Daily story: Bhishma

ಹರಿತಲೇಖನಿ ದಿನಕ್ಕೊಂದು ಕಥೆ: ಭೀಷ್ಮ

Daily story: ಭೀಷ್ಮನಿಗೆ ಮಾನವ ಜನ್ಮದಿಂದ ಮುಕ್ತಿಕೊಡುವ ಆ ದಿನ ಬಂದೊದಗಿದ ಕೂಡಲೆ ಪಾಂಡವರು ಧೃತರಾಷ್ಟ್ರನನ್ನೂ ಕೃಷ್ಣನನ್ನೂ ಮುಂದಿಟ್ಟುಕೊಂಡು, ಗಂಧ ಧೂಪ ದೀಪ ಪುಷ್ಪಗಳನ್ನೂ ರತ್ನಾಭರಣಗಳನ್ನೂ ತೆಗೆದುಕೊಂಡು ರಣರಂಗದಲ್ಲಿ ಭೀಷ್ಮನು ಶರಶಯ್ಯೆಯಲ್ಲಿ ಮಲಗಿದ್ದ ಕಡೆಗೆ ನಡೆದರು. ಅವರೊಡನೆ ಕುಂತಿ, ಗಾಂಧಾರಿ, ದ್ರೌಪದಿ, ಸಾತ್ಯಕಿ, ವಿದುರ, ಯುಯುತ್ಸು ಮೊದಲಾದವರೂ ಹೋದರು.

ಭೀಷ್ಮನ ಸುತ್ತಲೂ ವ್ಯಾಸರು, ನಾರದರು, ಪರಾಶರರು ಮೊದಲಾದ ಋಷಿಗಳು ನೆರೆದಿದ್ದರು.

ಅಜ್ಜನಿಗೆ ನಮಸ್ಕಾರಿಸಿದ ಯುಧಿಷ್ಠಿರನು: “ದೇವ, ನಾನು ಪಾಂಡವನಾದ ಯುಧಿಷ್ಟಿರ, ನನ್ನ ಸಹೋದರರನ್ನು, ನಿನ್ನ ಪ್ರೀತಿಪಾತ್ರರನ್ನೂ ಕರೆತಂದಿದ್ದೇನೆ. ನಿನ್ನನ್ನು ಗೌರವಿಸಲು ಇಡೀ ಹಸ್ತಿನಾವತಿಯೇ ಇಲ್ಲಿಗೆ ಬಂದಿದೆ. ಧೃತರಾಷ್ಟ್ರ, ಕೃಷ್ಣರೂ ಬಂದಿದ್ದಾರೆ. ದಯವಿಟ್ಟು ಕಣ್ಣು ತೆರೆದು ನೋಡು” ಎಂದನು‌.

ಕಣ್ತೆರೆದು ಎಲ್ಲರನ್ನೂ ನೋಡಿದ ಭೀಷ್ಮರು: “ಮಗು, ಈ ಸಮಸ್ತರ ಜೊತೆಗೆ ನಿನ್ನನ್ನು ನೋಡಲು ಸಂತೋಷವಾಗುತ್ತಿದೆ. ಕೊನೆಗೂ ಉತ್ತರಾಯಣ ಬಂದಿತ್ತಲ್ಲವೇ! ಶರಶಯ್ಯೆಯಲ್ಲಿ ಮಲಗಿ ನೂರಾರು ವರ್ಷಗಳಾದಂತೆ ಅನಿಸುತ್ತಿದೆ. ಮಾಘಮಾಸ ಬಂದಿದೆ. ನಾನು ಈ ಭೂಮಿಯನ್ನು ಬಿಡುವ ಕಾಲ ಸನ್ನಿಹಿತವಾಯಿತು !” ಎಂದನು‌.

ಆಮೆಲೆ ಧೃತರಾಷ್ಟ್ರನಿಗೆ, ಭೀಷ್ಮನು: “ಮಗನೇ, ನಿನಗೆ ರಾಜನ ಕರ್ತವ್ಯಗಳೆಲ್ಲವೂ ತಿಳಿದಿವೆ‌. ನಿನಗೆ ಗೊತ್ತಿಲ್ಲದಿರುವುದು ಯಾವುದೂ ಇಲ್ಲ. ವಿವೇಕಿಯಾದ ನೀನು ನಿನ್ನ ಮಕ್ಕಳ ಸಾವಿಗೆ ಶೋಕಿಸಬಾರದು‌. ಪಾಂಡವರೂ ನಿನ್ನ ಮಕ್ಕಳೆ, ನಿನ್ನ ಮೇಲೆ ಭಕ್ತಿಯಿಂದಿದ್ದಾರೆ. ಅವರೊಡನೆ ಸುಖವಾಗಿರು” ಎಂದನು.

ನಂತರ ಅವನ ದೃಷ್ಟಿ ಕೃಷ್ಣನ ಕಡೆಗೆ ಹೊರಳಿತು. ಪುಷ್ಪಗಳನ್ನು ತರಿಸಿ, ಅವುಗಳಿಂದ ಅವನನ್ನು ಭಕ್ತಿಯಿಂದ ಪೂಜಿಸಿದ

ಭೀಷ್ಮರು: “ಕೃಷ್ಣಾ, ನೀನು ಜಗತ್ತಿಗೆಲ್ಲ ಈಶನು‌. ಪುರುಷವೆನ್ನಿಸಿಕೊಳ್ಳುವ ನೀನೆ ಇಡೀ ವಿಶ್ವದ ಸೃಷ್ಟಿಕರ್ತನು. ನೀನೇ ಪರಮಾತ್ಮನು‌. ನಿನ್ನ ವಿಶ್ವರೂಪವನ್ನು ತೋರಿಸಿ, ನನಗಿನ್ನು ಮನುಷ್ಯ ಜನ್ಮವನ್ನು ತೊರೆದು ಈ ಲೋಕವನ್ನು ಬಿಟ್ಟುಹೋಗಲು ಅಪ್ಪಣೆ ಕೊಡು. ನಿನ್ನ ಕೃಪೆಯಿಂದ ನನಗೆ ಉತ್ತಮ ಗತಿ ದೊರೆಯಲಿ” ಎನ್ನಲು.

ಕೃಷ್ಣನು ಅವನಿಗೆ “ವಿಶ್ವರೂಪ”ವನ್ನು ದರ್ಶನ ಮಾಡಿಸಿದನು‌.

ಅನಂತರ ಕೃಷ್ಣನು:- “ದೇವವ್ರತ, ನಿನ್ನ ನಿಜ ಧಾಮಕ್ಕೆ ಇನ್ನು ಹೊರಡು. ಹೋಗಿ ವಸುಗಳನ್ನು ಸೇರಿಕೋ. ಮಾರ್ಕಂಡೇಯನಂತೆ ನಿನಗೆ ಪುನರ್ಜನ್ಮವಿಲ್ಲ‌. ಮೃತ್ಯುವು ಸೇವಕನಂತೆ ನಿನ್ನ ಅಣತಿಗಾಗಿ ಕಾದಿರುವನು. ನೀನು ಅವನನ್ನು ಕರೆಯಬಹುದು” ಎಂದನು‌.

ಭೀಷ್ಮನ ಮುಖವು ದೇದೀಪ್ಯಮಾನವಾಯಿತು‌. ಅವನು ಕಣ್ಣು ಮುಚ್ಚಿ, ಕೆಲವು ಕ್ಷಣಗಳು ಸುಮ್ಮನಿದ್ದನು‌. ಸ್ವಲ್ಪ ಪ್ರಯತ್ನಿಸಿ ಸಾಯಲು ಇಚ್ಛೆಪಟ್ಟನು. ಜ್ವಾಲೆಯೊಂದು ಅವನ ಶರೀರವನ್ನು ಬಿಟ್ಟು ಅಂತರಿಕ್ಷಕ್ಕೆ ಏರಿದ್ದು ಸುತ್ತಲಿದ್ದವರಿಗೆ ಕಾಣಿಸಿತು.

ದೇವದುಂದುಭಿಗಳು ಮೊಳಗಿದವು. ತಂಪಾದ, ಸುಗಂಧಭರಿತ ಗಾಳಿಯು ಬೀಸಿತು. ಭೂಮಿಯು ಪ್ರಶಾಂತವಾಯಿತು. ಎಲ್ಲರ ಮನಸ್ಸು ಶಾಂತಿಯಿಂದ ತುಂಬಿಹೋಯಿತು‌. ಶರಗಳ (ಬಾಣಗಳ) ಸಮೇತವಾಗಿ ಅವನ ಶರೀರವನ್ನು ಗಂಧದ ಚಿತೆಯ ಮೇಲಿಟ್ಟು, ಯುಧಿಷ್ಠಿರನು, ವಿದುರನೂ ಪುಷ್ಪಗಳಿಂದ ಮುಚ್ಚಿದರು‌. ಯುಯುತ್ಸುವು ಶ್ವೇತಚ್ಛತ್ರವನ್ನು ಹಿಡಿದನು. ಬ್ರಾಹ್ಮಣರು ಸಾಮಗಾನ ಮಾಡುತ್ತಿರಲು, ಧೃತರಾಷ್ಟ್ರನು ಚಿತೆಗೆ ಅಗ್ನಿಸ್ಪರ್ಶ ಮಾಡಿದನು.

ಮಾರನೆಯ ದಿನ ಚಿತಾಭಸ್ಮವನ್ನು ಗಂಗೆಯಲ್ಲಿ ವಿಸರ್ಜಿಸಿದರು.

ಮೇಲೆದ್ದು ಬಂದ ಗಂಗೆಯು

“ಭಾರ್ಗವನನ್ನು ಸೋಲಿಸಿದ ವೀರನಾದ ನನ್ನ ಮಗು ಶಿಖಂಡಿಯಿಂದ ಕೊಲ್ಲಲ್ಪಟ್ಟನು‌. ನನ್ನ ದಯ ಇನ್ನೂ ಒಡೆಯದಿರುವುದರಿಂದ ಅದು ಕಲ್ಲಿನದಾಗಿರಬೇಕು” ಎಂದು ಗೋಳಿಟ್ಟಳು‌.

ಗಂಗೆಯನ್ನು ಕುರಿತು ಕೃಷ್ಣನು: “ತಾಯಿ, ಸಮಾದಾನ ಮಾಡಿಕೋ. ನಿನ್ನ ಮಗನು ವಸುಗಳನ್ನು ಸೇರಿರುವನು‌. ಅವನು ಸಾಮಾನ್ಯ ಮಾನವನಲ್ಲ” ಎಂದು ಸಮಾದಾನ ಮಾಡಿದನು‌.

ಗಂಗೆ ಅದೃಷ್ಯಳಾದಳು. ನದಿಯು ಅನಾದಿಕಾಲದಿಂದಲೂ ಹರಿಯುವಂತೆಯೇ ಹರಿಯಲಾರಂಭಿಸಿತು. ದಯದಲ್ಲಿ ಶೋಕ ಸಂತೋಷಗಳೆರಡೂ ಒಟ್ಟಾಗಿ ಸೇರಿರಲು. ಎಲ್ಲರೂ ಹಸ್ತಿನಾಪುರಕ್ಕೆ ಹಿಂದಿರುಗಿದರು‌.

ಬರಹ: ಗಣೇಶ ಗೋಸಾವಿ (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ದ್ವೇಷ ಭಾಷಣ ಮಸೂದೆ; ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ.?: ಸಿಎಂ ಸಿದ್ದರಾಮಯ್ಯ ಪ್ರಶ್ನೆ

ದ್ವೇಷ ಭಾಷಣ ಮಸೂದೆ; ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ

ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="117673"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!