RSS ban is a pipe dream; Yatnal

ಬಿಜೆಪಿ ಸಂಘಟನೆ ಕಾರ್ಯಕರ್ತರಿಂದಲೇ ಹೊರತು ಸ್ವಯಂಘೋಷಿತ ‘ಪೂಜ್ಯ’ ರಿಂದಲ್ಲ; ಯತ್ನಾಳ್ ವಾಗ್ದಾಳಿ

ಬೆಂಗಳೂರು: ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Basana gouda Patila Yatnal) ಹೇಳಿದ್ದಾರೆ.

ಬಿಜೆಪಿಯಿಂದ 6 ವರ್ಷಗಳ ಉಚ್ಚಾಟನೆ ಬಳಿಕ ಇಂದು ಟ್ವಿಟ್ ಮಾಡಿರುವ ಅವರು, ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ.

ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ.

ಪಕ್ಷದ ವಿರುದ್ದ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರ ಉಚ್ಚಾಟನೆ ಮಾಡದೆ, ಉತ್ತರ ಕರ್ನಾಟಕದ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಟೊಂಕಕಟ್ಟಿ ಕೆಲಸ ಮಾಡಿದ ನನ್ನಂತವರಿಗೆ ಉಚ್ಚಾಟನೆ ಮಾಡುವುದು ಪಕ್ಷದ ದ್ವಂದ್ವ ನೀತಿಗಳಿಗೆ ಹಿಡಿದ ಕೈಗನ್ನಡಿ.

ಕಲ್ಯಾಣ ಕರ್ನಾಟಕದಲ್ಲಿ ಸಧೃಡವಾಗಿದ್ದ ಪಕ್ಷ ಲೋಕ ಸಭಾ ಚುನಾವಣೆಯಲ್ಲಿ ಮಕಾಡೆ ಮಲಗಿದ್ದು ಯಾರ ‘ಅಡ್ಜಸ್ಟ್ಮೆಂಟ್ ರಾಜಕಾರಣದಿಂದ’ ಎಂದು ಪಕ್ಷದ ಪ್ರಮುಖರು ವಿಶ್ಲೇಷಿಸಲಿ.

ಬಿ.ಬಿ.ಶಿವಪ್ಪ, ಮಲ್ಲಿಕಾರ್ಜುನಪ್ಪ, ಡಾ ವಿ.ಎಸ್.ಆಚಾರ್ಯರು ಸೇರಿದಂತೆ ಪಕ್ಷದ ಅನೇಕ ಧುರೀಣರು, ಸಾವಿರಾರು ಕಾರ್ಯಕರ್ತರು ಪಕ್ಷವನ್ನು ಸಂಘಟಿಸಿದ ಪರಿಣಾಮದಿಂದಲೇ ಪಕ್ಷ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದ್ದು.

ಬಿಡಿಗಾಸಿಲ್ಲದೇ, ಕಾರ್ಯಕರ್ತರ ಓಡಾಟ, ಉಪಹಾರಕ್ಕೂ ಹಣವಿಲ್ಲದಿರುವ ಕಾಲಘಟ್ಟದಲ್ಲಿ ದಿವಂಗತ ಮಲ್ಲಿಕಾರ್ಜುನಪ್ಪನವರು ತಮ್ಮ ಸ್ವಂತ ಸಂಪನ್ಮೂಲದಿಂದ ಪಕ್ಷವನ್ನು ಮುನ್ನೆಡೆಸಿ ಕಾರ್ಯಕರ್ತರ ಮನೋಬಲವನ್ನು ಹೆಚ್ಚಿಸಿ ಸಂಘಟನೆಗೆ ಕಾರಣವಾದರು.

ಮಾತು ಕಡಿಮೆಯಾದರೂ ತಮ್ಮ ಕೆಲಸದಿಂದ ಕರಾವಳಿಯಲ್ಲಿ ಪಕ್ಷವನ್ನು ಸಂಘಟಿಸಿದ್ದು ಪಕ್ಷ ಮರೆಯಲಾಗದ ಮಾಣಿಕ್ಯ ಡಾ. ವಿ.ಎಸ್.ಆಚಾರ್ಯರು. ಆಯಕಟ್ಟಿನ ಸ್ಥಾನದಲ್ಲಿದ್ದರೂ ಆಚಾರ್ಯರ ಕುಟುಂಬದವರು ಯಾರೂ ಸಹ ರಾಜಕಾರಣಕ್ಕೆ ಬರಲಿಲ್ಲ ಎಂಬುದು ಹಲವರಿಗೆ ಗೊತ್ತಿಲ್ಲ.

ಹಿಂದುತ್ವವಾದ ಬಗ್ಗೆ ರಾಜಿ ಮಾಡಿಕೊಳ್ಳದೆ, ಕುಟುಂಬ ರಾಜಕಾರಣದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿದ್ದ ಈಶ್ವರಪ್ಪನವರನ್ನು ಹೊರಗಿಟ್ಟರು. ನಿಸ್ವಾರ್ಥ ಕಾರ್ಯಕರ್ತರು, ತನು-ಮನ-ಧನದಿಂದ ದುಡಿದ ಮುಖಂಡರಿಂದ ಪಕ್ಷದ ಸಂಘಟನೆಯಾಯಿತೇ ಹೊರತು ಸ್ವಯಂಘೋಷಿತ ‘ಪೂಜ್ಯ’ ರಿಂದಲ್ಲ.

ರಾಜ್ಯದಲ್ಲಿ ಪ್ರ ಪ್ರಥಮ ಬಾರಿಗೆ ವಕ್ಫ್ ಹೋರಾಟಕ್ಕೆ ಧರಣಿ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದು ನಾವೇ, ವಾಲ್ಮೀಕಿ ಹಗರಣ, ದಲಿತರಿಗೆ SCSP/TSP ಅನುದಾನದ ದುರ್ಬಳಕೆಯನ್ನು ಖಂಡಿಸಿದ್ದು, ಹೋರಾಟ ರೂಪಿಸಿದ್ದು, ವಕ್ಫ್ ವಿರುದ್ಧ ನಾವು ಮಾಡಿದ್ದ ಮಾಹಿತಿ ಸಂಗ್ರಹಕ್ಕೆ ಜೆ.ಪಿ.ಸಿ ಅಧ್ಯಕ್ಷ ಜಗದಂಬಿಕಾ ಪಾಲ್ ಅವರು ಪ್ರಶಂಸಿಸಿದ್ದರು.

ಪ್ರತಿ ಬಾರಿ ಅಧಿವೇಶನ ನಡೆದಾಗಲೂ ಉತ್ತರ ಕರ್ನಾಟಕಕ್ಕೆ ಆಗುತ್ತಿರುವ ಮಲತಾಯಿ ಧೋರಣೆಯನ್ನು, ಕೃಷ್ಣ ಯೋಜನೆಯ ವಿಳಂಬದ ಬಗ್ಗೆ ಧ್ವನಿ ಎತ್ತಿದ್ದು ನಾವೇ, ಕರ್ನಾಟಕ ಲೋಕ ಸೇವಾ ಆಯೋಗದಲ್ಲಿರುವ ಭ್ರಷ್ಟರನ್ನು ಕಿತ್ತೊಗೆಯಲು ಸ್ಪರ್ಧಾರ್ಥಿಗಳ ಜೊತೆಗೆ ನಿಂತಿದ್ದು ನಾವೇ.

ಬಾಣಂತಿಯರ ಸಾವಿನ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದು ನಾನೇ. ಪಕ್ಷದಲ್ಲಿ ಆಗಬೇಕಾದ ಕೆಲ ಬದಲಾವಣೆಗಳು, ಸುಧಾರಣೆಗಳು ಸೂಚಿಸಿದಕ್ಕೆ ನಮ್ಮ ನಿಲುವು ಕೆಲವರಿಗೆ ‘ಅಪಥ್ಯ’ ವಾಗಿದೆ.

ಅಡ್ಜಸ್ಟ್ಮೆಂಟ್ ರಾಜಕಾರಣ ನಿಲ್ಲದಿದ್ದರೆ ಪಕ್ಷ ಮಕಾಡೆ ಮಲಗುವುದು ಖಚಿತ. ಕುಟುಂಬ ರಾಜಕಾರಣಕ್ಕೆ ಕಡಿವಾಣ ಹಾಕಿ, ನಿಜವಾದ ಜನ ಪರ ಕಾಳಜಿ ಇರುವ ನಾಯಕರಿಗೆ ಪಕ್ಷ ಅವಕಾಶ ನೀಡಬೇಕು. ಕಾಟಾಚಾರಕ್ಕೆ ಸರ್ಕಾರದ ನೀತಿಗಳನ್ನು ಖಂಡಿಸಿ ಸಂಜೆ ವೇಳೆ ಅವರ ಮನೆಯಲ್ಲಿ ಭೋಜನ ಕೂಟದಲ್ಲಿ ಭಾಗವಹಿಸುವ ನಾಯಕರ ಅವಶ್ಯ ಪಕ್ಷಕ್ಕಿಲ್ಲ.

Nation First, Party next, Self last ಎಂಬ ತತ್ವದಡಿ ಕೆಲಸ ಮಾಡುವ ನನ್ನ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.

ರಾಜಕೀಯ

ಮೋದಿ ಮೇಲೆ ಟ್ರಂಪ್ ಹಿಡಿತ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ಮೋದಿ ಮೇಲೆ ಟ್ರಂಪ್ ಹಿಡಿತ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ಮಂಗಳವಾರವಷ್ಟೆ ಕೇಂದ್ರ ಸರ್ಕಾರದ ವೈಪಲ್ಯಗಳು, ಅಮೇರಿಕಾ ಜೊತೆ ಒಪ್ಪಂದದಿಂದ ಭಾರತದ ಮೇಲೆ ಉಂಟಾಗ ಬಹುದಾದ ಪರಿಣಾಮಗಳ ಕುರಿತು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ (AKhilesh yadhav), ಮೋದಿ ಸರ್ಕಾರದ ಕುರಿತು ಹರಿಹಾಯ್ದಿದ್ದ ಬೆನ್ನಲ್ಲೇ,

[ccc_my_favorite_select_button post_id="119331"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!