SSLC Result; Poor performance of Doddaballapur taluk

ಮೇ 4 ರಂದು NEET(UG) 2025ರ ಪರೀಕ್ಷೆ: ರಾಜ್ಯದಲ್ಲಿ 381 ಪರೀಕ್ಷಾ ಕೇಂದ್ರ

ಬೆಂಗಳೂರು: ರಾಷ್ಟ್ರದಾದ್ಯಂತ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವತಿಯಿಂದ 2025ರ NEET(UG) ಪರೀಕ್ಷೆಯು ಮೇ 4 ರಂದು ಮಧ್ಯಾಹ್ನ 2.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ಕರ್ನಾಟಕ ರಾಜ್ಯದಾದ್ಯಂತ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, 1,49,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಲು ಅವಕಾಶವಿರುತ್ತದೆ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲ್ಪಟ್ಟಿರುವ ಐಡಿ/ಆಧಾರ್ ಕಾರ್ಡ್/ಪಾನ್ ಕಾರ್ಡ್/ಡಿ.ಎಲ್/ವೋಟರ್ ಐಡಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಐಡಿ ಜೊತೆ, ಒಂದು ಪೋಸ್ಟ್ ಕಾರ್ಡ್ ಮತ್ತು ಎರಡು ಪಾಸ್ ಪೋರ್ಟ್ ಅಳತೆಯ ಫೋಟೋಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹಾಜರಾಗಬೇಕು.

ಬೆಳಿಗ್ಗೆ 11.00 ಗಂಟೆಯಿಂದ NTA ವತಿಯಿಂದ ನೇಮಿಸಿರುವ ಏಜೆನ್ಸಿಗಳಿಂದ ಸಂಬಂಧಪಟ್ಟ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಹಾಗೂ ನಿಯೋಜಿತ ಪೊಲೀಸ್ ಸಿಬ್ಬಂದಿ ವತಿಯಿಂದ ವಿದ್ಯಾರ್ಥಿಗಳ ಸುರಕ್ಷತಾ ತಪಾಸಣೆಯನ್ನು ನಡೆಸಲಾಗುವುದು.

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ವಯ ಮಾರ್ಗಸೂಚಿಯನ್ನು ಪಾಲಿಸಬೇಕು.

ವಿದ್ಯಾರ್ಥಿಗಳು ಪೂರ್ಣ ತೋಳಿರುವ ಮೇಲಂಗಿ/ ದೊಡ್ಡ ಬಟನ್ ಗಳಿರುವ ಶರ್ಟ್ /ಪ್ಯಾಂಟ್/ಶೂ/ ಸಾಕ್ಸ್ / ಎತ್ತರದ ಚಪ್ಪಲಿಗಳು/ ಕಿವಿಯೋಲೆ/ಬಳೆ/ಸರ/ಕಾಲ್ಗೆಜ್ಜೆ/ಮೂಗುತಿ/ಜಡೆ ಕ್ಲಿಪ್ ಹಾಗೂ ಇತರ ಯಾವುದೇ ಮೆಟಲ್ ಉಪಕರಣಗಳನ್ನು ಧರಿಸುವಂತಿಲ್ಲ ಹಾಗೂ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವಂತಿಲ್ಲ ಮತ್ತು ಧರಿಸುವಂತಿಲ್ಲ.

ಪ್ರವೇಶಾತಿ ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಂಡ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಇರುವ ಕೊಠಡಿಗೆ ನೇರವಾಗಿ ತೆರಳತಕ್ಕದ್ದು.

ಮಧ್ಯಾಹ್ನ 2.00 ರಿಂದ ಸಂಜೆ 5.00 ಗಂಟೆಯವರೆಗೆ ಪರೀಕ್ಷೆಯು ನಡೆಯಲಿದ್ದು, ಪರೀಕ್ಷಾ ಅವಧಿಯಲ್ಲಿ ಪ್ರತಿ ಗಂಟೆಗೊಂದು ಬಾರಿ ಬೆಲ್ ಮೂಲಕ ಸೂಚನೆ ನೀಡಲಾಗುವುದು.

ಪರೀಕ್ಷಾ ಕೇಂದ್ರಗಳಿಗೆ ನಿರಂತರ ವಿದ್ಯುತ್ ವ್ಯವಸ್ಥೆ, ಆರೋಗ್ಯ ಸಿಬ್ಬಂದಿ ಹಾಗೂ ತುರ್ತು ಸೇವೆಗಳ ನಿಯೋಜನೆ, ಪರೀಕ್ಷಾ ಕೇಂದ್ರಗಳ ಸ್ವಚ್ಛತೆ ಮತ್ತು ಪರೀಕ್ಷೆಗೆ ಹಾಜರಾಗುವ ದಿವ್ಯಾಂಗರು /ವಿಶೇಷ ಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಮಿಲ್ ಚೇರ್ ವ್ಯವಸ್ಥೆ ಹಾಗೂ ತುರ್ತು ಆಗ್ನಿ ಶಾಮಕ ವ್ಯವಸ್ಥೆಯನ್ನು ಜಿಲ್ಲಾಡಳಿತದ ವತಿಯಿಂದ ಮಾಡಲಾಗಿರುತ್ತದೆ.

NTA ವತಿಯಿಂದ Frisking ಮತ್ತು JAMMER ಅಳವಡಿಸಲು, ಏಜೆನ್ಸಿರವರನ್ನು ನಿಯೋಜಿಸಿದ್ದು, ಪರೀಕ್ಷಾ ಕೇಂದ್ರಕ್ಕೆ, JAMMER ಅಳವಡಿಕೆ ಮತ್ತು Frisking ಮಾಡುತ್ತಿರುವ ಬಗೆ, ಪರೀಕ್ಷಾ ಕೇಂದ್ರದ ಮುಖ್ಯಸ್ವರು ಖಚಿತಪಡಿಸಿಕೊಳ್ಳಬೇಕು.

ಪ್ರತಿ ಪದೀಕ್ಷಾ ಕೇಂದ್ರಕ್ಕೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ನಿಯೋಜಿತ ಸಿಬ್ಬಂದಿಯು ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳನ್ನು ಸೂಕ್ತ ತಪಾಸಣೆಗೆ ಒಳಪಡಿಸುವರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೆ ಕ್ರಮವಹಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ನಿಯೋಜಿತ ಅಧಿಕಾರಿ/ಸಿಬ್ಬಂದಿಯನ್ನು ಹೊರತುಪಡಿಸಿ, ಇತರೆ ಯಾವುದೇ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ದೊಡ್ಡಬಳ್ಳಾಪುರ ಶೋಭಾಯಾತ್ರೆಗೆ DJ ನಿಷೇಧ: ಸಂಸ್ಕೃತಿಯನ್ನು ಹೆಚ್ಚಿಸುವ ವಾದ್ಯಗಳನ್ನು ಬಳಸುವಂತೆ ಎಸ್ಪಿ ಮನವಿ

ದೊಡ್ಡಬಳ್ಳಾಪುರ ಶೋಭಾಯಾತ್ರೆಗೆ DJ ನಿಷೇಧ: ಸಂಸ್ಕೃತಿಯನ್ನು ಹೆಚ್ಚಿಸುವ ವಾದ್ಯಗಳನ್ನು ಬಳಸುವಂತೆ ಎಸ್ಪಿ ಮನವಿ

ಡಿಜೆಗೆ (DJ) ಬದಲಾಗಿ ಸಂಸ್ಕೃತಿ ಸಂಪ್ರದಾಯಗಳನ್ನು ಸಾರುವಂತಹ ಈ ಬೃಹತ್ ಕಾರ್ಯಕ್ರಮದಲ್ಲಿ ಚಂಡೆ, ಮದ್ದಳೆ, ತಮಟೆ, ವೀಣೆ. ಶಹನಾಯಿ, ನಗಾರಿ, ಸ್ಥಳೀಯ ಬ್ಯಾಂಡುಗಳಂತಹ ಯಾವುದೇ ಭಾರತೀಯ ಸಂಸ್ಕೃತಿಯನ್ನು ಹೆಚ್ಚಿಗೆ ಪ್ರತಿನಿಧಿಸುವಂತಹ ವಾದ್ಯಗಳನ್ನು ಬಳಸುವ ಮೂಲಕ

[ccc_my_favorite_select_button post_id="120532"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!