ಬೆಂಗಳೂರು: ಬೆಂಗಳೂರು ನಗರದ ಮೇಲೂ ಪಾಕಿಸ್ತಾನ ದಾಳಿ ನಡೆಸುವ ಸಾಧ್ಯತೆಯಿದೆ ಎಂಬ ಹೇಳಿಕೆ ನೀಡಿ ಜನರಲ್ಲಿ ಭಯದ ವಾತಾವರಣ ಸೃಷ್ಟಿಸಿರುವ ಆರೋಪದಡಿಯಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ವಿರುದ್ಧ ದೂರು ದಾಖಲಿಸಲಾಗಿದೆ.
ಶನಿವಾರ ಈ ಸಂಬಂಧ ಹೈಗ್ರೌಂಡ್ಸ್ ಠಾಣೆಯ ಪೊಲೀಸರಿಗೆ ದೂರು ಸಲ್ಲಿಸಿದ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಎಸ್.ಮನೋಹರ್, ನಿರಂತರವಾಗಿ ಸುಳ್ಳು ಹೇಳಿಕೆ, ತಪ್ಪು ಮಾಹಿತಿ ಪ್ರಚಾರ ಮಾಡುವ ಮೂಲಕ ಸುದ್ದಿಯಾಗುತ್ತಿರುವ ಚಕ್ರವರ್ತಿ ಸೂಲಿಬೆಲೆ, ಇತ್ತೀಚೆಗೆ ಪಾಕಿಸ್ತಾನ ಬೆಂಗಳೂರು ನಗರದ ಮೇಲೂ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಹೇಳಿಕೆ ನೀಡಿ ಜನರಲ್ಲಿ ಭಯವನ್ನು ಹುಟ್ಟಿಸುವ ಯತ್ನ ಮಾಡಿದ್ದರು ಎಂದರು.
ಅಷ್ಟು ಮಾತ್ರವಲ್ಲದೆ ಪಾಕಿಸ್ತಾನದ ಉಗ್ರರ ಜತೆ ಭಾರತದ ಏಜೆಂಟ್ಗಳು ಸಂಪರ್ಕದಲ್ಲಿದ್ದಾರೆ ಎಂದು ಚಕ್ರವರ್ತಿ ಸೂಲಿಬೆಲೆ ಅವರು ಹೇಳಿಕೆ ನೀಡಿ ದೇಶದ ಗೌಪ್ಯ ವಿಚಾರಗಳನ್ನು ಮಾಧ್ಯಮಗಳ ಮುಂದೆ ಹೇಳುತ್ತಿದ್ದಾರೆ. ಕಾಂಗ್ರೆಸ್ ಬೇರೆ ಅಲ್ಲ, ಪಾಕಿಸ್ತಾನ ಬೇರೆ ಅಲ್ಲ ಎಂದೂ ಹೇಳಿದ್ದಾರೆ. ಈ ಹೇಳಿಕೆಗಳನ್ನು ಖಂಡಿಸಿ ಚಕ್ರವರ್ತಿ ಸೂಲಿಬೆಲೆ ಅವರನ್ನು ಬಂಧಿಸಬೇಕು ಎಂದು ಎಸ್. ಮನೋಹರ್ ಆಗ್ರಹಿಸಿದರು.
ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಿರಂತರವಾಗಿ ದಾಳಿ ನಡೆಸುತ್ತಿದೆ ಹಾಗೂ ಭಯೋ ತ್ಪಾದಕರ ಅಡಗು ತಾಣಗಳನ್ನು ಧ್ವಂಸ ಮಾಡುತ್ತಿದೆ. ಇಂತಹ ಸಂದರ್ಭದಲ್ಲಿ ರಾಜಕೀಯ ಲಾಭಕ್ಕಾಗಿ ಪ್ರಚಾರ ಪಡೆಯುವ ಚಕ್ರವರ್ತಿ ಸೂಲಿಬೆಲೆ, ಭಾರತದ ಸೈನಿಕರ ಆತ್ಮಸ್ಥೆಯ ರ್ಯ ವನ್ನು ಕುಗ್ಗಿ ಸುವಂತಹ ಭಾಷಣ ಮಾಡುತ್ತಿದ್ದಾರೆ. ಕಾಂಗ್ರೆಸ್ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಆತನ ವಿರುದ್ದ ಕೂಡಲೇ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಬೇಕು.
ಪ್ರತಿ ಬಾರಿಯೂ ಸಹ ಹಿಂದೂ-ಮುಸ್ಲಿಮ್ ಹಾಗೂ ಭಾರತ-ಪಾಕಿಸ್ತಾನ ಎಂಬ ಹೆಸರಿನಲ್ಲಿ ತನ್ನ ಪ್ರಚಾರವನ್ನು ಗಿಟ್ಟಿಸಿಕೊಳ್ಳಲು ಚಕ್ರವರ್ತಿ ಸೂಲಿಬೆಲೆ ಸುಳ್ಳಿನ ಮಾಹಿತಿಯನ್ನು ಹರಿಬಿಡುತ್ತಾರೆ. ಸುಳ್ಳನ್ನು ಪ್ರಚಾರ ಮಾಡಿ ಸತ್ಯದ ರೀತಿಯಲ್ಲಿ ಬಿಂಬಿಸಿ ದೇಶದ ಯೋಧರ ಆತ್ಮಬಲವನ್ನು ಕುಗ್ಗಿಸುವ ಹೇಳಿಕೆ ನೀಡುತ್ತಾ ಬಂದಿದ್ದಾರೆ ಎಂದು ಆರೋಪಿಸಿದರು.