Vijayendra appeal to Withdraw Suspension Order of 18 Legislators

ಶಾಸಕರ ಅಮಾನತು.. ಸ್ಪೀಕರ್‌ ಅವರಿಂದ ಪ್ರಜಾಪ್ರಭುತ್ವ ವಿರೋಧಿ ನಡೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸುವ ಕುರಿತ ಗೌರವಾನ್ವಿತ ಸ್ಪೀಕರ್ ಅವರ ನಿರ್ಧಾರವು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y.Vijayendra) ಅವರು ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಆಡಳಿತ ಪಕ್ಷದ ಹಿರಿಯ ಸಚಿವರಾದ ರಾಜಣ್ಣ ಅವರು ಸದನದ ಒಳಗೆ ಬಂದು ಅಂಗಲಾಚಿದ್ದಾರೆ. ಹನಿಟ್ರ್ಯಾಪ್ ಗೆ ಒಳಗಾಗಿದ್ದೇನೆ, ರಾಜ್ಯ ಹಾಗೂ ದೇಶದ 48ಕ್ಕೂ ಹೆಚ್ಚು ರಾಜಕಾರಣಿಗಳು ಹನಿಟ್ರ್ಯಾಪ್‍ಗೆ ಒಳಗಾಗಿದ್ದಾರೆ ಎಂದು ಬಹಿರಂಗವಾಗಿ ಸದನದಲ್ಲಿ ತಿಳಿಸಿದ ಸಂದರ್ಭದಲ್ಲಿ ಆ ಸಚಿವರಿಗೆ ರಕ್ಷಣೆ ಕೊಡುವ ಕರ್ತವ್ಯ ಸಭಾನಾಯಕರಾದ ಮುಖ್ಯಮಂತ್ರಿಗಳದು; ಅದೇ ರೀತಿ ಮಾನ್ಯ ಸಭಾಪತಿಗಳದ್ದು ಎಂದರು.

ಸದನದ 224 ಶಾಸಕರ ಮೇಲೂ ಕಳಂಕ ಬಂದಿದೆ. ಈ 224 ಶಾಸಕರಿಗೆ ರಕ್ಷಣೆ ಕೊಡುವ ಸ್ಥಾನದಲ್ಲಿ ಸಭಾಧ್ಯಕ್ಷರು ಕುಳಿತಿದ್ದಾರೆ. ನಮಗೆ ರಕ್ಷಣೆ ಕೊಡಿ ಎಂದು ವಿಪಕ್ಷವಾಗಿ ನಾವು ಸಚಿವರ ಪರವಾಗಿ ಹೋರಾಟ ಮಾಡಿದರೆ ನಮ್ಮನ್ನು ಕತ್ತು ಹಿಡಿದು ಹೊರದಬ್ಬುವ ಕೆಲಸ ಮಾಡಿದ್ದು ಇದು ಖಂಡಿತ ಸರಿಯಲ್ಲ ಎಂದು ಖಂಡಿಸಿದರು.

ಮುಖ್ಯಮಂತ್ರಿಗಳು ರಕ್ಷಣೆಯ ಹೊಣೆಗಾರಿಕೆ ವಹಿಸಬೇಕಿತ್ತು. ನೀವೇ ಸಚಿವರ ರಕ್ಷಣೆಗೆ ಬರಬೇಕಿತ್ತು. ರಕ್ಷಣೆ ವಿಚಾರಕ್ಕೆ ಪ್ರತಿಭಟನೆ ಮಾಡಿದರೆ ನಮ್ಮ ಶಾಸಕರನ್ನು ಎತ್ತಿ ಹಾಕುವ ಕೆಲಸ ಮಾಡಿದ್ದಾರೆ. ಇದು ಖಂಡಿತ ಸರಿಯಲ್ಲ ಎಂದು ಆಕ್ಷೇಪಿಸಿದರು.

ದೇಶದ ಮುಂದೆ ಶಾಸಕರ ಗೌರವ ಹರಾಜಾಗುವಂತಾಗಿದೆ. ಅಧಿಕಾರದ ಮದ ಎಲ್ಲಿಗೆ ಬಂದಿದೆ ಎಂದರೆ ಕಾಂಗ್ರೆಸ್ ಪಕ್ಷದ ಪಾಪದ ಕೊಡ ತುಂಬಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದ್ದು, ಇದರ ಪರಿಣಾಮವಾಗಿ ಸಚಿವರು, ಶಾಸಕರನ್ನು ಬೀದಿಗೆ ತರುವ ಕೆಲಸವನ್ನು ಆಡಳಿತ ಪಕ್ಷದವರು ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ದಲಿತ, ಪರಿಶಿಷ್ಟ ಪಂಗಡದ ಸೇರಿದ ಸಚಿವರ ಮಾನ ಹರಾಜಾಗುವ ಕೆಲಸ ನಡೆದಿದ್ದು, ಅವರ ರಕ್ಷಣೆಗೆ ಬರುವ ತಾಕತ್ತಿಲ್ಲವೇ ಮುಖ್ಯಮಂತ್ರಿಗಳೇ ಎಂದು ಪ್ರಶ್ನಿಸಿದರು. ಹಿಂದೆ ಇವರೇ ಮುಖ್ಯಮಂತ್ರಿ ಆಗಿದ್ದಾಗ ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ಮನೆಗೆ ಮುಸ್ಲಿಂ ಪುಡಾರಿಗಳು ಬೆಂಕಿ ಹಚ್ಚಿದ್ದರು. ಆದರೆ, ಆ ದಲಿತ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ರಕ್ಷಣೆಗೆ ಅಂದಿನ ಮುಖ್ಯಮಂತ್ರಿಗಳು ಬಂದಿರಲಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಅದೇ ರೀತಿ ಮತ್ತೊಮ್ಮೆ ಪುನರಾವರ್ತನೆಯಾಗಿದೆ. ದಲಿತರ ಬಗ್ಗೆಯೂ ಕಾಳಜಿ ಇಲ್ಲ; ಪರಿಶಿಷ್ಟ ಪಂಗಡದವರ ಬಗ್ಗೆ ಕಾಳಜಿ ಇಲ್ಲ. ಕೇವಲ ಮುಸಲ್ಮಾನರ ಹಿಂದೆ ಹೊರಟ ಮುಖ್ಯಮಂತ್ರಿಗಳು ಸದನದಲ್ಲಿ ಶಾಸಕರು, ಸಚಿವರ ರಕ್ಷಣೆಗೆ ಬರುತ್ತಿಲ್ಲವೆಂದಾದರೆ ಇಂಥ ಮುಖ್ಯಮಂತ್ರಿಗಳು ಆ ಸ್ಥಾನದಲ್ಲಿ ಮುಂದುವರಿಯಬೇಕೇ ಎಂದು ಯೋಚಿಸಬೇಕು ಎಂದರು.

ನಿನ್ನೆ ದಿನ ಸದನ ನಡೆಯುವ ಸಂದರ್ಭದಲ್ಲಿ ಯಾರು ಚೀಟಿ ಕೊಟ್ಟರು? ಎಲ್ಲವೂ ತನಿಖೆ ಮಾಡಲಿ. ಬಿಜೆಪಿ- ಜೆಡಿಎಸ್ ಪಕ್ಷಗಳು ಈ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಖಂಡಿಸುತ್ತೇವೆ. ಅಲ್ಲದೆ ಗೌರವಾನ್ವಿತ ರಾಜ್ಯಪಾಲರನ್ನೂ ಭೇಟಿ ಮಾಡುತ್ತೇವೆ ಎಂದು ಪ್ರಕಟಿಸಿದರು.

ಆಡಳಿತ ಪಕ್ಷದ ಸಚಿವರ ರಕ್ಷಣೆಗೆ ಬಾರದ ಮುಖ್ಯಮಂತ್ರಿಗಳ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಮುಖ್ಯಮಂತ್ರಿಗಳ ನಡೆಯೂ ಪ್ರಶ್ನಾರ್ಹ ಎಂದು ಅವರು ತಿಳಿಸಿದರು. ಕರ್ನಾಟಕದ ಸಚಿವರ ಹನಿಟ್ರ್ಯಾಪ್ ಕುರಿತ ಹೇಳಿಕೆ ದೇಶವ್ಯಾಪಿ ಚರ್ಚೆಗೆ ಒಳಪಡುತ್ತಿದೆ ಎಂದು ವಿವರಿಸಿದರು.

ನಡೆದಿರುವುದು ಸತ್ಯ ಎಂದು ಸತೀಶ್ ಜಾರಕಿಹೊಳಿ ಅವರೂ ಹೇಳಿಕೆ ಕೊಟ್ಟಿದ್ದಾರೆ. ಹನಿಟ್ರ್ಯಾಪ್ ಮಾಡಿದ ಶಾಸಕರು, ಸಚಿವರ ಹೆಸರು ಬಹಿರಂಗಪಡಿಸಲು ಮುಖ್ಯಮಂತ್ರಿಗಳು ಸೂಚಿಸಬೇಕಿತ್ತು. ತನಿಖೆಗೆ ಆದೇಶಿಸುವುದಾಗಿ ಹೇಳುವ ಧೈರ್ಯ ತೋರಿಸಬೇಕಿತ್ತು ಎಂದು ಸವಾಲು ಹಾಕಿದರು. ಮುಖ್ಯಮಂತ್ರಿಗಳು ಆ ಧೈರ್ಯ ತೋರಿಲ್ಲ ಎಂದು ಟೀಕಿಸಿದರು.

ರಾಜ್ಯದ ಜನರ ಮುಂದೆ ಮುಖ್ಯಮಂತ್ರಿಗಳ ಬಂಡವಾಳ ಬಯಲಾಗಿದೆ. ಕಾಂಗ್ರೆಸ್ ಪಕ್ಷವು ರಾಜ್ಯದ ಜನರ ಮುಂದೆ ಬೆತ್ತಲಾಗಿದೆ ಎಂದು ತಿಳಿಸಿದರು. ರಾಜ್ಯದ ತೆರಿಗೆ ಹಣವನ್ನು ಒಂದು ಧರ್ಮಕ್ಕೆ ಸೀಮಿತವಾಗಿ ಹಂಚುವುದಾದರೆ ಇದನ್ನು ನೋಡಿಕೊಂಡು ಸುಮ್ಮನೆ ಕೂರಬೇಕೇ ಎಂದು ಕೇಳಿದರು.

ರಾಜಕೀಯ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ರಾಹುಲ್ ಗಾಂಧಿ ಸೇರಿ 25 ಕಾಂಗ್ರೆಸ್ ಸಂಸದರಿಗೆ ಜೀವ ಬೆದರಿಕೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೊ ಒಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

[ccc_my_favorite_select_button post_id="119574"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!