CM Siddaramaiah's raising of hand against police officer is evidence of goon behavior: BY Vijayendra

ಪೊಲೀಸ್ ಅಧಿಕಾರಿ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ್ದು ಗೂಂಡಾ ವರ್ತನೆಗೆ ಸಾಕ್ಷಿ; ಬಿವೈ ವಿಜಯೇಂದ್ರ ಕಿಡಿ

ಬೆಂಗಳೂರು: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಸಿದ್ದರಾಮಯ್ಯ (Cmsiddaramaiah) ಅವರ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವ ಅವರು, ಪಾಕಿಸ್ತಾನದ ಪರ ಸಹಾನುಭೂತಿ ಮಾತನಾಡಿ ಅಖಂಡ ಭಾರತದ ಏಕತೆಯ ನಡುವೆ ಬಿರುಕು ಮೂಡಿಸುವ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ವಿರುದ್ಧ ಇಂದು ಬೆಳಗಾವಿಯ ಕಾಂಗ್ರೆಸ್ ಸಮಾವೇಶದಲ್ಲಿ ರಾಷ್ಟ್ರಭಕ್ತ ಮಹಿಳೆಯರು ದಿಟ್ಟತನದಿಂದ ಘೋಷಣೆ ಕೂಗುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.

ಇದರಿಂದ ವಿಚಲಿತಗೊಂಡ ಮುಖ್ಯಮಂತ್ರಿಗಳು ಸಮವಸ್ತ್ರದಲ್ಲಿದ್ದ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಏಕವಚನದಲ್ಲಿ ಸಂಬೋಧಿಸಿ, ಹತಾಶೆಯಿಂದ ಆರ್ಭಟಿಸಿ ಕೈ ಮಾಡಲು ಮುಂದಾಗಿರುವ ಕ್ರಮ ಮುಖ್ಯಮಂತ್ರಿ ಸ್ಥಾನದ ಘನತೆಗೆ ಧಕ್ಕೆ ತಂದ ಗೂಂಡಾ ವರ್ತನೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಅಧಿಕಾರ ಮದದಲ್ಲಿ ತೇಲುತ್ತಿರುವ ಸಿದ್ದರಾಮಯ್ಯನವರ ನಡೆ, ನುಡಿಗಳು ಇತ್ತೀಚಿನ ದಿನಗಳಲ್ಲಿ ವಿಪರೀತಕ್ಕೆ ಹೋಗುತ್ತಿದೆ. ಕೆಲ ತಿಂಗಳ ಹಿಂದೆ ಸಭೆಯೊಂದರಲ್ಲಿ ದಕ್ಷ ಜಿಲ್ಲಾಧಿಕಾರಿಯೊಬ್ಬರನ್ನು ಕೇವಲವಾಗಿ ಅಪಮಾನಿಸಿ, ತಮ್ಮ ಸಂಸ್ಕೃತಿ ಹೀನ ನಡುವಳಿಕೆಯನ್ನು ಸಿದ್ದರಾಮಯ್ಯನವರು ಅನಾವರಣ ಮಾಡಿಕೊಂಡಿದ್ದರು.

ಅವರ ವರ್ತನೆ ಇಂದು – ನಿನ್ನೆಯದಲ್ಲ, ತಮ್ಮ ಸ್ವಕ್ಷೇತ್ರದಲ್ಲಿ ಮಹಿಳೆಯೊಬ್ಬರ ಸೆರಗೆಳೆದು ರೌದ್ರಾವತಾರ ಪ್ರದರ್ಶಿಸಿದ ಘಟನೆ ಇನ್ನೂ ಹಸಿಯಾಗಿಯೇ ಇದೆ. ಅದೇ ರೀತಿ ಮೈಸೂರು ಭಾಗದ ಹಿರಿಯ ರಾಜಕಾರಿಣಿಯಾಗಿದ್ದ ನಂಜನಗೂಡಿನ ದಿವಂಗತ ಎಂ.ಮಹದೇವು ಅವರ ಮೇಲೂ ಹಲ್ಲೆ ನಡೆಸಿದ ಪ್ರಕರಣವನ್ನು ಮಾಧ್ಯಮಗಳು ʼಸಿದ್ದು-ಗುದ್ದುʼ ಪ್ರಕರಣ ಎಂದೇ ವ್ಯಾಖ್ಯಾನಿಸಿದ್ದವು.

ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತವರಿಗೆ ಅನುಭವದ ಹಿರಿತನ, ನಡುವಳಿಕೆ, ಹಾಗೂ ಮಾತುಗಳನ್ನು ಮಾಗಿಸಬೇಕು, ಆದರೆ ಸಿದ್ದರಾಮಯ್ಯನವರ ವಿಷಯದಲ್ಲಿ ಇದು ತಿರುಗು-ಮುರುಗಾಗಿದೆ, ದಿನೇ ದಿನೇ ಅವರು ತಮ್ಮ ನಾಲಿಗೆಯ ಮೇಲೆ ಹಿಡಿತ ಕಳೆದುಕೊಳ್ಳುತ್ತಿದ್ದಾರೆ.

ಹತಾಶೆಯಿಂದ ಜನರು ಹಾಗೂ ಅಧಿಕಾರಿಗಳ ಮೇಲೆ ಅಹಂಕಾರ ಹಾಗೂ ತೋಳ್ಬಲ ಪ್ರದರ್ಶಿಸುತ್ತಿದ್ದಾರೆ. ಇದು ಅತ್ಯಂತ ದುರ್ದೈವದ ಹಾಗೂ ಖಂಡನೀಯ ವರ್ತನೆಯಾಗಿದೆ. ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಬಹುದೊಡ್ಡ ಹಿನ್ನೆಲೆಯಿದೆ, ಆ ಸ್ಥಾನದಲ್ಲಿ ಕುಳಿತ ಅನೇಕ ಮಹನೀಯರು ಮುಖ್ಯಮಂತ್ರಿ ಸ್ಥಾನದ ಘನತೆಯನ್ನು ಮೇರುಮಟ್ಟಕ್ಕೆ ಕೊಂಡೊಯ್ದಿದ್ದಾರೆ, ವಿಶ್ವಮಟ್ಟದಲ್ಲಿ ಛಾಪು ಮೂಡಿಸಿದ್ದಾರೆ.

ಕರ್ನಾಟಕ ಎಂದರೆ ಸಜ್ಜನಿಕೆಯ ರಾಜಕಾರಣ, ಸಂಸ್ಕೃತಿ-ಸಂಸ್ಕಾರದ ನೆಲೆಬೀಡು ಎಂಬ ಮಾತಿದೆ, ಆದರೆ ಸಿದ್ದರಾಮಯ್ಯನವರ ವರ್ತನೆಯಿಂದಾಗಿ ಇತಿಹಾಸದ ಪರಂಪರೆಗೆ ಕಪ್ಪು ಮಸಿ ಬಳಿಯುತ್ತಿದೆ.

ಕರ್ನಾಟಕದ ಗೌರವ ಹಾಗೂ ಮುಖ್ಯ ಮಂತ್ರಿ ಸ್ಥಾನದ ಘನತೆ ಸಂಪೂರ್ಣ ಕುಗ್ಗುತ್ತಿದೆ. ರಾಷ್ಟ್ರ ಭಕ್ತರೆಂದರೆ ಕೆಂಡಕಾರುವ, ದೇಶ ಸುರಕ್ಷತೆಯ ಬಗ್ಗೆ ಉಡಾಫೆಯ ಮಾತನಾಡುವ ಸಿದ್ದರಾಮಯ್ಯನವರಿಂದಾಗಿ ಇಡೀ ರಾಷ್ಟ್ರ ‘ಭಾರತದ ಸುಭದ್ರತೆಗೆ’ ಒಕ್ಕೊರಲ ದನಿಯಾಗಿ ನಿಂತಿದ್ದರೆ, ಅದಕ್ಕೆ ವ್ಯತಿರಿಕ್ತವಾಗಿ ಕರ್ನಾಟಕದ ಮುಖ್ಯಮಂತ್ರಿ ವರ್ತಿಸುತ್ತಿದ್ದಾರೆ.

ಕರ್ನಾಟಕದ ಜನತೆಯ ದೇಶಾಭಿಮಾನವನ್ನು ಮೆಟ್ಟಿ ನಿಲ್ಲುವ ವರ್ತನೆ ಸಿದ್ದರಾಮಯ್ಯನವರು ತೋರುತ್ತಿದ್ದಾರೆ, ಅದರ ಮುಂದುವರೆದ ಭಾಗ ಬೆಳಗಾವಿಯ ಘಟನೆ.

ಸಿದ್ದರಾಮಯ್ಯನವರ ವಿರುದ್ಧ ಘೋಷಣೆ ಕೂಗುವ ಮೂಲಕ ರಾಷ್ಟ್ರ ಭಕ್ತಿ ಮೆರೆದ ದಿಟ್ಟ ಮಹಿಳೆಯರೆಲ್ಲರಿಗೂ ಅಭಿನಂದನೆ ಸಲ್ಲಿಸುವೆ.

ಕರ್ತವ್ಯ ನಿರತ ಪೊಲೀಸ್ ವರಿಷ್ಠಾಧಿಕಾರಿಯ ಮೇಲೆ ದರ್ಪ ತೋರಿ ಅವರ ಮೇಲೆ ಹಲ್ಲೆಗೆ ಮುಂದಾದ ಸಿದ್ದರಾಮಯ್ಯನವರ ವರ್ತನೆ ಇಡೀ ಪೊಲೀಸ್‌ ಇಲಾಖೆಗೆ ಮಾಡಿದ ಅಪಮಾನವಾಗಿದೆ. ಈ ಹಿನ್ನೆಲೆಯಲ್ಲಿ ಅವಮಾನಕ್ಕೊಳಗಾದ ಪೊಲೀಸ್‌ ಅಧಿಕಾರಿ ಹಾಗೂ ಇಡೀ ಪೊಲೀಸ್‌ ಇಲಾಖೆಗೆ ಸಿದ್ದರಾಮಯ್ಯನವರು ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತೇನೆ.

ರಾಜಕೀಯ

ದೊಡ್ಡಬಳ್ಳಾಪುರ: ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ.06 ಕೊನೆಯ ದಿನ

ದೊಡ್ಡಬಳ್ಳಾಪುರ: ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ನ.06 ಕೊನೆಯ ದಿನ

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಸಾರ್ವಜನಿಕ ಪ್ರಕಟಣೆಯಂತೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ (Teachers' Constituency) ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ನಡೆಸುವ ಸಂಬಂಧ ಮತದಾರರ ಪಟ್ಟಿಗಳ (Voter list) ಸಮಗ್ರ ಪರಿಷ್ಕರಣೆ ನಡೆಸಲಾಗುತ್ತಿದೆ.

[ccc_my_favorite_select_button post_id="115466"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!