Victory against Delhi... RCB tops the table

ಡೆಲ್ಲಿ ವಿರುದ್ಧ ಗೆಲುವು.. ಟೇಬಲ್ ಟಾಪಲ್ಲಿ RCB

ದೆಹಲಿ: ಕೃಣಾಲ್ ಪಾಂಡ್ಯ (73) ಹಾಗೂ ವಿರಾಟ್ ಕೊಹ್ಲಿ (51) ಅವರ ಬಹು ಮುಖ್ಯ ಜತೆಯಾಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಭಾನುವಾರ ಎದುರಾಳಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ ಗಳ ಭರ್ಜರಿ ಗೆಲುವು ಸಾಧಿಸಿದೆ.

ಈ ಗೆಲುವಿನ ಮೂಲಕ ಆರ್‌ಸಿಬಿಯು ಡೆಲ್ಲಿ ಎದುರು ಉದ್ಯಾನ ನಗರಿಯಲ್ಲಿ ಎದುರಾಗಿದ್ದ ಸೋಲಿನ ಸೇಡನ್ನು ಆರ್‌ಸಿಬಿ ತೀರಿಸಿಕೊಂಡಿತು. ಅಲ್ಲದೆ ಈ ಐಪಿಎಲ್ ಟೂರ್ನಿಯ ಅಂಕಪಟ್ಟಿಯಲ್ಲಿ RCB ತಂಡವು ಅಗ್ರ ಸ್ಥಾನವನ್ನು ಅಲಂಕರಿಸಿತು.

ಆರ್‌ಸಿಬಿ ತಂಡವು ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡೂ ವಿಭಾಗಗಳಲ್ಲಿ ಸಂಘಟಿತ ಪ್ರದರ್ಶನವನ್ನು ತೋರಿಸಿ, ಈ ಆವೃತ್ತಿಯಲ್ಲಿ ತವರಿನ ಹೊರಗೆ ಸತತ ಏಳನೇ ಪಂದ್ಯವನ್ನು ಗೆದ್ದು ಬೀಗಿತು. ಒಟ್ಟು 14 ಅಂಕಗಳನ್ನು ಕಲೆ ಹಾಕಿದೆ.

ಆರ್‌ಸಿಬಿ ಆರಂಭಿಕ ಆಘಾತ: ಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 163 ರನ್‌ಗಳ ಗುರಿಯನ್ನು ಹಿಂಬಾಲಿಸಿದ ಆರ್‌ಸಿಬಿಗೆ ಉತ್ತಮ ಆರಂಭಸಿಗಲಿಲ್ಲ. ತಂಡದ ಮೊತ್ತ 26 ರನ್ ಇರುವಾಗಲೇ ಜಾಕೋಬ್ ಭೆಥೆಲ್, ದೇವದತ್ ಪಡಿಕ್ಕಲ್ ಹಾಗೂ ನಾಯಕ ರಜತ್ ಪಾಟೀದಾರ್ ಅವರ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಆರಂಭಿಕ ಆಘಾತ ಅನುಭವಿಸಿತ್ತು.

ಕೃಣಾಲ್-ಕೊಹ್ಲಿ ಜತೆಯಾಟ: ಆರ್‌ಸಿಬಿ ಪ್ರಮುಖ 3 ವಿಕೆಟ್ ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿ ಸಿಲುಕಿದ್ದ ವೇಳೆ ಜತೆಯಾದ ವಿರಾಟ್ ಕೊಹ್ಲಿ ಹಾಗೂ ಕೃಣಾಲ್ ಪಾಂಡ್ಯ ಅತ್ಯಂತ ಜವಾಬ್ದಾರಿಯುತ ಆಟವನ್ನು ಆಡಿ, ಡೆಲ್ಲಿ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು.

ಈ ಜೋಡಿ ಮುರಿಯದ ನಾಲ್ಕನೇ ವಿಕೆಟ್‌ಗೆ 119 ರನ್‌ಗಳ ನಿರ್ಣಾಯಕ ಜತೆಯಾಟವನ್ನು ಆಡಿ ಆರ್ ಸಿಬಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವನ್ನು ವಹಿಸಿತು.

ಕೊಹ್ಲಿ 47 ಎಸೆತಗಳಲ್ಲಿ 4 ಬೌಂಡರಿಗಳೊಂದಿಗೆ 51 ರನ್ ತಂಡದ ಗೆಲುವಿನ ಸಮಯದಲ್ಲಿ ವಿಕೆಟ್ ಒಪ್ಪಿಸಿದರು.

ಕುಸಿದ ಡೆಲ್ಲಿ ಕ್ಯಾಪಿಟಲ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದಿಂದ ನಿರೀಕ್ಷಿತ ಬ್ಯಾಟಿಂಗ್ ಮೂಡಿಬರಲಿಲ್ಲ. ಭುವನೇಶ್ವರ್ ಕುಮಾರ್ ಹಾಗೂ ಜಾಶ ಹೇಝಲ್‌ವುಡ್ ಅವರ ಪರಿಣಾಮಕಾರಿ ಬೌಲಿಂಗ್ ದಾಳಿಯ ನಲುಗಿದ ಡೆಲ್ಲಿ, ತನ್ನ ಪಾಲಿನ 20 ಓವರ್‌ಗಳನ್ನು ಪೂರ್ಣಗೊಳಿಸಿದರೂ 8 ವಿಕೆಟ್ ನಷ್ಟಕ್ಕೆ 162 ರನ್‌ಗಳನ್ನು ಮಾತ್ರ ಕಲೆ ಹಾಕಿತ್ತು. ಡೆಲ್ಲಿ ಪರ ಕೆಎಲ್ ರಾಹುಲ್ 41, ಟ್ರಿಸ್ಟಾನ್‌ ಸ್ಟಬ್ 34, ಅಭಿಷೇಕ್ ಪೊರೆಲ್ 28 ರನ್ ಗಳಿಸಿದರು.

ಆರಂಭಿಕ ಬ್ಯಾಟರ್ ಅಭಿಷೇಕ್ ಪೊರೆಲ್ ಸ್ಪೋಟಕ ಆಟಕ್ಕೆ ಯತ್ನಿಸಿ 11 ಎಸೆತಗಳಲ್ಲಿ ತಲಾ 2 ಬೌಂಡರಿ, 2 ಸಿಕ್ಸರ್ ಸಹಿತ 28 ರನ್ ಗಳಿಸಿ ಪವರ್ ಪ್ಲೇನಲ್ಲೇ ಹ್ಯಾಝಲ್‌ವುಡ್‌ಗೆ ವಿಕೆಟ್ ಒಪ್ಪಿಸಿದರು. 26 ಎಸೆತಗಳಲ್ಲಿ ಕೇವಲ 2 ಬೌಂಡರಿ ಸಹಿತ 22 ರನ್ ಗಳಿಸಿ ಕೃನಾಲ್ ಪಾಂಡ್ಯ ಬೌಲಿಂಗ್‌ನಲ್ಲಿ ಕೊಹ್ಲಿಗೆ ಕ್ಯಾಚ್ ನೀಡಿ ಔಟ್ ಆದರು.

ಕರುಣ್ ನಾಯರ್ ಕೇವಲ 4 ರನ್ ಗಳಿಸಿ ದಯಾಳ್ ಬೌಲಿಂಗ್‌ನಲ್ಲಿ ಭುವನೇಶ್ವರ್‌ಗೆ ಕ್ಯಾಚ್ ನೀಡಿದರು ಕೆಎಲ್ ರಾಹುಲ್ ಕೂಡ ರನ್‌ಗಳಿಸಲು ಪರದಾಡಿದರು. 39 ಎಸೆತಗಳಲ್ಲಿ 3 ಬೌಂಡರಿ ಸಹಿತ 41 ರನ್ ಗಳಿಸಿ ನಿರ್ಣಾಯಕ ಹಂತದಲ್ಲಿ ವಿಕೆಟ್ ಒಪ್ಪಿಸಿದರು.

ನಾಯಕ ಅಕ್ಷರ್ ಪಟೇಲ್ ಆಟ ಕೇವಲ 15ಕ್ಕೆ ಅಂತ್ಯ ವಾಯಿತು. ಕೊನೆಯಲ್ಲಿ ಅಬ್ಬರಿಸಿದ ಟ್ರಿಸ್ಟಾನ್‌ ಸಬ್ ಸ್ಥಬ್ 18 1 ಎಸೆತಗ ಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಿತ 34 ರನ್‌ಗಳಿಸಿದರು. ಅಶು ತೋಷ್ ಶರ್ಮಾ 2 ರನ್, ವಿಪ್ರಜ್ ನಿಗಂ 12 ರನ್ ಗಳಿಸಿದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!