್ತೇವೆ. ಬಳಿಕ ತೀರ್ಮಾನ ಮಾಡುತ್ತೇವೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!