Karnataka BJP is in ICU, Amit Shah should know the reality; Yatnal

ಯತ್ನಾಳ್ ಉಚ್ಚಾಟನೆ: ಹಿಂದೂಗಳಿಂದ ಬಿಜೆಪಿ, ಬಿಜೆಪಿಯಿಂದ ಹಿಂದೂಗಳಲ್ಲ – ಸನಾತನ

ಬೆಂಗಳೂರು: ಬಿಜೆಪಿಯಿಂದ (BJP) ಆರು ವರ್ಷಗಳ ಕಾಲ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basana Gouda Patila Yatnal) ಉಚ್ಚಾಟನೆ ಕುರಿತು ಬಹುತೇಕ ಹಿಂದೂ ಕಾರ್ಯಕರ್ತರು ಹೈಕಮಾಂಡ್ ನಿಲುವನ್ನು ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ತಮ್ಮ ತಮ್ಮ ಖಾತೆಗಳಲ್ಲಿ ಈ ವಿಚಾರ ಚರ್ಚಿಸಿ ಪ್ರಶ್ನೆ ಎತ್ತಿರುವ ಬಿಜೆಪಿ ಕಾರ್ಯಕರ್ತರು, ಸ್ವಾಭಿಮಾನಿ ಕಾರ್ಯಕರ್ತರೆಲ್ಲರೂ ಸಾಮೂಹಿಕ ರಾಜೀನಾಮೆ ನೀಡಿ ಹೊರಬರಬೇಕು. ಹಿಂದುತ್ತದ ಪರ ಇರುವ ಬಿಜೆಪಿ ಕಾರ್ಯಕರ್ತರು, ಪದಾಧಿಕಾರಿಗಳು ರಾಜೀನಾಮೆ ನೀಡಿ ಹೊರಬರಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕ ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಷನ್ ಟ್ವಿಟ್ಟರ್ ಖಾತೆಯಲ್ಲಿ ಯತ್ನಾಳ್ ಅವರನ್ನು ಬೆಂಬಲಿಸಿ ಟ್ವಿಟ್ ಹಾಕಲಾಗಿದೆ. ಅದರಲ್ಲಿ, ವಿದ್ಯಾರ್ಥಿಗಳಿಗೆ ಅನ್ಯಾಯವಾದಾಗ, ಕೆಪಿಎಸ್‌ಸಿ ಭ್ರಷ್ಟರ ವಿರುದ್ಧ ನಮ್ಮ ಜತೆ ನಿಂತಿದ್ದ ಯತ್ನಾಳ್ ಅವರಿಗೆ ನಮ್ಮ ಬೆಂಬಲ ಎಂದೆಂದಿಗೂ ಇದೇ ಇರುತ್ತದೆ.

ಒಂದು ಪಾರ್ಟಿ ನ್ಯಾಯದ ಪರವಾಗಿ, ನಿಲ್ಲುತ್ತಿದ್ದ ನಾಯಕನನ್ನು ಉಚ್ಚಾಟನೆ ಮಾಡಿದರೆ ಬಿಜೆಪಿ ಸರಿಯಿಲ್ಲ ಎಂದು ಎನಿಸುತ್ತಿದೆ. ಹೊಸ ಅಧ್ಯಾಯ ಶುರುವಾಗಲಿ ಬಸನಗೌಡ ಪಾಟೀಲ್ ಅವರದ್ದೇ ಪ್ರತ್ಯೇಕ ಬಿಜೆಪಿ ಎಂದು ಆಗ್ರಹಿಸಿದೆ.

ಇನ್ನೂ ಸನಾತನ ಎಂಬ ಟ್ವಿಟ್ಟರ್ ಖಾತೆಯಲ್ಲಿ ಹಿಂದೂಗಳಿಂದ ಬಿಜೆಪಿ, ಬಿಜೆಪಿಯಿಂದ ಹಿಂದೂಗಳಲ್ಲ. ಬಸನಗೌಡ ಯತ್ನಾಳ್ ಅವರನ್ನು ಹೊಂದಾಣಿಕೆ ರಾಜಕಾರಣಿಗಳು, ವಂಶಪಾರಂಪರ್ಯ ರಾಜಕಾರಣಿಗಳು ತುಳಿದಿರಬಹುದು. ಆದರೆ ಹಿಂದೂಗಳ ಒಗ್ಗಟ್ಟನ್ನು ತುಳಿಯಲಾಗುವುದಿಲ್ಲ ಎಂದಿದೆ.

ಯತ್ನಾಳ್ ಬಣದ ಸಭೆ

ಯತ್ನಾಳ್ ಉಚ್ಚಾಟನೆ ಕ್ರಮವನ್ನು ಕೇಂದ್ರದ ವರಿಷ್ಟರು ಮರುಪರಿಶೀಲನೆ ಮಾಡಬೇಕು ಎಂಬ ಕೂಗು ಹೆಚ್ಚಾಗಿದ್ದು, ಶಿಸ್ತು ಕ್ರಮ ವಿರೋಧಿಸಿ ಬಿಜೆಪಿ ಕಾರ್ಯಕರ್ತರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ನಡುವೆ ಯತ್ನಾಳ್ ಅವರೊಂದಿಗೆ ನಾವಿದ್ದೇವೆ ಎಂಬ ಸಂದೇಶ ಸಾರಲು ಯತ್ನಾಳ್ ಬಣದ ನಾಯಕರು ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ.

ಯತ್ನಾಳ್‌ ಉಚ್ಚಾಟನೆ ಕ್ರಮ ಪ್ರಶ್ನಿಸಲು ರೆಬೆಲ್ ನಾಯಕರುಗಳು ತಯಾರಿ ನಡೆಸಿದ್ದಾರೆ. ಅಲ್ಲದೆ, ಉಚ್ಚಾಟನೆ ಬಳಿಕ ಯಾರನ್ನೂ ಭೇಟಿ ಮಾಡದ ಯತ್ನಾಳ್ ತಮ್ಮ ಬಣದ ನಾಯಕರ ಜತೆಗೆ ಸಭೆ ಮಾಡಿದ್ದಾರೆ.

ಮಾಜಿ ಶಾಸಕ ಕುಮಾ‌ರ್ ಬಂಗಾರಪ್ಪ ಅವರ ಸದಾಶಿವ ನಗರದ ನಿವಾಸದಲ್ಲಿ ಸಭೆ ನಡೆಸಲು ತೀರ್ಮಾನಿಸಲಿತ್ತಾ ದರೂ ಅಂತಿಮ ಹಂತದಲ್ಲಿ ಬೆಂಗಳೂರಿನ ಯು.ಬಿ.ಸಿಟಿಯಲ್ಲಿರುವ ಮಾಜಿ ಸಂಸದ ಜಿ. ಎಂ.ಸಿದ್ದೇಶ್ವರ್ ಅವರ ನಿವಾಸದಲ್ಲಿ ಶುಕ್ರವಾರ ಸಭೆ ನಡೆಸಲಾಗಿದೆ. ಸಭೆಯಲ್ಲಿ ರಮೇಶ್ ಜಾರಕಿ ಹೊಳಿ, ಜಿ.ಎಂ.ಸಿದ್ದೇಶ್ವರ್, ಕುಮಾರ್ ಬಂಗಾ ರಪ್ಪ, ಎನ್.ಆರ್.ಸಂತೋಷ್ ಸೇರಿದಂತೆ ಹಲ ವರು ಉಪಸ್ಥಿತರಿದ್ದರು.

ಸಭೆಯ ಬಳಿಕ ಮಾತನಾಡಿದ ಮಾಜಿ ಸಚಿವ ಕುಮಾರ ಬಂಗಾರಪ್ಪ, 6 ವರ್ಷಗಳ ಯತ್ನಾಳ್ ಉಚ್ಚಾಟನೆ ನೋವು ತರಿಸಿದೆ. ಹಾಗಂತ ವರಿಷ್ಠರ ನಿರ್ಧಾರ ಪ್ರಶ್ನಿಸುವುದಿಲ್ಲ. ಈ ಬಗ್ಗೆ ಎಲ್ಲರೂ ಕೂತು ಚರ್ಚೆ ಮಾಡಿದ್ದೇವೆ.

ಶೋಕಾಸ್ ನೋಟಿ ಸ್‌ಗೆ ಉತ್ತರಿಸಲು ಬಿ. ಬಿ.ಪಿ.ಹರೀಶ್ ಅವರಿಗೆ ಇಂದು (ಶುಕ್ರವಾರ) ಅಂತಿಮ ದಿನ. ಅವರು ಹೇಗೆ ಉತ್ತರ ಕೊಡಬೇಕು ಎಂಬ ಬಗ್ಗೆ ಮಾರ್ಗ ದರ್ಶನ ಮಾಡಲಾಗಿದೆ. ಕಾನೂನು ತಂಡದ ಸಲಹೆ ಜತೆಗೆ ಮಾರ್ಗದರ್ಶನ ಮಾಡಿದ್ದೇವೆ.

ನಾವು ಬಹಳಷ್ಟು ಬಾರಿ ವರಿಷ್ಠರಿಗೆ ಹೇಳಿದ್ದೇವೆ. ಆದರೆ ಆಘಾತದ ರೀತಿಯಲ್ಲಿ ಕ್ರಮ ಮಾಡಿದ್ದಾರೆ. ಹೊಸ ಪಕ್ಷ ಸ್ಥಾಪನೆ ಅಥವಾ ಬೇರೆ ಯಾವುದೇ ರೀತಿಯ ಆಲೋಚನೆ ಮಾಡಿಲ್ಲ.

ನಾವು ಏನು ಕೇಳಿದ್ದೀವಿ ಅದಕ್ಕೆ ವರಿಷ್ಠರು ಸ್ಪಂದಿಸಿ ಆದಷ್ಟು ಬೇಗ ನಮಗೆ ಒಳ್ಳೆಯ ಸುದ್ದಿ ಕೊಡುವ ನಿರೀಕ್ಷೆ ಇದೆ. ಉಚ್ಚಾಟನೆಯನ್ನು ಹೈಕಮಾಂಡ್ ಮರುಪರಿಶೀಲನೆ ಮಾಡಬೇಕು ಎಂದರು‌.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!