Mussanje Matu movie turns 17: This is what Sudeep said

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಬೆಂಗಳೂರು: ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ ಕಳೆದಿದೆ.

2008 ಮೇ 16 ರಂದು ಬಿಡುಗಡೆಯಾಗಿದ್ದ ಮುಸ್ಸಂಜೆ ಮಾತು ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಗಳಿಕೆ ಕಂಡಿತ್ತು. ಮುಸ್ಸಂಜೆ ಮಹೇಶ್ ನಿರ್ದೇಶಿಸಿದ್ದ ಈ ಸಿನಿಮಾವನ್ನು ಸುರೇಶ್‌ ಜೈನ್ ನಿರ್ಮಿಸಿದ್ದರು.

ಈ ಸಿನಿಮಾ ಸಿನಿಮಾ ಚಿತ್ರರಸಿಕರ ಮನ ಗೆದ್ದಿದ್ದಲ್ಲದೇ, ಸುದೀಪ್ ಅವರ ವೃತ್ತಿ ಜೀವನಕ್ಕೆ ತಿರುವ ನೀಡಿತ್ತು. ಹಿನ್ನೆಲೆಯಲ್ಲಿ ಇಂದು ನಟ ಸುದೀಪ್ ವಿಡಿಯೋ ಮೂಲಕ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಸುದೀಪ್, ಮುಸ್ಸಂಜೆ ಮಾತು ಸಿನಿಮಾ ನನ್ನ ವೃತ್ತಿ ಜೀವನದಲ್ಲಿ ದೊಡ್ಡ ಸ್ಥಾನದಲ್ಲಿ ನಿಲ್ಲುವಂತದ್ದು. ವೃತ್ತಿ ಬದುಕಿಗೆ ಹೊಳಪು ನೀಡಿದೆ. ಅಂತಹ ಅದ್ಭುತ ಸಿನಿಮಾ ಬಿಡುಗಡೆಯಾಗಿ 17 ವರ್ಷ ಕಳೆದರು ಇಂದಿಗೂ ಏನಾಗಲಿ ಮುಂದೆ ಸಾಗು ನೀ ಹಾಡು ಎಲ್ಲರ ಎದೆಯಾಳದಲ್ಲಿದೆ.

ವಿಶೇಷ ಎಂದರೆ ಏನಾಗಲಿ ಮುಂದೆ ಸಾಗು ನೀ ಹಾಡು ನನ್ನ ಅಮ್ಮ ಸಾಯುವವರೆಗೂ ಅವರ ಕಾಲರ್ ಟ್ಯೂನ್ ಆಗಿತ್ತು. ತಂದೆಯದ್ದೂ ಇಂದಿಗೂ ಅದೇ ಕಾಲರ್ ಟ್ಯೂನ್.

ಲಕ್ಷಾಂತರ ಮನಸ್ಸುಗಳಿಗೆ ಸ್ಫೂರ್ತಿ ತುಂಬಿದ ಹಾಡಿನಲ್ಲಿ ನಾನು ಅಭಿನಯಿಸಿರುವುದು ನನಗೆ ಹೆಮ್ಮೆ ಮೂಡಿಸುತ್ತದೆ.

ಮುಸ್ಸಂಜೆ ಮಾತು ಸಿನಿಮಾ ನನ್ನ ವೃತ್ತಿ ಜೀವನದಲ್ಲಿ ದೊಡ್ಡ ಸ್ಥಾನದಲ್ಲಿ ನಿಲ್ಲುವಂತದ್ದು. ವೃತ್ತಿ ಬದುಕಿಗೆ ಹೊಳಪು ನೀಡಿದೆ. ಅಂತಹ ಅದ್ಭುತ ಸಿನಿಮಾ ಬಿಡುಗಡೆಯಾಗಿ 17 ವರ್ಷ ಗತಿಸಿದರೂ ಇಂದಿಗೂ ಏನಾಗಲಿ ಮುಂದೆ ಸಾಗು ನೀ ಹಾಡು ಎಲ್ಲರ ಎದೆಯಾಳದಲ್ಲಿದೆ ಎಂದಿದ್ದಾರೆ.

ವಿಶೇಷ ಎಂದರೆ ಏನಾಗಲಿ ಮುಂದೆ ಸಾಗು ನೀ ಹಾಡು ನನ್ನ ಅಮ್ಮ ಸಾಯುವವರೆಗೂ ಅವರ ಕಾಲರ್ ಟ್ಯೂನ್ ಆಗಿತ್ತು. ತಂದೆಯದ್ದೂ ಇಂದಿಗೂ ಅದೇ ಕಾಲರ್ ಟ್ಯೂನ್. ಲಕ್ಷಾಂತರ ಮನಸ್ಸುಗಳಿಗೆ ಸ್ಫೂರ್ತಿ ತುಂಬಿದ ಹಾಡಿನಲ್ಲಿ ನಾನು ಅಭಿನಯಿಸಿರುವುದು ನನಗೆ ಹೆಮ್ಮೆ ಮೂಡಿಸುತ್ತದೆ ಎಂದಿದ್ದಾರೆ.

ಮುಸ್ಸಂಜೆ ಮಾತು ಸಿನಿಮಾ ಶೂಟಿಂಗ್ ಸಮಯದಲ್ಲಿ ನಾನು ದಪ್ಪಗಾಗಿದ್ದೆ. ಆದರೆ, ರೇಡಿಯೊ ಜಾಕಿ ಪಾತ್ರ ಮಾಡುವಾಗ ಬೆಂಗಳೂರಿನಲ್ಲಿರುವ ಎಲ್ಲ ರೇಡಿಯೊ ಜಾಕಿಗಳನ್ನು ಭೇಟಿಯಾಗಿದ್ದೆ.

ಅವರ ಉಡುಗೆ ತೊಡುಗೆಗಳು ನನ್ನ ಆಕರ್ಷಿಸಿದ್ದವು. ಸಡಿಲವಾದ ಶರ್ಟ್, ಪ್ಯಾಂಟ್ ತೊಡುತ್ತಿದ್ದರು. ಆದರೆ, ದಪ್ಪಗಿದ್ದ ನನಗೆ ಆ ಉಡುಗೆಗಳು ಹೊಂದುತ್ತಿರಲಿಲ್ಲ. ನಂತರ ಸಾಕಷ್ಟು ವರ್ಕೌಟ್ ಮಾಡಿ ತುಂಬಾ ತೆಳ್ಳಗಾಗಿದ್ದೆ. ಆ ಪಾತ್ರದಲ್ಲಿ ನನ್ನನ್ನು ಜನ ಸ್ವೀಕರಿಸಿದ್ದು ಅದ್ಭುತವಾಗಿದ್ದು ಎಂದಿದ್ದಾರೆ.

ಇಂದಿಗೂ ಕನ್ನಡ ಸಿನಿಪ್ರಿಯರು ಗುನುಗುವಂತ ಅದ್ಭುತ ಹಾಡನ್ನು ನೀಡಿದ್ದ ಸಂಗೀತ ನಿರ್ದೇಶಕ ವಿ ಶ್ರೀಧ‌ರ್ ಅವರಿಗೆ, ಹಾಗೂ ನಿರ್ದೇಶಕ ಮುಸ್ಸಂಜೆ ಮಹೇಶ್, ನಟಿ ರಮ್ಯ, ಅನು ಪ್ರಭಾಕ‌ರ್ ಸೇರಿದಂತೆ ಚಿತ್ರತಂಡದವನ್ನು, ರೇಡಿಯೊ ಜಾಕಿಗಳನ್ನು ಸುದೀಪ್ ಸ್ಮರಿಸಿಕೊಂಡು ಧನ್ಯವಾದ ಸಲ್ಲಿಸಿದ್ದಾರೆ.

ರಾಜಕೀಯ

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಅಡುಗೆ ಅನಿಲ ಕೊರತೆ; ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ: ಡಿಸಿಎಂ

"ಬೇರೆ ವಿಚಾರಗಳಲ್ಲಿ ಮಾತನಾಡುವ ಸಂಸದರು ಅಡುಗೆ ಅನಿಲ ಕೊರತೆ ವಿಚಾರವಾಗಿ ಸಂಸತ್ತಿನಲ್ಲಿ ಮಾತನಾಡಬೇಕು. ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="120157"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ದೊಡ್ಡಬಳ್ಳಾಪುರ: ಮಾರಮ್ಮ ದೇವಾಲಯದಲ್ಲಿ ಮಾಂಗಲ್ಯ ಕದ್ದ ದುಷ್ಕರ್ಮಿಗಳು..!

ಮಾರಮ್ಮ ದೇವಾಲಯದಲ್ಲಿ (Maramma's temple) ಮಾರಮ್ಮ ದೇವಿಗೆ ಅಳವಡಿಸಿದ್ದ ಮಾಂಗಲ್ಯವನ್ನು ಕದ್ದಿರುವ ಕಳ್ಳರು ಪರಾರಿಯಾಗಿರುವ ಘಟನೆ ತಾಲೂಕಿನ ***** ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120077"]
ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ ಪ್ರಮಾದ

ದೊಡ್ಡಬಳ್ಳಾಪುರ: ಬೈಕ್ ಸವಾರರ ಜೀವ ಉಳಿಸಲು ಬೆಸ್ಕಾಂ ಕೇಂದ್ರಕ್ಕೆ ಟೆಂಪೋ ಡಿಕ್ಕಿ.. ತಪ್ಪಿದ

ಮುಂದೆ ಸಾಗುತ್ತಿದ್ದ ಬೈಕ್ ಸವಾರರ ಜೀವ ಉಳಿಸಲು ಮುಂದಾದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬೆಸ್ಕಾಂ ಕೇಂದ್ರಕ್ಕೆ ಡಿಕ್ಕಿ ಹೊಡೆದಿದ್ದು (Accident) ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ದೊಡ್ಡ ಪ್ರಮಾಣದ ಅನಾಹುತವೇ ತಪ್ಪಿದೆ.

[ccc_my_favorite_select_button post_id="120119"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!