Rajanna U turn

ಹಾವು ಬಿಡ್ತೀನಿ ಅಂತೇಳಿ ಹಾವ್ರಾಣಿ ಬಿಟ್ಟ ರಾಜಣ್ಣ..!

ಬೆಂಗಳೂರು: ವಿಧಾನಸಭೆ ಅಧಿವೇಶನದಲ್ಲಿ ಹನಿಟ್ರ್ಯಾಪ್ ಹೇಳಿಕೆ ಸಂದರ್ಭದಲ್ಲಿ ತಾವು ಮಾಡಿದ್ದ ಹಲವು ಗಂಭೀರ ಆರೋಪಗಳ ಕುರಿತು ದೂರು ನೀಡುವುದಾಗಿ ಅಬ್ಬರಿಸಿದ್ದ ಸಚಿವ ಕೆ.ಎನ್.ರಾಜಣ್ಣ (KN Rajanna) ಪಕ್ಕಾ ಯೂ ಟರ್ನ್ ತೆಗೆದುಕೊಂಡಿದ್ದಾರೆ.

ಮಂಗಳವಾರ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ದೂರಿನ ಬದಲಿಗೆ ಕೇವಲ ಮನವಿ ಮಾಡುವ ಮೂಲಕ ಹಾವು ಬಿಡ್ತಿನಿ ಅಂತ ಹೇಳಿದ್ದವರು ಕೇವಲ ಹಾವ್ರಾಣಿ ಬಿಟ್ಟಿದ್ದಾರೆ.

ತಮ್ಮ ವಿರುದ್ಧದ ಹನಿಟ್ರ್ಯಾಪ್ ಯತ್ನದ ಕುರಿತು ಸದನದಲ್ಲಿ ವಿವರಣೆ ನೀಡುವ ವೇಳೆ ಕೆ.ಎನ್.ರಾಜಣ್ಣ ಅವರು, ಎಲ್ಲಾ ಪಕ್ಷಗಳಿಗೆ ಸೇರಿದ ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕ ರನ್ನು ಹನಿಟ್ರ್ಯಾಪ್‌ಗೆ ಒಳಪಡಿಸಲಾಗಿದೆ.

ಇಂತಹ 48 ನಾಯಕರ ಸೀಡಿ, ಪೆನ್‌ಡ್ರೈವ್ ಗಳಿವೆ. ರಾಜಕೀಯ ನಾಯಕರು ಮಾತ್ರವಲ್ಲ, ನ್ಯಾಯಾಧೀಶರು ಹನಿಟ್ರ್ಯಾಪ್‌ಗೆ ಒಳಗಾಗಿ ದ್ದಾರೆ ಎಂಬ ಅಬ್ಬರದ ಆರೋಪ ಮಾಡಿದ್ದರು.. ಅಲ್ಲದೆ, ತಮ್ಮನ್ನು ಹನಿಟ್ರ್ಯಾಪ್‌ಗೆ ಒಳಪಡಿಸುವ ಪ್ರಯತ್ನ ನಡೆದಿದ್ದು,ಈಬಗ್ಗೆ ಸಾಕ್ಷಿಯಿದೆ. ದಾಖಲೆ ಸಹಿತ ಈ ಬಗ್ಗೆ ದೂರು ನೀಡಲಿದ್ದು, ತನಿಖೆ ನಡೆಸುವಂತೆ ಒತ್ತಾಯಿಸಿದ್ದರು.

ಈ ತನಿಖೆಯು ನ್ಯಾಯಸಮ್ಮತವಾಗಿ ನಡೆಸುವ ಮೂಲಕ ಅದರ ಹಿಂದೆ ಯಾರಿದ್ದಾರೆ ಎಂಬುದನ್ನು ಪೊಲೀಸರು ಪತ್ತೆ ಮಾಡಬೇಕು ಎಂದು ಆಗ್ರಹಿಸಿದ್ದರು.

ಆದರೆ, ಇದೀಗ ಪೊಲೀಸ್ ದೂರು ನೀಡುವ ತಮ್ಮ ನಿಲುವಿನಿಂದ ಹಿಂದೆ ಸರಿದಿರುವ ಕೆ.ಎನ್.ರಾಜಣ್ಣ ಮಂಗಳವಾರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಮಾತ್ರ ನೀಡಿದ್ದಾರೆ ಎಂದು ವರದಿಯಾಗಿದೆ.

ಇನ್ನು ಈ ಮನವಿ ಪತ್ರದಲ್ಲಿ 48 ನಾಯಕರ ಸೀಡಿ ವಿಚಾರ, ನ್ಯಾಯಾಧೀಶರ ವಿಚಾರ ಸೇರಿ ತಾವು ಮಾಡಿದ್ದ ಗಂಭೀರ ಆರೋಪಗಳ ಬಗ್ಗೆ ಉಲ್ಲೇಖವನ್ನೇ ಮಾಡಿಲ್ಲವಂತೆ. ಅಷ್ಟೇ ಅಲ್ಲದೆ ಈ ಮೊದಲು ನ್ಯಾಯಾಂಗ ತನಿಖೆಯ ಆಗ್ರಹ ಮಾಡಿದ್ದ ಅವರು ಮನವಿಯಲ್ಲಿ ಹನಿಟ್ರ್ಯಾಪ್ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದಷ್ಟೇ ಕೋರಿದ್ದಾರೆ.

ಸಾಕ್ಷಿ ಇಲ್ಲ

ತಮ್ಮ ವಿರುದ್ದದ ಹನಿಟ್ರ್ಯಾಪ್ ಯತ್ನದ ಕುರಿತು ಸಾಕ್ಷಿಗಳಿವೆ ಎಂದು ಸದನದಲ್ಲಿ ಸಚಿವ ರಾಜಣ್ಣ ತಿಳಿಸಿದ್ದರು. ಅವೆಲ್ಲವನ್ನೂ ಗೃಹ ಸಚಿವರಿಗೆ ನೀಡುತ್ತೇನೆ ಎಂದು ಹೇಳಿದ್ದರು. ಆದರೆ, ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸುವಾಗ, ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿ ಯಾವುದೇ ದಾಖಲೆಗಳಿಲ್ಲ. ಬೆಂಗಳೂರಿನ ಸರ್ಕಾರಿ ನಿವಾಸದಲ್ಲಿ ಸಿಸಿ ಕ್ಯಾಮರಾ ಇಲ್ಲ.

ಹೀಗಾಗಿ ವಿಡಿಯೋ ಇಲ್ಲ. ಯಾರು ಬಂದು ಹೋಗುತ್ತಾರೆ ಎಂಬುದನ್ನು ಪತ್ತೆ ಮಾಡಲು ಸಾಧ್ಯವಿಲ್ಲ. ನನಗೆ ಫೋಟೋ ತೋರಿಸಿದರೆ ಹನಿಟ್ರ್ಯಾಪ್ ಮಾಡಲು ಯತ್ನಿಸಿದವರನ್ನು ಪತ್ತೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ರಾಜಣ್ಣ ಹೇಳಿಕೆ ಆರಂಭದಿಂದಲೂ ಹಲವು ಅನುಮಾನಗಳು ಸ್ವಪಕ್ಷಿಯರಲ್ಲಿಯೇ ಇತ್ತು ‌ ಏಕೆಂದರೆ ಅಂದು ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಪತ್ರ ಕಳುಹಿಸಿ ಹನಿ ಟ್ರಾಪ್ ಮಾಡುವಂತೆ ಆಡಳಿತ ಪಕ್ಷದ ಸಚಿವರೆ ಪುಸಲಾಯಿಸಿದ್ದರು. ಬಳಿಕ ರಾಜಣ್ಣ ಈ ರೀತಿ ಗಂಭೀರ ಆರೋಪ ಮಾಡಿದ್ದರು. ಆದರೆ ಈಗ ಎಲ್ಲವೂ ಟುಸ್ ಪಠಾಕಿ ಆದಂತೆ ಕಾಣುತ್ತಿದೆ.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]