ಮೈಸೂರು: ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಳ್ಳುವ ಯಾವುದೇ ತೀರ್ಮಾನಗಳಿಗೆ ನಮ್ಮ ಬೆಂಬಲ ಇದೆ. ಉಗ್ರರಿಗೆ ಬೆಂಬಲವಾಗಿ ನಿಂತಿರುವ ಪಾಕಿಸ್ತಾನದವರ ಮನೆಗೆ ನುಗ್ಗಿ ಹೊಡೆಯಬೇಕು ಎಂದು ಸಚಿವ ಸಂತೋಷ್ ಲಾಡ್ (Santosh lad) ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದ ಒಳಕ್ಕೆ ನುಗ್ಗಿ ಹೊಡೆಯಿರಿ. ಇದು ನನ್ನ ವೈಯುಕ್ತಿಕ ಅಭಿಪ್ರಾಯ. 1971ರಲ್ಲಿ ಇಂದಿರಾಗಾಂಧಿ ಯವರು ಪಾಕಿಸ್ತಾನದವರನ್ನು ಮಂಡಿಯೂರಿಸಿದ್ದರು. ಈಗ ಲಕ್ಷಾಂತರ ಜನರನ್ನು ಮಂಡಿಯೂರಿಸಬೇಕಿದೆ.
ಪ್ರಧಾನ ಮಂತ್ರಿಗಳು ತೆಗೆದುಕೊಳ್ಳುವ ತೀರ್ಮಾನಗಳಿಗೆ ನಮ್ಮ ಬೆಂಬಲ ಇದೆ. ಅಮಿತ್ ಶಾ ಅವರು ನನಗೆ ಸಿಕ್ಕಾಗ ಇದನ್ನೇ ನಾನು ಹೇಳಿದ್ದೇನೆ. ಈಗಲೂ ಅದನ್ನೇ ನಾನು ಹೇಳುತ್ತೇನೆ. ಈ ವಿಚಾರದಲ್ಲಿ ಅಭಿಪ್ರಾಯ ಭಿನ್ನತೆ ಇಲ್ಲ ಎಂದರು.
ಪ್ರಧಾನಿ ಗಾಯಬ್ ಎಂದು ಟ್ವಿಟ್ ಮಾಡಿ ವಾಪಸ್ ಪಡೆದ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಆ ವಿಚಾರ ನನಗೆ ಗೊತ್ತಿಲ್ಲ. ಯಾರು, ಯಾಕೆ ಮಾಡಿದರು, ಯಾಕೆ ವಾಪಸ್ ತೆಗೆದುಕೊಂಡರು ಅನ್ನೋದು ನನಗೆ ಗೊತ್ತಿಲ್ಲ ಎಂದು ಸಂತೋಷ್ ಲಾಡ್ (Santosh lad) ತಿಳಿಸಿದರು.