Terrorist attack again in Jammu and Kashmir..

Video: ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಕನ್ನಡಿಗರ ರಕ್ಷಣೆಗೆ ಸಂತೋಷ್ ಲಾಡ್ ದೌಡು.. ಮೃತ ದೇಹಗಳಿಗಾಗಿ ಹುಡುಕಾಟ

ಶ್ರೀನಗರ: ಕಣಿವೆ ಪ್ರದೇಶ ಜಮ್ಮು ಕಾಶ್ಮೀರದಲ್ಲಿ ಮತ್ತೆ ಉಗ್ರರ ದಾಳಿ (Terrorist attack) ನಡೆದಿದ್ದು, ಇಷ್ಟು ದಿನ ಸೇನಾ ಪಡೆಗಳನ್ನು ಟಾರ್ಗೆಟ್ ಮಾಡುತ್ತಿದ್ದ ಉಗ್ರರು ಈಗ ಪ್ರವಾಸಿಗರನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿದ್ದಾರೆ.

ಲಷ್ಕರ್-ಎ-ತೊಯ್ದಾದ ಸ್ಥಳೀಯ ಅಂಗಸಂಸ್ಥೆಯಾದ ಪಾಕಿಸ್ತಾನದ ಉಗ್ರ ಸಂಘಟನೆ ದಿ ರೆಸಿಸ್ಟೆನ್ಸ್ ಫ್ರಂಟ್ ಈ ದಾಳಿಯ ಹೊಣೆ ಹೊತ್ತುಕೊಂಡಿದೆ.

ಪಹಲ್‌ಗಾಮ್‌ನ ಬೈಸರನ್ ವ್ಯಾಲಿಯ ಹುಲ್ಲು ಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ಗುಂಪು ಗುಂಡಿನ ದಾಳಿ ನಡೆಸಿದೆ.

ಈ ದಾಳಿಯಲ್ಲಿ ಶಿವಮೊಗ್ಗದ ಮಂಜುನಾಥ್ ರಾವ್, ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಭರತ್ ಭೂಷಣ್ ಸೇರಿ 30 ಪ್ರವಾಸಿಗರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ.

ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಯಾಗುವ ಸಾಧ್ಯತೆ ಇದೆ. ದಾಳಿಯ ಬೆನ್ನಲ್ಲೇ ಸೇನೆ ಹೈ ಅಲರ್ಟ್ ಆಗಿದ್ದು, ಉಗ್ರರ ಹೆಡೆಮುರಿ ಕಟ್ಟಲು ಶುರು ಮಾಡಿದೆ.

ಪಹಲ್‌ಗಾಮ್ ಪಟ್ಟಣದ ಬೈಸರನ್ ಹುಲ್ಲುಗಾವಲಿನ ಪ್ರದೇಶದಲ್ಲಿ ಮಂಗಳವಾರ ಮಧ್ಯಾಹ್ನ ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ಹೆಲಿಕಾಪ್ಟ‌ರ್ ಮೂಲಕ ಸ್ಥಳಾಂತರಿಸಲಾಗಿದೆ. 12 ಮಂದಿ ಪ್ರವಾಸಿಗರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ತಿಳಿದ ತಕ್ಷಣವೇ ಭದ್ರತಾ ಪಡೆ, ಸಿಆರ್‌ಪಿಎಫ್ ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಘಟನೆ ನಡೆದ ವಹಲ್‌ಗಾಮ್ ಪಟ್ಟಣದ ಬೈಸರನ್ ಧಾವಿಸಿದ್ದು, ದಾಳಿಕೋರರ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.

ಭಯೋತ್ಪಾದನಾ ವಿರೋಧಿ ಕಾರ್ಯಾ ಚರಣೆ ಪ್ರಾರಂಭಿಸಲಾಗಿದೆ. ಸ್ಥಳದಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಭಯೋತ್ಪಾದಕರ ಈ ಪೈಶಾಚಿಕ ಕೃತ್ಯದ ನಂತರದ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ಮೃತ ದೇಹಗಳು ಅಲ್ಲಲ್ಲಿ ಬಿದ್ದಿರುವುದು, ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿರುವುದು ವಿಡಿಯೊದಲ್ಲಿದೆ.

ಕನ್ನಡಿಗರ ರಕ್ಷಣೆಗೆ ಸಂತೋಷ್ ಲಾಡ್ ದೌಡು

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇಂದು ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ ಎಂದು ಸಿಎ ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಅವರು, ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ.

ಭಯೋತ್ಪಾದಕರ ಈ ಹೇಯ ಕೃತ್ಯದಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಹಲವು ಕನ್ನಡಿಗರು ಕೂಡ ಸಾವನ್ನಪ್ಪಿರುವುದು ಅತ್ಯಂತ ದುಃಖದ ವಿಚಾರ.

ಉಗ್ರಕೃತ್ಯದಿಂದಾಗಿ ದೂರದ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ರಾಜ್ಯದ ಅಧಿಕಾರಿಗಳ ತಂಡವನ್ನು ಸಂಜೆಯೇ ರವಾನಿಸಲಾಗಿದೆ.

ಈ ಸಂದರ್ಭದಲ್ಲಿ ನಮ್ಮ ಸರ್ಕಾರದಿಂದ ಹೆಚ್ಚಿನ ನೆರವಿನ ಅಗತ್ಯ ಇದೆ ಎನ್ನುವುದನ್ನು ಅರಿತು ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರಿಗೆ ಕಾಶ್ಮೀರಕ್ಕೆ ತೆರಳಿ ಇಡೀ ಕಾರ್ಯಾಚರಣೆಯ ಮೇಲ್ವಿಚಾರಣೆ ವಹಿಸುವಂತೆ ಸೂಚನೆ ನೀಡಿದ್ದೇನೆ.

ಸಂತ್ರಸ್ತ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕಾರ್ಯವನ್ನು ನಮ್ಮ ಸರ್ಕಾರ ಮಾಡಲಿದೆ.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!