ಹರಿತಲೇಖನಿ ದಿನಕ್ಕೊಂದು ಕಥೆ: ಮಹಾರಾಣಾ ಪ್ರತಾಪ

Daily story Maharana Pratapa

Daily story: ಭಾರತದ ಇತಿಹಾಸದಲ್ಲಿ ರಾಜಸ್ಥಾನದ ಶೂರವೀರ ಮತ್ತು ಸ್ವಾಭಿಮಾನಿ ರಾಜರಾಗಿದ್ದ ಮಹಾರಾಣಾ ಪ್ರತಾಪರ ಹೆಸರು ಅಜರಾಮರವಾಗಿದೆ.

ಜಯಪುರದ ರಾಣಾ ಮಾನಸಿಂಗನು ಅಕ್ಬರನಿಂದ ರಾಜ್ಯಕ್ಕೆ ಕಷ್ಟವಾಗಬಾರದೆಂದು ತನ್ನ ತಂಗಿಯನ್ನು ಅಕಬರನಿಗೆ ಕೊಟ್ಟು ಮದುವೆ ಮಾಡಿದನು. ಒಂದು ಸಲ ತನ್ನ ವೈಭವವನ್ನು ಪ್ರದರ್ಶಿಸಲು ರಾಣಾ ಮಾನಸಿಂಗನು ದೆಹಲಿಗೆ ಹೋಗುವಾಗ ದಾರಿಯಲ್ಲಿ ಮಹಾರಾಣಾ ಪ್ರತಾಪರನ್ನು ನೋಡಲು ಕುಂಭಲಗಢಕ್ಕೆ ಹೋದನು.

ಮಹಾರಾಣಾ ಪ್ರತಾಪರು ಅವರೆಲ್ಲರನ್ನು ಯೋಗ್ಯವಾಗಿ ಸತ್ಕರಿಸಿದರು ಆದರೆ ಜೊತೆಯಲ್ಲಿ ಕುಳಿತು ಊಟ ಮಾಡುವುದಿಲ್ಲ ಎಂದು ತಿಳಿಸಿದರು.

ಏಕೆ ಜೊತೆಯಲ್ಲಿ ಊಟ ಮಾಡುವುದಿಲ್ಲವೆಂದು ರಾಣಾ ಮಾನಸಿಂಗನು ಕೇಳಿದಾಗ ಮಹಾರಾಣಾ ಪ್ರತಾಪರು ಹೇಳುತ್ತಾರೆ, “ರಾಜ್ಯವನ್ನು ಉಳಿಸಿಕೊಳ್ಳಬೇಕೆಂಬ ಕಾರಣದಿಂದ ತನ್ನ ಮನೆಯ ಹೆಣ್ಣು ಮಕ್ಕಳನ್ನು ಮೊಗಲರಿಗೆ ಮದುವೆ ಮಾಡಿಕೊಟ್ಟಂತಹ ಸ್ವಾಭಿಮಾನ ಶೂನ್ಯ ರಾಜಪೂತನೊಂದಿಗೆ ನಾನು ಕುಳಿತು ಊಟ ಮಾಡುವುದಿಲ್ಲ”.

ಮಹಾರಾಣಾ ಪ್ರತಾಪರ ಉತ್ತರವನ್ನು ಕೇಳಿ ಮಾನಸಿಂಗನು ಕೋಪದಿಂದು ಊಟದ ತಟ್ಟೆಯನ್ನು ಅರ್ಧದಲ್ಲಿಯೇ ಬಿಟ್ಟು ಎದ್ದನು ಮತ್ತು ಹೇಳಿದನು, “ಮಹಾರಾಣಾ ಪ್ರತಾಪ! ಯುದ್ಧದಲ್ಲಿ ನಿನ್ನ ಸರ್ವನಾಶ ಮಾಡದಿದ್ದರೆ ನನ್ನ ಹೆಸರು ಮಾನಸಿಂಗನೇ ಅಲ್ಲ!”

ಸ್ವಲ್ಪ ಸಮಯದ ನಂತರ ಮಾನಸಿಂಗನು, ಅಕಬರನ ಮಗ ಸಲೀಂ ಮತ್ತು ಪ್ರಚಂಡ ಸೈನ್ಯದೊಂದಿಗೆ ಮಹಾರಾಣಾ ಪ್ರತಾಪರ ಮೇಲೆ ಯುದ್ಧಕ್ಕಾಗಿ ಹೊರಟನು.

ಸುದ್ದಿ ತಿಳಿದ ಕೂಡಲೇ ಮಹಾರಾಣಾ ಪ್ರತಾಪನು ತತ್ಪರತೆಯಿಂದ ಅರಾವಲಿ ಪರ್ವತದ ಮೇಲಿಂದ ಕೆಳಗೆ ಬರುತ್ತಿದ್ದ ಶತ್ರು ಸೈನ್ಯದ ಮೇಲೆ ದಾಳಿ ಮಾಡಿ ಅವರ ಅಧಿಕಾಂಶ ಸೈನಿಕರನ್ನು ಮಣ್ಣುಪಾಲು ಮಾಡಿದರು. ಮಹಾರಾಣಾ ಪ್ರತಾಪರ ಕತ್ತಿಯಿಂದ ಸಲೀಂನ ವಧೆಯಾಗಬೇಕಿತ್ತು ಆದರೆ ಆ ಹೊಡೆತವು ಸಲೀಂನ ಆನೆಗೆ ಬಿತ್ತು ಮತ್ತು ಸಲೀಂನು ಉಳಿದನು.

ಮಹಾರಾಣಾ ಭಯದಿಂದ ಮಾನಸಿಂಗನು ಸೈನ್ಯದ ಹಿಂದೆ ಅವಿತುಕೊಂಡಿದ್ದನು. ಮಹಾರಾಣಾ ಪ್ರತಾಪನು ತನ್ನ ಹೊಳೆಯುವ ಕತ್ತಿಯ ಸಹಾಯದಿಂದ ಶತ್ರುಗಳ ಜಾಲದಿಂದ ಹೊರಬರಲು ಪ್ರಯತ್ನಿಸುತ್ತಿದ್ದನು. ಅಷ್ಟರಲ್ಲೇ ಶತ್ರುಸೈನಿಕರ ಹೊಡೆತದಿಂದ ಮಹಾರಾಣಾ ಪ್ರತಾಪರ ಕುದುರೆ ‘ಚೇತಕ’ನ ಕಾಲಿಗೆ ಪೆಟ್ಟಾಯಿತು.

ಇಂತಹ ಸ್ಥಿತಿಯಲ್ಲೂ ಸಹ ಆ ಸ್ವಾಮಿನಿಷ್ಟ ಕುದುರೆಯು ತನ್ನ ಸ್ವಾಮಿಯ ಪ್ರಾಣವನ್ನು ಉಳಿಸಲು ಶತ್ರುಗಳ ಜಾಲದಿಂದ ಹೊರಬರಲು ಪ್ರಯತ್ನಿಸುತ್ತಿತ್ತು. ಅಷ್ಟರಲ್ಲೇ ದಾರಿಯಲ್ಲಿ ಒಂದು ಸಣ್ಣನದಿ ಎದುರಾಯಿತು. ಚೇತಕ ಆ ಸ್ಥಿತಿಯಲ್ಲೇ ತನ್ನ ಎಲ್ಲಾ ಶಕ್ತಿಯನ್ನು ಸೇರಿಸಿ ಒಂದೇ ಜಿಗಿತಕ್ಕೆ ನದಿಯನ್ನು ದಾಟಿತು, ಆದರೆ ಹೃದಯ ಬಡಿತವು ನಿಂತಿದ್ದರಿಂದ ಚೇತಕ ಅಲ್ಲೇ ಪ್ರಾಣ ಬಿಟ್ಟಿತು.

ಮಹಾರಾಣಾ ಪ್ರತಾಪರು ಹಿಂದೆ ತಿರುಗಿ ನೋಡಿದಾಗ ಅಕಬರನ ಸೈನ್ಯದಲ್ಲಿ ಸೇರಿದ್ದ ಅವನ ತಮ್ಮ ಶಕ್ತಿಸಿಂಗನು ನಾಲ್ಕು-ಐದು ಮೊಗಲ ಸೈನಿಕರನ್ನು ಹೊಡೆಯುತ್ತಿದ್ದನು. ಇದನ್ನು ನೋಡಿ ಮಹಾರಾಣಾ ಪ್ರತಾಪರು ಆಶ್ಚರ್ಯಚಕಿತರಾದರು.

ಅಷ್ಟರಲ್ಲೇ ಆ ಸೈನಿಕರನ್ನು ಸಾಯಿಸಿದ ಶಕ್ತಿಸಿಂಗನು ಮಹಾರಾಣಾ ಪ್ರತಾಪರ ಬಳಿಗೆ ಬಂದು ಅವರನ್ನು ಆಲಂಗಿಸಿಕೊಂಡು, “ಅಣ್ಣಾ, ನಾನು ಮೊಗಲರ ಸೈನ್ಯದಲ್ಲಿದ್ದೀನಿ, ಆದರೆ ನಿಮ್ಮ ಶೌರ್ಯ, ಪರಾಕ್ರಮದಿಂದ ನೀವೇ ನನ್ನ ಆದರ್ಶರಾಗಿದ್ದೀರಿ. ನಾನು ನಿಮ್ಮ ಕುದುರೆಗಿಂತಲೂ ತುಚ್ಛವಾಗಿದ್ದೇನೆ.”

ಮೇವಾಡದ ಇತಿಹಾಸವನ್ನು ಬರೆದ ಕರ್ನಲ್ ಟಾಂಡ್ ಮಹಾರಾಣಾಾ ಪ್ರತಾಪರ ಬಗ್ಗೆ ಹೇಳುತ್ತಾ, “ಉತ್ಕಟ ಮಹತ್ವಾಕಾಂಕ್ಷಿ, ಶಾಸನ ನಿಪುಣತೆ ಮತ್ತು ಅಪರಿಮಿತ ಸಂಪತ್ತಿನ ಬಲದಿಂದ ಅಕಬರನು ದೃಢ ನಿಶ್ಚಯಿ, ಧೈರ್ಯಶಾಲಿ, ಉಜ್ವಲ ಕೀರ್ತಿಮಾನ ಮತ್ತು ಸಾಹಸಿ ಮಹಾರಾಣಾ ಪ್ರತಾಪರ ಆತ್ಮಬಲವನ್ನು ಬೀಳಿಸಲು ಪ್ರಯತ್ನಿಸಿದನು, ಆದರೆ ಅದು ವಿಫಲವಾಯಿತು”.

ಕೃಪೆ: ಹಿಂದೂ ಜಾಗೃತಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]