ಕದನವಿರಾಮ: ಪ್ರಿಯಾಂಕ್ ಖರ್ಗೆಗೆ ಪ್ರಶ್ನೆಗೆ ಆರ್ ಅಶೋಕ್ ತಿರುಗೇಟು

Ceasefire: R Ashok hits back at Priyank Kharge's question

ಬೆಂಗಳೂರು: ಭಾರತ-ಪಾಕಿಸ್ತಾನದ ಮಧ್ಯೆ ಏರ್ಪಟ್ಟ ಕದನ ವಿರಾಮ ಕುರಿತು ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಸತ್ಯ ಹೇಳಬೇಕು, ಪಹಲ್ಗಾಂ ದಾಳಿ ನಡೆಸಿದ ನಾಲ್ವರು ಉಗ್ರರು ಈಗ ಎಲ್ಲಿದ್ದಾರೆ? ಎಂಬುದನ್ನು ಹೇಳಲಿ ಎಂದು ಆರ್‌ಡಿಪಿಆರ್‌ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆಗ್ರಹಿಸಿದ್ದಾರೆ.

ಈ ಕುರಿತು ತಿರುಗೇಟು ನೀಡಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ (R Ashoka), ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ದೇಶದ್ರೋಹಿಗಳು ನಿಮ್ಮ ಕಾಂಗ್ರೆಸ್ ಕಚೇರಿಯಲ್ಲಿ ಐಟಿ ಸೆಲ್ ನಡೆಸುತ್ತಿದ್ದರಾ ಸಚಿವ ಪ್ರಿಯಾಂಕ್ ಖರ್ಗೆ ಅವರೇ? ಎಂದು ಪ್ರಶ್ನಿಸಿದ್ದಾರೆ.

ಪಹಲ್ಗಾಮ್ ನಲ್ಲಿ ಅಮಾಯಕ ಭಾರತೀಯ ಪ್ರವಾಸಿಗರನ್ನು ಕೊಂದ ಉಗ್ರರು ತರಬೇತಿ ಪಡೆದ ಕೇಂದ್ರಗಳು, ಅಲ್ಲಿ ನೆಲೆಸಿದ್ದ ಅವರ 100ಕ್ಕೂ ಹೆಚ್ಚು ಜಿಹಾದಿ ಸಂಗಡಿಗರು, ಅವರ ತಲೆಗೆ ಮತಾಂಧತೆ ತುಂಬಿದ ಭಯೋತ್ಪಾದಕ ಸಂಘಟನೆಗಳ Most Wanted ನಾಯಕರು, ಅವರು ನಡೆಸುತ್ತಿದ್ದ ಮದರಸಾಗಳು, ಅಲ್ಲಿದ್ದ ಶಸ್ತ್ರಾಸ್ತ್ರ, ಸಂವಹನ ಉಪಕರಣಗಳು, ಅವರಿಗೆ ಬೆಂಬಲವಾಗಿ ನಿಂತಿದ್ದ ಪಾಕಿಸ್ತಾನದ ಸೇನಾ ವಾಯುನೆಲೆಗಳು, ಎಲ್ಲವನ್ನೂ ನಮ್ಮ ಸೇನಾಪಡೆಗಳು ನೆಲಸಮ ಮಾಡಿವೆ.

ಪಾಕಿಸ್ತಾನದ ಆಶ್ರಯದಲ್ಲಿದ್ದ ಉಗ್ರರ ಸಾಮ್ರಾಜ್ಯವೇ ಧೂಳೀಪಟ ಆಗಿರುವಾಗ ಇನ್ನು ಅಲ್ಲಿ ತಲೆ ಎತ್ತಿದ ಹುಳು-ಹುಪ್ಪಟೆಗಳು ಉಳಿಯುತ್ತವೆಯೇ? ಪಹಲ್ಗಾಮ್ ದಾಳಿ ನಡೆಸಿದ ಉಗ್ರರು ಒಂದು ವೇಳೆ ಇನ್ನೂ ಬದುಕಿದ್ದರೆ, ಅವರು, ಪ್ರಪಂಚದ ಯಾವ ಭೂಭಾಗದಲ್ಲಿ, ಪಾತಾಳದಲ್ಲಿ ಅಡಗಿದ್ದರೂ ನಮ್ಮ ಸೇನಾಪಡೆಗಳು, ರಕ್ಷಣಾ ಪಡೆಗಳು ಇಂದಲ್ಲ ನಾಳೆ ಹಿಡಿದೇ ಹಿಡಿಯುತ್ತಾರೆ.

ನಮ್ಮ ಸೇನಾಪಡೆಗಳ ಸಾಮರ್ಥ್ಯದ ಬಗ್ಗೆ ಇನ್ನೂ ಏನಾದರೂ ಅನುಮಾನ ಇದ್ದರೆ ದಯವಿಟ್ಟು ಒಮ್ಮೆ ಪಾಕಿಸ್ತಾನದ ವಾಯು ನೆಲೆಗಳಿಗೆ, ಉಗ್ರರ ಅಡಗುತಾಣಗಳಿಗೆ ಭೇಟಿ ಕೊಟ್ಟು ಬನ್ನಿ.

ರಾಷ್ಟ್ರೀಯ ಭದ್ರತೆ ವಿಚಾರ ನಮ್ಮ ಸೇನಾಪಡೆಗಳ ಬಿಡಿ. ಆದರೆ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ದೇಶದ್ರೋಹಿಗಳು ಎಲ್ಲಿದ್ದಾರೆ ಎಂದು ಮೊದಲು ಉತ್ತರಿಸಿ ಪುಣ್ಯ ಕಟ್ಟಿಕೊಳ್ಳಿ.

ಫೋರೆನ್ಸಿಕ್ ವರದಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದು ಸಾಬೀತಾದರೂ ಆ ದೇಶದ್ರೋಹಿಗಳನ್ನು ಸಮರ್ಥನೆ ಮಾಡಿಕೊಂಡರಲ್ಲ, ಬಹುಶಃ ಅವರು ನಿಮಗೆ ಬಹಳ ಬೇಕಾದವರು ಇರಬೇಕು.

ಅಂದು ಗೆದ್ದ ರಾಜ್ಯಸಭಾ ಸದಸ್ಯರು ತಮ್ಮ ತಂದೆ ಖರ್ಗೆ ಅವರ ಪರಮಾಪ್ತರು ಕೂಡ. ಆದ್ದರಿಂದ ಆ ದೇಶದ್ರೋಹಿಗಳು ಎಲ್ಲಿದ್ದಾರೆ ಎಂದು ಬಹುಶಃ ತಮಗೆ ಚೆನ್ನಾಗಿ ಗೊತ್ತಿರಲೇಬೇಕು. ಮೊದಲು ಆ ದೇಶದ್ರೋಹಿಗಳನ್ನು ಹಿಡಿಯಲು ಪೊಲೀಸರಿಗೆ ಸಹಾಯ ಮಾಡಿ ಅವರನ್ನ ಜೈಲಿಗೆ ಅಟ್ಟಿ.

ರಾಷ್ಟ್ರೀಯ ಭದ್ರತೆ ವಿಚಾರದ ಬಗ್ಗೆ ಚರ್ಚೆ ಮಾಡೋದಕ್ಕೆ ಸಂಸತ್ತಿನಲ್ಲಿ ನಿಮ್ಮ ಪಕ್ಷದ ದೊಡ್ಡ ದೊಡ್ಡ ನಾಯಕರು ಇದ್ದಾರೆ. ತಾವು ಮೊದಲು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗಿದವರನ್ನ ಹುಡುಕಿ, ಅವರ ಹೆಡೆಮುರಿ ಕಟ್ಟಿ ಎಂದು ಹೇಳಿದ್ದಾರೆ.

ರಾಜಕೀಯ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್ ಹಾಸನ್ ಗರಂ

ಜನರ ತೀರ್ಪನ್ನು ಅವಮಾನಿಸದೆ ವಿಜಯ್‌ಗೆ ಅವಕಾಶ ನೀಡಿ: ತಮಿಳುನಾಡು ರಾಜ್ಯಪಾಲರ ನಡೆಗೆ ಕಮಲ್

ತಮಿಳುನಾಡಿನಲ್ಲಿ ನೂತನ ಸರಕಾರ ರಚನೆಗೆ ವಿಜಯ್ (Vijay) ನೇತೃತ್ವದ ಟಿವಿಕೆ (TVK) ಭರದಿಂದ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ರಾಜೇಂದ್ರ ಮಾಡಿ ಸರಕಾರ ಅರ್ಲೇಕರ್‌ರನ್ನು ಭೇಟಿ ರಚನೆಗೆ ವಿಜಯ್ ಹಕ್ಕು ಮಂಡಿಸಿದ್ದಾರೆ. ಆದರೆ

[ccc_my_favorite_select_button post_id="121857"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಬಕ್ರೀದ್; ಅಕ್ರಮ ಗೋವು ಸಾಗಣೆ / ಹತ್ಯೆ ಮಾಡಿದರೆ ಜೈಲು.. ಜಿಲ್ಲಾಧಿಕಾರಿ ವಾರ್ನಿಂಗ್

ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ (illegal cow transport/slaughter) ಮಾಡಿದಲ್ಲಿ ಏಳು ವರ್ಷ ಜೈಲು, ಹಾಗೂ ರೂ 10 ಲಕ್ಷ ಗಳ ವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

[ccc_my_favorite_select_button post_id="121833"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]