ಹಾವೇರಿ: ದೇಶ, ಧರ್ಮ, ಗೋಮಾತೆ, ಮಾತೆಯರ ಕುರಿತು ಗೌರವಯುತ ಸಿದ್ದಾಂತ ಹೊಂದಿರುವ ಬಿಜೆಪಿ (BJP)ಯ ಜಿಲ್ಲಾ ಅಧ್ಯಕ್ಷನೋರ್ವ ಮಾತೃ ನಿಂದನೆ ಮಾಡಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕುರಿತು ಪ್ರತಿಭಟನೆ ವೇಳೆ ಅಸಭ್ಯ ಪದ ಬಳಸಿದ್ದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಡಿಕೆ ಶಿವಕುಮಾರ್ ಹೇಳಿಕೆ ಖಂಡಿಸಿ ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ ವೇಳೆ ನಾಲಿಗೆ ಹರಿಬಿಟ್ಟ ಮಾಜಿ ಶಾಸಕ ಹಾಗೂ ಹಾಲಿ ಬಿಜೆಪಿ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಪೂಜಾರ್, ಮಾತೃ ನಿಂದನೆ ಮಾಡಿದ್ದಾರೆ.
ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಸರ್ಕಲ್ ನಲ್ಲಿ ನಡೆಯುತ್ತಿರೋ ಪ್ರತಿಭಟನೆ ನಡೆಯುವ ವೇಳೆ, ಕಾಂಗ್ರೇಸ್ ವಿರುದ್ಧ ಘೋಷಣೆ ಕೂಗೊ ಬರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಕುರಿತು ಅಸಭ್ಯ ಮಾತೃ ನಿಂದನೆ ಪದ ಬಳಕೆ ಮಾಡಿದ್ದಾರೆ. ಅಲ್ಲದೆ ಬಳಿಕ ಭಾರತ್ ಮಾತಾ ಕಿ ಜೈ ಎಂದಿದ್ದಾರೆ.
ಈ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.