Increase in milk price; R. Ashoka said that BJP will fight

ಹಾಲಿನ ದರ ಏರಿಕೆ; ಬಿಜೆಪಿಯಿಂದ ಹೋರಾಟವೆಂದ ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂ. ಏರಿಸಿ ಜನರನ್ನು ಲೂಟಿ ಮಾಡಲಾಗಿದೆ. ಬಜೆಟ್‌ನಲ್ಲಿ ಯಾವುದೇ ತೆರಿಗೆಗಳನ್ನು ಹಾಕದೆ, ಹಿಡನ್‌ ಅಜೆಂಡಾ ಮಾಡಿ ಬಳಿಕ ತೆರಿಗೆ/ ದರ ಏರಿಕೆ ಮಾಡಲಾಗಿದೆ. ಪಾಪರ್‌ ಆಗಿಲ್ಲವೆಂದರೆ ಯಾಕಿಷ್ಟು ದರ ಏರಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R.Ashoka) ಪ್ರಶ್ನೆ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಸುಳ್ಳು, ಮುಂದೆ ಮಾರಿಹಬ್ಬ ಇದೆ ಎಂದು ಎಚ್ಚರಿಕೆ ನೀಡಿದ್ದೆ. ಬಜೆಟ್‌ನಲ್ಲೇ ತೆರಿಗೆಗಳನ್ನು ಹಾಕಬೇಕಿತ್ತು. ಆದರೆ ಬಜೆಟ್‌ ಮುಗಿದ ನಂತರ ತೆರಿಗೆ, ದರ ಏರಿಕೆ ಮಾಡಿದ್ದಾರೆ.

ಬಜೆಟ್‌ ನಂತರ ಎಲ್ಲ ಮಾಧ್ಯಮಗಳಲ್ಲಿ ಶಹಭಾಸ್‌ಗಿರಿ ಬರಬೇಕೆಂದು ಈ ರೀತಿ ಮೋಸ ಮಾಡಿದ್ದಾರೆ. ಮೋಸ ಮಾಡುವುದರಲ್ಲಿ ಸಿದ್ದರಾಮಯ್ಯ ನಂ.1 ಆಗಿದ್ದಾರೆ. ಧೈರ್ಯ ಇದ್ದಿದ್ದರೆ ತೆರಿಗೆ ಹೆಚ್ಚಳ ಕುರಿತು ಬಜೆಟ್‌ನಲ್ಲೇ ಘೋಷಿಸಬೇಕಿತ್ತು ಎಂದರು.

ಇಡೀ ಆರ್ಥಿಕತೆ ವಿದ್ಯುತ್‌ ಹಾಗೂ ಪೆಟ್ರೋಲ್‌ ಮೇಲೆ ಅವಲಂಬಿತವಾಗಿದೆ. ಇದರ ದರ ಏರಿಕೆಯಾದರೆ ಎಲ್ಲ ವಸ್ತುಗಳ ದರ ಹೆಚ್ಚಾಗುತ್ತದೆ. ಕಾಂಗ್ರೆಸ್‌ ಸರ್ಕಾರ ಕೊಡುವ 2,000 ರೂಪಾಯಿಗಾಗಿ ಜನರು ಬವಣೆ ಅನುಭವಿಸಬೇಕಾಗಿದೆ.

ಗ್ಯಾರಂಟಿ ಅನುಷ್ಠಾನ ಸಮಿತಿ ವೇಸ್ಟ್‌ ಬಾಡಿಯಾಗಿದ್ದು, ಅದರ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರಿಗೆ ಅನವಶ್ಯಕವಾಗಿ 150 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಈ ಸಮಿತಿ ರದ್ದು ಮಾಡಿದ್ದರೆ ಇಷ್ಟು ಹಣ ಉಳಿಸಬಹುದಿತ್ತು. ಒಂದು ಕಡೆ ಪಕ್ಷಕ್ಕಾಗಿ ತೆರಿಗೆ ಹಣ ಬಳಸಲಾಗುತ್ತಿದೆ. ಮತ್ತೊಂದು ಕಡೆ ಜನರಿಗೆ ಹೊರೆ ಹಾಕಲಾಗುತ್ತಿದೆ ಎಂದು ದೂರಿದರು.

ಯುಗಾದಿ ಹೊಸ ವರ್ಷ ಬರುವ ಸಮಯದಲ್ಲೇ ತೆರಿಗೆ ಹಾಕಲಾಗಿದೆ. ಹಬ್ಬಕ್ಕೆ ಬಳಸುವ ಹಾಲಿಗೂ ದರ ಏರಿಕೆಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ಸಚಿವ ರಾಜಣ್ಣ ಅವರು ಉಡಾಫೆ ಮಾತಾಡಿದ್ದಾರೆ. ಚುನಾವಣೆಗೆ ಮೊದಲು ಎಲ್ಲವೂ ಫ್ರೀ ಎಂದು ಹೇಳಿ, ನಂತರ ಎಲ್ಲ ದರ ಏರಿಕೆ ಮಾಡಿದ್ದಾರೆ. ಈ 20 ತಿಂಗಳಲ್ಲಿ ಯಾವುದೇ ಜಲಾಶಯದ ಎತ್ತರಿಸಿಲ್ಲ.

ಮೇಕೆದಾಟು ಯೋಜನೆ ಜಾರಿಯಾಗಿಲ್ಲ. ಬೆಂಗಳೂರಿನಲ್ಲಿ ಕಸದ ಮೇಲೆ ಹಸಿರು ಸೆಸ್‌ ಹಾಕಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕಗಳನ್ನು ಹೆಚ್ಚಿಸಲಾಗಿದೆ. ಈಗ ಬ್ರ್ಯಾಂಡ್‌ ಬೆಂಗಳೂರು ಹೋಗಿ ದುಬಾರಿ ಬೆಂಗಳೂರು ಸೃಷ್ಟಿಯಾಗಿದೆ ಎಂದರು.

ಅಳಿಯ ಅಲ್ಲ ಮಗಳ ಗಂಡ ಎಂಬಂತೆ ಕೋರ್ಟ್‌ ಆದೇಶದಿಂದ ವಿದ್ಯುತ್‌ ದರ ಏರಿಸಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ನೌಕರರ ಪಿಂಚಣಿಯನ್ನು ಸರ್ಕಾರ ನೀಡುವ ಬದಲು ಜನರೇ ನೀಡಬೇಕಾಗಿದೆ. ಇದರಿಂದಾಗಿ ಎಲ್ಲ ವಸ್ತುಗಳ ಬೆಲೆಯೂ ಏರಿಕೆಯಾಗಲಿದೆ. ಜನರು ಇವರನ್ನು ನಂಬಿ ಮತ ನೀಡಿದ್ದರೆ, ಬದುಕು ನರಕ ಮಾಡಿದ್ದಾರೆ ಎಂದರು.

ಬಿಜೆಪಿಯಿಂದ ಹೋರಾಟ

ದರ ಏರಿಕೆ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡಲಿದೆ. ಯುಗಾದಿ ಹಬ್ಬದ ಕಳೆದ ನಂತರ ಇದರ ದಿನಾಂಕ ನಿಗದಿ ಮಾಡಲಾಗುವುದು. ಈವರೆಗೆ ಹೆಚ್ಚು ಮಾಡಿದ 9 ರೂ. ನಲ್ಲಿ ಲಾಭವನ್ನು ರೈತರಿಗೆ ನೀಡಿಲ್ಲ. ಪ್ರೋತ್ಸಾಹಧನವನ್ನು ಇನ್ನೂ ಬಾಕಿ ಉಳಿಸಿಕೊಳ್ಳಲಾಗಿದೆ.

ಈಗ ಹೆಚ್ಚು ಮಾಡಿದ ದರದಲ್ಲಿ ಎಷ್ಟು ಸರ್ಕಾರಕ್ಕೆ ಹೋಗಲಿದೆ ಎಂಬುದು ಗೊತ್ತಿಲ್ಲ. ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಪ್ರೋತ್ಸಾಹಧನ ಹೆಚ್ಚಳ ಕುರಿತು ಘೋಷಣೆ ಮಾಡಿತ್ತು. ಅದನ್ನು ಇನ್ನೂ ಜಾರಿ ಮಾಡಿಲ್ಲ ಎಂದರು.

ಬಿಜೆಪಿ ಅವಧಿಯಲ್ಲಿ ಮಾರ್ಗಸೂಚಿ ದರ ಇಳಿಸಲಾಗಿತ್ತು. ಬಸ್‌ ಟಿಕೆಟ್‌ ದರ, ನೀರಿನ ದರ ಏರಿಸಿರಲಿಲ್ಲ. ಹಿಂದಿನ ಯಾವುದೇ ಮುಖ್ಯಮಂತ್ರಿ ಮಾಡದಷ್ಟು ಸಾಲವನ್ನು ಸಿಎಂ ಸಿದ್ದರಾಮಯ್ಯ ಒಬ್ಬರೇ ಮಾಡಿದ್ದಾರೆ. ಅಂದರೆ 65% ನಷ್ಟು ಸಾಲವನ್ನು ಇವರೊಬ್ಬರೇ ಮಾಡಿದ್ದಾರೆ ಎಂದರು.

ಬಿಜೆಪಿಯಲ್ಲಿ ನಾವೆಲ್ಲರೂ ಒಂದಾಗಿ ಹೋಗಬೇಕು ಎಂಬ ಅಭಿಪ್ರಾಯ ನನ್ನದು. ಪಕ್ಷದ ಹಿರಿಯರು ಕೈಗೊಂಡ ತೀರ್ಮಾನಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ. ಯಾರೂ ಕೂಡ ಪಕ್ಷದ ವಿರುದ್ಧವಾಗಿ ಮಾತಾಡಬಾರದು ಎಂದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]