Sonu Nigam insult against Kannada and Kannadigas; Karave got angry

ಕನ್ನಡಿಗರ ವಿರುದ್ಧ ನಾಲಿಗೆ ಹರಿಬಿಟ್ಟ ಗಾಯಕ ಸೋನು ನಿಗಮ್; ಕೆರಳಿದ ಕರವೇ, ಅಂತದ್ದೇನಾಯ್ತು..? Video ನೋಡಿ

ಬೆಂಗಳೂರು: ಕಾರ್ಯಕ್ರಮವೊಂದರಲ್ಲಿ ಖ್ಯಾತ ಗಾಯಕ ಸೋನು ನಿಗಮ್ (Sonu nigam) ಕರ್ನಾಟಕ ಹಾಗೂ ಕನ್ನಡಿಗರ ವಿರುದ್ಧ ನಾಲಿಗೆ ಹರಿಬಿಟ್ಟಿರುವುದಕ್ಕೆ ರಾಜ್ಯದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ‌.

ಸೋನು ನಿಗಮ್ ಈ ಕೂಡಲೇ ಕ್ಷಮೆಯಾಚಿಸಬೇಕು ಎಂದು ಕನ್ನಡ ಪರ ಸಂಘಟನೆಗಳು ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನ ಕಾಲೇಜೊಂದರ ಸಂಗೀತ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಹಿಂದಿ ಹಾಡು ಹಾಡುತ್ತಿದ್ದರು. ಆಗ ವಿದ್ಯಾರ್ಥಿಯೊಬ್ಬ ಕನ್ನಡ ಕನ್ನಡ ಎಂದು ಪಟ್ಟುಹಿಡಿಯುವಂತೆ ಬೇಡಿಕೆ ಇಟ್ಟ. ಇದರಿಂದ ಸಿಟ್ಟಾದ ಸೋನು ನಿಗಮ್ ಪಹಲ್ಲಾಮ್‌ನಲ್ಲಿ ನಡೆದ ಘಟನೆಯ ಕಾರಣ ಇದೇ. ನಿಮ್ಮ ಮುಂದೆ ಯಾರು ನಿಂತಿದ್ದಾರೆ ಎಂದು ನೋಡಿ ಎಂದು ಕನ್ನಡಿಗರನ್ನು ಉಗ್ರರಿಗೆ ಹೋಲಿಸಿದ್ದಾರೆ.

ಸೋನು ನಿಗಮ್ ಅವರ ಈ ಹೇಳಿಕೆಗೆ ಕನ್ನಡ ಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಕನ್ನಡ ಭಾಷೆಗೂ ಪೆಹಲ್ಲಾಂ ಘಟನೆಗೂ ಸಂಬಂಧ ಕಲ್ಪಿಸಿದ ಗಾಯಕ ಸೋನು ನಿಗಂ ಕನ್ನಡಿಗರ ಕ್ಷಮೆ ಕೇಳಬೇಕು, ಇಲ್ಲವೇ ಕರ್ನಾಟಕಕ್ಕೆ ಬರುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಕನ್ನಡಿಗರ ಅನ್ನ ತಿಂದು ಕೊಬ್ಬಿರುವ ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾನೆ. ಇದು ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಕರವೇ ಪ್ರವೀಣ್ ಶೆಟ್ಟಿ ಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಿಗರು ಕೊಲ್ಲು ಕೊಟ್ಟು ನಾವೇ ಹೊಡಿಸಿಕೊಳ್ಳುವ ಪರಿಸ್ಥಿತಿಗೆ ಬಂದಿದ್ದಕ್ಕೆ ಇಂದು ಉಗ್ರಗಾಮಿಗಳು ಎನಿಸಿಕೊಳ್ಳಬೇಕಾಗಿದೆ. ಯಾಕೇಳಿ ಕನ್ನಡಿಗರ ಕಡೆಗಣಿಸಿ, ಓ ಇವನ್ಯಾರೋ ಮಹಾಪುರುಷ ಅಂತ ಲಕ್ಷಲಕ್ಷ ಹಣ ನೀಡಿ ಕರ್ಕೊಂಡ್ ಬಂದ್ ಅವಕಾಶ ಕೊಟ್ಟಿದಕ್ಕೆ, ಕನ್ನಡ ಹಾಡನ್ನು ಕೇಳಿದರೆ ಉಗ್ರಗಾಮಿಗಳಿಗೆ ಹೋಲಿಸಿದ್ದಾನೆ‌

ಅಲ್ರೀ ಬೆಂಗಳೂರಿನ ಕಾರ್ಯಕ್ರಮದಲ್ಲಿ ಕನ್ನಡ ಹಾಡು ಹಾಡುವಂತೆ ಕೇಳಿದರೆ ತಪ್ಪಾ..?, ಕರ್ನಾಟಕದಲ್ಲಿ ಕನ್ನಡ ಕೇಳದೇ ಮತ್ತೇನ್ ಕೇಳಬೇಕು.‌.? ಇದು ಆತನ ದುರಂಕಾರದ ವರ್ತನೆ ಅಲ್ಲವೆ. ಇದು ಕನ್ನಡ, ಕನ್ನಡಿಗರಿಗೆ ಮಾಡಿರುವ ಅವಮಾನವಲ್ಲದೆ ಮತ್ತೇನು..?

ಸೋನು ನಿಗಮ್ ಹೇಳಿಕೆಯನ್ನು ಕನ್ನಡಿಗರಿಗಾದ ಅವಮಾನ ಎಂದು ಕನ್ನಡದ ನಿರ್ಮಾಪಕರು ಪರಿಗಣಿಸಬೇಕು, ಇನ್ನು ಮುಂದೆ ಈತನಿಂದ ಕನ್ನಡ ಚಿತ್ರಗಳಲ್ಲಿ ಹಾಡನ್ನು ಹಾಡಿಸಬಾರದು, ಹಾಡಿಸಿದರೆ ಪರಿಣಾಮ ಸರಿಯಿರುವುದಿಲ್ಲ ಎಂದು ಇದೇ ವೇಳೆ ರಾಜಘಟ್ಟರವಿ ಎಚ್ಚರಿಕೆ ನೀಡಿದ್ದಾರೆ.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!