Tiranga Yatra held in Bengaluru to show support for the Indian Army

ಭಾರತೀಯ ಸೇನೆಗೆ ಬೆಂಬಲ ಸೂಚಿಸಿ ಬೆಂಗಳೂರಲ್ಲಿ ನಡೆದ ತಿರಂಗಾ ಯಾತ್ರೆ.. ಸಾರ್ವಜನಿಕರಿಂದ ಭಾರಿ ಬೆಂಬಲ

ಬೆಂಗಳೂರು: ಪಹಲ್ಗಮ್ ನರಮೇಧಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸುತ್ತಿರುವ ಆಪರೇಷನ್ ಸಿಂಧೂರ (Operation Sindoora) ಕಾರ್ಯಾಚರಣೆಗೆ ಬೆಂಬಲ ಸೂಚಿಸಲು ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ನಡೆಸಿದ “ಜೈ ಹಿಂದ್ ತಿರಂಗಾ ಯಾತ್ರೆ”ಗೆ ಸಾರ್ವಜನಿಕರಿಂದ ಭಾರಿ ಬೆಂಬಲ ವ್ಯಕ್ತವಾಯಿತು.

ಕೆ ಆರ್ ಸರ್ಕಲ್ ನಿಂದ ಮಿನ್ಸ್ಕ್ ಚೌಕದವರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಗುರುವಾರ ತಿರಂಗಾ ಯಾತ್ರೆ ನಡೆಸಲಾಯಿತು.

ಇದು ಪಕ್ಷಾತೀತ ಯಾತ್ರೆಯಾಗಿದ್ದರಿಂದ ಸರಕಾರಿ, ಖಾಸಗಿ ಉದ್ದಿಮೆಗಳ ನೌಕರರು, ಸಂಘ ಸಂಸ್ಥೆಗಳು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಸಾರ್ವಜನಿಕರಿಗೆ ಆಹ್ವಾನ ನೀಡಲಾಗಿತ್ತು.

ಈ ಯಾತ್ರೆಯಲ್ಲಿ ವಿದ್ಯಾರ್ಥಿಗಳು, ಸರ್ಕಾರಿ ನೌಕರರು ಸೇರಿದಂತೆ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿ, ತ್ರಿವರ್ಣ ಧ್ವಜ ಹಿಡಿದು ಭಾರತ ಹಾಗೂ ಸೈನಿಕರ ಪರ ಘೋಷಣೆಗಳನ್ನು ಕೂಗಿದರು.

ಆ ಮೂಲಕ ದೇಶದ ಭದ್ರತೆ ವಿಚಾರದಲ್ಲಿ ಎಲ್ಲರೂ ಒಟ್ಟಾಗಿ ನಿಲ್ಲುತ್ತೇವೆ. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನಾ ಪಡೆಗಳಿಗೆ ಸಂಪೂರ್ಣ ಬೆಂಬಲ ಸೂಚಿಸುತ್ತೇವೆ ಎಂಬ ಸಂದೇಶ ರವಾನಿಸಲಾಯಿತು.

ಭಾರತ ಬಲಿಷ್ಠವಾಗಿದೆ, ಪಾಕಿಸ್ತಾನವನ್ನು ಮಟ್ಟಹಾಕಲಿದೆ: ಡಿಸಿಎಂ ಡಿ.ಕೆ ಶಿವಕುಮಾರ್

“ಭಾರತ ಬಲಿಷ್ಠವಾಗಿದೆ, ಪಾಕಿಸ್ತಾನದ ದಾಳಿಯನ್ನು ಸಮರ್ಥವಾಗಿ ಎದುರಿಸಿ, ಮಟ್ಟಹಾಕಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಬೆಂಗಳೂರಿನ ಕೆ.ಆರ್ ವೃತ್ತದಿಂದ ಮಿನ್ಸ್ಕ್ ಸ್ಕ್ವೇರ್ ವೃತ್ತದವರೆಗೂ ಶುಕ್ರವಾರ ನಡೆದ ಜೈ ಹಿಂದ್ ತಿರಂಗಾ ಯಾತ್ರೆ ವೇಳೆ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ನಿನ್ನೆ ರಾತ್ರಿ ಪಾಕಿಸ್ತಾನ ಜಮ್ಮು ಕಾಶ್ಮೀರದ ಮೇಲೆ ದಾಳಿ ಮಾಡಿರುವ ಬಗ್ಗೆ ಕೇಳಿದಾಗ, “ದೇಶ ಇದನ್ನು ಸಮರ್ಥವಾಗಿ ಎದುರಿಸಲಿದೆ. ಇಂದಿರಾ ಗಾಂಧಿ ಅವರ ಕಾಲದಲ್ಲಿ ಹೇಗೆ ಪಾಕಿಸ್ತಾನವನ್ನು ಬಗ್ಗುಬಡಿಯಲಾಗಿತ್ತೋ, ಅದೇ ರೀತಿ ಈ ಬಾರಿಯೂ ಭಾರತ ಈ ಪರಿಸ್ಥಿತಿಯನ್ನು ಎದುರಿಸಿ ಗೆಲ್ಲಲಿದೆ” ಎಂದು ತಿಳಿಸಿದರು.

ತಿರಂಗಾ ಯಾತ್ರೆ ಬಗ್ಗೆ ಕೇಳಿದಾಗ, “ಕರ್ನಾಟಕದಲ್ಲಿ ಜೈ ಹಿಂದ್ ತಿರಂಗ ಯಾತ್ರೆ ಆಯೋಜಿಸಲಾಗಿತ್ತು. ನಮ್ಮ ಸೇನೆಯ ಯೋಧರು ದೇಶ ರಕ್ಷಣೆಗೆ ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರದ ತೀರ್ಮಾನವನ್ನು ಎಲ್ಲರೂ ಒಟ್ಟಾಗಿ ಬೆಂಬಲಿಸಬೇಕು. ಹೀಗಾಗಿ ಈ ಯಾತ್ರೆ ನಡೆಸಲಾಗಿದೆ. ಇದಕ್ಕೆ ಸಮಾಜದ ಎಲ್ಲಾ ವರ್ಗದವರನ್ನು ಆಹ್ವಾನಿಸಲಾಗಿತ್ತು. ವಿದ್ಯಾರ್ಥಿಗಳು, ಸರ್ಕಾರಿ ನೌಕರರು, ಸಂಘಸಂಸ್ಥೆಗಳು ಸೇರಿದಂತೆ ಎಲ್ಲರಿಗೂ ಆಹ್ವಾನಿಸಲಾಗಿತ್ತು. ಈ ಯಾತ್ರೆಗೆ ಕರೆ ಕೊಟ್ಟ ಅಲ್ಪಾವಧಿಯಲ್ಲಿ ಎಲ್ಲಾ ವರ್ಗದ ಜನರು ಭಾರಿ ಪ್ರಮಾಣದಲ್ಲಿ ಆಗಮಿಸಿರುವುದಕ್ಕೆ ಧನ್ಯವಾದಗಳು” ಎಂದು ತಿಳಿಸಿದರು.

ಭಯೋತ್ಪಾದನೆಗೆ ಇತಿಶ್ರೀ ಹಾಡಲು ಇದು ಸೂಕ್ತ ಸಮಯವೇ ಎಂದು ಕೇಳಿದಾಗ, “ನಮ್ಮ ಸೇನೆಯವರು ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡುತ್ತಿದ್ದಾರೆ. ಅವರ ಕಾರ್ಯವೈಖರಿ ಬಗ್ಗೆ ಬಹಳ ಹೆಮ್ಮೆ ಇದೆ. ಸೈನಿಕರು ನಮ್ಮ ಬಾವುಟವನ್ನು ಉತ್ತುಂಗದಲ್ಲಿ ಹಾರುವಂತೆ ಮಾಡಿದ್ದಾರೆ. ಅವರಿಗೆ ನಾವೆಲ್ಲರೂ ಒಟ್ಟಾಗಿ ಬೆಂಬಲ ಸೂಚಿಸಬೇಕು. ಭಯೋತ್ಪಾದನೆ ನಿರ್ಮೂಲನೆಯಾಗಬೇಕು” ಎಂದರು.

ಸೇನೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಪ್ರವೇಶ ಮಾಡಬೇಕೆ ಎಂದು ಕೇಳಿದಾಗ, “ಈ ವಿಚಾರವಾಗಿ ನಾನು ಈಗ ಚರ್ಚೆ ಮಾಡುವುದಿಲ್ಲ. ಕೇಂದ್ರ ಸರ್ಕಾರ ಹಾಗೂ ಸೇನೆ ಈ ವಿಚಾರವಾಗಿ ತೀರ್ಮಾನ ಕೈಗೊಳ್ಳಲಿದೆ” ಎಂದು ತಿಳಿಸಿದರು.

ರಾಜಕೀಯ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಾಗಲಕೋಟೆ ವಿಧಾನಸಭೆ ಟಿಕೆಟ್ ಅನ್ನು ಎಚ್‌.ವೈ. ಮೇಟಿ ಅವರ ಎರಡನೇ ಮಗ ಉಮೇಶ್ ಮೇಟಿ ಅವರಿಗೆ ಹಾಗೂ ದಾವಣಗೆರೆ ದಕ್ಷಿಣ ಟಿಕೆಟ್ ಅನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದ ಶಾಮನೂರು ಶಿವಶಂಕರಪ್ಪ ಅವರ

[ccc_my_favorite_select_button post_id="120378"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!