Ceasefire: Santosh Lad appeals to BJP youth..!

ಕದನವಿರಾಮ: ಬಿಜೆಪಿಯ ಯುವಕರಿಗೆ ಸಂತೋಷ್ ಲಾಡ್ ಕೈ ಮುಗಿದು ಮನವಿ..!

ಬೆಂಗಳೂರು: ಪಾಕಿಸ್ತಾನದ ವಿರುದ್ಧ ಯಾವ ಕಾರಣಕ್ಕಾಗಿ ರಾತ್ರೋರಾತ್ರಿ ಕದನ ವಿರಾಮ (Ceasefire) ಮಾಡಿದ್ದೀರಿ?, ಟ್ರಂಪ್ ಕಾಶ್ಮೀರ ವಿಚಾರವಾಗಿ ಪದೇ ಪದೇ ಮಾತಾಡುತ್ತಿದ್ದರು ಪ್ರಧಾನಿ ಮೋದಿ (PM Modi) ಮಾತಾಡುತ್ತಿಲ್ಲ, ಬಿಜೆಪಿಯವರು (BJP) ತಿರಂಗಾ ಯಾತ್ರೆ ಮಾಡುವ ಬದಲು ಡೊನಾಲ್ಡ್ ಟ್ರಂಪ್ (Donald Trump) ಪರವಾಗಿ ಯಾತ್ರೆ ಮಾಡಲಿ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh lad) ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 22 ದಿನಗಳಿಂದ ಏನೆಲ್ಲಾ ನಡೆದಿದೆ ಎಂಬುದು ಜನರ ಮುಂದಿದೆ. ನಮ್ಮ ಭಾರತೀಯ ಸೇನೆ ದೇಶದ ಹಿತದೃಷ್ಟಿ ಕಾಪಾಡಿವೆ. ಪಾಕಿಸ್ತಾನದ ವಿರುದ್ಧ ನಮ್ಮ ಸೇನೆ ಮೇಲುಗೈ ಸಾಧಿಸಿದೆ. ಅದಕ್ಕಾಗಿ ಭಾರತೀಯ ಸೇನೆಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ದೇಶದ ಜನತೆಗೆ ಪ್ರಧಾನಿ ಮೋದಿ ಉತ್ತರ ಕೊಡಬೇಕು

ಉಗ್ರರ ಸಂಹಾರ ಅಂತೇಳಿ ಪಾಕಿಸ್ತಾನದ ವಿರುದ್ಧ ಯಾವ ಕಾರಣಕ್ಕಾಗಿ ಕದನ ವಿರಾಮ ಮಾಡಿದ್ದೀರಿ? ಈ ಪ್ರಶ್ನೆಗೆ ಪ್ರಧಾನಿ ಮೋದಿ ಉತ್ತರ ಕೊಡಬೇಕು. ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷದ ಸಂದರ್ಭದಲ್ಲಿ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರು ಕದನ ವಿರಾಮ ಘೋಷಣೆ ಮಾಡುತ್ತಾರೆ. ಎರಡು ದೇಶದ ನಡುವೆ ಟ್ರಂಪ್ ಹೇಳಿದ ರೀತಿಯಲ್ಲಿ ವ್ಯಾಪಾರಕ್ಕಾಗಿ ಯುದ್ಧ ನಿಲ್ಲಿಸಲಾಯ್ತೇ?.

ಹಾಗಾದರೆ ಇದು ರಾಜಕೀಯಕ್ಕೆ ಮಾಡಿದ ಯುದ್ಧವೇ? ಅಥವಾ ನಮ್ಮ ದೇಶ ನಡೆಸುತ್ತಿರುವುದು ಟ್ರಂಪ್ ಅವರಾ? ಎಂದು ಪ್ರಶ್ನಿಸಿದರು.

ಏಪ್ರಿಲ್ 22 ರಂದು ಪ್ರಧಾನಿ ನರೇಂದ್ರ ಮೋದಿ ಸೌದಿಯಿಂದ ವಾಪಸ್ ಬರ್ತಾರೆ. ಆದರೆ ಪತ್ರಿಕಾಗೋಷ್ಠಿ ನಡೆಸಲ್ಲ, ಬದಲಾಗಿ ಬಿಹಾರ ಚುನಾವಣಾ ಪ್ರಚಾರಕ್ಕೆ ಹೋಗ್ತಾರೆ. ಸರ್ವ ಪಕ್ಷ ಸಭೆಗೂ ಗೈರಾಗಿದ್ದಾರೆ. ನಾನು ಸುಪ್ರೀಂ, ಯಾವ ಸಭೆಗೆ ಭಾಗಿಯಾಗಲ್ಲ ಎಂಬ ಸಂದೇಶವೇ ಯಾವ ಸಂದೇಶವನ್ನು ಪ್ರಧಾನಿ ಮೋದಿ ಕೊಡಲು ಹೊರಟಿದ್ದಾರೆ ಎಂದು ಪ್ರಶ್ನಿಸಿದರು.

11 ವರ್ಷದಿಂದ ಮೋದಿ ಕ್ಯಾಮೆರಾ ಬಿಟ್ರೆ ನ್ಯೂಸ್ ಚಾನಲ್ ಬೇರೆ ತೋರಿಸಲ್ಲ, ರೆಕಾರ್ಡ್ ಆಗಿರುವ ವಿಡಿಯೋವನ್ನು ಪ್ರಸಾರ ಮಾಡಲಾಗ್ತಿದೆ. ಅದನ್ನು ದೇಶದ ಜನರು ನೋಡಬೇಕಾದ ಸ್ಥಿತಿ ಇದೆ. ಕೋವಿಡಲ್ಲೂ ಮೋದಿ ವಿಡಿಯೋ, ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನೀರು ಬಂದ್ರೂ ಮೋದಿ ವಿಡಿಯೋ.

ಉಗ್ರರ ದಾಳಿ ಕುರಿತು ಇಂಟಲಿಜೆನ್ಸ್ ಮಾಹಿತಿ

ಕೇಂದ್ರ ಸರ್ಕಾರದಿಂದ ಯಾವುದೇ ತಪ್ಪು ಆಗಿಲ್ಲ ಎಂದು ಬಿಂಬಿಸುವುದೇ ಕೆಲಸವಾಗಿದೆ. ಹಾಗಾದರೆ ಭದ್ರತಾ ಲೋಪ ಆಗಿದ್ದೇನು..? ಪ್ರವಾಸಿಗರ ಮೇಲೆ ಉಗ್ರರ ದಾಳಿ ನಡೆಯುತ್ತೆ ಎಂದು ಇಂಟಲಿಜೆನ್ಸ್ ವರದಿ ಇದೆ. ಮತ್ತೆ ಸರ್ಕಾರ ಯಾಕ್ ಸುಮ್ನೆ ಕೂತ್ಕೊಂಡ್ ಇತ್ತು. ಇದರ ಬಗ್ಗೆ ಯಾರ್ ಮಾತನಾಡಬೇಕು..? ಎಲ್ ಚರ್ಚೆ ಆಗಬೇಕು.

ಪುಲ್ವಾಮ ದಾಳಿ ಕೂಡ ಇದೇ ರೀತಿ ಆಯ್ತು. ಮತ್ತೆ ಇದು ಪ್ರಚಾರಕ್ಕೆ ನಡೆಸಿದ ಯುದ್ಧವೆ..? ರಾಜಕೀಯಕ್ಕಾಗಿ ನಡೆಸಿದ ಯುದ್ದವೇ..? ಇದಕ್ಕೆ ಸ್ಪಷ್ಟೀಕರಣ ನೀಡಬೇಕಲ್ವಾ.. ಇಡೀ ದೇಶದ ಜನತೆಗೆ ಉತ್ತರ ಕೊಡಬೇಕಿದೆ.

ಬಿಜೆಪಿ ಯುವಕರಲ್ಲಿ ಮನವಿ

ಒಂದು ದಿನ ಮುಂಚೆ ರೆಕಾರ್ಡ್ ಮಾಡಿರುವ ವಿಡಿಯೋ ನೋಡಬೇಕಾದ ಅನಿವಾರ್ಯತೆ ದೇಶಕ್ಕೆ ಬಂದಿದೆ, ಬಿಜೆಪಿ ಯುವಕರಲ್ಲಿ ಮನವಿ ಮಾಡ್ತಿನಿ, ಬಿಜೆಪಿ ಮುಖಂಡರನ್ನು ಪ್ರಶ್ನೆ ಮಾಡಿ, ಈ ದೇಶದ ಪ್ರಧಾನಮಂತ್ರಿ ಅವರು 11 ವರ್ಷದ ಆದ್ರೂ ಒಂದ್ ಪ್ರಸ್ಮೀಟ್ ಮಾಡಲ್ಲ. 7 ತಾರೀಖು ರೆಕಾರ್ಡ್ ಆಗಿರೋದು, 8 ನೇ ತಾರೀಖಿನಂದು ಪ್ರಸಾರ ಆಗುತ್ತೆ. ಅದೇ ಟೈಮಲ್ ಪಾಕಿಸ್ತಾನ ಭಾರತದ ಮೇಲೆ ದಾಳಿ ಮಾಡುತ್ತೆ. ಮತ್ತೆ ರಾತ್ರೋರಾತ್ರಿ ಯಾವ ಕಾರಣಕ್ಕೆ ಕದನವಿರಾಮ ಘೋಷಣೆ ಆಯ್ತು ಅಂತ ಬಿಜೆಪಿ ಯುವಕರು ದೇಶಕ್ಕಾಗಿ ಬಿಜೆಪಿ ಮುಖಂಡರನ್ನು ಪ್ರಶ್ನೆ ಮಾಡಿ.

ಏನ್ ಬರೀ ಭಾಷಣಗಳು ಬಿಹಾರ ಎಲೆಕ್ಷನ್ಗೆ ಹೋಗಿ ಪಾಕಿಸ್ತಾನವನ್ನು ಮುಗಿಸಿ ಬಿಡ್ತಿನಿ ಅಂದ್ರೂ, ಇವತ್ತಿಗೂ ಅದೇ ಹೇಳ್ತಾ ಇದ್ದಾರೆ.

ರಷ್ಯಾ ಉಕ್ರೇನ್ ಯುದ್ದವನ್ನು ಪ್ರಧಾನಿ ನರೇಂದ್ರ ಮೋದಿ ನಿಲ್ಲಿಸಿದ್ದರು ಎಂದು ಹೇಳಲಾಗ್ತಿದೆ. ಆದರೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧವನ್ನು ಟ್ರಂಪ್ ನಿಲ್ಲಿಸಿದ್ದಲ್ವಾ? ಪಹಲ್ಗಾಮ್ ಭಯೋತ್ಪಾದಕರು ಸಿಕ್ಕಿದ್ರಾ? ವ್ಯಾಪಾರಕ್ಕಾಗಿ ಕದನ ವಿರಾಮ ಮಾಡಲಾಯ್ತೇ? ಪಾಕಿಸ್ತಾನ ಮತ್ತು ಭಾರತವನ್ನು ಟ್ರಂಪ್ ಸಮಾನವಾಗಿ ನೋಡಿಕೊಳ್ಳಲು ಅವಕಾಶ ಸಿಕ್ಕಂತಾಯಿತು.

ಪಾಕಿಸ್ತಾನಕ್ಕೆ ನೀಡಲಾದ ಐಎಂಎ ಫಂಡಿಂಗ್ ಅಮೇರಿಕಾದ ಪಾಲು ಹೆಚ್ಚಾಗಿದೆ. ಮತ್ತೆ ಪ್ರಧಾನಿ ಮೋದಿ ಅಮೇರಿಕಾದ ಚುನಾವಣೆಯಲ್ಲಿ ಟ್ರಂಪ್ ಪರ ಪ್ರಚಾರ ಮಾಡಿದ್ದಾರೆ. ಜಾಸ್ತಿ ಪ್ರೆಂಡ್ ಅಲ್ವಾ.. ಮಾತಾಡೋಕ್ ತುಂಬಾ ಇದೆ. ಈ ಎಲ್ಲಾ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು ಈಗಾಗಲೇ ಹೇಳಿದ್ದಾರೆ ವಿಶೇಷ ಅಧಿವೇಶನನ್ನು ಕರೆಯಿರಿ ಎಂದು ಆಗ್ರಹಿಸಿದರು.

ಸೇನಾ ಮುಖ್ಯಸ್ಥರಾದ ಸೋಫಿಯಾ ಖುರೇಷಿ ವಿರುದ್ಧ ಬಿಜೆಪಿ ಮಧ್ಯ ಪ್ರದೇಶದ ನಾಯಕ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿ, ಇದು ನಾಚಿಕೆಗೇಡುತನ ಇದರ ಬಗ್ಗೆ ಯಾರೂ ಟ್ವೀಟ್ ಮಾಡುವುದಿಲ್ಲ.

ಮಧ್ಯ ಪ್ರದೇಶ ಹೈಕೋರ್ಟ್ ಇದೀಗ ಎಫ್ ಐ ಆರ್ ಮಾಡಲು ಸೂಚಿಸಿದೆ. ಸೋಫಿಯಾ ಖುರೇಷಿ ಈ ದೇಶವನ್ನು ಪ್ರತಿನಿಧಿಸುತ್ತಾರೆ. ಏನು ಬೇಕಾದರೂ ಮಾತನಾಡಬಹುದು ಈ ದೇಶದಲ್ಲಿ ಎಂಬಂತಾಗಿದೆ.

ರಾಜಕೀಯ

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಶಾಕ್ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಗೆ ಶಾಕ್ ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ (D.K.Shivakumar) ಮಂಗಳವಾರ ಪ್ರತಿಕ್ರಿಯೆ ನೀಡಿದರು.

[ccc_my_favorite_select_button post_id="110364"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!