623 fake doctors in the state..!

ರಾಜ್ಯದಲ್ಲಿ 623 ಮಂದಿ ನಕಲಿ ವೈದ್ಯರು..!

ಬೆಂಗಳೂರು (Harithalekhani): ರಾಜ್ಯದಲ್ಲಿ 623 ನಕಲಿ ವೈದ್ಯರು ( fake doctors) ಅಮಾಯಕರ ಜೀವದ ಜತೆಗೆ ಚೆಲ್ಲಾಟವಾಡುತ್ತಿರುವ ಆಘಾತಕಾರಿ ಮಾಹಿತಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಹಿರಂಗಪಡಿಸಿದೆ.

ಅದರಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಬೀದರ್‌ನಲ್ಲಿ ಪತ್ತೆಯಾಗಿದ್ದಾರೆ. ಇನ್ನೂ 623 ನಕಲಿ ವೈದ್ಯರ ಪೈಕಿ 442 ನಕಲಿ ವೈದ್ಯರಿಗೆ ಆರೋಗ್ಯ ಇಲಾಖೆ ನೋಟಿಸ್‌ ಜಾರಿ ಮಾಡಿದೆ ಹಾಗೂ ಕಾನೂನಿನ ಅಡಿಯಲ್ಲಿ 67 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಜತೆಗೆ 89 ಜನ ವೈದ್ಯರಿಗೆ ದಂಡವನ್ನು ಆರೋಗ್ಯ ಇಲಾಖೆ ವಿಧಿಸಿದೆ.

ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ನಕಲಿ ವೈದ್ಯರ ಹಾವಳಿ ಹೆಚ್ಚಾಗುತ್ತಿದ್ದು. ನಕಲಿ ವೈದ್ಯರ ವಿರುದ್ಧ ಇಲಾಖೆ ಮೆಗಾ ಡ್ರೈವ್ ನಡೆಸಿದೆ.

ರಾಜ್ಯದಲ್ಲಿ ನಕಲಿ ವೈದ್ಯರಿಗೆ ಕಾನೂನಿನ ಅಡಿಯಲ್ಲಿ 1 ಲಕ್ಷ ವರೆಗೂ ದಂಡ ಹಾಗೂ 3 ವರ್ಷದ ವರೆಗೂ ಜೈಲು ಶಿಕ್ಷೆಗೆ ಗುರಿಯಾಗಿಸಬಹುದು. ಕೆಲ ಸಮಯದಲ್ಲಿ ಶಿಕ್ಷೆ ಹೆಚ್ಚಾಗುವ ಸಾಧ್ಯತೆ ಕೂಡ ಇರುತ್ತದೆ.

ಇಲಾಖೆ ನಕಲಿ ವೈದ್ಯರ ವಿರುದ್ದ ಸಮರಸಾರಿದ್ದು. ಮುಂದಿನ ದಿನಗಳಲ್ಲಿ ಮತ್ತಷ್ಟು ವೈದ್ಯರಿಗೆ ಬಲೆ ಬೀಸಲು ಇಲಾಖೆ ಸಜ್ಜಾಗಿದೆ.

ಅಮಾಯಕರ ಜೀವನದ ಜತೆ ಚೆಲ್ಲಾಟ

ನಕಲಿ ವೈದ್ಯರು ಅಮಾಯಕರ ಜೀವನದ ಜತೆಗೆ ಚೆಲ್ಲಾಟ ಆಡುತ್ತಿದ್ದಾರೆ. ಸರ್ಕಾರಿ ವೈದ್ಯರ ಕೊರತೆಯಿರುವ ಗ್ರಾಮೀಣ ಪ್ರದೇಶಗಳಲ್ಲೂ ಇವರ ಹಾವಳಿ ವಿಪರೀತವಾಗಿದೆ. ಬಡವರು ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರು ಇವರಿಂದ ಮೋಸ ಹೋಗುತ್ತಿದ್ದಾರೆ.

ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದರೂ ಅದರಿಂದ ದೊಡ್ಡ ಮಟ್ಟದಲ್ಲಿ ಪ್ರಯೋಜನ ಆಗುತ್ತಿಲ್ಲ.

ಅಷ್ಟೇ ಅಲ್ಲದೆ ನ್ಯಾಯಾಲಯದಲ್ಲೂ ಕೆಲವು ಪ್ರಕರಣಗಳು ವಿಚಾರಣೆಯಲ್ಲಿರುವುದರಿಂದ ಇವರ ಹಾವಳಿಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ ಹಾಕಲು ಸಾಧ್ಯವಾಗಿಲ್ಲ ಎಂದು ವರದಿಯಾಗಿದೆ.

ರಾಜಕೀಯ

ದೊಡ್ಡಬಳ್ಳಾಪುರ: ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ.06 ಕೊನೆಯ ದಿನ

ದೊಡ್ಡಬಳ್ಳಾಪುರ: ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ.06 ಕೊನೆಯ ದಿನ

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಸಾರ್ವಜನಿಕ ಪ್ರಕಟಣೆಯಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ (Teachers' Constituency) ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ (Voter list) ಸಮಗ್ರ ಪರಿಷ್ಕರಣೆ ನಡೆಸಲಾಗುತ್ತಿದೆ.

[ccc_my_favorite_select_button post_id="115466"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!