BJP supports small traders' struggle: B.Y. Vijayendra

ನಮ್ಮ ಹೋರಾಟದಿಂದ ಆಡಳಿತ ಪಕ್ಷದವರಿಗೆ ಆತಂಕ, ಗಾಬರಿ; ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿಡುವ ಉದ್ದೇಶದಿಂದ ಕೇಂದ್ರ ಸರಕಾರದ ಮೇಲೆ ಆರೋಪ ಮಾಡುವುದು ಮತ್ತು ಕೇಂದ್ರದ ವಿರುದ್ಧ ಅಪಪ್ರಚಾರ ಮಾಡುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ (B.Y.Vijayendra) ಅವರು ಟೀಕಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಯುಪಿಎ ಸರಕಾರವು 2004ರಿಂದ 2014ರವರೆಗೆ ಅಧಿಕಾರದಲ್ಲಿ ಇದ್ದಾಗ 10 ವರ್ಷದಲ್ಲಿ ಪೆಟ್ರೋಲ್ ದರ ಶೇ 90ರಷ್ಟು ಏರಿಕೆ ಕಂಡಿತ್ತು. ಅದೇರೀತಿ ಡೀಸೆಲ್ ಬೆಲೆಯು ಶೇ 96ರಷ್ಟು ಬೆಲೆ ಏರಿಕೆ ಆಗಿತ್ತು ಎಂದು ಟೀಕಿಸಿದರು.

ಆದರೆ, ನರೇಂದ್ರ ಮೋದಿಜೀ ಅವರ ನೇತೃತ್ವದ ಎನ್‍ಡಿಎ ಸರಕಾರದಲ್ಲಿ 2014ರಿಂದ 2024ರ ನಡುವೆ ಪೆಟ್ರೋಲ್ ದರ 72 ರೂಪಾಯಿಯಿಂದ 100 ರೂ.ಗೆ ಏರಿದೆ. ಶೇ 38 ಹೆಚ್ಚಳವಾಗಿದೆ. ಡೀಸೆಲ್ ದರ 55 ರೂ. ಇದ್ದುದು 90 ರೂ. ಆಗಿದೆ. ಶೇ 63ರಷ್ಟು ಜಾಸ್ತಿ ಆಗಿದೆ ಎಂದು ತಿಳಿಸಿದರು.

ಯುಪಿಎ ಸರಕಾರದಿಂದ ಹಗರಣಗಳು.

ಹಿಂದೆ ಯುಪಿಎ ಸರಕಾರ ಇದ್ದಾಗ ತೈಲ ಬೆಲೆ ಹೆಚ್ಚಾದರೂ ಸಹ ಹಗರಣಗಳು ನಡೆದವೇ ವಿನಾ ಸ್ಕೀಂಗಳು ಯಾವುವೂ ಬಂದಿರಲಿಲ್ಲ. ಹಿಂದೆ ಡಾ. ಮನಮೋಹನ ಸಿಂಗ್ ಅವರ ಸರಕಾರ ಇದ್ದಾಗ, 2 ಜಿ ಹಗರಣ, ಕಲ್ಲಿದ್ದಲು ಹಗರಣ, ಕಾಮನ್‍ವೆಲ್ತ್ ಗೇಮ್ಸ್ ಹಗರಣ ಸೇರಿ 12 ಲಕ್ಷ ಕೋಟಿ ಮೌಲ್ಯದ ಹಗರಣಗಳು ಆಗಿದ್ದವು ಎಂದು ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದರು.

ದೇಶದಲ್ಲಿ ಹಿಂದೆಂದೂ ಕೂಡ ಇಷ್ಟು ದೊಡ್ಡ ಹಗರಣಗಳು ನಡೆದಿರಲಿಲ್ಲ. ಆದರೆ ಯಾವುದೇ ಜನಪರ ಯೋಜನೆಗಳನ್ನು ಕೊಡುವುದರಲ್ಲಿ ಅಂದಿನ ಯುಪಿಎ ಸರಕಾರ ಸಂಪೂರ್ಣ ವಿಫಲವಾಗಿತ್ತು ಎಂದು ಗಮನಕ್ಕೆ ತಂದರು.

ಜನಾಕ್ರೋಶ ಯಾತ್ರೆ 1,115 ಕಿಮೀನಷ್ಟು ಪ್ರವಾಸ

ಜನಾಕ್ರೋಶ ಯಾತ್ರೆಯು 9 ಜಿಲ್ಲೆಗಳಿಗೆ ಹೋಗಿದೆ. 1,115 ಕಿಮೀನಷ್ಟು ಪ್ರವಾಸ ಮಾಡಿದ್ದೇವೆ. ಈ ಯಾತ್ರೆಯು ರಾಜ್ಯದ ಪಕ್ಷದ ಎಲ್ಲ ಮುಖಂಡರು ಭಾಗವಹಿಸಿದ್ದರು ಎಂದು ವಿವರ ನೀಡಿದರು.

ಮೈಸೂರಿನಲ್ಲಿ 5 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ಮಂಡ್ಯದಲ್ಲಿ 4 ಸಾವಿರಕ್ಕೂ ಹೆಚ್ಚು, ಹಾಸನ- 5ರಿಂದ 6 ಸಾವಿರ ಜನರು, ಕೊಡಗು- 3.5ರಿಂದ 4 ಸಾವಿರ ಜನರು ಬಂದಿದ್ದರು.

ಮಂಗಳೂರಿನಲ್ಲಿ ಮಳೆಯ ವಾತಾವರಣವಿದ್ದರೂ 9 ರಿಂದ 10 ಸಾವಿರ ಜನರು ಪಾಲ್ಗೊಂಡಿದ್ದರು. ಉಡುಪಿ ಜಿಲ್ಲೆಯಲ್ಲಿ 5.5ರಿಂದ 6 ಸಾವಿರ, ಚಿಕ್ಕಮಗಳೂರಿನಲ್ಲಿ 4ರಿಂದ 5 ಸಾವಿರ ಜನರು, ಯಲ್ಲಾಪುರದಲ್ಲಿ 4 ಸಾವಿರಕ್ಕೂ ಹೆಚ್ಚು ಜನರು ಹೋರಾಟದಲ್ಲಿ ಭಾಗವಹಿಸಿದ್ದಾರೆ.

ಶಿವಮೊಗ್ಗದಲ್ಲಿ 6ರಿಂದ 7 ಸಾವಿರ ಜನರು ಭಾಗವಹಿಸಿದ್ದರು. ಒಟ್ಟಾರೆಯಾಗಿ ನಮ್ಮ ಮೊದಲ ಹಂತದ ಜನಾಕ್ರೋಶ ಯಾತ್ರೆಯಲ್ಲಿ 50 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು ಎಂದು ವಿವರ ನೀಡಿದರು.

ಆಡಳಿತ ಪಕ್ಷದಲ್ಲಿ ಗಾಬರಿ, ಆತಂಕ

ಸಾಮಾಜಿಕ ಜಾಲತಾಣದಲ್ಲಿ ಈ ಯಾತ್ರೆಯನ್ನು 3.50 ಕೋಟಿ ಜನರು ವೀಕ್ಷಿಸಿದ್ದಾರೆ. ಈ ಯಾತ್ರೆಯು ರಾಜ್ಯದ ಆಡಳಿತ ಪಕ್ಷ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿಗಳ ವಿರುದ್ಧ ಜನಜಾಗೃತಿ ಮೂಡಿಸಿದೆ.

ನಮ್ಮ ಹೋರಾಟದ ಪರಿಣಾಮವಾಗಿ ಆಡಳಿತ ಪಕ್ಷದವರು ಆತಂಕಗೊಂಡಿದ್ದಾರೆ; ಗಾಬರಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದವರೂ ಸಹ ಏ. 17ರಂದು ಕೇಂದ್ರ ಸರಕಾರದ ವಿರುದ್ಧ ಹೋರಾಟ ಮಾಡಲು ಮುಂದಾಗಿದ್ದಾರೆ. ಇದೊಂದು ಕಪಟ ನಾಟಕವಷ್ಟೇ.

ರಾಜ್ಯದ ಮುಖ್ಯಮಂತ್ರಿಗಳಿಗೆ ಜ್ಞಾನೋದಯವಾಗುತ್ತಿದೆ. ಗ್ಯಾರಂಟಿಗಳ ಭ್ರಮೆಯಿಂದ ಹೊರಬರಬೇಕಾಗಿದೆ. ಗ್ಯಾರಂಟಿಯಿಂದ ಜನರು ರಾಜ್ಯದಲ್ಲಿ ಸಂತೋಷದಲ್ಲಿದ್ದಾರೆ ಎಂಬ ಭ್ರಮೆಯಲ್ಲಿದ್ದರು; ಅದು ವಾಸ್ತವಿಕ ಸತ್ಯವಲ್ಲ ಎಂಬುದು ನಮ್ಮ ಹೋರಾಟದ ಪರಿಣಾಮವಾಗಿ ಅವರಿಗೆ ಅರ್ಥ ಆಗುತ್ತಿದೆ ಎಂದು ತಿಳಿಸಿದರು.

ಆಡಳಿತ ಪಕ್ಷದಲ್ಲೇ ಗೊಂದಲ ಇದೆ

ಜಾತಿ ಸಮೀಕ್ಷೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಇದು 10 ವರ್ಷ ಕಳೆದ ಹಳೆಯ ವರದಿ. ಮುಖ್ಯಮಂತ್ರಿಗಳು ನೀವೇ ಇದ್ದೀರಿ. ನಿಮ್ಮದೇ ಸರಕಾರ ಇದೆ. ಮತ್ತೊಮ್ಮೆ ಸರ್ವೇ ಮಾಡಿ ಎಂದು ಆಗ್ರಹಿಸಿದರು.

ಮರು ಸಮೀಕ್ಷೆ ಮಾಡಿ, ವೈಜ್ಞಾನಿಕವಾಗಿ ಅದನ್ನು ಮಾಡಿ; ಎಲ್ಲರ ಸಭೆ ಕರೆದು ಜಾರಿಗೊಳಿಸಿ ಎಂದರು. ಅವೈಜ್ಞಾನಿಕ ಮತ್ತು ಹಳೆಯ ವರದಿ ಇದು. ಅದನ್ನು ಕಸದ ಬುಟ್ಟಿಗೆ ಹಾಕಬೇಕಿದೆ. ಎಂದು ಒತ್ತಾಯಿಸಿದರು.

ರಾಜ್ಯ ಸರಕಾರವು ತನ್ನ ನಿಲುವನ್ನು ಮೊದಲು ಸ್ಪಷ್ಟಪಡಿಸಲಿ. ಮುಖ್ಯಮಂತ್ರಿ ಒಂದು ಹೇಳಿದರೆ, ಉಪ ಮುಖ್ಯಮಂತ್ರಿ ಇನ್ನೊಂದು ಹೇಳುತ್ತಾರೆ.

ಎಂ.ಬಿ.ಪಾಟೀಲ್, ಪರಮೇಶ್ವರ್ ಬೇರೆ ಬೇರೆ ರೀತಿಯ ಹೇಳಿಕೆ ಕೊಡುತ್ತಾರೆ. ಆಡಳಿತ ಪಕ್ಷದಲ್ಲೇ ಗೊಂದಲ ಇದೆ ಎಂದು ತಿಳಿಸಿದರು. ನಿಜವಾದ ಕಳಕಳಿ ಇದ್ದರೆ ಮುಖ್ಯಮಂತ್ರಿಗಳು ವರದಿಯ ಒಳಿತು- ಕೆಡುಕುಗಳ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಿ ಎಂದು ತಿಳಿಸಿದರು.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!