ಹಿಂದೂ ಧರ್ಮಶಾಸ್ತ್ರದಲ್ಲಿ ವರ್ಣಿಸಿರುವ ಮಹಾದಾನಗಳಲ್ಲಿ ‘ಅನ್ನದಾನ’ (Food donation) ಮಹತ್ವದ ದಾನವಾಗಿದೆ.
‘ಅನ್ನದಾನದಂತಹ ದಾನ ಹಿಂದೆಂದೂ ಆಗಿಲ್ಲ ಮುಂದೆಂದೂ ಆಗಲಾರದು. ಹಾಗಾಗಿ ಯಾವಾಗಲೂ ಅನ್ನದಾನ ಮಾಡಬೇಕು’ ಎಂದು ಮಹಾಭಾರತದಲ್ಲಿ ಹೇಳಲಾಗಿದೆ.
ಅನ್ನದಾನದ ಲಾಭ: ನಾವು ಇತರರಿಗೆ ಅನ್ನದಾನ ಮಾಡಿದರೆ ಶ್ರೀ ಅನ್ನಪೂರ್ಣಾಮಾತೆಯು ಪ್ರಸನ್ನಳಾಗಿ ನಮ್ಮ ಮೇಲೆ ಕೃಪೆ ಮಾಡುತ್ತಾಳೆ. ಅನ್ನದಾನ ಮಾಡುವವನಿಗೆ ಅನ್ನ ಸ್ವೀಕರಿಸುವವರಿಂದ ಆಶೀರ್ವಾದಾತ್ಮಕ ಸದಿಚ್ಛೆಗಳ ಲಾಭವೂ ಆಗುತ್ತದೆ.
ಅನ್ನದಾನವನ್ನು ಯಾರು ಮತ್ತು ಎಷ್ಟು ಮಾಡಬೇಕು ?: ಧರ್ಮಶಾಸ್ತ್ರಕ್ಕನುಸಾರ ಯಾರು ಧನಾರ್ಜನೆಯನ್ನು (ಹಣ ಸಂಪಾದನೆ) ಮಾಡುತ್ತಾರೆಯೋ ಮತ್ತು ಯಾರ ಮನೆಯಲ್ಲಿ ಆಹಾರ ಬೇಯಿಸಲಾಗುತ್ತದೆಯೋ, ಅಂತಹ ಗೃಹಸ್ಥನು ‘ಅನ್ನದಾನ’ ಮಾಡುವುದು ಅವನ ಕರ್ತವ್ಯವೇ ಆಗಿರುತ್ತದೆ. ಅವನಿಗೆ ಎಷ್ಟು ಸಾಧ್ಯವಿದೆಯೋ ಅಷ್ಟು ಅನ್ನದಾನ ಮಾಡಬೇಕು.
ಅನ್ನದಾನದ ಮಹತ್ವ : ಹಿಂದೂ ಧರ್ಮಶಾಸ್ತ್ರದಲ್ಲಿ ವರ್ಣಿಸಿರುವ ಮಹಾದಾನಗಳಲ್ಲಿ ‘ಅನ್ನದಾನ’ ಮಹತ್ವದ ದಾನವಾಗಿದೆ. ‘ಅನ್ನದಾನದಂತಹ ದಾನ ಹಿಂದೆಂದೂ ಆಗಿಲ್ಲ ಮುಂದೆಂದೂ ಆಗಲಾರದು. ಹಾಗಾಗಿ ಯಾವಾಗಲೂ ಅನ್ನದಾನ ಮಾಡಬೇಕು’ ಎಂದು ಮಹಾಭಾರತದಲ್ಲಿ ಹೇಳಲಾಗಿದೆ.
ಪರ್ವಕಾಲದಲ್ಲಿ ಅನ್ನದಾನ ಮಾಡುವುದು ಹೆಚ್ಚು ಲಾಭದಾಯಕ ! : ಮಕರ ಸಂಕ್ರಾಂತಿಯಿಂದ ರಥಸಪ್ತಮಿ, ಚಾತುರ್ಮಾಸ, ಉತ್ಸವ, ಹಬ್ಬ, ವ್ರತ ಮುಂತಾದ ಪರ್ವಕಾಲದಲ್ಲಿ ಅನ್ನದಾನ ಮಾಡುವುದರಿಂದ ಹೆಚ್ಚಿನ ಆಧ್ಯಾತ್ಮಿಕ ಲಾಭವಾಗುತ್ತದೆ. ಅದರಲ್ಲಿಯೂ ಧಾರ್ಮಿಕ ಸ್ಥಳಗಳಲ್ಲಿ ದಾನ ಮಾಡಿದರೆ ಇನ್ನೂ ಹೆಚ್ಚು ಲಾಭವಾಗುತ್ತದೆ.
ಅನ್ನದಾನವು ಧರ್ಮಕರ್ತವ್ಯವಾಗಿದೆ ಎಂದು ತಿಳಿದು ದಾನ ಮಾಡಿ ! : ಅಹಂಭಾವದಿಂದ ಅನ್ನದಾನ ಮಾಡಿದರೆ ಫಲ ಅರ್ಧವಾಗುತ್ತದೆ. ಹಾಗಾಗಿ ‘ಅನ್ನದಾನ ಮಾಡುವುದು ನಮ್ಮ ಧರ್ಮಕರ್ತವ್ಯವೇ ಆಗಿದೆ’ ಎಂಬ ಭಾವದಿಂದ ಅನ್ನದಾನ ಮಾಡಬೇಕು.
ಕೃಪೆ: ಸನಾತನ ಸಂಸ್ಥೆ. (ಸಾಮಾಜಿಕ ಜಾಲತಾಣ)