Doddaballapura: KSRTC bus enroute cut..! 30 passengers escaped..

Doddaballapura: ಮಾರ್ಗ ಮಧ್ಯೆ KSRTC ಬಸ್ ಎನ್‌ರಾಡ್ ಕಟ್..! 30 ಪ್ರಯಾಣಿಕರು ಪಾರು..

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಸಂಚರಿಸುವ KSRTC ಬಸ್ಸುಗಳ ದುಸ್ಥಿತಿಯನ್ನು ಹೇಳುವವರು ಕೇಳುವವರು ಯಾರಾದ್ರೂ ಇದ್ದಾರೆಯೇ ಎಂಬ ಪ್ರಶ್ನೆ ತಾಲೂಕಿನ ಜನರನ್ನು ಕಾಡುತ್ತಿದೆ.

ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರದೆ ವಿದ್ಯಾರ್ಥಿಗಳು, ಉದ್ಯೋಗಿಗಳು ಪ್ರತಿ ನಿತ್ಯ ಪರದಾಡಬೇಕಿರುವುದು ಸರ್ವೆ ಸಾಮಾನ್ಯ ವಿಷಯವಾಗಿದ್ದು, ಚುನಾವಣೆ ಸಂದರ್ಭದಲ್ಲಿ ದೊಡ್ಡ ಮಟ್ಟದಲ್ಲಿ ದನಿ ಎತ್ತಿದವರು, ಈಗ ಯಾವುದೇ ಅವಘಡ ಸಂಭವಿಸಿದರು, ಏನೇ ತೊಂದರೆ, ಸಮಸ್ಯೆ ಎದುರಾದರು ಮಾತೇ ಆಡುತ್ತಿಲ್ಲ ಎಂಬುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಏಕೆಂದರೆ ಕೆಎಸ್‌ಆರ್‌ಟಿಸಿ ಬಸ್ ನಿರ್ವಹಣೆ ಲೋಪ ಪದೇ ಪದೇ ತಾಲೂಕಿನ ಜನರ ತಾಳ್ಮೆ ಕೆಡಿಸುತ್ತಿದೆ. ಎಲ್ಲದರಲ್ಲಿ ಕೆಟ್ಟು ನಿಲ್ಲುವ ಬಸ್ಸುಗಳು ಪ್ರಯಾಣಿಕರನ್ನು ನಿಗದಿತ ಸಮಯಕ್ಕೆ ಕರೆದೊಯ್ಯಲು ವಿಫಲವಾಗಿ, ಇದರಿಂದಾಗಿ ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರು ಪರದಾಡುವಂತಾಗಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

ಇದಕ್ಕೆ ಪೂರಕ ಎಂಬಂತೆ ಇಂದು (ಗುರುವಾರ) ಸಂಜೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ದೊಡ್ಡ ಮಟ್ಟದಲ್ಲಿ ಸಂಭವಿಸಬಹುದಾಗಿದ್ದ ಪ್ರಮಾದ ಸಾರ್ವಜನಿಕರ ಕಾಳಜಿಯಿಂದ ತಪ್ಪಿದೆ.

ಹೌದು ಗೊರವನಹಳ್ಳಿ ಮತ್ತು ದೊಡ್ಡಬಳ್ಳಾಪುರ ನಡುವೆ ಸಂಚರಿಸುವ ರೂಟ್ ನಂಬರ್ 40 ರ ಕೆಎಸ್‌ಆರ್‌ಟಿಸಿ ಬಸ್ ಇಂದು ಸಂಜೆ ಗೊರವನಹಳ್ಳಿಯಿಂದ ದೊಡ್ಡಬಳ್ಳಾಪುರಕ್ಕೆ ತೆರಳುವ ವೇಳೆ ಮಾರ್ಗ ಮದ್ಯದಲ್ಲಿ ಎನ್‌ರಾಡ್ ಕಟ್ ಆಗಿದ್ದು ಆತಂಕವನ್ನು ಸೃಷ್ಟಿಸಿದೆ.

ದೊಡ್ಡಬಳ್ಳಾಪುರ ಹೊಸಹಳ್ಳಿ ನಡುವಿನ ದೊಡ್ಡಹಳ್ಳದ ಬಳಿ ಬಸ್ ಎನ್‌ರಾಡ್ ಕಟ್ಟಾದರು ಸಾಗುತ್ತಿರುವುದನ್ನು ಕಂಡ ಮೊಪೆಡ್‌ನಲ್ಲಿ ಸಾಗುತ್ತಿದ್ದವರು ಚಾಲಕನ ಗಮನಕ್ಕೆ ತಂದಿದ್ದಾರೆ. ಕೂಡಲೇ ಚಾಲಕ ಬಸ್ಸನ್ನು ನಿಲ್ಲಿಸಿದ್ದಾರೆ.

ಬಸ್ಸಿನಲ್ಲಿ ಸುಮಾರು 30 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಚಾಲಕ ಬಸ್ ನಿಲ್ಲಿಸದೇ ಹೋಗಿದ್ದರೆ, ಬಸ್ ನಿಯಂತ್ರಣ ತಪ್ಪಿ ದೊಡ್ಡ ಮಟ್ಟದ ಅವಘಡ ಸಂಭವಿಸುವ ಸಾಧ್ಯತೆ ಇತ್ತು ಎಂದು ಪ್ರಯಾಣಿಕರು ಆತಂಕ ತೋಡಿಕೊಂಡಿದ್ದಾರೆ.

ನಂತರ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಬದಲಿ ಬಸ್ ಮೂಲಕ ಕಳುಹಿಸಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ಸಂಚರಿಸುತ್ತಿರುವ ಬಹುತೇಕ ಬಸ್ಸುಗಳು ಲಕ್ಷಾಂತರ ಕಿಮೀ ಪ್ರಯಾಣಿಸಿ ಬಸವಳಿದವುಗಳಾಗಿದ್ದು, ಅವುಗಳಿಗೆ ಬಣ್ಣ ಬಳಿದು ಗ್ರಾಮಾಂತರ ಪ್ರದೇಶಗಳಿಗೆ ಕಳುಹಿಸಲಾಗುತ್ತಿದೆ ಎಂಬುದು ಬಹುತೇಕರ ಆರೋಪವಾಗಿದೆ.

ಈ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ದೂರು ನೀಡಲು ವಿದ್ಯಾರ್ಥಿಗಳು ಸಿದ್ದತೆ ನಡೆಸಿದ್ದಾರೆಂದು ತಿಳಿದುಬಂದಿದೆ.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!