Daily story; punishment

ಹರಿತಲೇಖನಿ ದಿನಕ್ಕೊಂದು ಕಥೆ: ಶಿಕ್ಷೆ

Daily story: ಈ ಪ್ರಪಂಚದಲ್ಲಿ ಅನೇಕ ಜನರು ತಪ್ಪು ಮಾಡಿದಾಗ ಶಿಕ್ಷೆಗೆ ಒಳಗಾಗುವುದುಂಟು. ಶಿಕ್ಷೆಯ ಉದ್ದೇಶ-ಶಿಕ್ಷ ಣವೇ ಆಗಿದೆ. ಒಮ್ಮೆ ತಪ್ಪು ಮಾಡಿದವನು ಮುಂದಕ್ಕೆಂದೂ ಅಂತಹ ತಪ್ಪು ಮಾಡದಿರುವಂತಹ ಶಿಕ್ಷಣ ನೀಡುವುದಕ್ಕಾಗಿ ನಮ್ಮ ಆಡಳಿತ ವ್ಯವಸ್ಥೆಯಲ್ಲಿ

ಕಾನೂನು ಮತ್ತು ನ್ಯಾಯಾಂಗ ವ್ಯವಸ್ಥೆಗಳಿವೆ. ಇದರಿಂದ ನಮ್ಮ ಸಮಾಜವನ್ನು, ಜನಜೀವನವನ್ನು ಸರಿ ಮಾರ್ಗದಲ್ಲಿ ಮುನ್ನಡೆಸುವಂತಹ ಕೆಲಸ ಸಾಧ್ಯ. ಈ ಬಗೆಯ ನ್ಯಾಯಾಂಗ ಮಹತ್ವವನ್ನು ನಿರೂಪಿಸುವ ಒಂದು ಪ್ರಸಂಗ ಇಲ್ಲಿದೆ.

ಚೀನಾ ದೇಶದಲ್ಲಿ ಒಬ್ಬ ಚಿಂತಕರ ಪ್ರಸಿದ್ಧಿಯನ್ನು ಕೇಳಿ ಅಲ್ಲಿಯ ಅರಸನು ಅವರನ್ನು ತನ್ನ ರಾಜ್ಯದ ನ್ಯಾಯಾಧೀಶರನ್ನಾಗಿ ನೇಮಕ ಮಾಡಿದನು. ಈ ನ್ಯಾಯಾಧೀಶರು ಸೂಕ್ತ ನ್ಯಾಯ ತೀರ್ಪುಗಳಿಂದಾಗಿ ಬಹು ವಿಖ್ಯಾತರಾದರು.

ಅಲ್ಲಿಯ ರಾಜಧಾನಿಯಲ್ಲಿ ಒಬ್ಬ ಶ್ರೀಮಂತ ವ್ಯಾಪಾರಿಯ ಬಳಿ ಸಾಕಷ್ಟು ಸಂಪತ್ತು ಇತ್ತು. ಇದೆಲ್ಲವೂ ಬಡ ಜನರ ಶೋಷಣೆಯಿಂದ ಸಂಗ್ರಹಿಸಿದ್ದು, ಅದರ ರಕ್ಷ ಣೆಗಾಗಿ ಬಲಿಷ್ಠ ರಕ್ಷ ಕರನ್ನೂ ನೇಮಿಸಿಕೊಂಡಿದ್ದ. ಹಾಗಿದ್ದರೂ ಒಮ್ಮೆ ಕಳ್ಳತನ ನಡೆದೇ ಬಿಟ್ಟಿತು ಹಾಗೂ ಕಳ್ಳನನ್ನು ಬಂಧಿಸಲಾಯಿತು.

ಈ ಕಳ್ಳನನ್ನು ಸುಪ್ರಸಿದ್ಧ ನ್ಯಾಯಾಧೀಶರೆದುರು ಹಾಜರುಪಡಿಸಿದಾಗ ಆತನು ತನ್ನ ಕಳ್ಳತನದ ಅಪರಾಧವನ್ನು ಒಪ್ಪಿಕೊಂಡದ್ದಲ್ಲದೆ, ಈ ಹಿಂದೆ ಮಾಡಿದ್ದ ಕಳ್ಳತನಗಳನ್ನೂ ಒಪ್ಪಿಕೊಂಡನು.

ಆ ಕಳ್ಳನಿಗೆ ಒಂದು ವರ್ಷದ ಜೈಲು ಶಿಕ್ಷೆಯನ್ನು ವಿಧಿಸಿದ ನ್ಯಾಯಾಧೀಶರು ಶ್ರೀಮಂತ ವ್ಯಾಪಾರಿಯನ್ನು ಕರೆಸಿ, ಆತನು ಧನ ಸಂಗ್ರಹ ಮಾಡಿದ ವಿಧಾನದ ಬಗ್ಗೆ ಪ್ರಶ್ನಿಸತೊಡಗಿದರು. ಆದರೆ ತನ್ನ ಗುಟ್ಟು ಬಿಡಲೊಪ್ಪದ ಆ ವ್ಯಾಪಾರಿ ‘ಎಲ್ಲವೂ ನನ್ನ ವ್ಯಾಪಾರದ ಫಲವಾಗಿದೆ’ ಎಂದು ವಾದಿಸಿದನು. ಬಡವರ ಶೋಷಣೆಯ ತಪ್ಪನ್ನು ಒಪ್ಪಿಕೊಳ್ಳಲೇ ಇಲ್ಲ.

ನ್ಯಾಯಾಧೀಶರು ವ್ಯಾಪಾರಿಗೆ ಎರಡು ವರ್ಷಗಳ ಶಿಕ್ಷೆಯನ್ನು ವಿಧಿಸಿದರು. ಸಿಟ್ಟುಗೊಂಡ ವ್ಯಾಪಾರಿ ಪ್ರಶ್ನಿಸಿದ- ‘ನೀವು ಕಳ್ಳನಿಗೆ ಒಂದು ವರ್ಷ ಶಿಕ್ಷೆ ವಿಧಿಸಿದರೆ, ನನಗೇಕೆ ಎರಡು ವರ್ಷ ವಿಧಿಸುತ್ತೀರಿ?’. ನ್ಯಾಯಾಧೀಶರು ಸಮಾಧಾನದಿಂದ ಉತ್ತರಿಸಿದರು- ‘ಆ ಕಳ್ಳನು ತಪ್ಪನ್ನು ಒಪ್ಪಿಕೊಂಡನು. ಆದ್ದರಿಂದ ಅವನಲ್ಲಿ ಹೃದಯ ಪರಿವರ್ತನೆ ಸಾಧ್ಯತೆ ಇದೆ. ಆದರೆ ನೀವು ಒಪ್ಪಿಕೊಳ್ಳಲೇ ಇಲ್ಲ. ಆದ್ದರಿಂದ ಈ ಶಿಕ್ಷೆಯಿಂದ ನಿಮಗಾವ ಶಿಕ್ಷ ಣವೂ ಸಿಗಲಾರದು’ ಎಂದಾಗ ವ್ಯಾಪಾರಿ ತಲೆ ತಗ್ಗಿಸಿದ.

ಈ ಪ್ರಪಂಚದಲ್ಲಿ ಮಾನವನು ಶಾಲಾ-ಕಾಲೇಜುಗಳಲ್ಲಿ, ವಿಶ್ವವಿದ್ಯಾಲಯಗಳಲ್ಲಿ ಪಡೆಯುವ ಶಿಕ್ಷ ಣಕ್ಕಿಂತ ಬದುಕೆಂಬ ವಿದ್ಯಾಲಯದಲ್ಲಿ ಪಡೆಯುವ ಶಿಕ್ಷ ಣವು ಹೆಚ್ಚು ಮೌಲ್ಯಯುತವಾದುದೇ ಆಗಿದೆ.

ಕಾನೂನು ಕಟ್ಟಳೆ, ರೀತಿ-ರಿವಾಜು, ನೀತಿ- ನಿಯಮಗಳನ್ನು ಮೀರಿದವರಿಗೆ ಸರಕಾರ ಇಲ್ಲವೇ ಸಮಾಜವು ನೀಡುವ ಶಿಕ್ಷೆಯೆಂದರೆ ಮಾಡಿದ ತಪ್ಪಿಗೆ ಪಶ್ಚಾತ್ತಾಪ ಪಟ್ಟು, ಭವಿಷ್ಯದಲ್ಲೆಂದೂ ಅಂತಹ ತಪ್ಪು ಮಾಡದೆ ಸಭ್ಯ ನಾಗರಿಕರಾಗಿ ಬದುಕೆಂಬ ಪ್ರೇರಣೆ ನೀಡುವ ಹಾಗೆ ಪರಿವರ್ತನೆ ಮಾಡುವ ಉಜ್ವಲ ಶಿಕ್ಷ ಣವೇ ಆಗಿದೆ.

ಇಂತಹ ವ್ಯಕ್ತಿತ್ವ ಪರಿವರ್ತನೆಯ ಬಗ್ಗೆ ಅಭಿಮಾನ ಪಡಬೇಕಾಗಿದೆ.

ಕೃಪೆ: ಡಾ.ಡಿ.ವೀರೇಂದ್ರ ಹೆಗ್ಗಡೆ. (ಸಾಮಾಜಿಕ ಜಾಲತಾಣದಲ್ಲಿನ ಸಂಗ್ರಹ ಚಿತ್ರ ಬಳಸಲಾಗಿದೆ)

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!