Mgnarega: 4th place for Bengaluru rural district

ಹಳ್ಳಿಗಳ ಸಮಗ್ರ ಅಭಿವೃದ್ಧಿ ನರೇಗಾ: ಬೆಂ.ಗ್ರಾ.ಜಿಲ್ಲೆಗೆ 4ನೇ ಸ್ಥಾನ| Mgnarega

ಬೆಂ.ಗ್ರಾ.ಜಿಲ್ಲೆ (Harithalekhani): ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ (Mgnarega) ಯೋಜನೆಯಡಿ 100 ದಿನಗಳ ಉದ್ಯೋಗವನ್ನು ನೀಡಲಾಗುತ್ತಿದ್ದು, ಇದರಿಂದ ರಾಜ್ಯದಲ್ಲಿ ಜಿಲ್ಲೆಯು ಮಾನವ ದಿನಗಳ ಸೃಜನೆಯಲ್ಲಿ ಗುರಿ ಮೀರಿ ಸಾಧನೆಮಾಡಿದ್ದು, ನರೇಗಾ ಯೋಜನೆಯಡಿ 4ನೇ ಸ್ಥಾನವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ಪಡೆದುಕೊಂಡಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಡಿ ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಕಳೆದ 2023-24ನೇ ಸಾಲಿನಲ್ಲಿ 14ನೇ ಸ್ಥಾನದಲ್ಲಿತ್ತು. ಆರ್ಥಿಕ ವರ್ಷ 2024-25ನೇ ಸಾಲಿನಲ್ಲಿ 14 ಲಕ್ಷ ಗುರಿಗೆ 16,310 ಲಕ್ಷ ಮಾನವ ದಿನಗಳ ಸೃಜನೆ ಮಾಡಿ ಶೇ 116.50% ಪ್ರಗತಿಯನ್ನು ಸಾಧಿಸಿದೆ.

ಗ್ರಾಮಗಳ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಿ ಆಸ್ತಿಗಳ ಸೃಜನೆ ಮಾಡುವ ಮೂಲಕ ಗ್ರಾಮೀಣ ಜನರ ಸಬಲೀಕರಣಕ್ಕೆ ಹೆಚ್ಚಿನ ಅದ್ಯತೆಯನ್ನು ನೀಡಿ, ಗುರಿಯನ್ನು ಮಿರಿ ಸಾಧನೆ ಮಾಡುವ ಮೂಲಕ ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು 4ನೇ ಸ್ಥಾನದಲ್ಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಎನ್‌ಅನುರಾಧ ತಿಳಿಸಿದ್ದಾರೆ.

ಈ ಯೋಜನೆಯಲ್ಲಿ ಜಿಲ್ಲೆಯಲ್ಲಿ ಮಾನವ ದಿನಗಳ ಸೃಜನೆಯಲ್ಲಿ ತಾಲ್ಲೂಕುವಾರು ಪ್ರಗತಿಯನ್ನು ಸಾಧಿಸಿದೆ, ದೇವನಹಳ್ಳಿ ತಾಲ್ಲೂಕು ಶೇ 113.48%, ದೊಡ್ಡಬಳ್ಳಾಪುರ ತಾಲ್ಲೂಕು ಶೇ 104.19%, ಹೊಸಕೋಟೆ ತಾಲ್ಲೂಕು 139.30% ಮತ್ತು ನೆಲಮಂಗಲ ತಾಲ್ಲೂಕು ಶೇ 91.38% ಪ್ರಗತಿಯನ್ನು ಸಾಧಿಸಿದೆ.

ಸದರಿ ಯೋಜನೆಯಲ್ಲಿ ಜಿಲ್ಲೆಯ ನಾಲ್ಕು ತಾಲ್ಲೂಕುಗಳಿಂದ ಒಟ್ಟು 1,19,669 ಉದ್ಯೋಗ ಚೀಟಿಯನ್ನು ಹೊಂದಿರುವ ನೋಂದಾಯಿತ ಕುಟುಂಬಗಳಿದ್ದು, ಅದರಲ್ಲಿ 2,61,128 ಜನರು ಕೂಲಿಕಾರರಿದ್ದು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ.

ಯೋಜನೆಯಲ್ಲಿ ಉದ್ಯೋಗ ಚೀಟಿಯನ್ನು ಹೊಂದಿರುವ ಕುಟುಂಬಗಳಿಗೆ ವಾರ್ಷಿಕವಾಗಿ 100 ದಿನಗಳ ಉದ್ಯೋಗವನ್ನು ನೀಡಲಾಗುತ್ತಿದ್ದು, ಅರ್ಥಿಕವಾಗಿ ಸಬಲರಾಗಲು ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ರೇಷ್ಮೆ, ಸಾಮಾಜಿಕ ಅರಣ್ಯ ಇಲಾಖೆ, ಪಂಚಾಯತ್‌ ರಾಜ್‌ ಇಂಜನಿಯರಿಂಗ್‌ (ಪಿಆರ್‌ಇಡಿ) ಇಲಾಖೆಗಳು ಮಹತ್ವದ ಪಾತ್ರವನ್ನು ವಹಿಸಿವೆ, ಹಾಗೂ ಗ್ರಾಮ ಪಂಚಾಯಿತಿ ವತಿಯಿಂದ ನಡೆಯುತ್ತಿರುವ ಸಮುದಾಯ ಚಟುವಟಿಕೆಗಳು ಸಮಗ್ರವಾಗಿ..

ಶಾಲಾಭಿವೃದ್ಧಿ, ಸ್ಮಶಾನ, ಚರಂಡಿ, ಬೂದು ನೀರು ನಿರ್ವಹಣೆ ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ, ಸಂಜೀವಿನಿ ಭವನ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (NRLM)ಗಳ ಅಭಿವೃದ್ದಿ ಸಹಕಾರಿಯಾಗಿದೆ. ಹಾಗೇ ವೈಯಕ್ತಿಕ ಕಾಮಗಾರಿಗಳಾದ ಹಸುಶೆಡ್‌, ಕುರಿಶೆಡ್‌, ಹಂದಿಶೆಡ್‌, ಕೋಳಿಶೆಡ್‌, ವಸತಿ ಯೋಜನೆಯ ಫಲಾನುಭವಿಗಳು, ವಿಶೇಷ ಚೇತನರು, ಹಿರಿಯ ನಾಗರಿಕರು ಮತ್ತು ಗರ್ಭಿಣಿ ಸ್ತ್ರೀಯರು ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ.

ಸ್ವಚ್ಚ ಭಾರತ್‌ ಮಿಷನ್‌ ಮತ್ತು ಬೂದು ನೀರು ನಿರ್ವಹಣೆ ಗ್ರಾಮೀಣ ಯೋಜನೆ ಅಧೀನದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮೂಲಕ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ ಮಾಡಲಾಗುತ್ತಿದೆ. ಇದರ ಹೊರತಾಗಿ ನರೇಗಾ ಮೂಲಕವೂ ವಿಶೇಷ ಯೋಜನೆ ರೂಪಿಸಿಕೊಂಡು ಅನುಷ್ಠಾನಗೊಳಿಸಲಾಗುತ್ತಿದೆ.

ಮಹಿಳಾ ಸಬೀಕರಣಕ್ಕೆ ಸಹಕಾರಿಯಾದ ನರೇಗಾ ಯೋಜನೆಯಡಿ ಮಹಿಳೆಯರು ಭಾಗವಹಿಸುವಿಕೆಗೆ ಹೆಚ್ಚಿನ ಆದ್ಯತೆ ನೀಡಿದ್ದರಿಂದ, ಅರ್ಥಿಕ ವರ್ಷ 2024-25ನೇ ಸಾಲಿನಲ್ಲಿ ಶೇ 51.97% ಪ್ರಗತಿಯನ್ನು ಸಾಧಿಸಲಾಗಿರುತ್ತದೆ.

ಮುಖ್ಯವಾಗಿ ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಭಾಗವಹಿಸುತ್ತಿರುವುದು ಸಂತಸದ ವಿಷಯ.

ಸ್ತ್ರೀ ಚೇತನ, ದುಡಿಯೋಣ ಬಾ ಅಭಿಯಾನ

ಮಹಿಳೆಯರು ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸುವುದಕ್ಕೆ ಏಪ್ರಿಲ್‌ 1ರಿಂದ ಜೂನ್‌ 30 ರವರೆಗೆ ಮೂರು ತಿಂಗಳ ಕಾಲ ಅಭಿಯಾನವನ್ನು ಹಮ್ಮಿಕೊಂದಿದೆ.

ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಸ್ತ್ರೀಚೇತನ ಮತ್ತು ದುಡಿಯೋಣ ಬಾ ಅಭಿಯಾನ ಎಂಬ ಶೀರ್ಷಿಕೆಯಡಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಶೇ60% ಗುರಿ ಸಾಧಿಸಲು, ಕರಪತ್ರ ವಿತರಣೆ, ಮನೆ ಮನೆಗೆ ಭೇಟಿ, ಆಟೋ ಮೂಲಕ ಪ್ರಚಾರ ಮಾಡುವುದು, ವಾರ್ಡ್‌ಗಳಲ್ಲಿ ಸಭೆ ಮಾಡುವುದು, ಗ್ರಾಮಗಳಲ್ಲಿನ ಸಭೆ ಮೂಲಕ ಇನ್ನೂ ಹೆಚ್ಚಿನ ಪ್ರಚಾರ ಮಾಡಲು ಯೋಜನೆ ರೂಪಿಸಿ 101 ಗ್ರಾಮ ಪಂಚಾಯಿತಿಗಳಲ್ಲಿ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ.

ಆರ್ಥಿಕ ವರ್ಷ 2025-26 ನೇ ಸಾಲಿನಲ್ಲಿ 15ಲಕ್ಷ ಮಾನವ ದಿನಗಳ ಸೃಜನೆಯ ಗುರಿಯನ್ನು ಹೊಂದಲಾಗಿದ್ದು. ಗ್ರಾಮ ಪಂಚಾಯಿತಿಗಳಿಂದ ಬಂದಂತಹ ಯೋಜನೆಗಳಿಗೆ ರಾಜ್ಯದಿಂದ ಅನುಮೊದನೆಯನ್ನು ಪಡೆದುಕೊಂಡು ಕಾಮಗಾರಿಗಳಿಗೆ ನಿಯಮಾನುಸಾರ ಚಾಲನೆ ನೀಡಲಾಗಿರುತ್ತದೆ.

ನೈಸರ್ಗಿಕ ಸಂಪನ್ಮೂಲಗಳಾದ ಜಲ ಸಂರಕ್ಷಣೆ, ಅರಣ್ಯೀಕರಣ, ಗ್ರಾಮಗಳ ಸ್ವಚ್ಚತೆ ಮತ್ತು ಶಾಲೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್‌ ತಿಳಿಸಿದ್ದಾರೆ.

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ದೊಡ್ಡಬಳ್ಳಾಪುರ: ಕೇಬಲ್ ತಯಾರಿಕಾ ಘಟಕದಲ್ಲಿ ಅಗ್ನಿ ಆಕಸ್ಮಿಕ.. ಕೋಟ್ಯಾಂತರ ರೂ. ನಷ್ಟ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಅಡ್ವಾನ್ಸ್ ಕೇಬಲ್ ಟೆಕ್ನಾಲಜಿ ಯೂನಿಟ್-2ರಲ್ಲಿ ಸೋಮವಾರ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಅವಘಡದಿಂದಾಗಿ (Fire accident) ಉಂಟಾಗಿರುವ ಬೆಂಕಿಯ ಕೆನ್ನಾಲಿಗೆ ಆವರಿಸುತ್ತಲೇ ಇದ್ದು, ಸತತ ಐದು ಗಂಟೆಗಳಿಂದಲೂ 10

[ccc_my_favorite_select_button post_id="120091"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!